Homeಎಕಾನಮಿಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ...

ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ…

- Advertisement -
- Advertisement -

ಕೃಪೆ: ದಿ ಇಂಡಿಯನ್‌ ಎಕ್ಸ್‌ಪ್ರೆಸ್‌

ಅನುವಾದ: ವೆಂಕಟೇಶ್‌ ಮಾನು

2011-12 ಹಾಗೂ 2017-18 ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು ಉದ್ಯೋಗದ ಪ್ರಮಾಣ ಕುಗ್ಗಿರುವ ಬಗ್ಗೆ ಇತ್ತೀಚೆಗೆ ದೆಹಲಿಯ ಅಜೀಂ ಪ್ರೇಮಜಿ ವಿಶ್ವವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಸಸ್ಟೆನೇಬಲ್ ಎಂಪ್ಲಾಯಿಮೆಂಟ್’ ಪ್ರಕಟಿಸಿರುವ ಹಾಗೂ ಸಂತೋಷ ಮೆಹ್ರೋತ್ರಾ ಮತ್ತು ಜಜಾತಿ ಕೆ. ಪರಿದಾ ಬರೆದಿರುವ ಪ್ರಬಂಧದಲ್ಲಿ ಅಭಿಪ್ರಾಯಪಡಲಾಗಿದೆ.

ಸ್ವಾತಂತ್ರ್ಯಾ ನಂತರದ ಭಾರತೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉದ್ಯೋಗ ವಲಯ ಇಷ್ಟೊಂದು ಕುಸಿತ ಕಂಡಿದೆ. ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ ಹಿಮಾಂಶು ಸೇರಿದಂತೆ ಈ ಪ್ರಬಂಧದ ಲೇಖಕರು ಹಾಗೂ ಇತರೆ ಪರಿಣಿತರು ಸಹ ಈ ರೀತಿಯ ಉದ್ಯೋಗ ಕುಸಿತದ ಪ್ರಮಾಣವನ್ನು ಕಂಡುಕೊಂಡಿದ್ದಾರೆ.

ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, “2011-12 ಹಾಗೂ 2017-18ರ ಅವಧಿಯಲ್ಲಿ 9 ದಶಲಕ್ಷ ಗಳಷ್ಟು (90 ಲಕ್ಷ) ಉದ್ಯೋಗದ ಪ್ರಮಾಣ ಕುಗ್ಗಿದೆ. ಇದು ಸ್ವಾತಂತ್ರ್ಯಾ ನಂತರದ ಭಾರತದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ’ ಎಂದಿದ್ದಾರೆ.

ಮೆಹ್ರೋತ್ರಾ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿದ್ದರೆ, ಪರಿದಾ ಅವರು ಪಂಜಾಬ್‍ನ ಕೆಂದ್ರೀಯ ವಿದ್ಯಾಲಯದ ಪ್ರಾಧ್ಯಾಪಕರು.

ಈ ಅಧ್ಯಯನದ ಫಲಿತಾಂಶವು, ಪ್ರಧಾನಿ ಅವರ ಅರ್ಥಶಾಸ್ತ್ರ ಸಲಹಾ ಸಮಿತಿಯಿಂದ ಲಾವೀಸ್ ಭಂಡಾರಿ ಹಾಗೂ ಅಮರೇಶ ದುಬೈ ನಡೆಸಿದ ಅಧ್ಯಯನಕ್ಕಿಂತ ಭಿನ್ನವಾಗಿದೆ. ಅವರ ಅಧ್ಯಯನದಂತೆ 2011-12 ಅವಧಿಯಲ್ಲಿ 43.3 ಕೋಟಿ ಇದ್ದ ಉದ್ಯೋಗಗಳು 2017-18ರ ಅವಧಿಯಲ್ಲಿ ಅದು 45.7 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, 2011-12ರ ಅವಧಿಯಲ್ಲಿ 47.4 ಕೋಟಿ ಉದ್ಯೋಗಗಳಿದ್ದು  2017-18ರ ಅವಧಿಯಲ್ಲಿ ಅದು 46.5 ಕೋಟಿಗಿಳಿದಿವೆ. ಅಂದರೆ ಜನಸಂಖ್ಯೆ ಏರುತ್ತಲೇ ಇದ್ದರೆ ಮೊದಲ ಬಾರಿಗೆ ಉದ್ಯೋಗಗಳಲ್ಲಿ ಇಳಿಕೆ ಕಂಡುಬಂದಿದೆ.

