Homeಮುಖಪುಟ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದ 90% ವಿಷಯಗಳು ಸುಳ್ಳು: ಇಸ್ರೊ ಮಾಜಿ ವಿಜ್ಞಾನಿಗಳು

‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದ 90% ವಿಷಯಗಳು ಸುಳ್ಳು: ಇಸ್ರೊ ಮಾಜಿ ವಿಜ್ಞಾನಿಗಳು

- Advertisement -
- Advertisement -

ಬಹುಭಾಷಾ ನಟ ಆರ್.ಮಾಧವನ್ ಅವರು ನಿರ್ದೇಶಿಸಿರುವ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದಲ್ಲಿ ಇಸ್ರೋಗೆ ಸಂಬಂಧಿಸಿ ಉಲ್ಲೇಖಿಸಲಾದ ಕನಿಷ್ಠ 90% ವಿಷಯಗಳು ಸುಳ್ಳು ಎಂದು ಇಸ್ರೋ ಮಾಜಿ ವಿಜ್ಞಾನಿಗಳ ಗುಂಪು ಹೇಳಿದೆ. ಚಿತ್ರದಲ್ಲಿ ಮತ್ತು ವಿವಿಧ ಟಿವಿ ಮಾಧ್ಯಮಗಳ ಮೂಲಕ ಮಾಡಿದ ಪ್ರತಿಪಾದನೆಗಳಿಂದ ಇಸ್ರೋ ಖ್ಯಾತಿಗೆ ಕಳಂಕ ಹಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.

ನಟ ಆರ್.ಮಾಧವನ್ ಬರೆದು, ನಿರ್ಮಿಸಿ, ನಿರ್ದೇಶಿಸಿದ ಚಿತ್ರವು ಇಸ್ರೋದ ಏರೋನಾಟಿಕಲ್ ಎಂಜಿನಿಯರ್ ನಂಬಿ ನಾರಾಯಣನ್ ಅವರ ಜೀವನವನ್ನು ಆಧರಿಸಿದೆ ಎಂದು ಪ್ರತಿಪಾದಿಸಲಾಗಿದೆ. ಚಿತ್ರದ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ವಿಜ್ಞಾನಿಗಳು, ಚಿತ್ರದಲ್ಲಿ ಇಸ್ರೋ ಬಗ್ಗೆ ಹೇಳಲಾದ ಸುಳ್ಳುಗಳ ಬಗ್ಗೆ ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಸ್ರೋದ ಎಲ್‌ಪಿಎಸ್‌ಇ ನಿರ್ದೇಶಕರಾದ ಡಾ. ಎ. ಇ. ಮುತ್ತುನಾಯಗಂ, ಕ್ರಯೋಜೆನಿಕ್ ಎಂಜಿನ್‌ನ ಯೋಜನಾ ನಿರ್ದೇಶಕರಾದ ಪ್ರೊ.ಇ.ವಿ.ಎಸ್.ನಂಬೂತಿರಿ, ಯೋಜೆನಿಕ್ ಎಂಜಿನ್‌ನ ಉಪನಿರ್ದೇಶಕರಾದ ಡಿ. ಶಶಿಕುಮಾರನ್ ಸೇರಿದಂತೆ ಇಸ್ರೋ ಮಾಜಿ ವಿಜ್ಞಾನಿಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

“ನಂಬಿ ನಾರಾಯಣನ್ ಅವರ ಕುರಿತು ನಿರ್ಮಿಸಲಾಗಿರುವ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಚಲನಚಿತ್ರದ ಮೂಲಕ ಮತ್ತು ಟಿವಿ ಚಾನೆಲ್‌ಗಳ ಮೂಲಕ ಇಸ್ರೋ ಮತ್ತು ಇತರ ವಿಜ್ಞಾನಿಗಳನ್ನು ದೂಷಿಸುತ್ತಿರುವುದರಿಂದ ನಾವು ಸಾರ್ವಜನಿಕರಿಗೆ ಕೆಲವು ವಿಷಯಗಳನ್ನು ಹೇಳಲೆ ಬೇಕಿದೆ” ಎಂದು ಮಾಜಿ ವಿಜ್ಞಾನಿಗಳು ಹೇಳಿದ್ದಾರೆ.

