Homeಮುಖಪುಟಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ...

ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ಬಿಡುಗಡೆ

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು,

- Advertisement -
- Advertisement -

ಲಾಕ್‌ಡೌನ್‌ನಿಂದ ಉಂಟಾಗಿರುವ ಭಾರೀ ನಷ್ಟವನ್ನು ಭರಿಸಲು, ಆರ್ಥಿಕತೆ ಚೇತರಿಸಿಕೊಳ್ಳಲು ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಬಿಡುಗಡೆ ಮಾಡಿದ ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ತಿಳಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಚನ್ನಹಳ್ಳಿ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಇಂದು ಲಾಕ್ ಡೌನ್ ಸಮಯದಲ್ಲಿ ಕರ್ನಾಟಕದ ಶ್ರಮಜೀವಿಗಳ ಮೇಲೆ ಉಂಟಾದ ಆರ್ಥಿಕ‌, ಸಾಮಾಜಿಕ, ರಾಜಕೀಯ ಪರಿಣಾಮಗಳನ್ನು ಬಿಚ್ಚಿಡುವ ಅಧ್ಯಯನ ವರದಿ ಬಿಡುಗಡೆಯಾಗಿದೆ. ಲಾಕ್‌ಡೌನ್‌ನಿಂದ ಅತಿ ಹೆಚ್ಚು ಸಂಕಷ್ಟಕ್ಕೊಳಗಾದ ಅಲೆಮಾರಿ, ಆದಿವಾಸಿ ಸಮುದಾಯವಿರುವಲ್ಲಿಯೇ ವರದಿ ಬಿಡುಗಡೆ ಮಾಡಿರುವುದು ವಿಶೇಷವಾಗಿದೆ.

ಹಕ್ಕಿ ಪಿಕ್ಕಿ ಸಮುದಾಯದ ಮುಖಂಡರಾದ ರೈಸ್‌ರವರು‌ ಮಾತನಾಡಿ “ನಮ್ಮ ಜೀವನ ಮೊದಲೇ ನಿಕೃಷ್ಟವಾಗಿತ್ತು. ಈಗ ಇರುವ ಲಾಕ್‌ಡೌನ್‌ನಿಂದಾಗಿ ಇನ್ನು ಹದಗೆಟ್ಟಿದೆ. ಸಮರ್ಪಕ ಮನೆಗಳಿಲ್ಲದ ನಮಗೆ ಬಹಳ ತೊಂದರೆಯಾಗಿದೆ. ಮಳೆ ಶುರುವಾಗಿ ನಮ್ಮ ಜನರೆಲ್ಲರೂ ನೆನಯುತ್ತಿರುವಾಗ ತಾಲ್ಲೂಕು ಆಡಳಿತದ ಬಳಿ ಕನಿಷ್ಠ ಟಾರ್ಪಲ್‌ ಕೊಡಿಸಿ ಎಂದು ಸಹಾಯ ಕೇಳಿದರೆ ಆರ್‌ಟಿಸಿ ಕೇಳುತ್ತಾರೆ. ಮನೆಯೇ ಇಲ್ಲದ ನಾವು ಆರ್‌ಟಿಸಿ ಎಲ್ಲಿಂದ ತರುವುದು ಎಂದು ಪ್ರಶ್ನಿಸಿದ್ದಾರೆ. ಕಷ್ಟಗಳು ನಮಗೆ ಹೊಸದಲ್ಲ, ಆದರೆ ಈ ರೀತಿ ದುಡಿದು ಬದುಕಲು ಸಾಧ್ಯವಿಲ್ಲ ಎಂದಾದಮೇಲೆ ಬದುಕಿದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿದರು.