ಆಗಸ್ಟ್ 1ರ  ಮಿಂಟ್ ಪತ್ರಿಕೆಯಲ್ಲಿ ಹಿಮಾಂಶು ಅಭಿಪ್ರಾಯಪಟ್ಟಿರುವಂತೆ “2011-12ರ ಅವಧಿಯಲ್ಲಿ 472.5 ದಶಲಕ್ಷ ದಷ್ಟು ಉದ್ಯೋಗ ಕುಸಿತ ಕಂಡು ಬಂದಿದೆ. ನಂತರದ 6 ವರ್ಷಗಳ ಅವಧಿಯಲ್ಲಿ 15 ದಶಲಕ್ಷ ಉದ್ಯೋಗಗಳು ಕುಂಠಿತಗೊಂಡಿವೆ. ಅಂದರೆ, 2011-12 ಹಾಗೂ 2017-18ರ ಅವಧಿಯ ಪ್ರತಿ ವರ್ಷದಲ್ಲೂ 26 ಲಕ್ಷದಷ್ಟು ಉದ್ಯೋಗಗಳು ನಷ್ಟ ಹೊಂದುತ್ತಾ ಬಂದಿವೆ.

ಈ ಎರಡೂ ಅಧ್ಯಯನಗಳ ಮಧ್ಯೆ ಸಾಕಷ್ಟು ವ್ಯತ್ಯಾಸಗಳಿವೆ. 2004-05, 2011-12 ಹಾಗೂ ಪಿ.ಎಲ್.ಎಫ್.ಎಸ್-2017-18ರ ಅನ್ವಯ ಉದ್ಯೋಗ ಹಾಗೂ ನಿರುದ್ಯೋಗ ಸಮೀಕ್ಷೆಗಾಗಿ “ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗಾನೈಸೆಷನ್’ ನೀಡಿದ ಅಂಕಿ-ಅಂಶಗಳು ಈ ಎರಡೂ ಅಧ್ಯಯನಗಳಿಗೆ ಆಧಾರವಾಗಿವೆ. ಭಂಡಾರಿ ಹಾಗೂ ದುಬೈ ಪ್ರಕಾರ 40 ದಶಲಕ್ಷ ಉದ್ಯೋಗಗಳ ವ್ಯತ್ಯಾಸವಿದೆ. ಆದರೆ, ಮೆಹ್ರೋತ್ರಾ ಹಾಗೂ ಪರಿದಾ ಮತ್ತು ಹಿಮಾಂಶು ನಡೆಸಿದ ಅಧ್ಯಯನಗಳ ಫಲಿತಾಂಶಗಳು ಭಿನ್ನವಾಗಿವೆ.  ಏಕೆ ಹೀಗೆ ಎಂಬುದಕ್ಕೆ ಬಹುಶಃ ಎರಡು ಕಾರಣಗಳಿರಬಹುದು.

