Homeಮುಖಪುಟಬಿಎಂಸಿಯಿಂದ 90 ವರ್ಷ ಹಳೆಯ ಜೈನ ದೇಗುಲ ಧ್ವಂಸ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ

ಬಿಎಂಸಿಯಿಂದ 90 ವರ್ಷ ಹಳೆಯ ಜೈನ ದೇಗುಲ ಧ್ವಂಸ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಮುಂಬೈನ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವಿಲೇ ಪಾರ್ಲೆ (ಪೂರ್ವ)ನಲ್ಲಿದ್ದ 90 ವರ್ಷ ಹಳೆಯದಾದ ದಿಗಂಬರ ಜೈನ ದೇವಾಲಯ ಶ್ರೀ 1008 ಪಾರ್ಶ್ವನಾಥ ದೇರಾಸರ್ ಅನ್ನು ‘ಕಾನೂನುಬಾಹಿರ’ ಎಂದು ಆರೋಪಿಸಿ ಕೆಡವಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಬಿಎಂಸಿಯ ಕ್ರಮ ಖಂಡಿಸಿ ಶನಿವಾರ ಜೈನ ಸಮುದಾಯದ ಸಾವಿರಾರು ಮಂದಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೌಶಲ ಸಚಿವ ಮಂಗಲ್ ಪ್ರಭಾತ್ ಲೋಧಾ, ವಿಲೆಪಾರ್ಲೆ ಶಾಸಕ ಪರಾಗ್ ಅಲವಾನಿ, ಸಂಸದೆ ವರ್ಷಾ ಗಾಯಕ್ವಾಡ್ ಮತ್ತು ಘಾಟ್‌ಕೋಪರ್ ಶಾಸಕ ಪರಾಗ್ ಶಾ ಮತ್ತು ಜೈನ ಸಮುದಾಯದ ಸಂತರು ಬಿಎಂಸಿ ಕೆ/ಪೂರ್ವ ವಾರ್ಡ್ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ದೇವಾಲಯದ ತೆರವು ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜೈನ ಸಮುದಾಯದ ಧಾರ್ಮಿಕ ವಸ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ, ಅದರಲ್ಲಿ ಜೈನ ಸಮುದಾಯಕ್ಕೆ ಸೇರಿದ ಪವಿತ್ರ ಪುಸ್ತಕಗಳು ಮತ್ತು ವಸ್ತುಗಳು ಸೇರಿವೆ ಎಂದು ಹೇಳಲಾಗಿದೆ.

ದೇವಾಲಯದ ವಿಷಯವು ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದು, ಸುಪ್ರೀಂ ಕೋರ್ಟ್ ತಲುಪಿದ್ದರೂ, ದೇವಾಲಯದ ಪರವಾಗಿ ಯಾವುದೇ ತೀರ್ಪು ಬಂದಿರಲಿಲ್ಲ. ಧ್ವಂಸವನ್ನು ತಡೆಯುವ ಪ್ರಯತ್ನದಲ್ಲಿ ಭಕ್ತರು ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಯಾವುದೇ ವಿಚಾರಣೆ ನಡೆಯುವ ಮೊದಲು, ಭಾರೀ ಪೊಲೀಸ್ ಭದ್ರತೆಯಲ್ಲಿ ದೇವಾಲಯ ಧ್ವಂಸಗೊಳಿಸಲಾಗಿದೆ.

ದೇವಾಲಯದ ಟ್ರಸ್ಟಿ ಅನಿಲ್ ಶಾ ಅವರ ಪ್ರಕಾರ, ದೇವಾಲಯವು 1935ರಿಂದ ಅಸ್ತಿತ್ವದಲ್ಲಿತ್ತು. ಮುಂಬೈ ಪಾಲಿಕೆಯ ನಿಯಮಗಳ ಪ್ರಕಾರ, 1961-62 ಕ್ಕಿಂತ ಮೊದಲು ನಿರ್ಮಿಸಲಾದ ರಚನೆಗಳನ್ನು ಕಾನೂನುಬದ್ಧವೆಂದು ಪರಿಗಣಿಸಲಾಗುತ್ತದೆ. ಅಧಿಕಾರಿಗಳು ದೇವಾಲಯವನ್ನು ಕೆಡವಲು ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ದೇವಾಲಯವು ಜೈನರ ನಂಬಿಕೆಯ ಸಂಕೇತವಾಗಿತ್ತು ಎಂದು ಅವರು ಹೇಳಿದ್ದಾರೆ.

