Homeಎಕಾನಮಿಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ...

ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ…

- Advertisement -
- Advertisement -

ಕೃಪೆ: ದಿ ಇಂಡಿಯನ್‌ ಎಕ್ಸ್‌ಪ್ರೆಸ್‌

ಅನುವಾದ: ವೆಂಕಟೇಶ್‌ ಮಾನು

2011-12 ಹಾಗೂ 2017-18 ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು ಉದ್ಯೋಗದ ಪ್ರಮಾಣ ಕುಗ್ಗಿರುವ ಬಗ್ಗೆ ಇತ್ತೀಚೆಗೆ ದೆಹಲಿಯ ಅಜೀಂ ಪ್ರೇಮಜಿ ವಿಶ್ವವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಸಸ್ಟೆನೇಬಲ್ ಎಂಪ್ಲಾಯಿಮೆಂಟ್’ ಪ್ರಕಟಿಸಿರುವ ಹಾಗೂ ಸಂತೋಷ ಮೆಹ್ರೋತ್ರಾ ಮತ್ತು ಜಜಾತಿ ಕೆ. ಪರಿದಾ ಬರೆದಿರುವ ಪ್ರಬಂಧದಲ್ಲಿ ಅಭಿಪ್ರಾಯಪಡಲಾಗಿದೆ.

ಸ್ವಾತಂತ್ರ್ಯಾ ನಂತರದ ಭಾರತೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉದ್ಯೋಗ ವಲಯ ಇಷ್ಟೊಂದು ಕುಸಿತ ಕಂಡಿದೆ. ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ ಹಿಮಾಂಶು ಸೇರಿದಂತೆ ಈ ಪ್ರಬಂಧದ ಲೇಖಕರು ಹಾಗೂ ಇತರೆ ಪರಿಣಿತರು ಸಹ ಈ ರೀತಿಯ ಉದ್ಯೋಗ ಕುಸಿತದ ಪ್ರಮಾಣವನ್ನು ಕಂಡುಕೊಂಡಿದ್ದಾರೆ.

ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, “2011-12 ಹಾಗೂ 2017-18ರ ಅವಧಿಯಲ್ಲಿ 9 ದಶಲಕ್ಷ ಗಳಷ್ಟು (90 ಲಕ್ಷ) ಉದ್ಯೋಗದ ಪ್ರಮಾಣ ಕುಗ್ಗಿದೆ. ಇದು ಸ್ವಾತಂತ್ರ್ಯಾ ನಂತರದ ಭಾರತದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ’ ಎಂದಿದ್ದಾರೆ.

ಮೆಹ್ರೋತ್ರಾ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿದ್ದರೆ, ಪರಿದಾ ಅವರು ಪಂಜಾಬ್‍ನ ಕೆಂದ್ರೀಯ ವಿದ್ಯಾಲಯದ ಪ್ರಾಧ್ಯಾಪಕರು.

ಈ ಅಧ್ಯಯನದ ಫಲಿತಾಂಶವು, ಪ್ರಧಾನಿ ಅವರ ಅರ್ಥಶಾಸ್ತ್ರ ಸಲಹಾ ಸಮಿತಿಯಿಂದ ಲಾವೀಸ್ ಭಂಡಾರಿ ಹಾಗೂ ಅಮರೇಶ ದುಬೈ ನಡೆಸಿದ ಅಧ್ಯಯನಕ್ಕಿಂತ ಭಿನ್ನವಾಗಿದೆ. ಅವರ ಅಧ್ಯಯನದಂತೆ 2011-12 ಅವಧಿಯಲ್ಲಿ 43.3 ಕೋಟಿ ಇದ್ದ ಉದ್ಯೋಗಗಳು 2017-18ರ ಅವಧಿಯಲ್ಲಿ ಅದು 45.7 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, 2011-12ರ ಅವಧಿಯಲ್ಲಿ 47.4 ಕೋಟಿ ಉದ್ಯೋಗಗಳಿದ್ದು  2017-18ರ ಅವಧಿಯಲ್ಲಿ ಅದು 46.5 ಕೋಟಿಗಿಳಿದಿವೆ. ಅಂದರೆ ಜನಸಂಖ್ಯೆ ಏರುತ್ತಲೇ ಇದ್ದರೆ ಮೊದಲ ಬಾರಿಗೆ ಉದ್ಯೋಗಗಳಲ್ಲಿ ಇಳಿಕೆ ಕಂಡುಬಂದಿದೆ.

