Homeಮುಖಪುಟಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ...

ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ : ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ಬಿಡುಗಡೆ

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು,

- Advertisement -
- Advertisement -

ಲಾಕ್‌ಡೌನ್‌ನಿಂದ ಉಂಟಾಗಿರುವ ಭಾರೀ ನಷ್ಟವನ್ನು ಭರಿಸಲು, ಆರ್ಥಿಕತೆ ಚೇತರಿಸಿಕೊಳ್ಳಲು ಬಡವರಿಗೆ ನೇರ ನಗದು ವರ್ಗಾವಣೆಯಲ್ಲದೇ ಬೇರೆ ದಾರಿ ಇಲ್ಲ ಎಂದು ಕರ್ನಾಟಕ ಜನಶಕ್ತಿ ಸಂಘಟನೆ ಬಿಡುಗಡೆ ಮಾಡಿದ ’ಶ್ರಮಜೀವಿಗಳಿಗೆ ಲಾಕ್ ಡೌನ್’ ಅಧ್ಯಯನ ವರದಿ ತಿಳಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಚನ್ನಹಳ್ಳಿ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಇಂದು ಲಾಕ್ ಡೌನ್ ಸಮಯದಲ್ಲಿ ಕರ್ನಾಟಕದ ಶ್ರಮಜೀವಿಗಳ ಮೇಲೆ ಉಂಟಾದ ಆರ್ಥಿಕ‌, ಸಾಮಾಜಿಕ, ರಾಜಕೀಯ ಪರಿಣಾಮಗಳನ್ನು ಬಿಚ್ಚಿಡುವ ಅಧ್ಯಯನ ವರದಿ ಬಿಡುಗಡೆಯಾಗಿದೆ. ಲಾಕ್‌ಡೌನ್‌ನಿಂದ ಅತಿ ಹೆಚ್ಚು ಸಂಕಷ್ಟಕ್ಕೊಳಗಾದ ಅಲೆಮಾರಿ, ಆದಿವಾಸಿ ಸಮುದಾಯವಿರುವಲ್ಲಿಯೇ ವರದಿ ಬಿಡುಗಡೆ ಮಾಡಿರುವುದು ವಿಶೇಷವಾಗಿದೆ.

ಹಕ್ಕಿ ಪಿಕ್ಕಿ ಸಮುದಾಯದ ಮುಖಂಡರಾದ ರೈಸ್‌ರವರು‌ ಮಾತನಾಡಿ “ನಮ್ಮ ಜೀವನ ಮೊದಲೇ ನಿಕೃಷ್ಟವಾಗಿತ್ತು. ಈಗ ಇರುವ ಲಾಕ್‌ಡೌನ್‌ನಿಂದಾಗಿ ಇನ್ನು ಹದಗೆಟ್ಟಿದೆ. ಸಮರ್ಪಕ ಮನೆಗಳಿಲ್ಲದ ನಮಗೆ ಬಹಳ ತೊಂದರೆಯಾಗಿದೆ. ಮಳೆ ಶುರುವಾಗಿ ನಮ್ಮ ಜನರೆಲ್ಲರೂ ನೆನಯುತ್ತಿರುವಾಗ ತಾಲ್ಲೂಕು ಆಡಳಿತದ ಬಳಿ ಕನಿಷ್ಠ ಟಾರ್ಪಲ್‌ ಕೊಡಿಸಿ ಎಂದು ಸಹಾಯ ಕೇಳಿದರೆ ಆರ್‌ಟಿಸಿ ಕೇಳುತ್ತಾರೆ. ಮನೆಯೇ ಇಲ್ಲದ ನಾವು ಆರ್‌ಟಿಸಿ ಎಲ್ಲಿಂದ ತರುವುದು ಎಂದು ಪ್ರಶ್ನಿಸಿದ್ದಾರೆ. ಕಷ್ಟಗಳು ನಮಗೆ ಹೊಸದಲ್ಲ, ಆದರೆ ಈ ರೀತಿ ದುಡಿದು ಬದುಕಲು ಸಾಧ್ಯವಿಲ್ಲ ಎಂದಾದಮೇಲೆ ಬದುಕಿದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿದರು.

