Homeಮುಖಪುಟಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ...

ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ಬಿಡುಗಡೆ

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು,

- Advertisement -
- Advertisement -

ಲಾಕ್‌ಡೌನ್‌ನಿಂದ ಉಂಟಾಗಿರುವ ಭಾರೀ ನಷ್ಟವನ್ನು ಭರಿಸಲು, ಆರ್ಥಿಕತೆ ಚೇತರಿಸಿಕೊಳ್ಳಲು ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಬಿಡುಗಡೆ ಮಾಡಿದ ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ತಿಳಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಚನ್ನಹಳ್ಳಿ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಇಂದು ಲಾಕ್ ಡೌನ್ ಸಮಯದಲ್ಲಿ ಕರ್ನಾಟಕದ ಶ್ರಮಜೀವಿಗಳ ಮೇಲೆ ಉಂಟಾದ ಆರ್ಥಿಕ‌, ಸಾಮಾಜಿಕ, ರಾಜಕೀಯ ಪರಿಣಾಮಗಳನ್ನು ಬಿಚ್ಚಿಡುವ ಅಧ್ಯಯನ ವರದಿ ಬಿಡುಗಡೆಯಾಗಿದೆ. ಲಾಕ್‌ಡೌನ್‌ನಿಂದ ಅತಿ ಹೆಚ್ಚು ಸಂಕಷ್ಟಕ್ಕೊಳಗಾದ ಅಲೆಮಾರಿ, ಆದಿವಾಸಿ ಸಮುದಾಯವಿರುವಲ್ಲಿಯೇ ವರದಿ ಬಿಡುಗಡೆ ಮಾಡಿರುವುದು ವಿಶೇಷವಾಗಿದೆ.

ಹಕ್ಕಿ ಪಿಕ್ಕಿ ಸಮುದಾಯದ ಮುಖಂಡರಾದ ರೈಸ್‌ರವರು‌ ಮಾತನಾಡಿ “ನಮ್ಮ ಜೀವನ ಮೊದಲೇ ನಿಕೃಷ್ಟವಾಗಿತ್ತು. ಈಗ ಇರುವ ಲಾಕ್‌ಡೌನ್‌ನಿಂದಾಗಿ ಇನ್ನು ಹದಗೆಟ್ಟಿದೆ. ಸಮರ್ಪಕ ಮನೆಗಳಿಲ್ಲದ ನಮಗೆ ಬಹಳ ತೊಂದರೆಯಾಗಿದೆ. ಮಳೆ ಶುರುವಾಗಿ ನಮ್ಮ ಜನರೆಲ್ಲರೂ ನೆನಯುತ್ತಿರುವಾಗ ತಾಲ್ಲೂಕು ಆಡಳಿತದ ಬಳಿ ಕನಿಷ್ಠ ಟಾರ್ಪಲ್‌ ಕೊಡಿಸಿ ಎಂದು ಸಹಾಯ ಕೇಳಿದರೆ ಆರ್‌ಟಿಸಿ ಕೇಳುತ್ತಾರೆ. ಮನೆಯೇ ಇಲ್ಲದ ನಾವು ಆರ್‌ಟಿಸಿ ಎಲ್ಲಿಂದ ತರುವುದು ಎಂದು ಪ್ರಶ್ನಿಸಿದ್ದಾರೆ. ಕಷ್ಟಗಳು ನಮಗೆ ಹೊಸದಲ್ಲ, ಆದರೆ ಈ ರೀತಿ ದುಡಿದು ಬದುಕಲು ಸಾಧ್ಯವಿಲ್ಲ ಎಂದಾದಮೇಲೆ ಬದುಕಿದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿದರು.

