Homeಮುಖಪುಟಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ...

ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ಬಿಡುಗಡೆ

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು,

- Advertisement -
- Advertisement -

ಲಾಕ್‌ಡೌನ್‌ನಿಂದ ಉಂಟಾಗಿರುವ ಭಾರೀ ನಷ್ಟವನ್ನು ಭರಿಸಲು, ಆರ್ಥಿಕತೆ ಚೇತರಿಸಿಕೊಳ್ಳಲು ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಬಿಡುಗಡೆ ಮಾಡಿದ ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ತಿಳಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಚನ್ನಹಳ್ಳಿ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಇಂದು ಲಾಕ್ ಡೌನ್ ಸಮಯದಲ್ಲಿ ಕರ್ನಾಟಕದ ಶ್ರಮಜೀವಿಗಳ ಮೇಲೆ ಉಂಟಾದ ಆರ್ಥಿಕ‌, ಸಾಮಾಜಿಕ, ರಾಜಕೀಯ ಪರಿಣಾಮಗಳನ್ನು ಬಿಚ್ಚಿಡುವ ಅಧ್ಯಯನ ವರದಿ ಬಿಡುಗಡೆಯಾಗಿದೆ. ಲಾಕ್‌ಡೌನ್‌ನಿಂದ ಅತಿ ಹೆಚ್ಚು ಸಂಕಷ್ಟಕ್ಕೊಳಗಾದ ಅಲೆಮಾರಿ, ಆದಿವಾಸಿ ಸಮುದಾಯವಿರುವಲ್ಲಿಯೇ ವರದಿ ಬಿಡುಗಡೆ ಮಾಡಿರುವುದು ವಿಶೇಷವಾಗಿದೆ.

ಹಕ್ಕಿ ಪಿಕ್ಕಿ ಸಮುದಾಯದ ಮುಖಂಡರಾದ ರೈಸ್‌ರವರು‌ ಮಾತನಾಡಿ “ನಮ್ಮ ಜೀವನ ಮೊದಲೇ ನಿಕೃಷ್ಟವಾಗಿತ್ತು. ಈಗ ಇರುವ ಲಾಕ್‌ಡೌನ್‌ನಿಂದಾಗಿ ಇನ್ನು ಹದಗೆಟ್ಟಿದೆ. ಸಮರ್ಪಕ ಮನೆಗಳಿಲ್ಲದ ನಮಗೆ ಬಹಳ ತೊಂದರೆಯಾಗಿದೆ. ಮಳೆ ಶುರುವಾಗಿ ನಮ್ಮ ಜನರೆಲ್ಲರೂ ನೆನಯುತ್ತಿರುವಾಗ ತಾಲ್ಲೂಕು ಆಡಳಿತದ ಬಳಿ ಕನಿಷ್ಠ ಟಾರ್ಪಲ್‌ ಕೊಡಿಸಿ ಎಂದು ಸಹಾಯ ಕೇಳಿದರೆ ಆರ್‌ಟಿಸಿ ಕೇಳುತ್ತಾರೆ. ಮನೆಯೇ ಇಲ್ಲದ ನಾವು ಆರ್‌ಟಿಸಿ ಎಲ್ಲಿಂದ ತರುವುದು ಎಂದು ಪ್ರಶ್ನಿಸಿದ್ದಾರೆ. ಕಷ್ಟಗಳು ನಮಗೆ ಹೊಸದಲ್ಲ, ಆದರೆ ಈ ರೀತಿ ದುಡಿದು ಬದುಕಲು ಸಾಧ್ಯವಿಲ್ಲ ಎಂದಾದಮೇಲೆ ಬದುಕಿದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿದರು.