#ಶ್ರಮಜೀವಿಗಳ_ಲಾಕ್ಡೌನ್#ಅಧ್ಯಯನವರದಿ_ಬಿಡುಗಡೆ#ಕರ್ನಾಟಕ_ಜನಶಕ್ತಿ#ಹಕ್ಕಿಪಿಕ್ಕಿ_ಅಲೆಮಾರಿ_ಸಮುದಾಯದವರಿಂದ#ಶ್ರೀರಂಗಪಟ್ಟಣ_ಮಂಡ್ಯ

Posted by Karnataka janashakthi ಕರ್ನಾಟಕ ಜನಶಕ್ತಿ on Wednesday, June 3, 2020

ಶೇ.59.9 ರಷ್ಟು ಅಸಂಘಟಿತ ವಲಯದ ಕಾರ್ಮಿಕರು ತಮ್ಮ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಶೇ.79 ಮಂದು ಲಾಕ್‌ಡೌನ್‌ ಸಂದರ್ಭದಲ್ಲಿ ಮೂಲಭೂತ ಸೌಲಭ್ಯಗಳು ಸಿಗದೆ ಒದ್ದಾಡಿದ್ದಾರೆ. ಶೇ.92 ರಷ್ಟು ಮಂದಿಗೆ ಆರೋಗ್ಯ ತಪಾಸಣೆ ಮಾಡಿಸಲು ಸಾಧ್ಯವಾಗಿಲ್ಲ. ಶೇ.73 ರಷ್ಟು ರೈತರು ತಮ್ಮ ಬೆಳೆಯನ್ನು ನಷ್ಟಕ್ಕೆ ಮಾರಿದ್ದಾರೆ. ಶೇ.95 ಆದಿವಾಸಿಗಳಿಗೆ ಈ ಅವಧಿಯಲ್ಲಿ ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಅಧ್ಯಯನ ವರದಿಯು ಎತ್ತಿತೋರಿಸಿದೆ.

‘ಮಾತಿಂದ ಮಾವಿನ ಕಾಯಿ ಉದುರುವುದಿಲ್ಲ’. ಶ್ರಮಜೀವಿಗಳನ್ನು ಈ ಸಂಕಟದಿಂದ ಕಾಪಾಡಲು ಸರ್ಕಾರದ ಕಡೆಯಿಂದ ಬದ್ಧತೆಯಿಂದ ಕೂಡಿದ ದಿಟ್ಟ ಕ್ರಮ ಆಗತ್ಯ. ಹಾಗಾಗಿ ಅತಿ ಶ್ರೀಮಂತರಿಗೆ ಅವರ ಸಂಪತ್ತಿನ ಮೇಲೆ ಶೇ.2ರಷ್ಟು ತುರ್ತು ‘ಕೊರೋನಾ ತೆರಿಗೆ’ಯನ್ನು ವಿಧಿಸಬೇಕು ಎಂದು ಅಧ್ಯಯನ ವರದಿಯ ಶಿಫಾರಸ್ಸುಗಳಲ್ಲಿ ತಿಳಿಸಲಾಗಿದೆ.

ಜೀವನಾವಶ್ಯಕ ಕನಿಷ್ಟ ಮೊತ್ತದ ನೇರ ಹಣ ವರ್ಗಾವಣೆಯನ್ನು ದೇಶದ ಎಲ್ಲ, ಶ್ರಮಜೀವಿಗಳಿಗೆ ಬಿಪಿಎಲ್ ಕಾರ್ಡುದಾರರ ಅಕೌಂಟುಗಳಿಗೆ ಮಾಡಬೇಕು ಆಗ ಮಾತ್ರವೇ ಅವರ ಚೇತರಿಸಿಕೊಳ್ಳಲು ಸಾಧ್ಯ ಎಂದು ಅಧ್ಯಯನ ವರದಿ ಒತ್ತಾಯಿಸಿದೆ.

