Homeಮುಖಪುಟಬಿಹಾರ: ಬಡತನದಲ್ಲಿರುವ 94 ಲಕ್ಷಕ್ಕೂ ಹೆಚ್ಚು ಕುಟುಂಬಗಳು: ಜಾತಿಗಣತಿಯಲ್ಲಿ ಬಹಿರಂಗ

ಬಿಹಾರ: ಬಡತನದಲ್ಲಿರುವ 94 ಲಕ್ಷಕ್ಕೂ ಹೆಚ್ಚು ಕುಟುಂಬಗಳು: ಜಾತಿಗಣತಿಯಲ್ಲಿ ಬಹಿರಂಗ

- Advertisement -
- Advertisement -

ಬಿಹಾರದಲ್ಲಿ ಮೂರನೇ ಒಂದು ಭಾಗಕ್ಕಿಂತಲೂ ಹೆಚ್ಚು ಕುಟುಂಬಗಳು ಬಡತನದಲ್ಲಿ ವಾಸಿಸುತ್ತಿದ್ದು, ಮಾಸಿಕ 6,000 ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಹೊಂದಿದೆ ಎಂದು ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಜಾತಿಗಣತಿಯ ವಿವರವಾದ ವರದಿಯಲ್ಲಿ ತಿಳಿಸಲಾಗಿದೆ.

ವರದಿಯು ಮೇಲ್ಜಾತಿಗಳಲ್ಲಿ ಬಡತನ ಇರುವುದು ಒಪ್ಪಿಕೊಂಡಿದೆ. ಆದರೆ ಶೇಕಡಾವಾರು ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರಲ್ಲಿ ಬಡತನ ಹೆಚ್ಚಾಗಿದೆ ಎನ್ನುವುದು ಬಯಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಅವರು ಮಂಡಿಸಿದ ವರದಿಯ ಪ್ರಕಾರ, ರಾಜ್ಯದಲ್ಲಿ ಸುಮಾರು 2.97 ಕೋಟಿ ಕುಟುಂಬಗಳು ನೆಲೆಸಿದೆ. ಅದರಲ್ಲಿ 94 ಲಕ್ಷಕ್ಕೂ ಹೆಚ್ಚು ಕುಟುಂಬ (ಶೇ 34.13) ಬಡತನದಲ್ಲಿದೆ.

ಜಾತಿಗಣತಿಯಲ್ಲಿ ಪತ್ತೆಯಾದ ಮತ್ತೊಂದು ಪ್ರಮುಖ ಸಂಶೋಧನೆಯೆಂದರೆ 50 ಲಕ್ಷಕ್ಕೂ ಹೆಚ್ಚು ಬಿಹಾರದ ಜನರು ಜೀವನೋಪಾಯಕ್ಕಾಗಿ ಅಥವಾ ಉತ್ತಮ ಶಿಕ್ಷಣಕ್ಕಾಗಿ ರಾಜ್ಯದ ಹೊರಗೆ ವಾಸಿಸುತ್ತಿದ್ದಾರೆ. ಇತರ ರಾಜ್ಯಗಳಲ್ಲಿ ಜೀವನ ಸಾಗಿಸುತ್ತಿರುವವರು ಸುಮಾರು 46 ಲಕ್ಷದಷ್ಟಿದ್ದರೆ. 2.17 ಲಕ್ಷ ಜನರು ವಿದೇಶದಲ್ಲಿ ಇದ್ದಾರೆ.

ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವವರು ಸುಮಾರು 5.52 ಲಕ್ಷದಷ್ಟಿದ್ದರೆ, ಸುಮಾರು 27,000 ಮಂದಿ ವಿದೇಶದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಮಂಡಿಸಲಾದ ವಿವರಗಳಲ್ಲಿ ಮೇಲ್ಜಾತಿಗಳಲ್ಲಿ ಬಡತನದ ಪ್ರಮಾಣವು ಶೇ.25ಕ್ಕಿಂತ ಹೆಚ್ಚು ಎಂದು ಹೇಳಲಾಗಿದೆ.

ಅ.2ರಂದು ಜಾತಿಗಣತಿಯ ಪ್ರಾಥಮಿಕ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಜಾತಿಗಣತಿ ನಡೆಸಲು ಕೇಂದ್ರವು ಹಿಂದೇಟು ಹಾಕಿರುವ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಸರ್ಕಾರವು ಈ ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯಲ್ಲಿ ಒಬಿಸಿಗಳು ಮತ್ತು ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿಗಳು) ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 60ಕ್ಕಿಂತ ಹೆಚ್ಚು ಇದ್ದಾರೆ ಎಂದು ತಿಳಿಸಿತ್ತು.

ಬಿಹಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯವಾಗಿದೆ. ವರದಿಯಲ್ಲಿ ಒಟ್ಟು ಜನಸಂಖ್ಯೆಯಲ್ಲಿ 6,41,31,992 ಪುರುಷರು, 6,11,38,460 ಮಹಿಳೆಯರು, 2,836 ತೃತಿಯ ಲಿಂಗಿಗಳಿದ್ದಾರೆ. ಇದರಲ್ಲಿ 19ರಷ್ಟು ಜನರನ್ನು ಪರಿಶಿಷ್ಟ ಜಾತಿ, 1.68% ಪರಿಶಿಷ್ಟ ಪಂಗಂಡ, 27.12% ಒಬಿಸಿ, 36.01% ಇಬಿಸಿ ಜನರಿದ್ದಾರೆ.

ಭೂಮಿಹಾರ್ ಜನಸಂಖ್ಯೆ ಶೇಕಡಾ 2.86ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3ರಷ್ಟಿದ್ದಾರೆ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಸಮುದಾಯಕ್ಕೆ ಸೇರಿದ ಯಾದವರು ಜನಸಂಖ್ಯೆಯ ಶೇಕಡಾ 14ರಷ್ಟಿದ್ದಾರೆ ಎಂದು ವರದಿ ತಿಳಿಸಿತ್ತು.

ಇದನ್ನು ಓದಿ: ಪುತ್ತೂರು: ಪ್ರಖ್ಯಾತ ಹುಲಿ ವೇಷ ಕುಣಿತ ತಂಡದ ಸದಸ್ಯನ ಬರ್ಬರ ಕೊಲೆ: ಆರೋಪಿಗಳು ಪೊಲೀಸ್‌ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...