ಆಗಸ್ಟ್ 1ರ  ಮಿಂಟ್ ಪತ್ರಿಕೆಯಲ್ಲಿ ಹಿಮಾಂಶು ಅಭಿಪ್ರಾಯಪಟ್ಟಿರುವಂತೆ “2011-12ರ ಅವಧಿಯಲ್ಲಿ 472.5 ದಶಲಕ್ಷ ದಷ್ಟು ಉದ್ಯೋಗ ಕುಸಿತ ಕಂಡು ಬಂದಿದೆ. ನಂತರದ 6 ವರ್ಷಗಳ ಅವಧಿಯಲ್ಲಿ 15 ದಶಲಕ್ಷ ಉದ್ಯೋಗಗಳು ಕುಂಠಿತಗೊಂಡಿವೆ. ಅಂದರೆ, 2011-12 ಹಾಗೂ 2017-18ರ ಅವಧಿಯ ಪ್ರತಿ ವರ್ಷದಲ್ಲೂ 26 ಲಕ್ಷದಷ್ಟು ಉದ್ಯೋಗಗಳು ನಷ್ಟ ಹೊಂದುತ್ತಾ ಬಂದಿವೆ.

ಈ ಎರಡೂ ಅಧ್ಯಯನಗಳ ಮಧ್ಯೆ ಸಾಕಷ್ಟು ವ್ಯತ್ಯಾಸಗಳಿವೆ. 2004-05, 2011-12 ಹಾಗೂ ಪಿ.ಎಲ್.ಎಫ್.ಎಸ್-2017-18ರ ಅನ್ವಯ ಉದ್ಯೋಗ ಹಾಗೂ ನಿರುದ್ಯೋಗ ಸಮೀಕ್ಷೆಗಾಗಿ “ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗಾನೈಸೆಷನ್’ ನೀಡಿದ ಅಂಕಿ-ಅಂಶಗಳು ಈ ಎರಡೂ ಅಧ್ಯಯನಗಳಿಗೆ ಆಧಾರವಾಗಿವೆ. ಭಂಡಾರಿ ಹಾಗೂ ದುಬೈ ಪ್ರಕಾರ 40 ದಶಲಕ್ಷ ಉದ್ಯೋಗಗಳ ವ್ಯತ್ಯಾಸವಿದೆ. ಆದರೆ, ಮೆಹ್ರೋತ್ರಾ ಹಾಗೂ ಪರಿದಾ ಮತ್ತು ಹಿಮಾಂಶು ನಡೆಸಿದ ಅಧ್ಯಯನಗಳ ಫಲಿತಾಂಶಗಳು ಭಿನ್ನವಾಗಿವೆ.  ಏಕೆ ಹೀಗೆ ಎಂಬುದಕ್ಕೆ ಬಹುಶಃ ಎರಡು ಕಾರಣಗಳಿರಬಹುದು.