ಸರ್ಕಾರಕ್ಕೆ ಇತರ ಪ್ರಮುಖ ಶಿಫಾರಸ್ಸುಗಳು

  1. ಪಡಿತರ ಹಂಚಿಕೆಯ ವ್ಯವಸ್ಥೆಯ ಮೂಲಕ ಕೇವಲ ಅಕ್ಕಿ/ಗೋಧಿ ಮಾತ್ರವಲ್ಲದೆ ಜೀವನಾವಶ್ಯಕ ಆಹಾರ ಸಾಮಗ್ರಿಗಳನ್ನು ವಿತರಿಸುವ ತುರ್ತು ಕ್ರಮವನ್ನು ಕೈಗೊಳ್ಳಬೇಕು.
  2. ರೇಷನ್ ಕಾರ್ಡ್‌ಗಳಿಲ್ಲದ ಜನರಿಗೂ ಮತ್ತು ವಲಸೆ ಕಾರ್ಮಿಕರಿಗೂ ಆಹಾರ ಧಾನ್ಯಗಳ ಕೊರತೆಯಾಗದಂತೆ ತಾತ್ಕಾಲಿಕ ಪಡಿತರ ಗುರುತಿನ ಚೀಟಿಗಳ ವ್ಯವಸ್ಥೆ ಆಗಬೇಕು.
  3. 2 ತಿಂಗಳು ದುಡಿಮೆಯಿಲ್ಲದೆ ಕಷ್ಟಕ್ಕೆ ಸಿಲುಕಿರುವ ಬೀದಿ ಬದಿ ವ್ಯಾಪಾರಿಗಳು, ಟ್ಯಾಕ್ಸಿ-ಕ್ಯಾಬ್ ಡ್ರೈವರ್‌ಗಳು, ಆಟೋ ಚಾಲಕರು ಮತ್ತು ಸಣ್ಣ ಪುಟ್ಟ ಉದ್ದಿಮೆಗಳ ಉದ್ಯೋಗಸ್ಥರಿಗೆ ಸಹಾಯಧನವನ್ನು ಈ ಕೂಡಲೇ ನೀಡಬೇಕು.
  4. ಬಡವರು ಮತ್ತು ಸಾಮಾನ್ಯ ಜನರ ಆರೋಗ್ಯ ರಕ್ಷಣೆಗೆ ಅಗತ್ಯವಿರುವಷ್ಟು ಆರೋಗ್ಯ ಸಲಕರಣೆಗಳ ಪೂರೈಕೆಗೆ ಈಗಲೇ ಕ್ರಮ ಕೈಗೊಳ್ಳಬೇಕು
  5. ಲಾಕ್‌ಡೌನ್ ಹೊತ್ತಿಗೆ ತಾತ್ಕಾಲಿಕವಾಗಿ ಹೇರಿದ್ದ ಮದ್ಯನಿಷೇಧವನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಮುಂದುವರಿಯಬಹುದಾಗಿದ್ದ ಸರ್ಕಾರ ಅದರ ಬದಲಿಗೆ, ಲಾಕ್‌ಡೌನ್ ನಡುವೆಯೇ, ಕೊರೊನಾ ಅಪಾಯವಿದ್ದಾಗಲೂ ಮದ್ಯ ಮಾರಾಟ ಆರಂಭಿಸಿತು. ಇದನ್ನು ನಿಲ್ಲಿಸಬೇಕು. ಸಂಪೂರ್ಣ ಮದ್ಯನಿಷೇಧದ ಕಡೆಗೆ ವೈಜ್ಞಾನಿಕವಾದಂತಹ ರೀತಿಯಲ್ಲಿ ಮುಂದಡಿಯಿಡಲು ಇರುವ ಅವಕಾಶಗಳ ಬಗ್ಗೆ ಹೋರಾಟಗಾರರು ಮತ್ತು ಪರಿಣತರೊಂದಿಗೆ ಚರ್ಚಿಸಿ, ಮುಂದುವರೆಯಬೇಕು.
  6. ಗ್ರಾಮೀಣ ಆರ್ಥಿಕತೆಯ ಪುನಶ್ಚೇತನಕ್ಕೆ ವಿಶೇಷ ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಬೇಕು: ನರೇಗಾ ಯೋಜನೆಗೆ ಹೆಚ್ಚಿನ ಹಣ ಬಿಡುಗಡೆ ಮಾಡಬೇಕು.
  7. ‘ನಗರ ಉದ್ಯೋಗ ಖಾತರಿ ಯೋಜನೆ’ಯನ್ನು ಜಾರಿಗೆ ತರಬೇಕು.
  8. ವಲಸೆ ಕಾರ್ಮಿಕರ ಸರ್ವೇ ಮತ್ತು ದಾಖಲಾತಿ ನಡೆಯಬೇಕು.
  9. ಸಣ್ಣ-ಮಧ್ಯಮ ಉದ್ದಿಮೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.

ಅಧ್ಯಯನ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿಯ ಸಿದ್ದರಾಜು, ಚಂದ್ರಶೇಖರ್‌, ವರದರಾಜು, ಜ್ಯೋತಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ಲಾಕ್‌ಡೌನ್‌ ಶ್ರಮಜೀವಿಗಳ ಬದುಕನ್ನು ದುಸ್ತರಗೊಳಿಸಿದೆ: ಬಡಜನರ ಸ್ಥಿತಿಗತಿ ಬಿಚ್ಚಿಟ್ಟ ಜನಶಕ್ತಿಯ ಅಧ್ಯಯನ ವರದಿ


Also Read: COVID-19: How Effective is the lockdown in India?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....