Homeಮುಖಪುಟಬಿಹಾರ: ಬಡತನದಲ್ಲಿರುವ 94 ಲಕ್ಷಕ್ಕೂ ಹೆಚ್ಚು ಕುಟುಂಬಗಳು: ಜಾತಿಗಣತಿಯಲ್ಲಿ ಬಹಿರಂಗ

ಬಿಹಾರ: ಬಡತನದಲ್ಲಿರುವ 94 ಲಕ್ಷಕ್ಕೂ ಹೆಚ್ಚು ಕುಟುಂಬಗಳು: ಜಾತಿಗಣತಿಯಲ್ಲಿ ಬಹಿರಂಗ

- Advertisement -
- Advertisement -

ಬಿಹಾರದಲ್ಲಿ ಮೂರನೇ ಒಂದು ಭಾಗಕ್ಕಿಂತಲೂ ಹೆಚ್ಚು ಕುಟುಂಬಗಳು ಬಡತನದಲ್ಲಿ ವಾಸಿಸುತ್ತಿದ್ದು, ಮಾಸಿಕ 6,000 ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಹೊಂದಿದೆ ಎಂದು ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಜಾತಿಗಣತಿಯ ವಿವರವಾದ ವರದಿಯಲ್ಲಿ ತಿಳಿಸಲಾಗಿದೆ.

ವರದಿಯು ಮೇಲ್ಜಾತಿಗಳಲ್ಲಿ ಬಡತನ ಇರುವುದು ಒಪ್ಪಿಕೊಂಡಿದೆ. ಆದರೆ ಶೇಕಡಾವಾರು ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರಲ್ಲಿ ಬಡತನ ಹೆಚ್ಚಾಗಿದೆ ಎನ್ನುವುದು ಬಯಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಅವರು ಮಂಡಿಸಿದ ವರದಿಯ ಪ್ರಕಾರ, ರಾಜ್ಯದಲ್ಲಿ ಸುಮಾರು 2.97 ಕೋಟಿ ಕುಟುಂಬಗಳು ನೆಲೆಸಿದೆ. ಅದರಲ್ಲಿ 94 ಲಕ್ಷಕ್ಕೂ ಹೆಚ್ಚು ಕುಟುಂಬ (ಶೇ 34.13) ಬಡತನದಲ್ಲಿದೆ.

ಜಾತಿಗಣತಿಯಲ್ಲಿ ಪತ್ತೆಯಾದ ಮತ್ತೊಂದು ಪ್ರಮುಖ ಸಂಶೋಧನೆಯೆಂದರೆ 50 ಲಕ್ಷಕ್ಕೂ ಹೆಚ್ಚು ಬಿಹಾರದ ಜನರು ಜೀವನೋಪಾಯಕ್ಕಾಗಿ ಅಥವಾ ಉತ್ತಮ ಶಿಕ್ಷಣಕ್ಕಾಗಿ ರಾಜ್ಯದ ಹೊರಗೆ ವಾಸಿಸುತ್ತಿದ್ದಾರೆ. ಇತರ ರಾಜ್ಯಗಳಲ್ಲಿ ಜೀವನ ಸಾಗಿಸುತ್ತಿರುವವರು ಸುಮಾರು 46 ಲಕ್ಷದಷ್ಟಿದ್ದರೆ. 2.17 ಲಕ್ಷ ಜನರು ವಿದೇಶದಲ್ಲಿ ಇದ್ದಾರೆ.

ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವವರು ಸುಮಾರು 5.52 ಲಕ್ಷದಷ್ಟಿದ್ದರೆ, ಸುಮಾರು 27,000 ಮಂದಿ ವಿದೇಶದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಮಂಡಿಸಲಾದ ವಿವರಗಳಲ್ಲಿ ಮೇಲ್ಜಾತಿಗಳಲ್ಲಿ ಬಡತನದ ಪ್ರಮಾಣವು ಶೇ.25ಕ್ಕಿಂತ ಹೆಚ್ಚು ಎಂದು ಹೇಳಲಾಗಿದೆ.

ಅ.2ರಂದು ಜಾತಿಗಣತಿಯ ಪ್ರಾಥಮಿಕ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಜಾತಿಗಣತಿ ನಡೆಸಲು ಕೇಂದ್ರವು ಹಿಂದೇಟು ಹಾಕಿರುವ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಸರ್ಕಾರವು ಈ ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯಲ್ಲಿ ಒಬಿಸಿಗಳು ಮತ್ತು ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿಗಳು) ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 60ಕ್ಕಿಂತ ಹೆಚ್ಚು ಇದ್ದಾರೆ ಎಂದು ತಿಳಿಸಿತ್ತು.

ಬಿಹಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯವಾಗಿದೆ. ವರದಿಯಲ್ಲಿ ಒಟ್ಟು ಜನಸಂಖ್ಯೆಯಲ್ಲಿ 6,41,31,992 ಪುರುಷರು, 6,11,38,460 ಮಹಿಳೆಯರು, 2,836 ತೃತಿಯ ಲಿಂಗಿಗಳಿದ್ದಾರೆ. ಇದರಲ್ಲಿ 19ರಷ್ಟು ಜನರನ್ನು ಪರಿಶಿಷ್ಟ ಜಾತಿ, 1.68% ಪರಿಶಿಷ್ಟ ಪಂಗಂಡ, 27.12% ಒಬಿಸಿ, 36.01% ಇಬಿಸಿ ಜನರಿದ್ದಾರೆ.

ಭೂಮಿಹಾರ್ ಜನಸಂಖ್ಯೆ ಶೇಕಡಾ 2.86ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3ರಷ್ಟಿದ್ದಾರೆ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಸಮುದಾಯಕ್ಕೆ ಸೇರಿದ ಯಾದವರು ಜನಸಂಖ್ಯೆಯ ಶೇಕಡಾ 14ರಷ್ಟಿದ್ದಾರೆ ಎಂದು ವರದಿ ತಿಳಿಸಿತ್ತು.

ಇದನ್ನು ಓದಿ: ಪುತ್ತೂರು: ಪ್ರಖ್ಯಾತ ಹುಲಿ ವೇಷ ಕುಣಿತ ತಂಡದ ಸದಸ್ಯನ ಬರ್ಬರ ಕೊಲೆ: ಆರೋಪಿಗಳು ಪೊಲೀಸ್‌ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...