Homeಮುಖಪುಟಮಧ್ಯಪ್ರದೇಶ: ಬಿಜೆಪಿಯ ನೂತನ 51 ಶಾಸಕರ ಮೇಲಿದೆ ಕ್ರಿಮಿನಲ್‌ ಕೇಸ್!

ಮಧ್ಯಪ್ರದೇಶ: ಬಿಜೆಪಿಯ ನೂತನ 51 ಶಾಸಕರ ಮೇಲಿದೆ ಕ್ರಿಮಿನಲ್‌ ಕೇಸ್!

- Advertisement -
- Advertisement -

ಮಧ್ಯಪ್ರದೇಶದಲ್ಲಿ ಹೊಸದಾಗಿ ಚುನಾಯಿತರಾದ 230 ಶಾಸಕರಲ್ಲಿ ಸುಮಾರು 39 ಪ್ರತಿಶತದಷ್ಟು ಶಾಸಕರು  ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿದ್ದು, ಅದರಲ್ಲಿ 34 ಮಂದಿ ಗಂಭೀರ ಆರೋಪಗಳು ಎಂದರೆ ಗರಿಷ್ಠವಾಗಿ 5 ವರ್ಷಗಳಿಗಿಂತ ಹೆಚ್ಚು ಕಾಲ ಜೈಲು ಶಿಕ್ಷೆಯಾಗಬಲ್ಲ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಎಡಿಆರ್‌ ವರದಿ ಬಹಿರಂಗಪಡಿಸಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ವರದಿಯ ಪ್ರಕಾರ, ಮಧ್ಯಪ್ರದೇಶದಲ್ಲಿ 90 ಶಾಸಕರು ಕ್ರಿಮಿನಲ್‌ ಪ್ರಕರಣಗಳನ್ನು ಹೊಂದಿದ್ದಾರೆ. ಅದರಲ್ಲಿ ಹೆಚ್ಚಿನ ಸಂಖ್ಯೆಯ ಅಂದರೆ 51 ಮಂದಿ ಬಿಜೆಪಿ ಶಾಸಕರಿದ್ದಾರೆ.

94 ಶಾಸಕರು ಅಥವಾ ಒಟ್ಟು ಶೇಕಡಾದಲ್ಲಿ 41ರಷ್ಟು ಜನರು ಹಿಂದಿನ ಚುನಾವಣೆಗಳು ನಡೆದಾಗ 2018ರಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿದ್ದರು. 2023ರಲ್ಲಿ ಮಧ್ಯಪ್ರದೇಶ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ 230 ಶಾಸಕರ ಪೈಕಿ 90 ಮಂದಿ ಅಂದರೆ ಶೇ.39ರಷ್ಟು ಜನರು ಕ್ರಿಮಿನಲ್ ಕೇಸ್‌ ಹೊಂದಿದ್ದಾರೆ. ಈ ಪೈಕಿ 34 ಮಂದಿ ಜನಪ್ರತಿನಿಧಿಗಳು ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ.

ಶಿವಪುರಿ ಜಿಲ್ಲೆಯ ಪಿಚೋರ್‌ನಿಂದ ಆಯ್ಕೆಯಾಗಿರುವ ಬಿಜೆಪಿ ಶಾಸಕ ಪ್ರೀತಮ್ ಲೋಧಿ, ಕೊಲೆ ಆರೋಪ ಎದುರಿಸುತ್ತಿರುವ ಬಿಜೆಪಿಯ ಶಾಸಕ. ಹೊಸದಾಗಿ ಆಯ್ಕೆಯಾಗಿರುವ ಇನ್ನಿತರ ಐದು ಶಾಸಕರು ವಿರುದ್ಧ ಕೊಲೆ ಯತ್ನದ ಆರೋಪವಿದೆ. ಮೂವರು ಶಾಸಕರು ಮಹಿಳೆಯರಿಗೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ.

ಮಧ್ಯಪ್ರದೇಶ ವಿಧಾನಸಭೆ 230 ಸದಸ್ಯ ಬಲವನ್ನು ಹೊಂದಿದೆ. ಈ ಬಾರಿ ಚುನಾವಣೆಯಲ್ಲಿ163 ಸ್ಥಾನಗಳಲ್ಲಿ ಜಯ ಗಳಿಸಿ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಂಡಿದೆ. ಕಾಂಗ್ರೆಸ್ 66 ಸ್ಥಾನಗಳಲ್ಲಿ ಜಯ ಗಳಿಸಿದೆ.  ಬಿಜೆಪಿಯ 51 ಮಂದಿ ಶಾಸಕರು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಈ ಪೈಕಿ 16 ಮಂದಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ನ 38 ಶಾಸಕರು ‌ಕ್ರಿಮಿನಲ್ ಪ್ರಕರಣ ಹೊಂದಿದ್ದಾರೆ.

ಗಂಭೀರ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿ 5 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಶಿಕ್ಷೆಯನ್ನು ಒಳಗೊಂಡಿರುತ್ತದೆ. ಕೆಲವು ಶಾಸಕರ ವಿರುದ್ಧ ಚುನಾವಣಾ ಅಪರಾಧ,  ಹಲ್ಲೆ, ಕೊಲೆ, ಅಪಹರಣ, ಅತ್ಯಾಚಾರ ಸಂಬಂಧಿತ ಅಪರಾಧಗಳು, ಪ್ರಜಾಪ್ರತಿನಿಧಿ ಕಾಯ್ದೆ, ಭ್ರಷ್ಟಾಚಾರ ತಡೆ ಕಾಯ್ದೆಯ ಅಡಿಯಲ್ಲಿರುವ ಅಪರಾಧಗಳು ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಇದೆ ಎಂದು ವರದಿ ಬಹಿರಂಗಪಡಿಸಿದೆ.

ಇದನ್ನು ಓದಿ: ರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...