Homeಮುಖಪುಟಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ...

ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ಬಿಡುಗಡೆ

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು,

- Advertisement -
- Advertisement -

ಲಾಕ್‌ಡೌನ್‌ನಿಂದ ಉಂಟಾಗಿರುವ ಭಾರೀ ನಷ್ಟವನ್ನು ಭರಿಸಲು, ಆರ್ಥಿಕತೆ ಚೇತರಿಸಿಕೊಳ್ಳಲು ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಬಿಡುಗಡೆ ಮಾಡಿದ ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ತಿಳಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಚನ್ನಹಳ್ಳಿ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಇಂದು ಲಾಕ್ ಡೌನ್ ಸಮಯದಲ್ಲಿ ಕರ್ನಾಟಕದ ಶ್ರಮಜೀವಿಗಳ ಮೇಲೆ ಉಂಟಾದ ಆರ್ಥಿಕ‌, ಸಾಮಾಜಿಕ, ರಾಜಕೀಯ ಪರಿಣಾಮಗಳನ್ನು ಬಿಚ್ಚಿಡುವ ಅಧ್ಯಯನ ವರದಿ ಬಿಡುಗಡೆಯಾಗಿದೆ. ಲಾಕ್‌ಡೌನ್‌ನಿಂದ ಅತಿ ಹೆಚ್ಚು ಸಂಕಷ್ಟಕ್ಕೊಳಗಾದ ಅಲೆಮಾರಿ, ಆದಿವಾಸಿ ಸಮುದಾಯವಿರುವಲ್ಲಿಯೇ ವರದಿ ಬಿಡುಗಡೆ ಮಾಡಿರುವುದು ವಿಶೇಷವಾಗಿದೆ.

ಹಕ್ಕಿ ಪಿಕ್ಕಿ ಸಮುದಾಯದ ಮುಖಂಡರಾದ ರೈಸ್‌ರವರು‌ ಮಾತನಾಡಿ “ನಮ್ಮ ಜೀವನ ಮೊದಲೇ ನಿಕೃಷ್ಟವಾಗಿತ್ತು. ಈಗ ಇರುವ ಲಾಕ್‌ಡೌನ್‌ನಿಂದಾಗಿ ಇನ್ನು ಹದಗೆಟ್ಟಿದೆ. ಸಮರ್ಪಕ ಮನೆಗಳಿಲ್ಲದ ನಮಗೆ ಬಹಳ ತೊಂದರೆಯಾಗಿದೆ. ಮಳೆ ಶುರುವಾಗಿ ನಮ್ಮ ಜನರೆಲ್ಲರೂ ನೆನಯುತ್ತಿರುವಾಗ ತಾಲ್ಲೂಕು ಆಡಳಿತದ ಬಳಿ ಕನಿಷ್ಠ ಟಾರ್ಪಲ್‌ ಕೊಡಿಸಿ ಎಂದು ಸಹಾಯ ಕೇಳಿದರೆ ಆರ್‌ಟಿಸಿ ಕೇಳುತ್ತಾರೆ. ಮನೆಯೇ ಇಲ್ಲದ ನಾವು ಆರ್‌ಟಿಸಿ ಎಲ್ಲಿಂದ ತರುವುದು ಎಂದು ಪ್ರಶ್ನಿಸಿದ್ದಾರೆ. ಕಷ್ಟಗಳು ನಮಗೆ ಹೊಸದಲ್ಲ, ಆದರೆ ಈ ರೀತಿ ದುಡಿದು ಬದುಕಲು ಸಾಧ್ಯವಿಲ್ಲ ಎಂದಾದಮೇಲೆ ಬದುಕಿದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿದರು.

