Homeಮುಖಪುಟನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು :...

ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

- Advertisement -
- Advertisement -

ಭಾರತದ 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 3 ಸಾವಿರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸುವ ಅಪಾಯಕಾರಿ ಕೆಲಸಗಳಲ್ಲಿ ತೊಡಗಿರುವ, 38,000 ಕಾರ್ಮಿಕರಲ್ಲಿ ಶೇ. 91.9ರಷ್ಟು ಜನರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗದವರು ಎಂದು ಕೇಂದ್ರ ಸರ್ಕಾರದ ವರದಿಯಿಂದ ತಿಳಿದು ಬಂದಿದೆ.

ಒಟ್ಟು ಶೇ. 91.9ರಷ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕಾರ್ಮಿಕರ ಪೈಕಿ, ಶೇ. 68.9ರಷ್ಟು ಪರಿಶಿಷ್ಟ ಜಾತಿ (ಎಸ್‌ಸಿ), ಶೇ. 14.7 ಇತರ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಶೇ.8.3ರಷ್ಟು ಪರಿಶಿಷ್ಟ ವರ್ಗ (ಎಸ್‌ಟಿ) ಕಾರ್ಮಿಕರಿದ್ದಾರೆ. ಸಾಮಾನ್ಯ ವರ್ಗದವರು ಶೇ.8ಕ್ಕಿಂತ ಕಡಿಮೆ ಇದ್ದಾರೆ.

ಎಲ್ಲಾ ಒಳಚರಂಡಿ ಕೆಲಸಗಳನ್ನು ಯಾಂತ್ರೀಕರಿಸಲು ಮತ್ತು ಈ ಅಪಾಯಕಾರಿ ಕೆಲಸದಿಂದಾಗಿ ಸಾವುಗಳನ್ನು ತಡೆಯಲು ಹಮ್ಮಿಕೊಂಡಿರುವ ‘ನಮಸ್ತೆ’ ಕಾರ್ಯಕ್ರಮದ ಅಂಗವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರ ಎಣಿಕೆ ಕಾರ್ಯವನ್ನು ನಡೆಸುತ್ತಿದೆ.

2023-24ರಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಸ್ವಯಂ ಉದ್ಯೋಗ ಯೋಜನೆ(ಎಸ್‌ಆರ್‌ಎಂಎಸ್)ಯ ಬದಲು ಈ ಯೋಜನೆಯನ್ನು ತರಲಾಗಿದೆ.

ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ದತ್ತಾಂಶಗಳಂತೆ 2019 ಮತ್ತು 2023ರ ನಡುವೆ ಒಳಚರಂಡಿಗಳು ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಅಪಾಯಕಾರಿ ಕೆಲಸದಿಂದ ದೇಶಾದ್ಯಂತ ಕನಿಷ್ಠ 377 ಜನರು ಮೃತಪಟ್ಟಿದ್ದಾರೆ.

ಮಲ ಹೊರುವುದು ಒಂದು ಪದ್ಧತಿಯಾಗಿ ದೇಶದಾದ್ಯಂತ ಅಂತ್ಯಗೊಂಡಿದೆ. ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್‌ಗಳ ಅಪಾಯಕಾರಿ ಶುಚಿತ್ವವನ್ನು ನಿಲ್ಲಿಸುವುದು ಈಗಿನ ಅಗತ್ಯವಾಗಿದೆ ಎನ್ನುವುದು ಕೇಂದ್ರ ಸರ್ಕಾರದ ವಾದ.

ಮಲಗುಂಡಿಗಳನ್ನು ಸ್ವಚ್ಛಗೊಳಿಸುವ ವಾಹನಗಳ ಚಾಲಕರು, ಸಹಾಯಕರು,ಯಂತ್ರ ನಿರ್ವಾಹಕರು ಮತ್ತು ಕ್ಲೀನರ್‌ಗಳು ಸೇರಿದಂತೆ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳ ಸ್ವಚ್ಛತೆಯೊಂದಿಗೆ ನೇರವಾಗಿ ಗುರುತಿಸಿಕೊಂಡಿರುವ ಕಾರ್ಮಿಕರನ್ನು ನಮಸ್ತೆ ಕಾರ್ಯಕ್ರಮವು ಗುರಿಯಾಗಿಸಿಕೊಂಡಿದೆ ಎಂದು ಸಚಿವಾಲಯವು ಹೇಳಿದೆ.

ರಾಷ್ಟ್ರೀಯ ಮಟ್ಟದಲ್ಲಿ ಇಂತಹ ಕಾರ್ಮಿಕರ ಎಣಿಕೆ, ಅವರಿಗೆ ಸುರಕ್ಷತಾ ತರಬೇತಿ ಮತ್ತು ಸಲಕರಣೆಗಳ ಒದಗಿಸುವಿಕೆ ಹಾಗೂ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರನ್ನು ‘ಸ್ಯಾನಿಪ್ರಿನಿಯರ್ಸ್’ ಅಥವಾ ನೈರ್ಮಲ್ಯ ಉದ್ಯಮಿಗಳನ್ನಾಗಿ ಪರಿವರ್ತಿಸಲು ಬಂಡವಾಳ ಸಬ್ಸಿಡಿಗಳನ್ನು ನೀಡುವುದು ಅದರ ಗುರಿಯಾಗಿದೆ.

ಜಾತಿ ಗಣತಿಗೆ ಆಗ್ರಹಿಸಿದ ಕಾಂಗ್ರೆಸ್

ಸರ್ಕಾರದ ವರದಿಯ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ದೇಶದಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ 92% ಜನರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗಗಳಿಂದ ಬಂದವರು. ಈ ಡೇಟಾವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗದ ಜನರ ಜೀವನವು ಬಲವಂತದ ಪರಿಸ್ಥಿತಿಗಳಿಗೆ ತಳ್ಳಲ್ಪಟ್ಟಿದೆ ಎಂಬುವುದನ್ನು ತೋರಿಸುತ್ತದೆ. ಇಂದು ಜಾತಿ ಗಣತಿ ಅಗತ್ಯವಾಗಿದ್ದು, ಅದರಿಂದ ಸರ್ಕಾರದ ಯೋಜನೆಗಳಲ್ಲಿ ಈ ವರ್ಗಗಳ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಕಾಂಗ್ರೆಸ್ ಯಾವುದೇ ಬೆಲೆ ತೆತ್ತಾದರೂ ಜಾತಿ ಗಣತಿಯ ಆಗ್ರಹವನ್ನು ಮುಂದುವರಿಸಲಿದೆ. ದೇಶದ 90% ಜನರು ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಖಚಿತಪಡಿಸಲಿದೆ” ಎಂದು ಹೇಳಿದೆ.

ಇದನ್ನೂ ಓದಿ : ‘ಪ್ರತಿಭೆ ವ್ಯರ್ಥವಾಗಲು ಬಿಡುವುದಿಲ್ಲ..’; ದಲಿತ ವಿದ್ಯಾರ್ಥಿ ಪರವಾಗಿ ಐಐಟಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...