ಇಡೀ ದೇಶದ ಒಟ್ಟು ಜನಸಂಖ್ಯೆಯನ್ನು ಪರಿಗಣಿಸಿ ಒಟ್ಟು ಉದ್ಯೋಗಗಳ ಸಂಖ್ಯೆಯನ್ನು ಅಂದಾಜಿಸಿರಬಹುದು. ಅತಿ ಹೆಚ್ಚಿನ ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳ ಸಂಖ್ಯೆಯನ್ನು ನೀಡುತ್ತದೆ. ಭಂಡಾರಿ ಹಾಗೂ ದುಬೈ ಆವರು 2017-18ರಲ್ಲಿ ಭಾರತದ ಜನಸಂಖ್ಯೆಯನ್ನು 1.36 ಶತಕೋಟಿ ಎಂದು ಪರಿಗಣಿಸಿದ್ದಾರೆ. ಮೆಹ್ರೋತ್ರಾ ಹಾಗೂ ಪರಿದಾ ಅವರು 1.35 ಶತಕೋಟಿ ಎಂದು ಪರಿಗಣಿಸಿದ್ದಾರೆ. 2017-18ರಲ್ಲಿ ವಿಶ್ವಬ್ಯಾಂಕ್ 1.33 ಶತಕೋಟಿ ಎಂದಿದ್ದರೆ, ಹಿಮಾಂಶು-ಸರಕಾರಿ ಅಧಿಕಾರಿಗಳ ಜಿಡಿಪಿ ಅನ್ವಯ-1.31 ಶತಕೋಟಿ ಜನಸಂಖ್ಯೆ ಇದೆ ಎಂದು ಪರಿಗಣಿಸಿದೆ.

ಭಾರತದ ಜನಸಂಖ್ಯೆ ಬಗ್ಗೆ ಇಷ್ಟೊಂದು ಗೊಂದಲಗಳಿವೆ. ಏಕೆಂದರೆ, 2011ರ ಜನಗಣತಿ ಅನ್ವಯ ಇಂದಿಗೂ ಜನಸಂಖ್ಯೆ ಕುರಿತು ನಿಖರ ಮಾಹಿತಿ ನೀಡಿಲ್ಲ. ನಿಯಮದಂತೆ, ಸರ್ಕಾರವು 2016ರಲ್ಲಿಯೇ ಬಿಡುಗಡೆ ಮಾಡಬೇಕಿತ್ತು.

ಭಂಡಾರಿ ಹಾಗೂ ದುಬೈ ಅಧ್ಯಯನದಲ್ಲಿ, ಉದ್ಯೋಗಗಳ ಸಾಧ್ಯತೆಯ ಪ್ರಧಾನ ಮೂಲಾಂಶಗಳನ್ನು ಪರಿಗಣಿಸಿ, ನಂತರದ ಪೂರಕ ಸಾಧ್ಯತೆಗಳ ಮೂಲಗಳನ್ನು ಕಡೆಗಣಿಸಿರುವುದು ಈ ವ್ಯತ್ಯಾಸಗಳಿಗೆ ಕಾರಣ ಇರಬಹುದು. ಅದಲ್ಲದೇ ಅವರಿಬ್ಬರೂ ಪ್ರಧಾನಿ ಕಾರ್ಯಾಲಯದಲ್ಲಿ ಕೆಲಸ ಮಾಡುವುದರಿಂದ ಅಲ್ಲಿನ ಅಂಕಿ ಸಂಖ್ಯೆಗಳು ಉತ್ರೇಕ್ಷೆಯೂ ಇರಬಹುದೆಂಬ ಆರೋಪ ಸಹ ಕೇಳಿಬಂದಿದೆ.

ಈ ಸರ್ವೇಗಳಲ್ಲಿ ಒಬ್ಬ ವ್ಯಕ್ತಿಯು ವರ್ಷದ 365 ದಿನಗಳಲ್ಲಿ 182 ದಿನ ಕೆಲಸ ಮಾಡಿದರೆ ಆತನನ್ನು ಉದ್ಯೋಗಿ ಎಂದು ಪರಿಗಣಿಸುತ್ತದೆ. ಅಂದರೆ ಆರು ತಿಂಗಳು ಕೆಲಸ ಮಾಡಿ ಇನ್ನು ಆರು ತಿಂಗಳು ಕೆಲಸವಿಲ್ಲದಿದ್ದರೂ ಸಹ ಅವರು ಉದ್ಯೋಗಿಗಳ ಪಟ್ಟಿಗೆ ಸೇರುತ್ತಾರೆ. ಹಾಗಾಗಿ ಮೇಲಿನ ಅರ್ಥಶಾಸ್ತ್ರಜ್ಞರು ಊಹೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಉದ್ಯೋಗ ಕಡಿತವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...