Homeಮುಖಪುಟಬಿಎಂಸಿಯಿಂದ 90 ವರ್ಷ ಹಳೆಯ ಜೈನ ದೇಗುಲ ಧ್ವಂಸ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ

ಬಿಎಂಸಿಯಿಂದ 90 ವರ್ಷ ಹಳೆಯ ಜೈನ ದೇಗುಲ ಧ್ವಂಸ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಮುಂಬೈನ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವಿಲೇ ಪಾರ್ಲೆ (ಪೂರ್ವ)ನಲ್ಲಿದ್ದ 90 ವರ್ಷ ಹಳೆಯದಾದ ದಿಗಂಬರ ಜೈನ ದೇವಾಲಯ ಶ್ರೀ 1008 ಪಾರ್ಶ್ವನಾಥ ದೇರಾಸರ್ ಅನ್ನು ‘ಕಾನೂನುಬಾಹಿರ’ ಎಂದು ಆರೋಪಿಸಿ ಕೆಡವಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಬಿಎಂಸಿಯ ಕ್ರಮ ಖಂಡಿಸಿ ಶನಿವಾರ ಜೈನ ಸಮುದಾಯದ ಸಾವಿರಾರು ಮಂದಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೌಶಲ ಸಚಿವ ಮಂಗಲ್ ಪ್ರಭಾತ್ ಲೋಧಾ, ವಿಲೆಪಾರ್ಲೆ ಶಾಸಕ ಪರಾಗ್ ಅಲವಾನಿ, ಸಂಸದೆ ವರ್ಷಾ ಗಾಯಕ್ವಾಡ್ ಮತ್ತು ಘಾಟ್‌ಕೋಪರ್ ಶಾಸಕ ಪರಾಗ್ ಶಾ ಮತ್ತು ಜೈನ ಸಮುದಾಯದ ಸಂತರು ಬಿಎಂಸಿ ಕೆ/ಪೂರ್ವ ವಾರ್ಡ್ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ದೇವಾಲಯದ ತೆರವು ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜೈನ ಸಮುದಾಯದ ಧಾರ್ಮಿಕ ವಸ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ, ಅದರಲ್ಲಿ ಜೈನ ಸಮುದಾಯಕ್ಕೆ ಸೇರಿದ ಪವಿತ್ರ ಪುಸ್ತಕಗಳು ಮತ್ತು ವಸ್ತುಗಳು ಸೇರಿವೆ ಎಂದು ಹೇಳಲಾಗಿದೆ.

ದೇವಾಲಯದ ವಿಷಯವು ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದು, ಸುಪ್ರೀಂ ಕೋರ್ಟ್ ತಲುಪಿದ್ದರೂ, ದೇವಾಲಯದ ಪರವಾಗಿ ಯಾವುದೇ ತೀರ್ಪು ಬಂದಿರಲಿಲ್ಲ. ಧ್ವಂಸವನ್ನು ತಡೆಯುವ ಪ್ರಯತ್ನದಲ್ಲಿ ಭಕ್ತರು ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಯಾವುದೇ ವಿಚಾರಣೆ ನಡೆಯುವ ಮೊದಲು, ಭಾರೀ ಪೊಲೀಸ್ ಭದ್ರತೆಯಲ್ಲಿ ದೇವಾಲಯ ಧ್ವಂಸಗೊಳಿಸಲಾಗಿದೆ.

ದೇವಾಲಯದ ಟ್ರಸ್ಟಿ ಅನಿಲ್ ಶಾ ಅವರ ಪ್ರಕಾರ, ದೇವಾಲಯವು 1935ರಿಂದ ಅಸ್ತಿತ್ವದಲ್ಲಿತ್ತು. ಮುಂಬೈ ಪಾಲಿಕೆಯ ನಿಯಮಗಳ ಪ್ರಕಾರ, 1961-62 ಕ್ಕಿಂತ ಮೊದಲು ನಿರ್ಮಿಸಲಾದ ರಚನೆಗಳನ್ನು ಕಾನೂನುಬದ್ಧವೆಂದು ಪರಿಗಣಿಸಲಾಗುತ್ತದೆ. ಅಧಿಕಾರಿಗಳು ದೇವಾಲಯವನ್ನು ಕೆಡವಲು ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ದೇವಾಲಯವು ಜೈನರ ನಂಬಿಕೆಯ ಸಂಕೇತವಾಗಿತ್ತು ಎಂದು ಅವರು ಹೇಳಿದ್ದಾರೆ.

