Homeಮುಖಪುಟ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದ 90% ವಿಷಯಗಳು ಸುಳ್ಳು: ಇಸ್ರೊ ಮಾಜಿ ವಿಜ್ಞಾನಿಗಳು

‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದ 90% ವಿಷಯಗಳು ಸುಳ್ಳು: ಇಸ್ರೊ ಮಾಜಿ ವಿಜ್ಞಾನಿಗಳು

- Advertisement -
- Advertisement -

ಬಹುಭಾಷಾ ನಟ ಆರ್.ಮಾಧವನ್ ಅವರು ನಿರ್ದೇಶಿಸಿರುವ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದಲ್ಲಿ ಇಸ್ರೋಗೆ ಸಂಬಂಧಿಸಿ ಉಲ್ಲೇಖಿಸಲಾದ ಕನಿಷ್ಠ 90% ವಿಷಯಗಳು ಸುಳ್ಳು ಎಂದು ಇಸ್ರೋ ಮಾಜಿ ವಿಜ್ಞಾನಿಗಳ ಗುಂಪು ಹೇಳಿದೆ. ಚಿತ್ರದಲ್ಲಿ ಮತ್ತು ವಿವಿಧ ಟಿವಿ ಮಾಧ್ಯಮಗಳ ಮೂಲಕ ಮಾಡಿದ ಪ್ರತಿಪಾದನೆಗಳಿಂದ ಇಸ್ರೋ ಖ್ಯಾತಿಗೆ ಕಳಂಕ ಹಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.

ನಟ ಆರ್.ಮಾಧವನ್ ಬರೆದು, ನಿರ್ಮಿಸಿ, ನಿರ್ದೇಶಿಸಿದ ಚಿತ್ರವು ಇಸ್ರೋದ ಏರೋನಾಟಿಕಲ್ ಎಂಜಿನಿಯರ್ ನಂಬಿ ನಾರಾಯಣನ್ ಅವರ ಜೀವನವನ್ನು ಆಧರಿಸಿದೆ ಎಂದು ಪ್ರತಿಪಾದಿಸಲಾಗಿದೆ. ಚಿತ್ರದ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ವಿಜ್ಞಾನಿಗಳು, ಚಿತ್ರದಲ್ಲಿ ಇಸ್ರೋ ಬಗ್ಗೆ ಹೇಳಲಾದ ಸುಳ್ಳುಗಳ ಬಗ್ಗೆ ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಸ್ರೋದ ಎಲ್‌ಪಿಎಸ್‌ಇ ನಿರ್ದೇಶಕರಾದ ಡಾ. ಎ. ಇ. ಮುತ್ತುನಾಯಗಂ, ಕ್ರಯೋಜೆನಿಕ್ ಎಂಜಿನ್‌ನ ಯೋಜನಾ ನಿರ್ದೇಶಕರಾದ ಪ್ರೊ.ಇ.ವಿ.ಎಸ್.ನಂಬೂತಿರಿ, ಯೋಜೆನಿಕ್ ಎಂಜಿನ್‌ನ ಉಪನಿರ್ದೇಶಕರಾದ ಡಿ. ಶಶಿಕುಮಾರನ್ ಸೇರಿದಂತೆ ಇಸ್ರೋ ಮಾಜಿ ವಿಜ್ಞಾನಿಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

“ನಂಬಿ ನಾರಾಯಣನ್ ಅವರ ಕುರಿತು ನಿರ್ಮಿಸಲಾಗಿರುವ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಚಲನಚಿತ್ರದ ಮೂಲಕ ಮತ್ತು ಟಿವಿ ಚಾನೆಲ್‌ಗಳ ಮೂಲಕ ಇಸ್ರೋ ಮತ್ತು ಇತರ ವಿಜ್ಞಾನಿಗಳನ್ನು ದೂಷಿಸುತ್ತಿರುವುದರಿಂದ ನಾವು ಸಾರ್ವಜನಿಕರಿಗೆ ಕೆಲವು ವಿಷಯಗಳನ್ನು ಹೇಳಲೆ ಬೇಕಿದೆ” ಎಂದು ಮಾಜಿ ವಿಜ್ಞಾನಿಗಳು ಹೇಳಿದ್ದಾರೆ.

