Homeಮುಖಪುಟನಂದಿಗ್ರಾಮದ 90% ಮತಗಳು ಟಿಎಂಸಿಗೆ: ಮಮತಾ ವಿಶ್ವಾಸ

ನಂದಿಗ್ರಾಮದ 90% ಮತಗಳು ಟಿಎಂಸಿಗೆ: ಮಮತಾ ವಿಶ್ವಾಸ

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ‘ಬಿಜೆಪಿ ಗೂಂಡಾಗಳಿಗೆ’ ಸಹಾಯ ಮಾಡಲು ಕೇಂದ್ರ ಪಡೆಗಳಿಗೆ ಸೂಚನೆ ನೀಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಆಯೋಗದ ವಿರುದ್ಧ ತಮ್ಮ ನಿಲುವನ್ನು ತೀಕ್ಷ್ಣಗೊಳಿಸಿದ್ದು, ಆಯೋಗವು ಬಿಜೆಪಿಯೊಂದಿಗೆ ನಿಂತಿದೆ. ತೃಣಮೂಲ ಕಾಂಗ್ರೆಸ್‌ ಇಂದು ಸಲ್ಲಿಸಿದ ಹಲವಾರು ದೂರುಗಳ ಬಗ್ಗೆ ನಿಷ್ಕ್ರಿಯವಾಗಿದೆ ಎಂದು ಗುರುವಾರ ಆರೋಪಿಸಿದ್ದಾರೆ.

“ನೀವು (ಚುನಾವಣಾ ಆಯೋಗ) ಏನೇ ಪ್ರಯತ್ನ ಮಾಡಿದರೂ ಬಿಜೆಪಿ ಗೆಲ್ಲುವುದಿಲ್ಲ. ನಂದಿಗ್ರಾಮದಲ್ಲಿ, 90% ಮತಗಳು ಟಿಎಂಸಿಗೆ ಹೋಗುತ್ತವೆ” ಎಂದು ನಂದಿಗ್ರಾಮ ಕ್ಷೇತ್ರದ ಒಂದು ಮತದಾನ ಕೇಂದ್ರಕ್ಕೆ ಭೇಟಿ ನೀಡಿದಾಗ ಮಮತಾ ಹೇಳಿದ್ದಾರೆ. ಈ ಕೇಂದ್ರದಲ್ಲಿ ಅನೇಕ ಮತದಾರರಿಗೆ ಮತ ಚಲಾಯಿಸಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಮಮತಾ ರಾಜ್ಯಪಾಲ ಜಗದೀಪ್ ಧಂಕರ್ ಅವರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಏಪ್ರಿಲ್ 1: ರಾಷ್ಟ್ರೀಯ ಜುಮ್ಲಾ ದಿನವನ್ನಾಗಿ ಆಚರಿಸಿದ ನೆಟ್ಟಿಗರು – #NationalJumlaDay ಟ್ರೆಂಡಿಂಗ್‌!

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು “ಬಿಜೆಪಿ ಗೂಂಡಾಗಳಿಗೆ” ಸಹಾಯ ಮಾಡಲು ಕೇಂದ್ರ ಪಡೆಗಳಿಗೆ ಸೂಚನೆ ನೀಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಗೃಹ ಸಚಿವರು ಸ್ವತಃ ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಇತರ ಜವಾನರಿಗೆ ಬಿಜೆಪಿ ಮತ್ತು ಅದರ ಗೂಂಡಾಗಳಿಗೆ ಮಾತ್ರ ಸಹಾಯ ಮಾಡುವಂತೆ ಸೂಚಿಸುತ್ತಿದ್ದಾರೆ. ಮತದಾನ ಕೇಂದ್ರವನ್ನು ವಶಪಡಿಸಿರುವ ಬಗ್ಗೆ 63 ದೂರುಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರ ವಿರುದ್ದ ಅವರ ಒಂದು ಕಾಲದ ಆಪ್ತ ಸುವೆಂದು ಅಧಿಕಾರಿ ಬಿಜೆಪಿ ಅಭ್ಯರ್ಥಿಯಾಗಿ ಇದ್ದಾರೆ. ಈ ಕ್ಷೇತ್ರದಲ್ಲಿ ಇಂದು ಮತದಾನ ನಡೆಯಿತು. ಇಂದು ನಡೆದ ಎರಡನೇ ಹಂತದ ವಿಧಾನಸಭಾ ಚುನಾವಣಾ ಪ್ರಕ್ರಿಯೆಯಲ್ಲಿ ರಾಜ್ಯದ 30 ಕ್ಷೇತ್ರಗಳಿಗೆ ಮತದಾನ ನಡೆಯಿತು. ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಏಪ್ರಿಲ್ 29 ಕ್ಕೆ ಕೊನೆಗೊಳ್ಳುತ್ತದೆ. ಫಲಿತಾಂಶಗಳನ್ನು ಮೇ 2 ರಂದು ಪ್ರಕಟಿಸಲಾಗುವುದು.

ಇದನ್ನೂ ಓದಿ: ಅತ್ಯಾಚಾರ ಎಸಗಿದ ಇಬ್ಬರು ಸಿಆರ್‌ಪಿಎಫ್‌ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...