#ಶ್ರಮಜೀವಿಗಳ_ಲಾಕ್ಡೌನ್#ಅಧ್ಯಯನವರದಿ_ಬಿಡುಗಡೆ#ಕರ್ನಾಟಕ_ಜನಶಕ್ತಿ#ಹಕ್ಕಿಪಿಕ್ಕಿ_ಅಲೆಮಾರಿ_ಸಮುದಾಯದವರಿಂದ#ಶ್ರೀರಂಗಪಟ್ಟಣ_ಮಂಡ್ಯ

Posted by Karnataka janashakthi ಕರ್ನಾಟಕ ಜನಶಕ್ತಿ on Wednesday, June 3, 2020

ಶೇ.59.9 ರಷ್ಟು ಅಸಂಘಟಿತ ವಲಯದ ಕಾರ್ಮಿಕರು ತಮ್ಮ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಶೇ.79 ಮಂದು ಲಾಕ್‌ಡೌನ್‌ ಸಂದರ್ಭದಲ್ಲಿ ಮೂಲಭೂತ ಸೌಲಭ್ಯಗಳು ಸಿಗದೆ ಒದ್ದಾಡಿದ್ದಾರೆ. ಶೇ.92 ರಷ್ಟು ಮಂದಿಗೆ ಆರೋಗ್ಯ ತಪಾಸಣೆ ಮಾಡಿಸಲು ಸಾಧ್ಯವಾಗಿಲ್ಲ. ಶೇ.73 ರಷ್ಟು ರೈತರು ತಮ್ಮ ಬೆಳೆಯನ್ನು ನಷ್ಟಕ್ಕೆ ಮಾರಿದ್ದಾರೆ. ಶೇ.95 ಆದಿವಾಸಿಗಳಿಗೆ ಈ ಅವಧಿಯಲ್ಲಿ ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಅಧ್ಯಯನ ವರದಿಯು ಎತ್ತಿತೋರಿಸಿದೆ.

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು ಎಂದು ಅಧ್ಯಯನ ವರದಿಯ ಶಿಫಾರಸ್ಸುಗಳಲ್ಲಿ ತಿಳಿಸಲಾಗಿದೆ.

ಜೀವನಾವಶ್ಯಕ ಕನಿಷ್ಟ ಮೊತ್ತದ ನೇರ ಹಣ ವರ್ಗಾವಣೆಯನ್ನು ದೇಶದ ಎಲ್ಲ, ಶ್ರಮಜೀವಿಗಳಿಗೆ ಬಿಪಿಎಲ್ ಕಾರ್ಡುದಾರರ ಅಕೌಂಟುಗಳಿಗೆ ಮಾಡಬೇಕು ಆಗ ಮಾತ್ರವೇ ಅವರ ಚೇತರಿಸಿಕೊಳ್ಳಲು ಸಾಧ್ಯ ಎಂದು ಅಧ್ಯಯನ ವರದಿ ಒತ್ತಾಯಿಸಿದೆ.