“ಇಸ್ರೋದ ಅನೇಕ ಯೋಜನೆಗಳ ಪಿತಾಮಹ ಅವರು ಎಂದು ಹೇಳಲಾಗುತ್ತಿದೆ, ಇದು ಸುಳ್ಳು. ಭಾರತದ ರಾಷ್ಟ್ರಪತಿಯಾಗಲು ಹೋದ ಎಪಿಜೆ ಅಬ್ದುಲ್ ಕಲಾಂ ಅವರನ್ನೂ ಒಮ್ಮೆ ತಿದ್ದಿದ್ದೇನೆ ಎಂದು ಸಿನಿಮಾದಲ್ಲಿ ಹೇಳಿಕೊಂಡಿದ್ದಾರೆ. ಅದೂ ಸುಳ್ಳು’’ ಎಂದು ಮಾಜಿ ವಿಜ್ಞಾನಿಗಳು ತಿಳಿಸಿದ್ದಾರೆ.

ಚಿತ್ರದಲ್ಲಿ ತಪ್ಪುದಾರಿಗೆಳೆಯುವ ಪ್ರತಿಪಾದನೆಗಳ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಇಸ್ರೋದ ಪ್ರಸ್ತುತ ಅಧ್ಯಕ್ಷ ಎಸ್. ಸೋಮನಾಥ್ ಅವರನ್ನು ಕೋರಿದ್ದೇವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ನಾರಾಯಣನ್ ಅವರ ಬಂಧನದಿಂದಾಗಿ ಭಾರತಕ್ಕೆ ಕ್ರಯೋಜೆನಿಕ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿಕೊಳ್ಳುವಲ್ಲಿ ವಿಳಂಬವಾಯಿತು ಎಂದು ಚಿತ್ರದಲ್ಲಿ ನಾರಾಯಣನ್ ಅವರ ಸಮರ್ಥನೆ ಮಾಡಿರುವುದರ ಬಗ್ಗೆ ವಿಜ್ಞಾನಿಗಳು ಆಕ್ಷೇಪ ಎತ್ತಿದ್ದಾರೆ. 1980 ರ ದಶಕದಲ್ಲಿ ಇವಿಎಸ್ ನಂಬೂತಿರಿ ಅವರ ನಿರ್ದೇಶನದಲ್ಲಿ ಇಸ್ರೋ ಕ್ರಯೋಜೆನಿಕ್ ತಂತ್ರಜ್ಞಾನದ ಮೇಲೆ ಕೆಲಸ ಮಾಡಲು ಪ್ರಾರಂಭಿಸಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ನಾರಾಯಣನ್ ಅವರಿಗೂ ಈ ಯೋಜನೆಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ. ಇಸ್ರೋಗೆ ಸಂಬಂಧಿಸಿದಂತೆ ಚಲನಚಿತ್ರದಲ್ಲಿ ಉಲ್ಲೇಖಿಸಲಾದ ಕನಿಷ್ಠ 90% ವಿಷಯಗಳು ಸುಳ್ಳು ಎಂದು ಮಾಜಿ ವಿಜ್ಞಾನಿಗಳ ಗುಂಪು ಹೇಳಿದೆ.

