Homeಮುಖಪುಟ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದ 90% ವಿಷಯಗಳು ಸುಳ್ಳು: ಇಸ್ರೊ ಮಾಜಿ ವಿಜ್ಞಾನಿಗಳು

‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದ 90% ವಿಷಯಗಳು ಸುಳ್ಳು: ಇಸ್ರೊ ಮಾಜಿ ವಿಜ್ಞಾನಿಗಳು

- Advertisement -
- Advertisement -

ಬಹುಭಾಷಾ ನಟ ಆರ್.ಮಾಧವನ್ ಅವರು ನಿರ್ದೇಶಿಸಿರುವ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದಲ್ಲಿ ಇಸ್ರೋಗೆ ಸಂಬಂಧಿಸಿ ಉಲ್ಲೇಖಿಸಲಾದ ಕನಿಷ್ಠ 90% ವಿಷಯಗಳು ಸುಳ್ಳು ಎಂದು ಇಸ್ರೋ ಮಾಜಿ ವಿಜ್ಞಾನಿಗಳ ಗುಂಪು ಹೇಳಿದೆ. ಚಿತ್ರದಲ್ಲಿ ಮತ್ತು ವಿವಿಧ ಟಿವಿ ಮಾಧ್ಯಮಗಳ ಮೂಲಕ ಮಾಡಿದ ಪ್ರತಿಪಾದನೆಗಳಿಂದ ಇಸ್ರೋ ಖ್ಯಾತಿಗೆ ಕಳಂಕ ಹಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.

ನಟ ಆರ್.ಮಾಧವನ್ ಬರೆದು, ನಿರ್ಮಿಸಿ, ನಿರ್ದೇಶಿಸಿದ ಚಿತ್ರವು ಇಸ್ರೋದ ಏರೋನಾಟಿಕಲ್ ಎಂಜಿನಿಯರ್ ನಂಬಿ ನಾರಾಯಣನ್ ಅವರ ಜೀವನವನ್ನು ಆಧರಿಸಿದೆ ಎಂದು ಪ್ರತಿಪಾದಿಸಲಾಗಿದೆ. ಚಿತ್ರದ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ವಿಜ್ಞಾನಿಗಳು, ಚಿತ್ರದಲ್ಲಿ ಇಸ್ರೋ ಬಗ್ಗೆ ಹೇಳಲಾದ ಸುಳ್ಳುಗಳ ಬಗ್ಗೆ ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಸ್ರೋದ ಎಲ್‌ಪಿಎಸ್‌ಇ ನಿರ್ದೇಶಕರಾದ ಡಾ. ಎ. ಇ. ಮುತ್ತುನಾಯಗಂ, ಕ್ರಯೋಜೆನಿಕ್ ಎಂಜಿನ್‌ನ ಯೋಜನಾ ನಿರ್ದೇಶಕರಾದ ಪ್ರೊ.ಇ.ವಿ.ಎಸ್.ನಂಬೂತಿರಿ, ಯೋಜೆನಿಕ್ ಎಂಜಿನ್‌ನ ಉಪನಿರ್ದೇಶಕರಾದ ಡಿ. ಶಶಿಕುಮಾರನ್ ಸೇರಿದಂತೆ ಇಸ್ರೋ ಮಾಜಿ ವಿಜ್ಞಾನಿಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

“ನಂಬಿ ನಾರಾಯಣನ್ ಅವರ ಕುರಿತು ನಿರ್ಮಿಸಲಾಗಿರುವ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಚಲನಚಿತ್ರದ ಮೂಲಕ ಮತ್ತು ಟಿವಿ ಚಾನೆಲ್‌ಗಳ ಮೂಲಕ ಇಸ್ರೋ ಮತ್ತು ಇತರ ವಿಜ್ಞಾನಿಗಳನ್ನು ದೂಷಿಸುತ್ತಿರುವುದರಿಂದ ನಾವು ಸಾರ್ವಜನಿಕರಿಗೆ ಕೆಲವು ವಿಷಯಗಳನ್ನು ಹೇಳಲೆ ಬೇಕಿದೆ” ಎಂದು ಮಾಜಿ ವಿಜ್ಞಾನಿಗಳು ಹೇಳಿದ್ದಾರೆ.