ಸರ್ಕಾರಕ್ಕೆ ಇತರ ಪ್ರಮುಖ ಶಿಫಾರಸ್ಸುಗಳು

  1. ಪಡಿತರ ಹಂಚಿಕೆಯ ವ್ಯವಸ್ಥೆಯ ಮೂಲಕ ಕೇವಲ ಅಕ್ಕಿ/ಗೋಧಿ ಮಾತ್ರವಲ್ಲದೆ ಜೀವನಾವಶ್ಯಕ ಆಹಾರ ಸಾಮಗ್ರಿಗಳನ್ನು ವಿತರಿಸುವ ತುರ್ತು ಕ್ರಮವನ್ನು ಕೈಗೊಳ್ಳಬೇಕು.
  2. ರೇಷನ್ ಕಾರ್ಡ್‌ಗಳಿಲ್ಲದ ಜನರಿಗೂ ಮತ್ತು ವಲಸೆ ಕಾರ್ಮಿಕರಿಗೂ ಆಹಾರ ಧಾನ್ಯಗಳ ಕೊರತೆಯಾಗದಂತೆ ತಾತ್ಕಾಲಿಕ ಪಡಿತರ ಗುರುತಿನ ಚೀಟಿಗಳ ವ್ಯವಸ್ಥೆ ಆಗಬೇಕು.
  3. 2 ತಿಂಗಳು ದುಡಿಮೆಯಿಲ್ಲದೆ ಕಷ್ಟಕ್ಕೆ ಸಿಲುಕಿರುವ ಬೀದಿ ಬದಿ ವ್ಯಾಪಾರಿಗಳು, ಟ್ಯಾಕ್ಸಿ-ಕ್ಯಾಬ್ ಡ್ರೈವರ್‌ಗಳು, ಆಟೋ ಚಾಲಕರು ಮತ್ತು ಸಣ್ಣ ಪುಟ್ಟ ಉದ್ದಿಮೆಗಳ ಉದ್ಯೋಗಸ್ಥರಿಗೆ ಸಹಾಯಧನವನ್ನು ಈ ಕೂಡಲೇ ನೀಡಬೇಕು.
  4. ಬಡವರು ಮತ್ತು ಸಾಮಾನ್ಯ ಜನರ ಆರೋಗ್ಯ ರಕ್ಷಣೆಗೆ ಅಗತ್ಯವಿರುವಷ್ಟು ಆರೋಗ್ಯ ಸಲಕರಣೆಗಳ ಪೂರೈಕೆಗೆ ಈಗಲೇ ಕ್ರಮ ಕೈಗೊಳ್ಳಬೇಕು
  5. ಲಾಕ್‌ಡೌನ್ ಹೊತ್ತಿಗೆ ತಾತ್ಕಾಲಿಕವಾಗಿ ಹೇರಿದ್ದ ಮದ್ಯನಿಷೇಧವನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಮುಂದುವರಿಯಬಹುದಾಗಿದ್ದ ಸರ್ಕಾರ ಅದರ ಬದಲಿಗೆ, ಲಾಕ್‌ಡೌನ್ ನಡುವೆಯೇ, ಕೊರೊನಾ ಅಪಾಯವಿದ್ದಾಗಲೂ ಮದ್ಯ ಮಾರಾಟ ಆರಂಭಿಸಿತು. ಇದನ್ನು ನಿಲ್ಲಿಸಬೇಕು. ಸಂಪೂರ್ಣ ಮದ್ಯನಿಷೇಧದ ಕಡೆಗೆ ವೈಜ್ಞಾನಿಕವಾದಂತಹ ರೀತಿಯಲ್ಲಿ ಮುಂದಡಿಯಿಡಲು ಇರುವ ಅವಕಾಶಗಳ ಬಗ್ಗೆ ಹೋರಾಟಗಾರರು ಮತ್ತು ಪರಿಣತರೊಂದಿಗೆ ಚರ್ಚಿಸಿ, ಮುಂದುವರೆಯಬೇಕು.
  6. ಗ್ರಾಮೀಣ ಆರ್ಥಿಕತೆಯ ಪುನಶ್ಚೇತನಕ್ಕೆ ವಿಶೇಷ ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಬೇಕು: ನರೇಗಾ ಯೋಜನೆಗೆ ಹೆಚ್ಚಿನ ಹಣ ಬಿಡುಗಡೆ ಮಾಡಬೇಕು.
  7. ‘ನಗರ ಉದ್ಯೋಗ ಖಾತರಿ ಯೋಜನೆ’ಯನ್ನು ಜಾರಿಗೆ ತರಬೇಕು.
  8. ವಲಸೆ ಕಾರ್ಮಿಕರ ಸರ್ವೇ ಮತ್ತು ದಾಖಲಾತಿ ನಡೆಯಬೇಕು.
  9. ಸಣ್ಣ-ಮಧ್ಯಮ ಉದ್ದಿಮೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.

ಅಧ್ಯಯನ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿಯ ಸಿದ್ದರಾಜು, ಚಂದ್ರಶೇಖರ್‌, ವರದರಾಜು, ಜ್ಯೋತಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ಲಾಕ್‌ಡೌನ್‌ ಶ್ರಮಜೀವಿಗಳ ಬದುಕನ್ನು ದುಸ್ತರಗೊಳಿಸಿದೆ: ಬಡಜನರ ಸ್ಥಿತಿಗತಿ ಬಿಚ್ಚಿಟ್ಟ ಜನಶಕ್ತಿಯ ಅಧ್ಯಯನ ವರದಿ


Also Read: COVID-19: How Effective is the lockdown in India?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...