Homeಎಕಾನಮಿಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ...

ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ…

- Advertisement -
- Advertisement -

ಕೃಪೆ: ದಿ ಇಂಡಿಯನ್‌ ಎಕ್ಸ್‌ಪ್ರೆಸ್‌

ಅನುವಾದ: ವೆಂಕಟೇಶ್‌ ಮಾನು

2011-12 ಹಾಗೂ 2017-18 ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು ಉದ್ಯೋಗದ ಪ್ರಮಾಣ ಕುಗ್ಗಿರುವ ಬಗ್ಗೆ ಇತ್ತೀಚೆಗೆ ದೆಹಲಿಯ ಅಜೀಂ ಪ್ರೇಮಜಿ ವಿಶ್ವವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಸಸ್ಟೆನೇಬಲ್ ಎಂಪ್ಲಾಯಿಮೆಂಟ್’ ಪ್ರಕಟಿಸಿರುವ ಹಾಗೂ ಸಂತೋಷ ಮೆಹ್ರೋತ್ರಾ ಮತ್ತು ಜಜಾತಿ ಕೆ. ಪರಿದಾ ಬರೆದಿರುವ ಪ್ರಬಂಧದಲ್ಲಿ ಅಭಿಪ್ರಾಯಪಡಲಾಗಿದೆ.

ಸ್ವಾತಂತ್ರ್ಯಾ ನಂತರದ ಭಾರತೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉದ್ಯೋಗ ವಲಯ ಇಷ್ಟೊಂದು ಕುಸಿತ ಕಂಡಿದೆ. ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ ಹಿಮಾಂಶು ಸೇರಿದಂತೆ ಈ ಪ್ರಬಂಧದ ಲೇಖಕರು ಹಾಗೂ ಇತರೆ ಪರಿಣಿತರು ಸಹ ಈ ರೀತಿಯ ಉದ್ಯೋಗ ಕುಸಿತದ ಪ್ರಮಾಣವನ್ನು ಕಂಡುಕೊಂಡಿದ್ದಾರೆ.

ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, “2011-12 ಹಾಗೂ 2017-18ರ ಅವಧಿಯಲ್ಲಿ 9 ದಶಲಕ್ಷ ಗಳಷ್ಟು (90 ಲಕ್ಷ) ಉದ್ಯೋಗದ ಪ್ರಮಾಣ ಕುಗ್ಗಿದೆ. ಇದು ಸ್ವಾತಂತ್ರ್ಯಾ ನಂತರದ ಭಾರತದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ’ ಎಂದಿದ್ದಾರೆ.

ಮೆಹ್ರೋತ್ರಾ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿದ್ದರೆ, ಪರಿದಾ ಅವರು ಪಂಜಾಬ್‍ನ ಕೆಂದ್ರೀಯ ವಿದ್ಯಾಲಯದ ಪ್ರಾಧ್ಯಾಪಕರು.

ಈ ಅಧ್ಯಯನದ ಫಲಿತಾಂಶವು, ಪ್ರಧಾನಿ ಅವರ ಅರ್ಥಶಾಸ್ತ್ರ ಸಲಹಾ ಸಮಿತಿಯಿಂದ ಲಾವೀಸ್ ಭಂಡಾರಿ ಹಾಗೂ ಅಮರೇಶ ದುಬೈ ನಡೆಸಿದ ಅಧ್ಯಯನಕ್ಕಿಂತ ಭಿನ್ನವಾಗಿದೆ. ಅವರ ಅಧ್ಯಯನದಂತೆ 2011-12 ಅವಧಿಯಲ್ಲಿ 43.3 ಕೋಟಿ ಇದ್ದ ಉದ್ಯೋಗಗಳು 2017-18ರ ಅವಧಿಯಲ್ಲಿ ಅದು 45.7 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, 2011-12ರ ಅವಧಿಯಲ್ಲಿ 47.4 ಕೋಟಿ ಉದ್ಯೋಗಗಳಿದ್ದು  2017-18ರ ಅವಧಿಯಲ್ಲಿ ಅದು 46.5 ಕೋಟಿಗಿಳಿದಿವೆ. ಅಂದರೆ ಜನಸಂಖ್ಯೆ ಏರುತ್ತಲೇ ಇದ್ದರೆ ಮೊದಲ ಬಾರಿಗೆ ಉದ್ಯೋಗಗಳಲ್ಲಿ ಇಳಿಕೆ ಕಂಡುಬಂದಿದೆ.

