Homeಮುಖಪುಟಬಿಎಂಸಿಯಿಂದ 90 ವರ್ಷ ಹಳೆಯ ಜೈನ ದೇಗುಲ ಧ್ವಂಸ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ

ಬಿಎಂಸಿಯಿಂದ 90 ವರ್ಷ ಹಳೆಯ ಜೈನ ದೇಗುಲ ಧ್ವಂಸ: ಮುಂಬೈನಲ್ಲಿ ಬೃಹತ್ ಪ್ರತಿಭಟನೆ

- Advertisement -
- Advertisement -

ಮುಂಬೈನ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವಿಲೇ ಪಾರ್ಲೆ (ಪೂರ್ವ)ನಲ್ಲಿದ್ದ 90 ವರ್ಷ ಹಳೆಯದಾದ ದಿಗಂಬರ ಜೈನ ದೇವಾಲಯ ಶ್ರೀ 1008 ಪಾರ್ಶ್ವನಾಥ ದೇರಾಸರ್ ಅನ್ನು ‘ಕಾನೂನುಬಾಹಿರ’ ಎಂದು ಆರೋಪಿಸಿ ಕೆಡವಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಬಿಎಂಸಿಯ ಕ್ರಮ ಖಂಡಿಸಿ ಶನಿವಾರ ಜೈನ ಸಮುದಾಯದ ಸಾವಿರಾರು ಮಂದಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೌಶಲ ಸಚಿವ ಮಂಗಲ್ ಪ್ರಭಾತ್ ಲೋಧಾ, ವಿಲೆಪಾರ್ಲೆ ಶಾಸಕ ಪರಾಗ್ ಅಲವಾನಿ, ಸಂಸದೆ ವರ್ಷಾ ಗಾಯಕ್ವಾಡ್ ಮತ್ತು ಘಾಟ್‌ಕೋಪರ್ ಶಾಸಕ ಪರಾಗ್ ಶಾ ಮತ್ತು ಜೈನ ಸಮುದಾಯದ ಸಂತರು ಬಿಎಂಸಿ ಕೆ/ಪೂರ್ವ ವಾರ್ಡ್ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ದೇವಾಲಯದ ತೆರವು ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜೈನ ಸಮುದಾಯದ ಧಾರ್ಮಿಕ ವಸ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ, ಅದರಲ್ಲಿ ಜೈನ ಸಮುದಾಯಕ್ಕೆ ಸೇರಿದ ಪವಿತ್ರ ಪುಸ್ತಕಗಳು ಮತ್ತು ವಸ್ತುಗಳು ಸೇರಿವೆ ಎಂದು ಹೇಳಲಾಗಿದೆ.

ದೇವಾಲಯದ ವಿಷಯವು ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದು, ಸುಪ್ರೀಂ ಕೋರ್ಟ್ ತಲುಪಿದ್ದರೂ, ದೇವಾಲಯದ ಪರವಾಗಿ ಯಾವುದೇ ತೀರ್ಪು ಬಂದಿರಲಿಲ್ಲ. ಧ್ವಂಸವನ್ನು ತಡೆಯುವ ಪ್ರಯತ್ನದಲ್ಲಿ ಭಕ್ತರು ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಯಾವುದೇ ವಿಚಾರಣೆ ನಡೆಯುವ ಮೊದಲು, ಭಾರೀ ಪೊಲೀಸ್ ಭದ್ರತೆಯಲ್ಲಿ ದೇವಾಲಯ ಧ್ವಂಸಗೊಳಿಸಲಾಗಿದೆ.

ದೇವಾಲಯದ ಟ್ರಸ್ಟಿ ಅನಿಲ್ ಶಾ ಅವರ ಪ್ರಕಾರ, ದೇವಾಲಯವು 1935ರಿಂದ ಅಸ್ತಿತ್ವದಲ್ಲಿತ್ತು. ಮುಂಬೈ ಪಾಲಿಕೆಯ ನಿಯಮಗಳ ಪ್ರಕಾರ, 1961-62 ಕ್ಕಿಂತ ಮೊದಲು ನಿರ್ಮಿಸಲಾದ ರಚನೆಗಳನ್ನು ಕಾನೂನುಬದ್ಧವೆಂದು ಪರಿಗಣಿಸಲಾಗುತ್ತದೆ. ಅಧಿಕಾರಿಗಳು ದೇವಾಲಯವನ್ನು ಕೆಡವಲು ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ದೇವಾಲಯವು ಜೈನರ ನಂಬಿಕೆಯ ಸಂಕೇತವಾಗಿತ್ತು ಎಂದು ಅವರು ಹೇಳಿದ್ದಾರೆ.