ಇಡೀ ದೇಶದ ಒಟ್ಟು ಜನಸಂಖ್ಯೆಯನ್ನು ಪರಿಗಣಿಸಿ ಒಟ್ಟು ಉದ್ಯೋಗಗಳ ಸಂಖ್ಯೆಯನ್ನು ಅಂದಾಜಿಸಿರಬಹುದು. ಅತಿ ಹೆಚ್ಚಿನ ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳ ಸಂಖ್ಯೆಯನ್ನು ನೀಡುತ್ತದೆ. ಭಂಡಾರಿ ಹಾಗೂ ದುಬೈ ಆವರು 2017-18ರಲ್ಲಿ ಭಾರತದ ಜನಸಂಖ್ಯೆಯನ್ನು 1.36 ಶತಕೋಟಿ ಎಂದು ಪರಿಗಣಿಸಿದ್ದಾರೆ. ಮೆಹ್ರೋತ್ರಾ ಹಾಗೂ ಪರಿದಾ ಅವರು 1.35 ಶತಕೋಟಿ ಎಂದು ಪರಿಗಣಿಸಿದ್ದಾರೆ. 2017-18ರಲ್ಲಿ ವಿಶ್ವಬ್ಯಾಂಕ್ 1.33 ಶತಕೋಟಿ ಎಂದಿದ್ದರೆ, ಹಿಮಾಂಶು-ಸರಕಾರಿ ಅಧಿಕಾರಿಗಳ ಜಿಡಿಪಿ ಅನ್ವಯ-1.31 ಶತಕೋಟಿ ಜನಸಂಖ್ಯೆ ಇದೆ ಎಂದು ಪರಿಗಣಿಸಿದೆ.

ಭಾರತದ ಜನಸಂಖ್ಯೆ ಬಗ್ಗೆ ಇಷ್ಟೊಂದು ಗೊಂದಲಗಳಿವೆ. ಏಕೆಂದರೆ, 2011ರ ಜನಗಣತಿ ಅನ್ವಯ ಇಂದಿಗೂ ಜನಸಂಖ್ಯೆ ಕುರಿತು ನಿಖರ ಮಾಹಿತಿ ನೀಡಿಲ್ಲ. ನಿಯಮದಂತೆ, ಸರ್ಕಾರವು 2016ರಲ್ಲಿಯೇ ಬಿಡುಗಡೆ ಮಾಡಬೇಕಿತ್ತು.

ಭಂಡಾರಿ ಹಾಗೂ ದುಬೈ ಅಧ್ಯಯನದಲ್ಲಿ, ಉದ್ಯೋಗಗಳ ಸಾಧ್ಯತೆಯ ಪ್ರಧಾನ ಮೂಲಾಂಶಗಳನ್ನು ಪರಿಗಣಿಸಿ, ನಂತರದ ಪೂರಕ ಸಾಧ್ಯತೆಗಳ ಮೂಲಗಳನ್ನು ಕಡೆಗಣಿಸಿರುವುದು ಈ ವ್ಯತ್ಯಾಸಗಳಿಗೆ ಕಾರಣ ಇರಬಹುದು. ಅದಲ್ಲದೇ ಅವರಿಬ್ಬರೂ ಪ್ರಧಾನಿ ಕಾರ್ಯಾಲಯದಲ್ಲಿ ಕೆಲಸ ಮಾಡುವುದರಿಂದ ಅಲ್ಲಿನ ಅಂಕಿ ಸಂಖ್ಯೆಗಳು ಉತ್ರೇಕ್ಷೆಯೂ ಇರಬಹುದೆಂಬ ಆರೋಪ ಸಹ ಕೇಳಿಬಂದಿದೆ.

ಈ ಸರ್ವೇಗಳಲ್ಲಿ ಒಬ್ಬ ವ್ಯಕ್ತಿಯು ವರ್ಷದ 365 ದಿನಗಳಲ್ಲಿ 182 ದಿನ ಕೆಲಸ ಮಾಡಿದರೆ ಆತನನ್ನು ಉದ್ಯೋಗಿ ಎಂದು ಪರಿಗಣಿಸುತ್ತದೆ. ಅಂದರೆ ಆರು ತಿಂಗಳು ಕೆಲಸ ಮಾಡಿ ಇನ್ನು ಆರು ತಿಂಗಳು ಕೆಲಸವಿಲ್ಲದಿದ್ದರೂ ಸಹ ಅವರು ಉದ್ಯೋಗಿಗಳ ಪಟ್ಟಿಗೆ ಸೇರುತ್ತಾರೆ. ಹಾಗಾಗಿ ಮೇಲಿನ ಅರ್ಥಶಾಸ್ತ್ರಜ್ಞರು ಊಹೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಉದ್ಯೋಗ ಕಡಿತವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...