ಆಗಸ್ಟ್ 1ರ  ಮಿಂಟ್ ಪತ್ರಿಕೆಯಲ್ಲಿ ಹಿಮಾಂಶು ಅಭಿಪ್ರಾಯಪಟ್ಟಿರುವಂತೆ “2011-12ರ ಅವಧಿಯಲ್ಲಿ 472.5 ದಶಲಕ್ಷ ದಷ್ಟು ಉದ್ಯೋಗ ಕುಸಿತ ಕಂಡು ಬಂದಿದೆ. ನಂತರದ 6 ವರ್ಷಗಳ ಅವಧಿಯಲ್ಲಿ 15 ದಶಲಕ್ಷ ಉದ್ಯೋಗಗಳು ಕುಂಠಿತಗೊಂಡಿವೆ. ಅಂದರೆ, 2011-12 ಹಾಗೂ 2017-18ರ ಅವಧಿಯ ಪ್ರತಿ ವರ್ಷದಲ್ಲೂ 26 ಲಕ್ಷದಷ್ಟು ಉದ್ಯೋಗಗಳು ನಷ್ಟ ಹೊಂದುತ್ತಾ ಬಂದಿವೆ.

ಈ ಎರಡೂ ಅಧ್ಯಯನಗಳ ಮಧ್ಯೆ ಸಾಕಷ್ಟು ವ್ಯತ್ಯಾಸಗಳಿವೆ. 2004-05, 2011-12 ಹಾಗೂ ಪಿ.ಎಲ್.ಎಫ್.ಎಸ್-2017-18ರ ಅನ್ವಯ ಉದ್ಯೋಗ ಹಾಗೂ ನಿರುದ್ಯೋಗ ಸಮೀಕ್ಷೆಗಾಗಿ “ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗಾನೈಸೆಷನ್’ ನೀಡಿದ ಅಂಕಿ-ಅಂಶಗಳು ಈ ಎರಡೂ ಅಧ್ಯಯನಗಳಿಗೆ ಆಧಾರವಾಗಿವೆ. ಭಂಡಾರಿ ಹಾಗೂ ದುಬೈ ಪ್ರಕಾರ 40 ದಶಲಕ್ಷ ಉದ್ಯೋಗಗಳ ವ್ಯತ್ಯಾಸವಿದೆ. ಆದರೆ, ಮೆಹ್ರೋತ್ರಾ ಹಾಗೂ ಪರಿದಾ ಮತ್ತು ಹಿಮಾಂಶು ನಡೆಸಿದ ಅಧ್ಯಯನಗಳ ಫಲಿತಾಂಶಗಳು ಭಿನ್ನವಾಗಿವೆ.  ಏಕೆ ಹೀಗೆ ಎಂಬುದಕ್ಕೆ ಬಹುಶಃ ಎರಡು ಕಾರಣಗಳಿರಬಹುದು.

