Homeಮುಖಪುಟ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದ 90% ವಿಷಯಗಳು ಸುಳ್ಳು: ಇಸ್ರೊ ಮಾಜಿ ವಿಜ್ಞಾನಿಗಳು

‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದ 90% ವಿಷಯಗಳು ಸುಳ್ಳು: ಇಸ್ರೊ ಮಾಜಿ ವಿಜ್ಞಾನಿಗಳು

- Advertisement -
- Advertisement -

ಬಹುಭಾಷಾ ನಟ ಆರ್.ಮಾಧವನ್ ಅವರು ನಿರ್ದೇಶಿಸಿರುವ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದಲ್ಲಿ ಇಸ್ರೋಗೆ ಸಂಬಂಧಿಸಿ ಉಲ್ಲೇಖಿಸಲಾದ ಕನಿಷ್ಠ 90% ವಿಷಯಗಳು ಸುಳ್ಳು ಎಂದು ಇಸ್ರೋ ಮಾಜಿ ವಿಜ್ಞಾನಿಗಳ ಗುಂಪು ಹೇಳಿದೆ. ಚಿತ್ರದಲ್ಲಿ ಮತ್ತು ವಿವಿಧ ಟಿವಿ ಮಾಧ್ಯಮಗಳ ಮೂಲಕ ಮಾಡಿದ ಪ್ರತಿಪಾದನೆಗಳಿಂದ ಇಸ್ರೋ ಖ್ಯಾತಿಗೆ ಕಳಂಕ ಹಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.

ನಟ ಆರ್.ಮಾಧವನ್ ಬರೆದು, ನಿರ್ಮಿಸಿ, ನಿರ್ದೇಶಿಸಿದ ಚಿತ್ರವು ಇಸ್ರೋದ ಏರೋನಾಟಿಕಲ್ ಎಂಜಿನಿಯರ್ ನಂಬಿ ನಾರಾಯಣನ್ ಅವರ ಜೀವನವನ್ನು ಆಧರಿಸಿದೆ ಎಂದು ಪ್ರತಿಪಾದಿಸಲಾಗಿದೆ. ಚಿತ್ರದ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ವಿಜ್ಞಾನಿಗಳು, ಚಿತ್ರದಲ್ಲಿ ಇಸ್ರೋ ಬಗ್ಗೆ ಹೇಳಲಾದ ಸುಳ್ಳುಗಳ ಬಗ್ಗೆ ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಸ್ರೋದ ಎಲ್‌ಪಿಎಸ್‌ಇ ನಿರ್ದೇಶಕರಾದ ಡಾ. ಎ. ಇ. ಮುತ್ತುನಾಯಗಂ, ಕ್ರಯೋಜೆನಿಕ್ ಎಂಜಿನ್‌ನ ಯೋಜನಾ ನಿರ್ದೇಶಕರಾದ ಪ್ರೊ.ಇ.ವಿ.ಎಸ್.ನಂಬೂತಿರಿ, ಯೋಜೆನಿಕ್ ಎಂಜಿನ್‌ನ ಉಪನಿರ್ದೇಶಕರಾದ ಡಿ. ಶಶಿಕುಮಾರನ್ ಸೇರಿದಂತೆ ಇಸ್ರೋ ಮಾಜಿ ವಿಜ್ಞಾನಿಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

“ನಂಬಿ ನಾರಾಯಣನ್ ಅವರ ಕುರಿತು ನಿರ್ಮಿಸಲಾಗಿರುವ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಚಲನಚಿತ್ರದ ಮೂಲಕ ಮತ್ತು ಟಿವಿ ಚಾನೆಲ್‌ಗಳ ಮೂಲಕ ಇಸ್ರೋ ಮತ್ತು ಇತರ ವಿಜ್ಞಾನಿಗಳನ್ನು ದೂಷಿಸುತ್ತಿರುವುದರಿಂದ ನಾವು ಸಾರ್ವಜನಿಕರಿಗೆ ಕೆಲವು ವಿಷಯಗಳನ್ನು ಹೇಳಲೆ ಬೇಕಿದೆ” ಎಂದು ಮಾಜಿ ವಿಜ್ಞಾನಿಗಳು ಹೇಳಿದ್ದಾರೆ.