#ಶ್ರಮಜೀವಿಗಳ_ಲಾಕ್ಡೌನ್#ಅಧ್ಯಯನವರದಿ_ಬಿಡುಗಡೆ#ಕರ್ನಾಟಕ_ಜನಶಕ್ತಿ#ಹಕ್ಕಿಪಿಕ್ಕಿ_ಅಲೆಮಾರಿ_ಸಮುದಾಯದವರಿಂದ#ಶ್ರೀರಂಗಪಟ್ಟಣ_ಮಂಡ್ಯ

Posted by Karnataka janashakthi ಕರ್ನಾಟಕ ಜನಶಕ್ತಿ on Wednesday, June 3, 2020

ಶೇ.59.9 ರಷ್ಟು ಅಸಂಘಟಿತ ವಲಯದ ಕಾರ್ಮಿಕರು ತಮ್ಮ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಶೇ.79 ಮಂದು ಲಾಕ್‌ಡೌನ್‌ ಸಂದರ್ಭದಲ್ಲಿ ಮೂಲಭೂತ ಸೌಲಭ್ಯಗಳು ಸಿಗದೆ ಒದ್ದಾಡಿದ್ದಾರೆ. ಶೇ.92 ರಷ್ಟು ಮಂದಿಗೆ ಆರೋಗ್ಯ ತಪಾಸಣೆ ಮಾಡಿಸಲು ಸಾಧ್ಯವಾಗಿಲ್ಲ. ಶೇ.73 ರಷ್ಟು ರೈತರು ತಮ್ಮ ಬೆಳೆಯನ್ನು ನಷ್ಟಕ್ಕೆ ಮಾರಿದ್ದಾರೆ. ಶೇ.95 ಆದಿವಾಸಿಗಳಿಗೆ ಈ ಅವಧಿಯಲ್ಲಿ ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಅಧ್ಯಯನ ವರದಿಯು ಎತ್ತಿತೋರಿಸಿದೆ.

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು ಎಂದು ಅಧ್ಯಯನ ವರದಿಯ ಶಿಫಾರಸ್ಸುಗಳಲ್ಲಿ ತಿಳಿಸಲಾಗಿದೆ.

ಜೀವನಾವಶ್ಯಕ ಕನಿಷ್ಟ ಮೊತ್ತದ ನೇರ ಹಣ ವರ್ಗಾವಣೆಯನ್ನು ದೇಶದ ಎಲ್ಲ, ಶ್ರಮಜೀವಿಗಳಿಗೆ ಬಿಪಿಎಲ್ ಕಾರ್ಡುದಾರರ ಅಕೌಂಟುಗಳಿಗೆ ಮಾಡಬೇಕು ಆಗ ಮಾತ್ರವೇ ಅವರ ಚೇತರಿಸಿಕೊಳ್ಳಲು ಸಾಧ್ಯ ಎಂದು ಅಧ್ಯಯನ ವರದಿ ಒತ್ತಾಯಿಸಿದೆ.