“ಇಸ್ರೋದ ಅನೇಕ ಯೋಜನೆಗಳ ಪಿತಾಮಹ ಅವರು ಎಂದು ಹೇಳಲಾಗುತ್ತಿದೆ, ಇದು ಸುಳ್ಳು. ಭಾರತದ ರಾಷ್ಟ್ರಪತಿಯಾಗಲು ಹೋದ ಎಪಿಜೆ ಅಬ್ದುಲ್ ಕಲಾಂ ಅವರನ್ನೂ ಒಮ್ಮೆ ತಿದ್ದಿದ್ದೇನೆ ಎಂದು ಸಿನಿಮಾದಲ್ಲಿ ಹೇಳಿಕೊಂಡಿದ್ದಾರೆ. ಅದೂ ಸುಳ್ಳು’’ ಎಂದು ಮಾಜಿ ವಿಜ್ಞಾನಿಗಳು ತಿಳಿಸಿದ್ದಾರೆ.

ಚಿತ್ರದಲ್ಲಿ ತಪ್ಪುದಾರಿಗೆಳೆಯುವ ಪ್ರತಿಪಾದನೆಗಳ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಇಸ್ರೋದ ಪ್ರಸ್ತುತ ಅಧ್ಯಕ್ಷ ಎಸ್. ಸೋಮನಾಥ್ ಅವರನ್ನು ಕೋರಿದ್ದೇವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ನಾರಾಯಣನ್ ಅವರ ಬಂಧನದಿಂದಾಗಿ ಭಾರತಕ್ಕೆ ಕ್ರಯೋಜೆನಿಕ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿಕೊಳ್ಳುವಲ್ಲಿ ವಿಳಂಬವಾಯಿತು ಎಂದು ಚಿತ್ರದಲ್ಲಿ ನಾರಾಯಣನ್ ಅವರ ಸಮರ್ಥನೆ ಮಾಡಿರುವುದರ ಬಗ್ಗೆ ವಿಜ್ಞಾನಿಗಳು ಆಕ್ಷೇಪ ಎತ್ತಿದ್ದಾರೆ. 1980 ರ ದಶಕದಲ್ಲಿ ಇವಿಎಸ್ ನಂಬೂತಿರಿ ಅವರ ನಿರ್ದೇಶನದಲ್ಲಿ ಇಸ್ರೋ ಕ್ರಯೋಜೆನಿಕ್ ತಂತ್ರಜ್ಞಾನದ ಮೇಲೆ ಕೆಲಸ ಮಾಡಲು ಪ್ರಾರಂಭಿಸಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ನಾರಾಯಣನ್ ಅವರಿಗೂ ಈ ಯೋಜನೆಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ. ಇಸ್ರೋಗೆ ಸಂಬಂಧಿಸಿದಂತೆ ಚಲನಚಿತ್ರದಲ್ಲಿ ಉಲ್ಲೇಖಿಸಲಾದ ಕನಿಷ್ಠ 90% ವಿಷಯಗಳು ಸುಳ್ಳು ಎಂದು ಮಾಜಿ ವಿಜ್ಞಾನಿಗಳ ಗುಂಪು ಹೇಳಿದೆ.