“ಇಸ್ರೋದ ಅನೇಕ ಯೋಜನೆಗಳ ಪಿತಾಮಹ ಅವರು ಎಂದು ಹೇಳಲಾಗುತ್ತಿದೆ, ಇದು ಸುಳ್ಳು. ಭಾರತದ ರಾಷ್ಟ್ರಪತಿಯಾಗಲು ಹೋದ ಎಪಿಜೆ ಅಬ್ದುಲ್ ಕಲಾಂ ಅವರನ್ನೂ ಒಮ್ಮೆ ತಿದ್ದಿದ್ದೇನೆ ಎಂದು ಸಿನಿಮಾದಲ್ಲಿ ಹೇಳಿಕೊಂಡಿದ್ದಾರೆ. ಅದೂ ಸುಳ್ಳು’’ ಎಂದು ಮಾಜಿ ವಿಜ್ಞಾನಿಗಳು ತಿಳಿಸಿದ್ದಾರೆ.

ಚಿತ್ರದಲ್ಲಿ ತಪ್ಪುದಾರಿಗೆಳೆಯುವ ಪ್ರತಿಪಾದನೆಗಳ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಇಸ್ರೋದ ಪ್ರಸ್ತುತ ಅಧ್ಯಕ್ಷ ಎಸ್. ಸೋಮನಾಥ್ ಅವರನ್ನು ಕೋರಿದ್ದೇವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ನಾರಾಯಣನ್ ಅವರ ಬಂಧನದಿಂದಾಗಿ ಭಾರತಕ್ಕೆ ಕ್ರಯೋಜೆನಿಕ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿಕೊಳ್ಳುವಲ್ಲಿ ವಿಳಂಬವಾಯಿತು ಎಂದು ಚಿತ್ರದಲ್ಲಿ ನಾರಾಯಣನ್ ಅವರ ಸಮರ್ಥನೆ ಮಾಡಿರುವುದರ ಬಗ್ಗೆ ವಿಜ್ಞಾನಿಗಳು ಆಕ್ಷೇಪ ಎತ್ತಿದ್ದಾರೆ. 1980 ರ ದಶಕದಲ್ಲಿ ಇವಿಎಸ್ ನಂಬೂತಿರಿ ಅವರ ನಿರ್ದೇಶನದಲ್ಲಿ ಇಸ್ರೋ ಕ್ರಯೋಜೆನಿಕ್ ತಂತ್ರಜ್ಞಾನದ ಮೇಲೆ ಕೆಲಸ ಮಾಡಲು ಪ್ರಾರಂಭಿಸಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ನಾರಾಯಣನ್ ಅವರಿಗೂ ಈ ಯೋಜನೆಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ. ಇಸ್ರೋಗೆ ಸಂಬಂಧಿಸಿದಂತೆ ಚಲನಚಿತ್ರದಲ್ಲಿ ಉಲ್ಲೇಖಿಸಲಾದ ಕನಿಷ್ಠ 90% ವಿಷಯಗಳು ಸುಳ್ಳು ಎಂದು ಮಾಜಿ ವಿಜ್ಞಾನಿಗಳ ಗುಂಪು ಹೇಳಿದೆ.