ಸರ್ಕಾರಕ್ಕೆ ಇತರ ಪ್ರಮುಖ ಶಿಫಾರಸ್ಸುಗಳು

  1. ಪಡಿತರ ಹಂಚಿಕೆಯ ವ್ಯವಸ್ಥೆಯ ಮೂಲಕ ಕೇವಲ ಅಕ್ಕಿ/ಗೋಧಿ ಮಾತ್ರವಲ್ಲದೆ ಜೀವನಾವಶ್ಯಕ ಆಹಾರ ಸಾಮಗ್ರಿಗಳನ್ನು ವಿತರಿಸುವ ತುರ್ತು ಕ್ರಮವನ್ನು ಕೈಗೊಳ್ಳಬೇಕು.
  2. ರೇಷನ್ ಕಾರ್ಡ್‌ಗಳಿಲ್ಲದ ಜನರಿಗೂ ಮತ್ತು ವಲಸೆ ಕಾರ್ಮಿಕರಿಗೂ ಆಹಾರ ಧಾನ್ಯಗಳ ಕೊರತೆಯಾಗದಂತೆ ತಾತ್ಕಾಲಿಕ ಪಡಿತರ ಗುರುತಿನ ಚೀಟಿಗಳ ವ್ಯವಸ್ಥೆ ಆಗಬೇಕು.
  3. 2 ತಿಂಗಳು ದುಡಿಮೆಯಿಲ್ಲದೆ ಕಷ್ಟಕ್ಕೆ ಸಿಲುಕಿರುವ ಬೀದಿ ಬದಿ ವ್ಯಾಪಾರಿಗಳು, ಟ್ಯಾಕ್ಸಿ-ಕ್ಯಾಬ್ ಡ್ರೈವರ್‌ಗಳು, ಆಟೋ ಚಾಲಕರು ಮತ್ತು ಸಣ್ಣ ಪುಟ್ಟ ಉದ್ದಿಮೆಗಳ ಉದ್ಯೋಗಸ್ಥರಿಗೆ ಸಹಾಯಧನವನ್ನು ಈ ಕೂಡಲೇ ನೀಡಬೇಕು.
  4. ಬಡವರು ಮತ್ತು ಸಾಮಾನ್ಯ ಜನರ ಆರೋಗ್ಯ ರಕ್ಷಣೆಗೆ ಅಗತ್ಯವಿರುವಷ್ಟು ಆರೋಗ್ಯ ಸಲಕರಣೆಗಳ ಪೂರೈಕೆಗೆ ಈಗಲೇ ಕ್ರಮ ಕೈಗೊಳ್ಳಬೇಕು
  5. ಲಾಕ್‌ಡೌನ್ ಹೊತ್ತಿಗೆ ತಾತ್ಕಾಲಿಕವಾಗಿ ಹೇರಿದ್ದ ಮದ್ಯನಿಷೇಧವನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಮುಂದುವರಿಯಬಹುದಾಗಿದ್ದ ಸರ್ಕಾರ ಅದರ ಬದಲಿಗೆ, ಲಾಕ್‌ಡೌನ್ ನಡುವೆಯೇ, ಕೊರೊನಾ ಅಪಾಯವಿದ್ದಾಗಲೂ ಮದ್ಯ ಮಾರಾಟ ಆರಂಭಿಸಿತು. ಇದನ್ನು ನಿಲ್ಲಿಸಬೇಕು. ಸಂಪೂರ್ಣ ಮದ್ಯನಿಷೇಧದ ಕಡೆಗೆ ವೈಜ್ಞಾನಿಕವಾದಂತಹ ರೀತಿಯಲ್ಲಿ ಮುಂದಡಿಯಿಡಲು ಇರುವ ಅವಕಾಶಗಳ ಬಗ್ಗೆ ಹೋರಾಟಗಾರರು ಮತ್ತು ಪರಿಣತರೊಂದಿಗೆ ಚರ್ಚಿಸಿ, ಮುಂದುವರೆಯಬೇಕು.
  6. ಗ್ರಾಮೀಣ ಆರ್ಥಿಕತೆಯ ಪುನಶ್ಚೇತನಕ್ಕೆ ವಿಶೇಷ ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಬೇಕು: ನರೇಗಾ ಯೋಜನೆಗೆ ಹೆಚ್ಚಿನ ಹಣ ಬಿಡುಗಡೆ ಮಾಡಬೇಕು.
  7. ‘ನಗರ ಉದ್ಯೋಗ ಖಾತರಿ ಯೋಜನೆ’ಯನ್ನು ಜಾರಿಗೆ ತರಬೇಕು.
  8. ವಲಸೆ ಕಾರ್ಮಿಕರ ಸರ್ವೇ ಮತ್ತು ದಾಖಲಾತಿ ನಡೆಯಬೇಕು.
  9. ಸಣ್ಣ-ಮಧ್ಯಮ ಉದ್ದಿಮೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.

ಅಧ್ಯಯನ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿಯ ಸಿದ್ದರಾಜು, ಚಂದ್ರಶೇಖರ್‌, ವರದರಾಜು, ಜ್ಯೋತಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ಲಾಕ್‌ಡೌನ್‌ ಶ್ರಮಜೀವಿಗಳ ಬದುಕನ್ನು ದುಸ್ತರಗೊಳಿಸಿದೆ: ಬಡಜನರ ಸ್ಥಿತಿಗತಿ ಬಿಚ್ಚಿಟ್ಟ ಜನಶಕ್ತಿಯ ಅಧ್ಯಯನ ವರದಿ


Also Read: COVID-19: How Effective is the lockdown in India?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...