Homeಮುಖಪುಟನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು :...

ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

- Advertisement -
- Advertisement -

ಭಾರತದ 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 3 ಸಾವಿರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸುವ ಅಪಾಯಕಾರಿ ಕೆಲಸಗಳಲ್ಲಿ ತೊಡಗಿರುವ, 38,000 ಕಾರ್ಮಿಕರಲ್ಲಿ ಶೇ. 91.9ರಷ್ಟು ಜನರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗದವರು ಎಂದು ಕೇಂದ್ರ ಸರ್ಕಾರದ ವರದಿಯಿಂದ ತಿಳಿದು ಬಂದಿದೆ.

ಒಟ್ಟು ಶೇ. 91.9ರಷ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕಾರ್ಮಿಕರ ಪೈಕಿ, ಶೇ. 68.9ರಷ್ಟು ಪರಿಶಿಷ್ಟ ಜಾತಿ (ಎಸ್‌ಸಿ), ಶೇ. 14.7 ಇತರ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಶೇ.8.3ರಷ್ಟು ಪರಿಶಿಷ್ಟ ವರ್ಗ (ಎಸ್‌ಟಿ) ಕಾರ್ಮಿಕರಿದ್ದಾರೆ. ಸಾಮಾನ್ಯ ವರ್ಗದವರು ಶೇ.8ಕ್ಕಿಂತ ಕಡಿಮೆ ಇದ್ದಾರೆ.

ಎಲ್ಲಾ ಒಳಚರಂಡಿ ಕೆಲಸಗಳನ್ನು ಯಾಂತ್ರೀಕರಿಸಲು ಮತ್ತು ಈ ಅಪಾಯಕಾರಿ ಕೆಲಸದಿಂದಾಗಿ ಸಾವುಗಳನ್ನು ತಡೆಯಲು ಹಮ್ಮಿಕೊಂಡಿರುವ ‘ನಮಸ್ತೆ’ ಕಾರ್ಯಕ್ರಮದ ಅಂಗವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರ ಎಣಿಕೆ ಕಾರ್ಯವನ್ನು ನಡೆಸುತ್ತಿದೆ.

2023-24ರಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಸ್ವಯಂ ಉದ್ಯೋಗ ಯೋಜನೆ(ಎಸ್‌ಆರ್‌ಎಂಎಸ್)ಯ ಬದಲು ಈ ಯೋಜನೆಯನ್ನು ತರಲಾಗಿದೆ.

ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ದತ್ತಾಂಶಗಳಂತೆ 2019 ಮತ್ತು 2023ರ ನಡುವೆ ಒಳಚರಂಡಿಗಳು ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಅಪಾಯಕಾರಿ ಕೆಲಸದಿಂದ ದೇಶಾದ್ಯಂತ ಕನಿಷ್ಠ 377 ಜನರು ಮೃತಪಟ್ಟಿದ್ದಾರೆ.

ಮಲ ಹೊರುವುದು ಒಂದು ಪದ್ಧತಿಯಾಗಿ ದೇಶದಾದ್ಯಂತ ಅಂತ್ಯಗೊಂಡಿದೆ. ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್‌ಗಳ ಅಪಾಯಕಾರಿ ಶುಚಿತ್ವವನ್ನು ನಿಲ್ಲಿಸುವುದು ಈಗಿನ ಅಗತ್ಯವಾಗಿದೆ ಎನ್ನುವುದು ಕೇಂದ್ರ ಸರ್ಕಾರದ ವಾದ.

ಮಲಗುಂಡಿಗಳನ್ನು ಸ್ವಚ್ಛಗೊಳಿಸುವ ವಾಹನಗಳ ಚಾಲಕರು, ಸಹಾಯಕರು,ಯಂತ್ರ ನಿರ್ವಾಹಕರು ಮತ್ತು ಕ್ಲೀನರ್‌ಗಳು ಸೇರಿದಂತೆ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳ ಸ್ವಚ್ಛತೆಯೊಂದಿಗೆ ನೇರವಾಗಿ ಗುರುತಿಸಿಕೊಂಡಿರುವ ಕಾರ್ಮಿಕರನ್ನು ನಮಸ್ತೆ ಕಾರ್ಯಕ್ರಮವು ಗುರಿಯಾಗಿಸಿಕೊಂಡಿದೆ ಎಂದು ಸಚಿವಾಲಯವು ಹೇಳಿದೆ.

ರಾಷ್ಟ್ರೀಯ ಮಟ್ಟದಲ್ಲಿ ಇಂತಹ ಕಾರ್ಮಿಕರ ಎಣಿಕೆ, ಅವರಿಗೆ ಸುರಕ್ಷತಾ ತರಬೇತಿ ಮತ್ತು ಸಲಕರಣೆಗಳ ಒದಗಿಸುವಿಕೆ ಹಾಗೂ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರನ್ನು ‘ಸ್ಯಾನಿಪ್ರಿನಿಯರ್ಸ್’ ಅಥವಾ ನೈರ್ಮಲ್ಯ ಉದ್ಯಮಿಗಳನ್ನಾಗಿ ಪರಿವರ್ತಿಸಲು ಬಂಡವಾಳ ಸಬ್ಸಿಡಿಗಳನ್ನು ನೀಡುವುದು ಅದರ ಗುರಿಯಾಗಿದೆ.

ಜಾತಿ ಗಣತಿಗೆ ಆಗ್ರಹಿಸಿದ ಕಾಂಗ್ರೆಸ್

ಸರ್ಕಾರದ ವರದಿಯ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ದೇಶದಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ 92% ಜನರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗಗಳಿಂದ ಬಂದವರು. ಈ ಡೇಟಾವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗದ ಜನರ ಜೀವನವು ಬಲವಂತದ ಪರಿಸ್ಥಿತಿಗಳಿಗೆ ತಳ್ಳಲ್ಪಟ್ಟಿದೆ ಎಂಬುವುದನ್ನು ತೋರಿಸುತ್ತದೆ. ಇಂದು ಜಾತಿ ಗಣತಿ ಅಗತ್ಯವಾಗಿದ್ದು, ಅದರಿಂದ ಸರ್ಕಾರದ ಯೋಜನೆಗಳಲ್ಲಿ ಈ ವರ್ಗಗಳ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಕಾಂಗ್ರೆಸ್ ಯಾವುದೇ ಬೆಲೆ ತೆತ್ತಾದರೂ ಜಾತಿ ಗಣತಿಯ ಆಗ್ರಹವನ್ನು ಮುಂದುವರಿಸಲಿದೆ. ದೇಶದ 90% ಜನರು ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಖಚಿತಪಡಿಸಲಿದೆ” ಎಂದು ಹೇಳಿದೆ.

ಇದನ್ನೂ ಓದಿ : ‘ಪ್ರತಿಭೆ ವ್ಯರ್ಥವಾಗಲು ಬಿಡುವುದಿಲ್ಲ..’; ದಲಿತ ವಿದ್ಯಾರ್ಥಿ ಪರವಾಗಿ ಐಐಟಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...