Homeಮುಖಪುಟಬಿಎಂಸಿಯಿಂದ 90 ವರ್ಷ ಹಳೆಯ ಜೈನ ದೇಗುಲ ಧ್ವಂಸ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ

ಬಿಎಂಸಿಯಿಂದ 90 ವರ್ಷ ಹಳೆಯ ಜೈನ ದೇಗುಲ ಧ್ವಂಸ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಮುಂಬೈನ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವಿಲೇ ಪಾರ್ಲೆ (ಪೂರ್ವ)ನಲ್ಲಿದ್ದ 90 ವರ್ಷ ಹಳೆಯದಾದ ದಿಗಂಬರ ಜೈನ ದೇವಾಲಯ ಶ್ರೀ 1008 ಪಾರ್ಶ್ವನಾಥ ದೇರಾಸರ್ ಅನ್ನು ‘ಕಾನೂನುಬಾಹಿರ’ ಎಂದು ಆರೋಪಿಸಿ ಕೆಡವಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಬಿಎಂಸಿಯ ಕ್ರಮ ಖಂಡಿಸಿ ಶನಿವಾರ ಜೈನ ಸಮುದಾಯದ ಸಾವಿರಾರು ಮಂದಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೌಶಲ ಸಚಿವ ಮಂಗಲ್ ಪ್ರಭಾತ್ ಲೋಧಾ, ವಿಲೆಪಾರ್ಲೆ ಶಾಸಕ ಪರಾಗ್ ಅಲವಾನಿ, ಸಂಸದೆ ವರ್ಷಾ ಗಾಯಕ್ವಾಡ್ ಮತ್ತು ಘಾಟ್‌ಕೋಪರ್ ಶಾಸಕ ಪರಾಗ್ ಶಾ ಮತ್ತು ಜೈನ ಸಮುದಾಯದ ಸಂತರು ಬಿಎಂಸಿ ಕೆ/ಪೂರ್ವ ವಾರ್ಡ್ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ದೇವಾಲಯದ ತೆರವು ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜೈನ ಸಮುದಾಯದ ಧಾರ್ಮಿಕ ವಸ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ, ಅದರಲ್ಲಿ ಜೈನ ಸಮುದಾಯಕ್ಕೆ ಸೇರಿದ ಪವಿತ್ರ ಪುಸ್ತಕಗಳು ಮತ್ತು ವಸ್ತುಗಳು ಸೇರಿವೆ ಎಂದು ಹೇಳಲಾಗಿದೆ.

ದೇವಾಲಯದ ವಿಷಯವು ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದು, ಸುಪ್ರೀಂ ಕೋರ್ಟ್ ತಲುಪಿದ್ದರೂ, ದೇವಾಲಯದ ಪರವಾಗಿ ಯಾವುದೇ ತೀರ್ಪು ಬಂದಿರಲಿಲ್ಲ. ಧ್ವಂಸವನ್ನು ತಡೆಯುವ ಪ್ರಯತ್ನದಲ್ಲಿ ಭಕ್ತರು ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಯಾವುದೇ ವಿಚಾರಣೆ ನಡೆಯುವ ಮೊದಲು, ಭಾರೀ ಪೊಲೀಸ್ ಭದ್ರತೆಯಲ್ಲಿ ದೇವಾಲಯ ಧ್ವಂಸಗೊಳಿಸಲಾಗಿದೆ.

ದೇವಾಲಯದ ಟ್ರಸ್ಟಿ ಅನಿಲ್ ಶಾ ಅವರ ಪ್ರಕಾರ, ದೇವಾಲಯವು 1935ರಿಂದ ಅಸ್ತಿತ್ವದಲ್ಲಿತ್ತು. ಮುಂಬೈ ಪಾಲಿಕೆಯ ನಿಯಮಗಳ ಪ್ರಕಾರ, 1961-62 ಕ್ಕಿಂತ ಮೊದಲು ನಿರ್ಮಿಸಲಾದ ರಚನೆಗಳನ್ನು ಕಾನೂನುಬದ್ಧವೆಂದು ಪರಿಗಣಿಸಲಾಗುತ್ತದೆ. ಅಧಿಕಾರಿಗಳು ದೇವಾಲಯವನ್ನು ಕೆಡವಲು ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ದೇವಾಲಯವು ಜೈನರ ನಂಬಿಕೆಯ ಸಂಕೇತವಾಗಿತ್ತು ಎಂದು ಅವರು ಹೇಳಿದ್ದಾರೆ.

