Homeಅಂತರಾಷ್ಟ್ರೀಯರೂಪಾಂತರಿ ವೈರಸ್‌ ಮೂಲ ವೈರಸ್‌ಗಿಂತ ಶೇ. 50-70 ರಷ್ಟು ವೇಗವಾಗಿ ಹರಡುತ್ತದೆ: WHO ಕಳವಳ

ರೂಪಾಂತರಿ ವೈರಸ್‌ ಮೂಲ ವೈರಸ್‌ಗಿಂತ ಶೇ. 50-70 ರಷ್ಟು ವೇಗವಾಗಿ ಹರಡುತ್ತದೆ: WHO ಕಳವಳ

2020ರ ಡಿಸೆಂಬರ್‌ ಮಧ್ಯ ಭಾಗದಲ್ಲಿ ಬ್ರಿಟನ್‌ನಲ್ಲಿ ರೂಪಾಂತರಗೊಂಡ ವೈರಸ್‌ ಪತ್ತೆಯಾಗಿತ್ತು. ಇದು ಮೂಲ ಕೊರೊನಾ ವೈರಸ್‌ಗಿಂತ ಶೇ.50ರಿಂದ ಶೇ.70ರಷ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು WHO ಅಭಿಪ್ರಾಯ ಪಟ್ಟಿದೆ.

- Advertisement -
- Advertisement -

“ಬ್ರಿಟನ್‌ನಲ್ಲಿ ಪತ್ತೆಯಾದ ರೂಪಾಂತರಿ ಕೊರೊನಾ ವೈರಸ್‌ ಈಗ ಜಗತ್ತಿನ 60 ರಾಷ್ಟ್ರಗಳಲ್ಲಿ ಹರಡಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಕಳವಳ ವ್ಯಕ್ತಪಡಿಸಿದೆ. ಕಳೆದ ಒಂದು ವಾರದಲ್ಲಿ ರೂಪಾಂತರಿ ವೈರಸ್‌ ಪತ್ತೆಯಾಗಿರುವ ರಾಷ್ಟ್ರಗಳ ಪಟ್ಟಿಗೆ ಹೊಸದಾಗಿ 10 ದೇಶಗಳು ಸೇರ್ಪಡೆಯಾಗಿವೆ.

ಜಗತ್ತಿನಾದ್ಯಂತ ಕೊರೊನಾದಿಂದಾಗಿ 20 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈಗಾಗಲೆ ಕೆಲವು ದೇಶಗಳು ಕೊರೊನಾ ವೈರಸ್‌ಗೆ ಲಸಿಕೆಯನ್ನು ಕಂಡುಹಿಡಿದಿವೆ. ಆದರೆ ಅವು ಇನ್ನೂ ಸಮರ್ಪಕವಾಗಿ ಪೂರಕವಾಗುತ್ತಿಲ್ಲ. ಹೀಗಿರುವಾಗ ಈ ಹೊಸ ರೂಪಾಂತರಿ ಕೊರನಾ ವೈರಸ್ ಮತ್ತೊಂದು ಆತಂಕವನ್ನು ಸೃಷ್ಟಿಸಿದ್ದು, ಇದು ಹರಡದಂತೆ ತಡೆಯುವುದು ಹೇಗೆ ಎಂಬುದು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಬ್ರಿಟನ್‌ ರೀತಿಯೇ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ರೂಪಾಂತರಿ ವೈರಸ್‌, ಅತಿ ವೇಗವಾಗಿ ಹರಡಬಲ್ಲದಾಗಿದೆ. ಆ ವೈರಸ್‌ 23 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ ಎಂದು WHO ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

ಕೊರೊನಾ ಸೋಂಕಿನಿಂದಾಗಿ ಕಳೆದ 7 ದಿನಗಳಲ್ಲಿ ಜಗತ್ತಿನಾದ್ಯಂತ ಸುಮಾರು 93,000 ಮಂದಿ ಸಾವಿಗೀಡಾಗಿದ್ದರೆ. ಇದೇ ಅವಧಿಯಲ್ಲಿ 47 ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2020ರ ಡಿಸೆಂಬರ್‌ ಮಧ್ಯ ಭಾಗದಲ್ಲಿ ಬ್ರಿಟನ್‌ನಲ್ಲಿ ರೂಪಾಂತರಗೊಂಡ ವೈರಸ್‌ ಪತ್ತೆಯಾಗಿತ್ತು. ಇದು ಮೂಲ ಕೊರೊನಾ ವೈರಸ್‌ಗಿಂತ ಶೇ.50ರಿಂದ ಶೇ.70ರಷ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು WHO ಅಭಿಪ್ರಾಯ ಪಟ್ಟಿದೆ.

ಎರಡೂ ರೀತಿಯ ರೂಪಾಂತರಗೊಂಡ ವೈರಸ್‌ ವೇಗವಾಗಿ ಹರಡಬಹುದಾಗಿದ್ದರೂ ಸಹ, ಅವು ಪ್ರಾಣಕ್ಕೆ ಹೆಚ್ಚು ಅಪಾಯಕಾರಿಯಾಗಬಹುದೆಂದು ಪರಿಗಣಿಸಿಲ್ಲ. ಈಗ ಅಭಿವೃದ್ಧಿಪಡಿಸಿರುವ ಲಸಿಕೆಯು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಬಿ117 ವೈರಸ್‌ ತಡೆಯುವುದರಲ್ಲಿಯೂ ಪರಿಣಾಮಕಾರಿಯಾಗಿದೆ ಎಂದು ಫೈಝರ್‌ ಮತ್ತು ಜರ್ಮನಿಯ ಬಯೊ ಎನ್‌ಟೆಕ್‌ ಹೇಳಿವೆ.


ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...