#ಶ್ರಮಜೀವಿಗಳ_ಲಾಕ್ಡೌನ್#ಅಧ್ಯಯನವರದಿ_ಬಿಡುಗಡೆ#ಕರ್ನಾಟಕ_ಜನಶಕ್ತಿ#ಹಕ್ಕಿಪಿಕ್ಕಿ_ಅಲೆಮಾರಿ_ಸಮುದಾಯದವರಿಂದ#ಶ್ರೀರಂಗಪಟ್ಟಣ_ಮಂಡ್ಯ

Posted by Karnataka janashakthi ಕರ್ನಾಟಕ ಜನಶಕ್ತಿ on Wednesday, June 3, 2020

ಶೇ.59.9 ರಷ್ಟು ಅಸಂಘಟಿತ ವಲಯದ ಕಾರ್ಮಿಕರು ತಮ್ಮ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಶೇ.79 ಮಂದು ಲಾಕ್‌ಡೌನ್‌ ಸಂದರ್ಭದಲ್ಲಿ ಮೂಲಭೂತ ಸೌಲಭ್ಯಗಳು ಸಿಗದೆ ಒದ್ದಾಡಿದ್ದಾರೆ. ಶೇ.92 ರಷ್ಟು ಮಂದಿಗೆ ಆರೋಗ್ಯ ತಪಾಸಣೆ ಮಾಡಿಸಲು ಸಾಧ್ಯವಾಗಿಲ್ಲ. ಶೇ.73 ರಷ್ಟು ರೈತರು ತಮ್ಮ ಬೆಳೆಯನ್ನು ನಷ್ಟಕ್ಕೆ ಮಾರಿದ್ದಾರೆ. ಶೇ.95 ಆದಿವಾಸಿಗಳಿಗೆ ಈ ಅವಧಿಯಲ್ಲಿ ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಅಧ್ಯಯನ ವರದಿಯು ಎತ್ತಿತೋರಿಸಿದೆ.

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು ಎಂದು ಅಧ್ಯಯನ ವರದಿಯ ಶಿಫಾರಸ್ಸುಗಳಲ್ಲಿ ತಿಳಿಸಲಾಗಿದೆ.

ಜೀವನಾವಶ್ಯಕ ಕನಿಷ್ಟ ಮೊತ್ತದ ನೇರ ಹಣ ವರ್ಗಾವಣೆಯನ್ನು ದೇಶದ ಎಲ್ಲ, ಶ್ರಮಜೀವಿಗಳಿಗೆ ಬಿಪಿಎಲ್ ಕಾರ್ಡುದಾರರ ಅಕೌಂಟುಗಳಿಗೆ ಮಾಡಬೇಕು ಆಗ ಮಾತ್ರವೇ ಅವರ ಚೇತರಿಸಿಕೊಳ್ಳಲು ಸಾಧ್ಯ ಎಂದು ಅಧ್ಯಯನ ವರದಿ ಒತ್ತಾಯಿಸಿದೆ.

