Homeಅಂತರಾಷ್ಟ್ರೀಯರೂಪಾಂತರಿ ವೈರಸ್‌ ಮೂಲ ವೈರಸ್‌ಗಿಂತ ಶೇ. 50-70 ರಷ್ಟು ವೇಗವಾಗಿ ಹರಡುತ್ತದೆ: WHO ಕಳವಳ

ರೂಪಾಂತರಿ ವೈರಸ್‌ ಮೂಲ ವೈರಸ್‌ಗಿಂತ ಶೇ. 50-70 ರಷ್ಟು ವೇಗವಾಗಿ ಹರಡುತ್ತದೆ: WHO ಕಳವಳ

2020ರ ಡಿಸೆಂಬರ್‌ ಮಧ್ಯ ಭಾಗದಲ್ಲಿ ಬ್ರಿಟನ್‌ನಲ್ಲಿ ರೂಪಾಂತರಗೊಂಡ ವೈರಸ್‌ ಪತ್ತೆಯಾಗಿತ್ತು. ಇದು ಮೂಲ ಕೊರೊನಾ ವೈರಸ್‌ಗಿಂತ ಶೇ.50ರಿಂದ ಶೇ.70ರಷ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು WHO ಅಭಿಪ್ರಾಯ ಪಟ್ಟಿದೆ.

- Advertisement -
- Advertisement -

“ಬ್ರಿಟನ್‌ನಲ್ಲಿ ಪತ್ತೆಯಾದ ರೂಪಾಂತರಿ ಕೊರೊನಾ ವೈರಸ್‌ ಈಗ ಜಗತ್ತಿನ 60 ರಾಷ್ಟ್ರಗಳಲ್ಲಿ ಹರಡಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಕಳವಳ ವ್ಯಕ್ತಪಡಿಸಿದೆ. ಕಳೆದ ಒಂದು ವಾರದಲ್ಲಿ ರೂಪಾಂತರಿ ವೈರಸ್‌ ಪತ್ತೆಯಾಗಿರುವ ರಾಷ್ಟ್ರಗಳ ಪಟ್ಟಿಗೆ ಹೊಸದಾಗಿ 10 ದೇಶಗಳು ಸೇರ್ಪಡೆಯಾಗಿವೆ.

ಜಗತ್ತಿನಾದ್ಯಂತ ಕೊರೊನಾದಿಂದಾಗಿ 20 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈಗಾಗಲೆ ಕೆಲವು ದೇಶಗಳು ಕೊರೊನಾ ವೈರಸ್‌ಗೆ ಲಸಿಕೆಯನ್ನು ಕಂಡುಹಿಡಿದಿವೆ. ಆದರೆ ಅವು ಇನ್ನೂ ಸಮರ್ಪಕವಾಗಿ ಪೂರಕವಾಗುತ್ತಿಲ್ಲ. ಹೀಗಿರುವಾಗ ಈ ಹೊಸ ರೂಪಾಂತರಿ ಕೊರನಾ ವೈರಸ್ ಮತ್ತೊಂದು ಆತಂಕವನ್ನು ಸೃಷ್ಟಿಸಿದ್ದು, ಇದು ಹರಡದಂತೆ ತಡೆಯುವುದು ಹೇಗೆ ಎಂಬುದು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಬ್ರಿಟನ್‌ ರೀತಿಯೇ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ರೂಪಾಂತರಿ ವೈರಸ್‌, ಅತಿ ವೇಗವಾಗಿ ಹರಡಬಲ್ಲದಾಗಿದೆ. ಆ ವೈರಸ್‌ 23 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ ಎಂದು WHO ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

ಕೊರೊನಾ ಸೋಂಕಿನಿಂದಾಗಿ ಕಳೆದ 7 ದಿನಗಳಲ್ಲಿ ಜಗತ್ತಿನಾದ್ಯಂತ ಸುಮಾರು 93,000 ಮಂದಿ ಸಾವಿಗೀಡಾಗಿದ್ದರೆ. ಇದೇ ಅವಧಿಯಲ್ಲಿ 47 ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2020ರ ಡಿಸೆಂಬರ್‌ ಮಧ್ಯ ಭಾಗದಲ್ಲಿ ಬ್ರಿಟನ್‌ನಲ್ಲಿ ರೂಪಾಂತರಗೊಂಡ ವೈರಸ್‌ ಪತ್ತೆಯಾಗಿತ್ತು. ಇದು ಮೂಲ ಕೊರೊನಾ ವೈರಸ್‌ಗಿಂತ ಶೇ.50ರಿಂದ ಶೇ.70ರಷ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು WHO ಅಭಿಪ್ರಾಯ ಪಟ್ಟಿದೆ.

ಎರಡೂ ರೀತಿಯ ರೂಪಾಂತರಗೊಂಡ ವೈರಸ್‌ ವೇಗವಾಗಿ ಹರಡಬಹುದಾಗಿದ್ದರೂ ಸಹ, ಅವು ಪ್ರಾಣಕ್ಕೆ ಹೆಚ್ಚು ಅಪಾಯಕಾರಿಯಾಗಬಹುದೆಂದು ಪರಿಗಣಿಸಿಲ್ಲ. ಈಗ ಅಭಿವೃದ್ಧಿಪಡಿಸಿರುವ ಲಸಿಕೆಯು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಬಿ117 ವೈರಸ್‌ ತಡೆಯುವುದರಲ್ಲಿಯೂ ಪರಿಣಾಮಕಾರಿಯಾಗಿದೆ ಎಂದು ಫೈಝರ್‌ ಮತ್ತು ಜರ್ಮನಿಯ ಬಯೊ ಎನ್‌ಟೆಕ್‌ ಹೇಳಿವೆ.


ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...