#ಶ್ರಮಜೀವಿಗಳ_ಲಾಕ್ಡೌನ್#ಅಧ್ಯಯನವರದಿ_ಬಿಡುಗಡೆ#ಕರ್ನಾಟಕ_ಜನಶಕ್ತಿ#ಹಕ್ಕಿಪಿಕ್ಕಿ_ಅಲೆಮಾರಿ_ಸಮುದಾಯದವರಿಂದ#ಶ್ರೀರಂಗಪಟ್ಟಣ_ಮಂಡ್ಯ

Posted by Karnataka janashakthi ಕರ್ನಾಟಕ ಜನಶಕ್ತಿ on Wednesday, June 3, 2020

ಶೇ.59.9 ರಷ್ಟು ಅಸಂಘಟಿತ ವಲಯದ ಕಾರ್ಮಿಕರು ತಮ್ಮ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಶೇ.79 ಮಂದು ಲಾಕ್‌ಡೌನ್‌ ಸಂದರ್ಭದಲ್ಲಿ ಮೂಲಭೂತ ಸೌಲಭ್ಯಗಳು ಸಿಗದೆ ಒದ್ದಾಡಿದ್ದಾರೆ. ಶೇ.92 ರಷ್ಟು ಮಂದಿಗೆ ಆರೋಗ್ಯ ತಪಾಸಣೆ ಮಾಡಿಸಲು ಸಾಧ್ಯವಾಗಿಲ್ಲ. ಶೇ.73 ರಷ್ಟು ರೈತರು ತಮ್ಮ ಬೆಳೆಯನ್ನು ನಷ್ಟಕ್ಕೆ ಮಾರಿದ್ದಾರೆ. ಶೇ.95 ಆದಿವಾಸಿಗಳಿಗೆ ಈ ಅವಧಿಯಲ್ಲಿ ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಅಧ್ಯಯನ ವರದಿಯು ಎತ್ತಿತೋರಿಸಿದೆ.

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು ಎಂದು ಅಧ್ಯಯನ ವರದಿಯ ಶಿಫಾರಸ್ಸುಗಳಲ್ಲಿ ತಿಳಿಸಲಾಗಿದೆ.

ಜೀವನಾವಶ್ಯಕ ಕನಿಷ್ಟ ಮೊತ್ತದ ನೇರ ಹಣ ವರ್ಗಾವಣೆಯನ್ನು ದೇಶದ ಎಲ್ಲ, ಶ್ರಮಜೀವಿಗಳಿಗೆ ಬಿಪಿಎಲ್ ಕಾರ್ಡುದಾರರ ಅಕೌಂಟುಗಳಿಗೆ ಮಾಡಬೇಕು ಆಗ ಮಾತ್ರವೇ ಅವರ ಚೇತರಿಸಿಕೊಳ್ಳಲು ಸಾಧ್ಯ ಎಂದು ಅಧ್ಯಯನ ವರದಿ ಒತ್ತಾಯಿಸಿದೆ.

