Homeಮುಖಪುಟಬಿಎಂಸಿಯಿಂದ 90 ವರ್ಷ ಹಳೆಯ ಜೈನ ದೇಗುಲ ಧ್ವಂಸ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ

ಬಿಎಂಸಿಯಿಂದ 90 ವರ್ಷ ಹಳೆಯ ಜೈನ ದೇಗುಲ ಧ್ವಂಸ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಮುಂಬೈನ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವಿಲೇ ಪಾರ್ಲೆ (ಪೂರ್ವ)ನಲ್ಲಿದ್ದ 90 ವರ್ಷ ಹಳೆಯದಾದ ದಿಗಂಬರ ಜೈನ ದೇವಾಲಯ ಶ್ರೀ 1008 ಪಾರ್ಶ್ವನಾಥ ದೇರಾಸರ್ ಅನ್ನು ‘ಕಾನೂನುಬಾಹಿರ’ ಎಂದು ಆರೋಪಿಸಿ ಕೆಡವಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಬಿಎಂಸಿಯ ಕ್ರಮ ಖಂಡಿಸಿ ಶನಿವಾರ ಜೈನ ಸಮುದಾಯದ ಸಾವಿರಾರು ಮಂದಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೌಶಲ ಸಚಿವ ಮಂಗಲ್ ಪ್ರಭಾತ್ ಲೋಧಾ, ವಿಲೆಪಾರ್ಲೆ ಶಾಸಕ ಪರಾಗ್ ಅಲವಾನಿ, ಸಂಸದೆ ವರ್ಷಾ ಗಾಯಕ್ವಾಡ್ ಮತ್ತು ಘಾಟ್‌ಕೋಪರ್ ಶಾಸಕ ಪರಾಗ್ ಶಾ ಮತ್ತು ಜೈನ ಸಮುದಾಯದ ಸಂತರು ಬಿಎಂಸಿ ಕೆ/ಪೂರ್ವ ವಾರ್ಡ್ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ದೇವಾಲಯದ ತೆರವು ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜೈನ ಸಮುದಾಯದ ಧಾರ್ಮಿಕ ವಸ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ, ಅದರಲ್ಲಿ ಜೈನ ಸಮುದಾಯಕ್ಕೆ ಸೇರಿದ ಪವಿತ್ರ ಪುಸ್ತಕಗಳು ಮತ್ತು ವಸ್ತುಗಳು ಸೇರಿವೆ ಎಂದು ಹೇಳಲಾಗಿದೆ.

ದೇವಾಲಯದ ವಿಷಯವು ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದು, ಸುಪ್ರೀಂ ಕೋರ್ಟ್ ತಲುಪಿದ್ದರೂ, ದೇವಾಲಯದ ಪರವಾಗಿ ಯಾವುದೇ ತೀರ್ಪು ಬಂದಿರಲಿಲ್ಲ. ಧ್ವಂಸವನ್ನು ತಡೆಯುವ ಪ್ರಯತ್ನದಲ್ಲಿ ಭಕ್ತರು ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಯಾವುದೇ ವಿಚಾರಣೆ ನಡೆಯುವ ಮೊದಲು, ಭಾರೀ ಪೊಲೀಸ್ ಭದ್ರತೆಯಲ್ಲಿ ದೇವಾಲಯ ಧ್ವಂಸಗೊಳಿಸಲಾಗಿದೆ.

ದೇವಾಲಯದ ಟ್ರಸ್ಟಿ ಅನಿಲ್ ಶಾ ಅವರ ಪ್ರಕಾರ, ದೇವಾಲಯವು 1935ರಿಂದ ಅಸ್ತಿತ್ವದಲ್ಲಿತ್ತು. ಮುಂಬೈ ಪಾಲಿಕೆಯ ನಿಯಮಗಳ ಪ್ರಕಾರ, 1961-62 ಕ್ಕಿಂತ ಮೊದಲು ನಿರ್ಮಿಸಲಾದ ರಚನೆಗಳನ್ನು ಕಾನೂನುಬದ್ಧವೆಂದು ಪರಿಗಣಿಸಲಾಗುತ್ತದೆ. ಅಧಿಕಾರಿಗಳು ದೇವಾಲಯವನ್ನು ಕೆಡವಲು ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ದೇವಾಲಯವು ಜೈನರ ನಂಬಿಕೆಯ ಸಂಕೇತವಾಗಿತ್ತು ಎಂದು ಅವರು ಹೇಳಿದ್ದಾರೆ.