ದೇವಾಲಯ ಧ್ವಂಸಗೊಂಡಿದ್ದರೂ, ಭಕ್ತರು ಆ ಸ್ಥಳದಲ್ಲಿ ಪೂಜೆಯನ್ನು ಪುನರಾರಂಭಿಸಿದ್ದಾರೆ ಮತ್ತು ಕಾನೂನು ಮಾರ್ಗಗಳ ಮೂಲಕ ದೇವಾಲಯವನ್ನು ಪುನರ್ನಿರ್ಮಿಸುವ ಪ್ರತಿಜ್ಞೆ ಮಾಡಿದ್ದಾರೆ. ಧ್ವಂಸಗೊಳಿಸುವ ಸಮಯದಲ್ಲಿ, ಪ್ರತಿಭಟನಾ ನಿರತ ಭಕ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ (ಲಾಠಿ ಚಾರ್ಜ್) ನಡೆಸಿದ್ದಾರೆಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದಲ್ಲಿ ದಾಖಲೆಗಳನ್ನು ಹಾಜರುಪಡಿಸಲು ಎಂಟು ದಿನಗಳ ಕಾಲಾವಕಾಶ ನೀಡಿದ್ದರೂ, ಪಾಲಿಕೆಯು ಬುಧವಾರ ಮುಂಜಾನೆ ಸಣ್ಣ ಸೂಚನೆ ನೀಡಿ ದೇವಾಲಯ ಕಡೆವಿದೆ ಎಂದು ಟ್ರಸ್ಟಿ ಅನಿಲ್ ಶಾ ಆರೋಪಿಸಿದ್ದಾರೆ.

ವಿಲೇ ಪಾರ್ಲೆ ಶಾಸಕ ಪರಾಗ್ ಅಲವಾನಿ ಅವರು ದೇವಾಲಯ ತೆರವುಗೊಳಿಸುವ ಪ್ರಕ್ರಿಯೆ ಮುಂದೂಡುವಂತೆ ಮತ್ತು ನ್ಯಾಯಾಲಯದ ವಿಚಾರಣೆಗೆ ಸಮಯಾವಕಾಶ ನೀಡುವಂತೆ ವಿನಂತಿಸಿದ್ದರು. ಆದರೆ, ಬಿಎಂಸಿ ದೇವಾಲಯವನ್ನು ಕಾನೂನುಬಾಹಿರವೆಂದು ಘೋಷಿಸಿದ ನ್ಯಾಯಾಲಯದ ಈ ಹಿಂದಿನ ಆದೇಶಗಳನ್ನು ಉಲ್ಲೇಖಿಸಿ ತೆರವು ಕಾರ್ಯಾಚರಣೆ ಮುಂದುವರೆಸಿದೆ ಎಂದು ವರದಿಗಳು ಹೇಳಿವೆ.

ಕಾನೂನು ಪ್ರಕಾರವೇ ದೇವಾಲಯದ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಈ ವಿವಾದವು ಕಳೆದ 20 ವರ್ಷಗಳಿಂದ ನಗರ ಸಿವಿಲ್ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿದೆ. ನ್ಯಾಯಾಲಯ ದೇವಾಲಯ ತೆರವಿಗೆ ಯಾವುದೇ ತಡೆಯನ್ನು ನೀಡಿಲ್ಲ. ಶಿಷ್ಟಾಚಾರದ ಪ್ರಕಾರ ಧ್ವಂಸ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಬಿಎಂಸಿಯ ಕೆ/ಪೂರ್ವ ವಾರ್ಡ್ ಅಧಿಕಾರಿಗಳು ಹೇಳಿದ್ದಾರೆ.

ಹೋಳಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ; ಸಂಭಾಲ್ ವೃತ್ತ ನಿರೀಕ್ಷಕರಿಗೆ ಕ್ಲೀನ್ ಚಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...