ಸರ್ಕಾರಕ್ಕೆ ಇತರ ಪ್ರಮುಖ ಶಿಫಾರಸ್ಸುಗಳು

  1. ಪಡಿತರ ಹಂಚಿಕೆಯ ವ್ಯವಸ್ಥೆಯ ಮೂಲಕ ಕೇವಲ ಅಕ್ಕಿ/ಗೋಧಿ ಮಾತ್ರವಲ್ಲದೆ ಜೀವನಾವಶ್ಯಕ ಆಹಾರ ಸಾಮಗ್ರಿಗಳನ್ನು ವಿತರಿಸುವ ತುರ್ತು ಕ್ರಮವನ್ನು ಕೈಗೊಳ್ಳಬೇಕು.
  2. ರೇಷನ್ ಕಾರ್ಡ್‌ಗಳಿಲ್ಲದ ಜನರಿಗೂ ಮತ್ತು ವಲಸೆ ಕಾರ್ಮಿಕರಿಗೂ ಆಹಾರ ಧಾನ್ಯಗಳ ಕೊರತೆಯಾಗದಂತೆ ತಾತ್ಕಾಲಿಕ ಪಡಿತರ ಗುರುತಿನ ಚೀಟಿಗಳ ವ್ಯವಸ್ಥೆ ಆಗಬೇಕು.
  3. 2 ತಿಂಗಳು ದುಡಿಮೆಯಿಲ್ಲದೆ ಕಷ್ಟಕ್ಕೆ ಸಿಲುಕಿರುವ ಬೀದಿ ಬದಿ ವ್ಯಾಪಾರಿಗಳು, ಟ್ಯಾಕ್ಸಿ-ಕ್ಯಾಬ್ ಡ್ರೈವರ್‌ಗಳು, ಆಟೋ ಚಾಲಕರು ಮತ್ತು ಸಣ್ಣ ಪುಟ್ಟ ಉದ್ದಿಮೆಗಳ ಉದ್ಯೋಗಸ್ಥರಿಗೆ ಸಹಾಯಧನವನ್ನು ಈ ಕೂಡಲೇ ನೀಡಬೇಕು.
  4. ಬಡವರು ಮತ್ತು ಸಾಮಾನ್ಯ ಜನರ ಆರೋಗ್ಯ ರಕ್ಷಣೆಗೆ ಅಗತ್ಯವಿರುವಷ್ಟು ಆರೋಗ್ಯ ಸಲಕರಣೆಗಳ ಪೂರೈಕೆಗೆ ಈಗಲೇ ಕ್ರಮ ಕೈಗೊಳ್ಳಬೇಕು
  5. ಲಾಕ್‌ಡೌನ್ ಹೊತ್ತಿಗೆ ತಾತ್ಕಾಲಿಕವಾಗಿ ಹೇರಿದ್ದ ಮದ್ಯನಿಷೇಧವನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಮುಂದುವರಿಯಬಹುದಾಗಿದ್ದ ಸರ್ಕಾರ ಅದರ ಬದಲಿಗೆ, ಲಾಕ್‌ಡೌನ್ ನಡುವೆಯೇ, ಕೊರೊನಾ ಅಪಾಯವಿದ್ದಾಗಲೂ ಮದ್ಯ ಮಾರಾಟ ಆರಂಭಿಸಿತು. ಇದನ್ನು ನಿಲ್ಲಿಸಬೇಕು. ಸಂಪೂರ್ಣ ಮದ್ಯನಿಷೇಧದ ಕಡೆಗೆ ವೈಜ್ಞಾನಿಕವಾದಂತಹ ರೀತಿಯಲ್ಲಿ ಮುಂದಡಿಯಿಡಲು ಇರುವ ಅವಕಾಶಗಳ ಬಗ್ಗೆ ಹೋರಾಟಗಾರರು ಮತ್ತು ಪರಿಣತರೊಂದಿಗೆ ಚರ್ಚಿಸಿ, ಮುಂದುವರೆಯಬೇಕು.
  6. ಗ್ರಾಮೀಣ ಆರ್ಥಿಕತೆಯ ಪುನಶ್ಚೇತನಕ್ಕೆ ವಿಶೇಷ ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಬೇಕು: ನರೇಗಾ ಯೋಜನೆಗೆ ಹೆಚ್ಚಿನ ಹಣ ಬಿಡುಗಡೆ ಮಾಡಬೇಕು.
  7. ‘ನಗರ ಉದ್ಯೋಗ ಖಾತರಿ ಯೋಜನೆ’ಯನ್ನು ಜಾರಿಗೆ ತರಬೇಕು.
  8. ವಲಸೆ ಕಾರ್ಮಿಕರ ಸರ್ವೇ ಮತ್ತು ದಾಖಲಾತಿ ನಡೆಯಬೇಕು.
  9. ಸಣ್ಣ-ಮಧ್ಯಮ ಉದ್ದಿಮೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.

ಅಧ್ಯಯನ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿಯ ಸಿದ್ದರಾಜು, ಚಂದ್ರಶೇಖರ್‌, ವರದರಾಜು, ಜ್ಯೋತಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ಲಾಕ್‌ಡೌನ್‌ ಶ್ರಮಜೀವಿಗಳ ಬದುಕನ್ನು ದುಸ್ತರಗೊಳಿಸಿದೆ: ಬಡಜನರ ಸ್ಥಿತಿಗತಿ ಬಿಚ್ಚಿಟ್ಟ ಜನಶಕ್ತಿಯ ಅಧ್ಯಯನ ವರದಿ


Also Read: COVID-19: How Effective is the lockdown in India?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...