Homeಮುಖಪುಟಬಿಹಾರ: ಬಡತನದಲ್ಲಿರುವ 94 ಲಕ್ಷಕ್ಕೂ ಹೆಚ್ಚು ಕುಟುಂಬಗಳು: ಜಾತಿಗಣತಿಯಲ್ಲಿ ಬಹಿರಂಗ

ಬಿಹಾರ: ಬಡತನದಲ್ಲಿರುವ 94 ಲಕ್ಷಕ್ಕೂ ಹೆಚ್ಚು ಕುಟುಂಬಗಳು: ಜಾತಿಗಣತಿಯಲ್ಲಿ ಬಹಿರಂಗ

- Advertisement -
- Advertisement -

ಬಿಹಾರದಲ್ಲಿ ಮೂರನೇ ಒಂದು ಭಾಗಕ್ಕಿಂತಲೂ ಹೆಚ್ಚು ಕುಟುಂಬಗಳು ಬಡತನದಲ್ಲಿ ವಾಸಿಸುತ್ತಿದ್ದು, ಮಾಸಿಕ 6,000 ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಹೊಂದಿದೆ ಎಂದು ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಜಾತಿಗಣತಿಯ ವಿವರವಾದ ವರದಿಯಲ್ಲಿ ತಿಳಿಸಲಾಗಿದೆ.

ವರದಿಯು ಮೇಲ್ಜಾತಿಗಳಲ್ಲಿ ಬಡತನ ಇರುವುದು ಒಪ್ಪಿಕೊಂಡಿದೆ. ಆದರೆ ಶೇಕಡಾವಾರು ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರಲ್ಲಿ ಬಡತನ ಹೆಚ್ಚಾಗಿದೆ ಎನ್ನುವುದು ಬಯಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಅವರು ಮಂಡಿಸಿದ ವರದಿಯ ಪ್ರಕಾರ, ರಾಜ್ಯದಲ್ಲಿ ಸುಮಾರು 2.97 ಕೋಟಿ ಕುಟುಂಬಗಳು ನೆಲೆಸಿದೆ. ಅದರಲ್ಲಿ 94 ಲಕ್ಷಕ್ಕೂ ಹೆಚ್ಚು ಕುಟುಂಬ (ಶೇ 34.13) ಬಡತನದಲ್ಲಿದೆ.

ಜಾತಿಗಣತಿಯಲ್ಲಿ ಪತ್ತೆಯಾದ ಮತ್ತೊಂದು ಪ್ರಮುಖ ಸಂಶೋಧನೆಯೆಂದರೆ 50 ಲಕ್ಷಕ್ಕೂ ಹೆಚ್ಚು ಬಿಹಾರದ ಜನರು ಜೀವನೋಪಾಯಕ್ಕಾಗಿ ಅಥವಾ ಉತ್ತಮ ಶಿಕ್ಷಣಕ್ಕಾಗಿ ರಾಜ್ಯದ ಹೊರಗೆ ವಾಸಿಸುತ್ತಿದ್ದಾರೆ. ಇತರ ರಾಜ್ಯಗಳಲ್ಲಿ ಜೀವನ ಸಾಗಿಸುತ್ತಿರುವವರು ಸುಮಾರು 46 ಲಕ್ಷದಷ್ಟಿದ್ದರೆ. 2.17 ಲಕ್ಷ ಜನರು ವಿದೇಶದಲ್ಲಿ ಇದ್ದಾರೆ.

ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವವರು ಸುಮಾರು 5.52 ಲಕ್ಷದಷ್ಟಿದ್ದರೆ, ಸುಮಾರು 27,000 ಮಂದಿ ವಿದೇಶದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಮಂಡಿಸಲಾದ ವಿವರಗಳಲ್ಲಿ ಮೇಲ್ಜಾತಿಗಳಲ್ಲಿ ಬಡತನದ ಪ್ರಮಾಣವು ಶೇ.25ಕ್ಕಿಂತ ಹೆಚ್ಚು ಎಂದು ಹೇಳಲಾಗಿದೆ.

ಅ.2ರಂದು ಜಾತಿಗಣತಿಯ ಪ್ರಾಥಮಿಕ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಜಾತಿಗಣತಿ ನಡೆಸಲು ಕೇಂದ್ರವು ಹಿಂದೇಟು ಹಾಕಿರುವ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಸರ್ಕಾರವು ಈ ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯಲ್ಲಿ ಒಬಿಸಿಗಳು ಮತ್ತು ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿಗಳು) ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 60ಕ್ಕಿಂತ ಹೆಚ್ಚು ಇದ್ದಾರೆ ಎಂದು ತಿಳಿಸಿತ್ತು.

ಬಿಹಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯವಾಗಿದೆ. ವರದಿಯಲ್ಲಿ ಒಟ್ಟು ಜನಸಂಖ್ಯೆಯಲ್ಲಿ 6,41,31,992 ಪುರುಷರು, 6,11,38,460 ಮಹಿಳೆಯರು, 2,836 ತೃತಿಯ ಲಿಂಗಿಗಳಿದ್ದಾರೆ. ಇದರಲ್ಲಿ 19ರಷ್ಟು ಜನರನ್ನು ಪರಿಶಿಷ್ಟ ಜಾತಿ, 1.68% ಪರಿಶಿಷ್ಟ ಪಂಗಂಡ, 27.12% ಒಬಿಸಿ, 36.01% ಇಬಿಸಿ ಜನರಿದ್ದಾರೆ.

ಭೂಮಿಹಾರ್ ಜನಸಂಖ್ಯೆ ಶೇಕಡಾ 2.86ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3ರಷ್ಟಿದ್ದಾರೆ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಸಮುದಾಯಕ್ಕೆ ಸೇರಿದ ಯಾದವರು ಜನಸಂಖ್ಯೆಯ ಶೇಕಡಾ 14ರಷ್ಟಿದ್ದಾರೆ ಎಂದು ವರದಿ ತಿಳಿಸಿತ್ತು.

ಇದನ್ನು ಓದಿ: ಪುತ್ತೂರು: ಪ್ರಖ್ಯಾತ ಹುಲಿ ವೇಷ ಕುಣಿತ ತಂಡದ ಸದಸ್ಯನ ಬರ್ಬರ ಕೊಲೆ: ಆರೋಪಿಗಳು ಪೊಲೀಸ್‌ ವಶಕ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ಪಿಎ ಹಲ್ಲೆ ಪ್ರಕರಣ: ಸ್ವಾತಿ ಮುಖದ ಮೇಲೆ ಆಂತರಿಕ ಗಾಯ; ಹೇಳಿಕೆ ಪಡೆದ...

0
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್‌ನಿಂದ ಹಲ್ಲೆಗೆ ಒಳಗಾಗಿರುವ, ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮುಖದ ಮೇಲೆ ಆಂತರಿಕ ಗಾಯಗಳಾಗಿರುವುದು ವೈದ್ಯಕೀಯ...