“ಇಸ್ರೋದ ಅನೇಕ ಯೋಜನೆಗಳ ಪಿತಾಮಹ ಅವರು ಎಂದು ಹೇಳಲಾಗುತ್ತಿದೆ, ಇದು ಸುಳ್ಳು. ಭಾರತದ ರಾಷ್ಟ್ರಪತಿಯಾಗಲು ಹೋದ ಎಪಿಜೆ ಅಬ್ದುಲ್ ಕಲಾಂ ಅವರನ್ನೂ ಒಮ್ಮೆ ತಿದ್ದಿದ್ದೇನೆ ಎಂದು ಸಿನಿಮಾದಲ್ಲಿ ಹೇಳಿಕೊಂಡಿದ್ದಾರೆ. ಅದೂ ಸುಳ್ಳು’’ ಎಂದು ಮಾಜಿ ವಿಜ್ಞಾನಿಗಳು ತಿಳಿಸಿದ್ದಾರೆ.

ಚಿತ್ರದಲ್ಲಿ ತಪ್ಪುದಾರಿಗೆಳೆಯುವ ಪ್ರತಿಪಾದನೆಗಳ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಇಸ್ರೋದ ಪ್ರಸ್ತುತ ಅಧ್ಯಕ್ಷ ಎಸ್. ಸೋಮನಾಥ್ ಅವರನ್ನು ಕೋರಿದ್ದೇವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ನಾರಾಯಣನ್ ಅವರ ಬಂಧನದಿಂದಾಗಿ ಭಾರತಕ್ಕೆ ಕ್ರಯೋಜೆನಿಕ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿಕೊಳ್ಳುವಲ್ಲಿ ವಿಳಂಬವಾಯಿತು ಎಂದು ಚಿತ್ರದಲ್ಲಿ ನಾರಾಯಣನ್ ಅವರ ಸಮರ್ಥನೆ ಮಾಡಿರುವುದರ ಬಗ್ಗೆ ವಿಜ್ಞಾನಿಗಳು ಆಕ್ಷೇಪ ಎತ್ತಿದ್ದಾರೆ. 1980 ರ ದಶಕದಲ್ಲಿ ಇವಿಎಸ್ ನಂಬೂತಿರಿ ಅವರ ನಿರ್ದೇಶನದಲ್ಲಿ ಇಸ್ರೋ ಕ್ರಯೋಜೆನಿಕ್ ತಂತ್ರಜ್ಞಾನದ ಮೇಲೆ ಕೆಲಸ ಮಾಡಲು ಪ್ರಾರಂಭಿಸಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ನಾರಾಯಣನ್ ಅವರಿಗೂ ಈ ಯೋಜನೆಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ. ಇಸ್ರೋಗೆ ಸಂಬಂಧಿಸಿದಂತೆ ಚಲನಚಿತ್ರದಲ್ಲಿ ಉಲ್ಲೇಖಿಸಲಾದ ಕನಿಷ್ಠ 90% ವಿಷಯಗಳು ಸುಳ್ಳು ಎಂದು ಮಾಜಿ ವಿಜ್ಞಾನಿಗಳ ಗುಂಪು ಹೇಳಿದೆ.