“ಸಿನಿಮಾದಲ್ಲಿ ಹೇಳಿದ್ದೆಲ್ಲಾ ನಿಜ ಎಂದು ನಾರಾಯಣನ್ ಕೆಲವು ಟಿವಿ ಚಾನೆಲ್‌ಗಳಲ್ಲಿ ಹೇಳಿಕೊಂಡಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ತಮ್ಮ ಅನೇಕ ಸಾಧನೆಗಳನ್ನು ನಾರಾಯಣನ್ ಅವರಿಗೆ ಕ್ರೆಡಿಟ್‌ ನೀಡಲಾಗುತ್ತಿದೆ ಎಂದು ಕೆಲವು ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಮಾಜಿ ವಿಜ್ಞಾನಿಗಳು ನೀಡಿದ ಹೇಳಿಕೆಗೆ ನಾರಾಯಣನ್ ಮತ್ತು ಚಿತ್ರದ ನಿರ್ಮಾಪಕ ಆರ್‌. ಮಾಧವನ್ ಅವರು ಪ್ರತಿಕ್ರಿಯೆ ನೀಡಿಲ್ಲ.

ನಾರಾಯಣನ್ ವಿರುದ್ಧ ಹೊರಿಸಲಾದ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಅವರ ಕೈವಾಡದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಕೇರಳ ಪೊಲೀಸರಿಗೆ ಸುಪ್ರೀಂ ಕೋರ್ಟ್ 2018 ರಲ್ಲಿ ಆದೇಶಿಸಿತ್ತು. ಇದರ ನಂತರ ಬಂಧನಕ್ಕೆ ಒಳಗಾಗಿದ್ದ ಅವರು ಎರಡು ತಿಂಗಳ ಕಾಲ ಜೈಲಿನಲ್ಲಿ ಕಳೆದಿದ್ದರು. ನಂತರ ಅವರ ವಿರುದ್ಧದ ಬೇಹುಗಾರಿಕೆ ಪ್ರಕರಣವು ಸುಳ್ಳು ಎಂದು ಸಿಬಿಐ ನಿರ್ಧರಿಸಿತ್ತು.

ಇದನ್ನೂ ಓದಿ: ಪಠ್ಯದಲ್ಲಿ ಸೂಲಿಬೆಲೆ ಪಾಠದ ಕುರಿತು ಮಾತನಾಡಲು ಆರ್ ಅಶೋಕ್ ಹಿಂದೇಟು: ಚಕ್ರವರ್ತಿಯ ಈ ಸುಳ್ಳುಗಳು ಕಾರಣವೇ?

1994 ರಲ್ಲಿ ಕೇರಳದಾದ್ಯಂತ ಭಾರಿ ವಿವಾದವೆಬ್ಬಿಸಿದ್ದ ಬೇಹುಗಾರಿಕೆ ಪ್ರಕರಣದಲ್ಲಿ ಇಬ್ಬರು ವಿಜ್ಞಾನಿಗಳು ಮತ್ತು ಇಬ್ಬರು ಮಾಲ್ಡೀವಿಯನ್ ಮಹಿಳೆಯರು ಸೇರಿದಂತೆ ಇತರ ನಾಲ್ವರು ಕೆಲವು ಬಾಹ್ಯಾಕಾಶ ಕಾರ್ಯಕ್ರಮಗಳನ್ನು ವಿದೇಶಿ ರಾಷ್ಟ್ರಗಳಿಗೆ ವರ್ಗಾಯಿಸಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿತ್ತು.

ಕೇರಳ ಪೊಲೀಸರು ತಮ್ಮ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಿದ ನಂತರ ಸಿಬಿಐ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು. ಸಿಬಿಐಗೆ ಬೇಹುಗಾರಿಕೆಯ ಯಾವುದೇ ಪುರಾವೆಗಳು ಸಿಕ್ಕಿರಲಿಲ್ಲ. ಈ ಹಗರಣದಿಂದಾಗಿ ಆಗಿನ ಮುಖ್ಯಮಂತ್ರಿ ದಿವಂಗತ ಕೆ.ಕರುಣಾಕರನ್ ಅವರು ರಾಜೀನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನ್ನ ಅನುಬವದ ಪ್ರಕಾರ ,ಎಲೆಲ್ಲಿ ದಾಡಿ ಇರತ್ತೋ ಅಲ್ಲೆಲ್ಲಾ ಮೋಸಾನೇ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...