ದೇವಾಲಯ ಧ್ವಂಸಗೊಂಡಿದ್ದರೂ, ಭಕ್ತರು ಆ ಸ್ಥಳದಲ್ಲಿ ಪೂಜೆಯನ್ನು ಪುನರಾರಂಭಿಸಿದ್ದಾರೆ ಮತ್ತು ಕಾನೂನು ಮಾರ್ಗಗಳ ಮೂಲಕ ದೇವಾಲಯವನ್ನು ಪುನರ್ನಿರ್ಮಿಸುವ ಪ್ರತಿಜ್ಞೆ ಮಾಡಿದ್ದಾರೆ. ಧ್ವಂಸಗೊಳಿಸುವ ಸಮಯದಲ್ಲಿ, ಪ್ರತಿಭಟನಾ ನಿರತ ಭಕ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ (ಲಾಠಿ ಚಾರ್ಜ್) ನಡೆಸಿದ್ದಾರೆಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದಲ್ಲಿ ದಾಖಲೆಗಳನ್ನು ಹಾಜರುಪಡಿಸಲು ಎಂಟು ದಿನಗಳ ಕಾಲಾವಕಾಶ ನೀಡಿದ್ದರೂ, ಪಾಲಿಕೆಯು ಬುಧವಾರ ಮುಂಜಾನೆ ಸಣ್ಣ ಸೂಚನೆ ನೀಡಿ ದೇವಾಲಯ ಕಡೆವಿದೆ ಎಂದು ಟ್ರಸ್ಟಿ ಅನಿಲ್ ಶಾ ಆರೋಪಿಸಿದ್ದಾರೆ.

ವಿಲೇ ಪಾರ್ಲೆ ಶಾಸಕ ಪರಾಗ್ ಅಲವಾನಿ ಅವರು ದೇವಾಲಯ ತೆರವುಗೊಳಿಸುವ ಪ್ರಕ್ರಿಯೆ ಮುಂದೂಡುವಂತೆ ಮತ್ತು ನ್ಯಾಯಾಲಯದ ವಿಚಾರಣೆಗೆ ಸಮಯಾವಕಾಶ ನೀಡುವಂತೆ ವಿನಂತಿಸಿದ್ದರು. ಆದರೆ, ಬಿಎಂಸಿ ದೇವಾಲಯವನ್ನು ಕಾನೂನುಬಾಹಿರವೆಂದು ಘೋಷಿಸಿದ ನ್ಯಾಯಾಲಯದ ಈ ಹಿಂದಿನ ಆದೇಶಗಳನ್ನು ಉಲ್ಲೇಖಿಸಿ ತೆರವು ಕಾರ್ಯಾಚರಣೆ ಮುಂದುವರೆಸಿದೆ ಎಂದು ವರದಿಗಳು ಹೇಳಿವೆ.

ಕಾನೂನು ಪ್ರಕಾರವೇ ದೇವಾಲಯದ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಈ ವಿವಾದವು ಕಳೆದ 20 ವರ್ಷಗಳಿಂದ ನಗರ ಸಿವಿಲ್ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿದೆ. ನ್ಯಾಯಾಲಯ ದೇವಾಲಯ ತೆರವಿಗೆ ಯಾವುದೇ ತಡೆಯನ್ನು ನೀಡಿಲ್ಲ. ಶಿಷ್ಟಾಚಾರದ ಪ್ರಕಾರ ಧ್ವಂಸ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಬಿಎಂಸಿಯ ಕೆ/ಪೂರ್ವ ವಾರ್ಡ್ ಅಧಿಕಾರಿಗಳು ಹೇಳಿದ್ದಾರೆ.

ಹೋಳಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ; ಸಂಭಾಲ್ ವೃತ್ತ ನಿರೀಕ್ಷಕರಿಗೆ ಕ್ಲೀನ್ ಚಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...