ಇಡೀ ದೇಶದ ಒಟ್ಟು ಜನಸಂಖ್ಯೆಯನ್ನು ಪರಿಗಣಿಸಿ ಒಟ್ಟು ಉದ್ಯೋಗಗಳ ಸಂಖ್ಯೆಯನ್ನು ಅಂದಾಜಿಸಿರಬಹುದು. ಅತಿ ಹೆಚ್ಚಿನ ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳ ಸಂಖ್ಯೆಯನ್ನು ನೀಡುತ್ತದೆ. ಭಂಡಾರಿ ಹಾಗೂ ದುಬೈ ಆವರು 2017-18ರಲ್ಲಿ ಭಾರತದ ಜನಸಂಖ್ಯೆಯನ್ನು 1.36 ಶತಕೋಟಿ ಎಂದು ಪರಿಗಣಿಸಿದ್ದಾರೆ. ಮೆಹ್ರೋತ್ರಾ ಹಾಗೂ ಪರಿದಾ ಅವರು 1.35 ಶತಕೋಟಿ ಎಂದು ಪರಿಗಣಿಸಿದ್ದಾರೆ. 2017-18ರಲ್ಲಿ ವಿಶ್ವಬ್ಯಾಂಕ್ 1.33 ಶತಕೋಟಿ ಎಂದಿದ್ದರೆ, ಹಿಮಾಂಶು-ಸರಕಾರಿ ಅಧಿಕಾರಿಗಳ ಜಿಡಿಪಿ ಅನ್ವಯ-1.31 ಶತಕೋಟಿ ಜನಸಂಖ್ಯೆ ಇದೆ ಎಂದು ಪರಿಗಣಿಸಿದೆ.

ಭಾರತದ ಜನಸಂಖ್ಯೆ ಬಗ್ಗೆ ಇಷ್ಟೊಂದು ಗೊಂದಲಗಳಿವೆ. ಏಕೆಂದರೆ, 2011ರ ಜನಗಣತಿ ಅನ್ವಯ ಇಂದಿಗೂ ಜನಸಂಖ್ಯೆ ಕುರಿತು ನಿಖರ ಮಾಹಿತಿ ನೀಡಿಲ್ಲ. ನಿಯಮದಂತೆ, ಸರ್ಕಾರವು 2016ರಲ್ಲಿಯೇ ಬಿಡುಗಡೆ ಮಾಡಬೇಕಿತ್ತು.

ಭಂಡಾರಿ ಹಾಗೂ ದುಬೈ ಅಧ್ಯಯನದಲ್ಲಿ, ಉದ್ಯೋಗಗಳ ಸಾಧ್ಯತೆಯ ಪ್ರಧಾನ ಮೂಲಾಂಶಗಳನ್ನು ಪರಿಗಣಿಸಿ, ನಂತರದ ಪೂರಕ ಸಾಧ್ಯತೆಗಳ ಮೂಲಗಳನ್ನು ಕಡೆಗಣಿಸಿರುವುದು ಈ ವ್ಯತ್ಯಾಸಗಳಿಗೆ ಕಾರಣ ಇರಬಹುದು. ಅದಲ್ಲದೇ ಅವರಿಬ್ಬರೂ ಪ್ರಧಾನಿ ಕಾರ್ಯಾಲಯದಲ್ಲಿ ಕೆಲಸ ಮಾಡುವುದರಿಂದ ಅಲ್ಲಿನ ಅಂಕಿ ಸಂಖ್ಯೆಗಳು ಉತ್ರೇಕ್ಷೆಯೂ ಇರಬಹುದೆಂಬ ಆರೋಪ ಸಹ ಕೇಳಿಬಂದಿದೆ.

ಈ ಸರ್ವೇಗಳಲ್ಲಿ ಒಬ್ಬ ವ್ಯಕ್ತಿಯು ವರ್ಷದ 365 ದಿನಗಳಲ್ಲಿ 182 ದಿನ ಕೆಲಸ ಮಾಡಿದರೆ ಆತನನ್ನು ಉದ್ಯೋಗಿ ಎಂದು ಪರಿಗಣಿಸುತ್ತದೆ. ಅಂದರೆ ಆರು ತಿಂಗಳು ಕೆಲಸ ಮಾಡಿ ಇನ್ನು ಆರು ತಿಂಗಳು ಕೆಲಸವಿಲ್ಲದಿದ್ದರೂ ಸಹ ಅವರು ಉದ್ಯೋಗಿಗಳ ಪಟ್ಟಿಗೆ ಸೇರುತ್ತಾರೆ. ಹಾಗಾಗಿ ಮೇಲಿನ ಅರ್ಥಶಾಸ್ತ್ರಜ್ಞರು ಊಹೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಉದ್ಯೋಗ ಕಡಿತವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...