ಸರ್ಕಾರಕ್ಕೆ ಇತರ ಪ್ರಮುಖ ಶಿಫಾರಸ್ಸುಗಳು

  1. ಪಡಿತರ ಹಂಚಿಕೆಯ ವ್ಯವಸ್ಥೆಯ ಮೂಲಕ ಕೇವಲ ಅಕ್ಕಿ/ಗೋಧಿ ಮಾತ್ರವಲ್ಲದೆ ಜೀವನಾವಶ್ಯಕ ಆಹಾರ ಸಾಮಗ್ರಿಗಳನ್ನು ವಿತರಿಸುವ ತುರ್ತು ಕ್ರಮವನ್ನು ಕೈಗೊಳ್ಳಬೇಕು.
  2. ರೇಷನ್ ಕಾರ್ಡ್‌ಗಳಿಲ್ಲದ ಜನರಿಗೂ ಮತ್ತು ವಲಸೆ ಕಾರ್ಮಿಕರಿಗೂ ಆಹಾರ ಧಾನ್ಯಗಳ ಕೊರತೆಯಾಗದಂತೆ ತಾತ್ಕಾಲಿಕ ಪಡಿತರ ಗುರುತಿನ ಚೀಟಿಗಳ ವ್ಯವಸ್ಥೆ ಆಗಬೇಕು.
  3. 2 ತಿಂಗಳು ದುಡಿಮೆಯಿಲ್ಲದೆ ಕಷ್ಟಕ್ಕೆ ಸಿಲುಕಿರುವ ಬೀದಿ ಬದಿ ವ್ಯಾಪಾರಿಗಳು, ಟ್ಯಾಕ್ಸಿ-ಕ್ಯಾಬ್ ಡ್ರೈವರ್‌ಗಳು, ಆಟೋ ಚಾಲಕರು ಮತ್ತು ಸಣ್ಣ ಪುಟ್ಟ ಉದ್ದಿಮೆಗಳ ಉದ್ಯೋಗಸ್ಥರಿಗೆ ಸಹಾಯಧನವನ್ನು ಈ ಕೂಡಲೇ ನೀಡಬೇಕು.
  4. ಬಡವರು ಮತ್ತು ಸಾಮಾನ್ಯ ಜನರ ಆರೋಗ್ಯ ರಕ್ಷಣೆಗೆ ಅಗತ್ಯವಿರುವಷ್ಟು ಆರೋಗ್ಯ ಸಲಕರಣೆಗಳ ಪೂರೈಕೆಗೆ ಈಗಲೇ ಕ್ರಮ ಕೈಗೊಳ್ಳಬೇಕು
  5. ಲಾಕ್‌ಡೌನ್ ಹೊತ್ತಿಗೆ ತಾತ್ಕಾಲಿಕವಾಗಿ ಹೇರಿದ್ದ ಮದ್ಯನಿಷೇಧವನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಮುಂದುವರಿಯಬಹುದಾಗಿದ್ದ ಸರ್ಕಾರ ಅದರ ಬದಲಿಗೆ, ಲಾಕ್‌ಡೌನ್ ನಡುವೆಯೇ, ಕೊರೊನಾ ಅಪಾಯವಿದ್ದಾಗಲೂ ಮದ್ಯ ಮಾರಾಟ ಆರಂಭಿಸಿತು. ಇದನ್ನು ನಿಲ್ಲಿಸಬೇಕು. ಸಂಪೂರ್ಣ ಮದ್ಯನಿಷೇಧದ ಕಡೆಗೆ ವೈಜ್ಞಾನಿಕವಾದಂತಹ ರೀತಿಯಲ್ಲಿ ಮುಂದಡಿಯಿಡಲು ಇರುವ ಅವಕಾಶಗಳ ಬಗ್ಗೆ ಹೋರಾಟಗಾರರು ಮತ್ತು ಪರಿಣತರೊಂದಿಗೆ ಚರ್ಚಿಸಿ, ಮುಂದುವರೆಯಬೇಕು.
  6. ಗ್ರಾಮೀಣ ಆರ್ಥಿಕತೆಯ ಪುನಶ್ಚೇತನಕ್ಕೆ ವಿಶೇಷ ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಬೇಕು: ನರೇಗಾ ಯೋಜನೆಗೆ ಹೆಚ್ಚಿನ ಹಣ ಬಿಡುಗಡೆ ಮಾಡಬೇಕು.
  7. ‘ನಗರ ಉದ್ಯೋಗ ಖಾತರಿ ಯೋಜನೆ’ಯನ್ನು ಜಾರಿಗೆ ತರಬೇಕು.
  8. ವಲಸೆ ಕಾರ್ಮಿಕರ ಸರ್ವೇ ಮತ್ತು ದಾಖಲಾತಿ ನಡೆಯಬೇಕು.
  9. ಸಣ್ಣ-ಮಧ್ಯಮ ಉದ್ದಿಮೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.

ಅಧ್ಯಯನ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿಯ ಸಿದ್ದರಾಜು, ಚಂದ್ರಶೇಖರ್‌, ವರದರಾಜು, ಜ್ಯೋತಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ಲಾಕ್‌ಡೌನ್‌ ಶ್ರಮಜೀವಿಗಳ ಬದುಕನ್ನು ದುಸ್ತರಗೊಳಿಸಿದೆ: ಬಡಜನರ ಸ್ಥಿತಿಗತಿ ಬಿಚ್ಚಿಟ್ಟ ಜನಶಕ್ತಿಯ ಅಧ್ಯಯನ ವರದಿ


Also Read: COVID-19: How Effective is the lockdown in India?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...