ದೇವಾಲಯ ಧ್ವಂಸಗೊಂಡಿದ್ದರೂ, ಭಕ್ತರು ಆ ಸ್ಥಳದಲ್ಲಿ ಪೂಜೆಯನ್ನು ಪುನರಾರಂಭಿಸಿದ್ದಾರೆ ಮತ್ತು ಕಾನೂನು ಮಾರ್ಗಗಳ ಮೂಲಕ ದೇವಾಲಯವನ್ನು ಪುನರ್ನಿರ್ಮಿಸುವ ಪ್ರತಿಜ್ಞೆ ಮಾಡಿದ್ದಾರೆ. ಧ್ವಂಸಗೊಳಿಸುವ ಸಮಯದಲ್ಲಿ, ಪ್ರತಿಭಟನಾ ನಿರತ ಭಕ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ (ಲಾಠಿ ಚಾರ್ಜ್) ನಡೆಸಿದ್ದಾರೆಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದಲ್ಲಿ ದಾಖಲೆಗಳನ್ನು ಹಾಜರುಪಡಿಸಲು ಎಂಟು ದಿನಗಳ ಕಾಲಾವಕಾಶ ನೀಡಿದ್ದರೂ, ಪಾಲಿಕೆಯು ಬುಧವಾರ ಮುಂಜಾನೆ ಸಣ್ಣ ಸೂಚನೆ ನೀಡಿ ದೇವಾಲಯ ಕಡೆವಿದೆ ಎಂದು ಟ್ರಸ್ಟಿ ಅನಿಲ್ ಶಾ ಆರೋಪಿಸಿದ್ದಾರೆ.

ವಿಲೇ ಪಾರ್ಲೆ ಶಾಸಕ ಪರಾಗ್ ಅಲವಾನಿ ಅವರು ದೇವಾಲಯ ತೆರವುಗೊಳಿಸುವ ಪ್ರಕ್ರಿಯೆ ಮುಂದೂಡುವಂತೆ ಮತ್ತು ನ್ಯಾಯಾಲಯದ ವಿಚಾರಣೆಗೆ ಸಮಯಾವಕಾಶ ನೀಡುವಂತೆ ವಿನಂತಿಸಿದ್ದರು. ಆದರೆ, ಬಿಎಂಸಿ ದೇವಾಲಯವನ್ನು ಕಾನೂನುಬಾಹಿರವೆಂದು ಘೋಷಿಸಿದ ನ್ಯಾಯಾಲಯದ ಈ ಹಿಂದಿನ ಆದೇಶಗಳನ್ನು ಉಲ್ಲೇಖಿಸಿ ತೆರವು ಕಾರ್ಯಾಚರಣೆ ಮುಂದುವರೆಸಿದೆ ಎಂದು ವರದಿಗಳು ಹೇಳಿವೆ.

ಕಾನೂನು ಪ್ರಕಾರವೇ ದೇವಾಲಯದ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಈ ವಿವಾದವು ಕಳೆದ 20 ವರ್ಷಗಳಿಂದ ನಗರ ಸಿವಿಲ್ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿದೆ. ನ್ಯಾಯಾಲಯ ದೇವಾಲಯ ತೆರವಿಗೆ ಯಾವುದೇ ತಡೆಯನ್ನು ನೀಡಿಲ್ಲ. ಶಿಷ್ಟಾಚಾರದ ಪ್ರಕಾರ ಧ್ವಂಸ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಬಿಎಂಸಿಯ ಕೆ/ಪೂರ್ವ ವಾರ್ಡ್ ಅಧಿಕಾರಿಗಳು ಹೇಳಿದ್ದಾರೆ.

ಹೋಳಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ; ಸಂಭಾಲ್ ವೃತ್ತ ನಿರೀಕ್ಷಕರಿಗೆ ಕ್ಲೀನ್ ಚಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...