“ಸಿನಿಮಾದಲ್ಲಿ ಹೇಳಿದ್ದೆಲ್ಲಾ ನಿಜ ಎಂದು ನಾರಾಯಣನ್ ಕೆಲವು ಟಿವಿ ಚಾನೆಲ್‌ಗಳಲ್ಲಿ ಹೇಳಿಕೊಂಡಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ತಮ್ಮ ಅನೇಕ ಸಾಧನೆಗಳನ್ನು ನಾರಾಯಣನ್ ಅವರಿಗೆ ಕ್ರೆಡಿಟ್‌ ನೀಡಲಾಗುತ್ತಿದೆ ಎಂದು ಕೆಲವು ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಮಾಜಿ ವಿಜ್ಞಾನಿಗಳು ನೀಡಿದ ಹೇಳಿಕೆಗೆ ನಾರಾಯಣನ್ ಮತ್ತು ಚಿತ್ರದ ನಿರ್ಮಾಪಕ ಆರ್‌. ಮಾಧವನ್ ಅವರು ಪ್ರತಿಕ್ರಿಯೆ ನೀಡಿಲ್ಲ.

ನಾರಾಯಣನ್ ವಿರುದ್ಧ ಹೊರಿಸಲಾದ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಅವರ ಕೈವಾಡದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಕೇರಳ ಪೊಲೀಸರಿಗೆ ಸುಪ್ರೀಂ ಕೋರ್ಟ್ 2018 ರಲ್ಲಿ ಆದೇಶಿಸಿತ್ತು. ಇದರ ನಂತರ ಬಂಧನಕ್ಕೆ ಒಳಗಾಗಿದ್ದ ಅವರು ಎರಡು ತಿಂಗಳ ಕಾಲ ಜೈಲಿನಲ್ಲಿ ಕಳೆದಿದ್ದರು. ನಂತರ ಅವರ ವಿರುದ್ಧದ ಬೇಹುಗಾರಿಕೆ ಪ್ರಕರಣವು ಸುಳ್ಳು ಎಂದು ಸಿಬಿಐ ನಿರ್ಧರಿಸಿತ್ತು.

ಇದನ್ನೂ ಓದಿ: ಪಠ್ಯದಲ್ಲಿ ಸೂಲಿಬೆಲೆ ಪಾಠದ ಕುರಿತು ಮಾತನಾಡಲು ಆರ್ ಅಶೋಕ್ ಹಿಂದೇಟು: ಚಕ್ರವರ್ತಿಯ ಈ ಸುಳ್ಳುಗಳು ಕಾರಣವೇ?

1994 ರಲ್ಲಿ ಕೇರಳದಾದ್ಯಂತ ಭಾರಿ ವಿವಾದವೆಬ್ಬಿಸಿದ್ದ ಬೇಹುಗಾರಿಕೆ ಪ್ರಕರಣದಲ್ಲಿ ಇಬ್ಬರು ವಿಜ್ಞಾನಿಗಳು ಮತ್ತು ಇಬ್ಬರು ಮಾಲ್ಡೀವಿಯನ್ ಮಹಿಳೆಯರು ಸೇರಿದಂತೆ ಇತರ ನಾಲ್ವರು ಕೆಲವು ಬಾಹ್ಯಾಕಾಶ ಕಾರ್ಯಕ್ರಮಗಳನ್ನು ವಿದೇಶಿ ರಾಷ್ಟ್ರಗಳಿಗೆ ವರ್ಗಾಯಿಸಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿತ್ತು.

ಕೇರಳ ಪೊಲೀಸರು ತಮ್ಮ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಿದ ನಂತರ ಸಿಬಿಐ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು. ಸಿಬಿಐಗೆ ಬೇಹುಗಾರಿಕೆಯ ಯಾವುದೇ ಪುರಾವೆಗಳು ಸಿಕ್ಕಿರಲಿಲ್ಲ. ಈ ಹಗರಣದಿಂದಾಗಿ ಆಗಿನ ಮುಖ್ಯಮಂತ್ರಿ ದಿವಂಗತ ಕೆ.ಕರುಣಾಕರನ್ ಅವರು ರಾಜೀನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನ್ನ ಅನುಬವದ ಪ್ರಕಾರ ,ಎಲೆಲ್ಲಿ ದಾಡಿ ಇರತ್ತೋ ಅಲ್ಲೆಲ್ಲಾ ಮೋಸಾನೇ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...