ದೇವಾಲಯ ಧ್ವಂಸಗೊಂಡಿದ್ದರೂ, ಭಕ್ತರು ಆ ಸ್ಥಳದಲ್ಲಿ ಪೂಜೆಯನ್ನು ಪುನರಾರಂಭಿಸಿದ್ದಾರೆ ಮತ್ತು ಕಾನೂನು ಮಾರ್ಗಗಳ ಮೂಲಕ ದೇವಾಲಯವನ್ನು ಪುನರ್ನಿರ್ಮಿಸುವ ಪ್ರತಿಜ್ಞೆ ಮಾಡಿದ್ದಾರೆ. ಧ್ವಂಸಗೊಳಿಸುವ ಸಮಯದಲ್ಲಿ, ಪ್ರತಿಭಟನಾ ನಿರತ ಭಕ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ (ಲಾಠಿ ಚಾರ್ಜ್) ನಡೆಸಿದ್ದಾರೆಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದಲ್ಲಿ ದಾಖಲೆಗಳನ್ನು ಹಾಜರುಪಡಿಸಲು ಎಂಟು ದಿನಗಳ ಕಾಲಾವಕಾಶ ನೀಡಿದ್ದರೂ, ಪಾಲಿಕೆಯು ಬುಧವಾರ ಮುಂಜಾನೆ ಸಣ್ಣ ಸೂಚನೆ ನೀಡಿ ದೇವಾಲಯ ಕಡೆವಿದೆ ಎಂದು ಟ್ರಸ್ಟಿ ಅನಿಲ್ ಶಾ ಆರೋಪಿಸಿದ್ದಾರೆ.

ವಿಲೇ ಪಾರ್ಲೆ ಶಾಸಕ ಪರಾಗ್ ಅಲವಾನಿ ಅವರು ದೇವಾಲಯ ತೆರವುಗೊಳಿಸುವ ಪ್ರಕ್ರಿಯೆ ಮುಂದೂಡುವಂತೆ ಮತ್ತು ನ್ಯಾಯಾಲಯದ ವಿಚಾರಣೆಗೆ ಸಮಯಾವಕಾಶ ನೀಡುವಂತೆ ವಿನಂತಿಸಿದ್ದರು. ಆದರೆ, ಬಿಎಂಸಿ ದೇವಾಲಯವನ್ನು ಕಾನೂನುಬಾಹಿರವೆಂದು ಘೋಷಿಸಿದ ನ್ಯಾಯಾಲಯದ ಈ ಹಿಂದಿನ ಆದೇಶಗಳನ್ನು ಉಲ್ಲೇಖಿಸಿ ತೆರವು ಕಾರ್ಯಾಚರಣೆ ಮುಂದುವರೆಸಿದೆ ಎಂದು ವರದಿಗಳು ಹೇಳಿವೆ.

ಕಾನೂನು ಪ್ರಕಾರವೇ ದೇವಾಲಯದ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಈ ವಿವಾದವು ಕಳೆದ 20 ವರ್ಷಗಳಿಂದ ನಗರ ಸಿವಿಲ್ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿದೆ. ನ್ಯಾಯಾಲಯ ದೇವಾಲಯ ತೆರವಿಗೆ ಯಾವುದೇ ತಡೆಯನ್ನು ನೀಡಿಲ್ಲ. ಶಿಷ್ಟಾಚಾರದ ಪ್ರಕಾರ ಧ್ವಂಸ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಬಿಎಂಸಿಯ ಕೆ/ಪೂರ್ವ ವಾರ್ಡ್ ಅಧಿಕಾರಿಗಳು ಹೇಳಿದ್ದಾರೆ.

ಹೋಳಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ; ಸಂಭಾಲ್ ವೃತ್ತ ನಿರೀಕ್ಷಕರಿಗೆ ಕ್ಲೀನ್ ಚಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...