“ಸಿನಿಮಾದಲ್ಲಿ ಹೇಳಿದ್ದೆಲ್ಲಾ ನಿಜ ಎಂದು ನಾರಾಯಣನ್ ಕೆಲವು ಟಿವಿ ಚಾನೆಲ್‌ಗಳಲ್ಲಿ ಹೇಳಿಕೊಂಡಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ತಮ್ಮ ಅನೇಕ ಸಾಧನೆಗಳನ್ನು ನಾರಾಯಣನ್ ಅವರಿಗೆ ಕ್ರೆಡಿಟ್‌ ನೀಡಲಾಗುತ್ತಿದೆ ಎಂದು ಕೆಲವು ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಮಾಜಿ ವಿಜ್ಞಾನಿಗಳು ನೀಡಿದ ಹೇಳಿಕೆಗೆ ನಾರಾಯಣನ್ ಮತ್ತು ಚಿತ್ರದ ನಿರ್ಮಾಪಕ ಆರ್‌. ಮಾಧವನ್ ಅವರು ಪ್ರತಿಕ್ರಿಯೆ ನೀಡಿಲ್ಲ.

ನಾರಾಯಣನ್ ವಿರುದ್ಧ ಹೊರಿಸಲಾದ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಅವರ ಕೈವಾಡದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಕೇರಳ ಪೊಲೀಸರಿಗೆ ಸುಪ್ರೀಂ ಕೋರ್ಟ್ 2018 ರಲ್ಲಿ ಆದೇಶಿಸಿತ್ತು. ಇದರ ನಂತರ ಬಂಧನಕ್ಕೆ ಒಳಗಾಗಿದ್ದ ಅವರು ಎರಡು ತಿಂಗಳ ಕಾಲ ಜೈಲಿನಲ್ಲಿ ಕಳೆದಿದ್ದರು. ನಂತರ ಅವರ ವಿರುದ್ಧದ ಬೇಹುಗಾರಿಕೆ ಪ್ರಕರಣವು ಸುಳ್ಳು ಎಂದು ಸಿಬಿಐ ನಿರ್ಧರಿಸಿತ್ತು.

ಇದನ್ನೂ ಓದಿ: ಪಠ್ಯದಲ್ಲಿ ಸೂಲಿಬೆಲೆ ಪಾಠದ ಕುರಿತು ಮಾತನಾಡಲು ಆರ್ ಅಶೋಕ್ ಹಿಂದೇಟು: ಚಕ್ರವರ್ತಿಯ ಈ ಸುಳ್ಳುಗಳು ಕಾರಣವೇ?

1994 ರಲ್ಲಿ ಕೇರಳದಾದ್ಯಂತ ಭಾರಿ ವಿವಾದವೆಬ್ಬಿಸಿದ್ದ ಬೇಹುಗಾರಿಕೆ ಪ್ರಕರಣದಲ್ಲಿ ಇಬ್ಬರು ವಿಜ್ಞಾನಿಗಳು ಮತ್ತು ಇಬ್ಬರು ಮಾಲ್ಡೀವಿಯನ್ ಮಹಿಳೆಯರು ಸೇರಿದಂತೆ ಇತರ ನಾಲ್ವರು ಕೆಲವು ಬಾಹ್ಯಾಕಾಶ ಕಾರ್ಯಕ್ರಮಗಳನ್ನು ವಿದೇಶಿ ರಾಷ್ಟ್ರಗಳಿಗೆ ವರ್ಗಾಯಿಸಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿತ್ತು.

ಕೇರಳ ಪೊಲೀಸರು ತಮ್ಮ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಿದ ನಂತರ ಸಿಬಿಐ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು. ಸಿಬಿಐಗೆ ಬೇಹುಗಾರಿಕೆಯ ಯಾವುದೇ ಪುರಾವೆಗಳು ಸಿಕ್ಕಿರಲಿಲ್ಲ. ಈ ಹಗರಣದಿಂದಾಗಿ ಆಗಿನ ಮುಖ್ಯಮಂತ್ರಿ ದಿವಂಗತ ಕೆ.ಕರುಣಾಕರನ್ ಅವರು ರಾಜೀನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನ್ನ ಅನುಬವದ ಪ್ರಕಾರ ,ಎಲೆಲ್ಲಿ ದಾಡಿ ಇರತ್ತೋ ಅಲ್ಲೆಲ್ಲಾ ಮೋಸಾನೇ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...