“ಸಿನಿಮಾದಲ್ಲಿ ಹೇಳಿದ್ದೆಲ್ಲಾ ನಿಜ ಎಂದು ನಾರಾಯಣನ್ ಕೆಲವು ಟಿವಿ ಚಾನೆಲ್‌ಗಳಲ್ಲಿ ಹೇಳಿಕೊಂಡಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ತಮ್ಮ ಅನೇಕ ಸಾಧನೆಗಳನ್ನು ನಾರಾಯಣನ್ ಅವರಿಗೆ ಕ್ರೆಡಿಟ್‌ ನೀಡಲಾಗುತ್ತಿದೆ ಎಂದು ಕೆಲವು ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಮಾಜಿ ವಿಜ್ಞಾನಿಗಳು ನೀಡಿದ ಹೇಳಿಕೆಗೆ ನಾರಾಯಣನ್ ಮತ್ತು ಚಿತ್ರದ ನಿರ್ಮಾಪಕ ಆರ್‌. ಮಾಧವನ್ ಅವರು ಪ್ರತಿಕ್ರಿಯೆ ನೀಡಿಲ್ಲ.

ನಾರಾಯಣನ್ ವಿರುದ್ಧ ಹೊರಿಸಲಾದ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಅವರ ಕೈವಾಡದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಕೇರಳ ಪೊಲೀಸರಿಗೆ ಸುಪ್ರೀಂ ಕೋರ್ಟ್ 2018 ರಲ್ಲಿ ಆದೇಶಿಸಿತ್ತು. ಇದರ ನಂತರ ಬಂಧನಕ್ಕೆ ಒಳಗಾಗಿದ್ದ ಅವರು ಎರಡು ತಿಂಗಳ ಕಾಲ ಜೈಲಿನಲ್ಲಿ ಕಳೆದಿದ್ದರು. ನಂತರ ಅವರ ವಿರುದ್ಧದ ಬೇಹುಗಾರಿಕೆ ಪ್ರಕರಣವು ಸುಳ್ಳು ಎಂದು ಸಿಬಿಐ ನಿರ್ಧರಿಸಿತ್ತು.

ಇದನ್ನೂ ಓದಿ: ಪಠ್ಯದಲ್ಲಿ ಸೂಲಿಬೆಲೆ ಪಾಠದ ಕುರಿತು ಮಾತನಾಡಲು ಆರ್ ಅಶೋಕ್ ಹಿಂದೇಟು: ಚಕ್ರವರ್ತಿಯ ಈ ಸುಳ್ಳುಗಳು ಕಾರಣವೇ?

1994 ರಲ್ಲಿ ಕೇರಳದಾದ್ಯಂತ ಭಾರಿ ವಿವಾದವೆಬ್ಬಿಸಿದ್ದ ಬೇಹುಗಾರಿಕೆ ಪ್ರಕರಣದಲ್ಲಿ ಇಬ್ಬರು ವಿಜ್ಞಾನಿಗಳು ಮತ್ತು ಇಬ್ಬರು ಮಾಲ್ಡೀವಿಯನ್ ಮಹಿಳೆಯರು ಸೇರಿದಂತೆ ಇತರ ನಾಲ್ವರು ಕೆಲವು ಬಾಹ್ಯಾಕಾಶ ಕಾರ್ಯಕ್ರಮಗಳನ್ನು ವಿದೇಶಿ ರಾಷ್ಟ್ರಗಳಿಗೆ ವರ್ಗಾಯಿಸಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿತ್ತು.

ಕೇರಳ ಪೊಲೀಸರು ತಮ್ಮ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಿದ ನಂತರ ಸಿಬಿಐ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು. ಸಿಬಿಐಗೆ ಬೇಹುಗಾರಿಕೆಯ ಯಾವುದೇ ಪುರಾವೆಗಳು ಸಿಕ್ಕಿರಲಿಲ್ಲ. ಈ ಹಗರಣದಿಂದಾಗಿ ಆಗಿನ ಮುಖ್ಯಮಂತ್ರಿ ದಿವಂಗತ ಕೆ.ಕರುಣಾಕರನ್ ಅವರು ರಾಜೀನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನ್ನ ಅನುಬವದ ಪ್ರಕಾರ ,ಎಲೆಲ್ಲಿ ದಾಡಿ ಇರತ್ತೋ ಅಲ್ಲೆಲ್ಲಾ ಮೋಸಾನೇ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...