ದೇವಾಲಯ ಧ್ವಂಸಗೊಂಡಿದ್ದರೂ, ಭಕ್ತರು ಆ ಸ್ಥಳದಲ್ಲಿ ಪೂಜೆಯನ್ನು ಪುನರಾರಂಭಿಸಿದ್ದಾರೆ ಮತ್ತು ಕಾನೂನು ಮಾರ್ಗಗಳ ಮೂಲಕ ದೇವಾಲಯವನ್ನು ಪುನರ್ನಿರ್ಮಿಸುವ ಪ್ರತಿಜ್ಞೆ ಮಾಡಿದ್ದಾರೆ. ಧ್ವಂಸಗೊಳಿಸುವ ಸಮಯದಲ್ಲಿ, ಪ್ರತಿಭಟನಾ ನಿರತ ಭಕ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ (ಲಾಠಿ ಚಾರ್ಜ್) ನಡೆಸಿದ್ದಾರೆಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದಲ್ಲಿ ದಾಖಲೆಗಳನ್ನು ಹಾಜರುಪಡಿಸಲು ಎಂಟು ದಿನಗಳ ಕಾಲಾವಕಾಶ ನೀಡಿದ್ದರೂ, ಪಾಲಿಕೆಯು ಬುಧವಾರ ಮುಂಜಾನೆ ಸಣ್ಣ ಸೂಚನೆ ನೀಡಿ ದೇವಾಲಯ ಕಡೆವಿದೆ ಎಂದು ಟ್ರಸ್ಟಿ ಅನಿಲ್ ಶಾ ಆರೋಪಿಸಿದ್ದಾರೆ.

ವಿಲೇ ಪಾರ್ಲೆ ಶಾಸಕ ಪರಾಗ್ ಅಲವಾನಿ ಅವರು ದೇವಾಲಯ ತೆರವುಗೊಳಿಸುವ ಪ್ರಕ್ರಿಯೆ ಮುಂದೂಡುವಂತೆ ಮತ್ತು ನ್ಯಾಯಾಲಯದ ವಿಚಾರಣೆಗೆ ಸಮಯಾವಕಾಶ ನೀಡುವಂತೆ ವಿನಂತಿಸಿದ್ದರು. ಆದರೆ, ಬಿಎಂಸಿ ದೇವಾಲಯವನ್ನು ಕಾನೂನುಬಾಹಿರವೆಂದು ಘೋಷಿಸಿದ ನ್ಯಾಯಾಲಯದ ಈ ಹಿಂದಿನ ಆದೇಶಗಳನ್ನು ಉಲ್ಲೇಖಿಸಿ ತೆರವು ಕಾರ್ಯಾಚರಣೆ ಮುಂದುವರೆಸಿದೆ ಎಂದು ವರದಿಗಳು ಹೇಳಿವೆ.

ಕಾನೂನು ಪ್ರಕಾರವೇ ದೇವಾಲಯದ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಈ ವಿವಾದವು ಕಳೆದ 20 ವರ್ಷಗಳಿಂದ ನಗರ ಸಿವಿಲ್ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿದೆ. ನ್ಯಾಯಾಲಯ ದೇವಾಲಯ ತೆರವಿಗೆ ಯಾವುದೇ ತಡೆಯನ್ನು ನೀಡಿಲ್ಲ. ಶಿಷ್ಟಾಚಾರದ ಪ್ರಕಾರ ಧ್ವಂಸ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಬಿಎಂಸಿಯ ಕೆ/ಪೂರ್ವ ವಾರ್ಡ್ ಅಧಿಕಾರಿಗಳು ಹೇಳಿದ್ದಾರೆ.

ಹೋಳಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ; ಸಂಭಾಲ್ ವೃತ್ತ ನಿರೀಕ್ಷಕರಿಗೆ ಕ್ಲೀನ್ ಚಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...