Homeಮುಖಪುಟ97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ...

97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ರೈಲ್ವೆಯು ರಾಜ್ಯದ ವಿಷಯವಾಗಿದ್ದು, ಅದರಲ್ಲಿನ ಅಪರಾಧಗಳ ತಡೆಗಟ್ಟುವಿಕೆ, ಪ್ರಕರಣಗಳ ನೋಂದಣಿ, ರೈಲ್ವೆ ಆವರಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಚಾಲನೆಯಲ್ಲಿರುವ ರೈಲುಗಳಲ್ಲಿ ಅವುಗಳ ತನಿಖೆ ಮತ್ತು ನಿರ್ವಹಣೆಯು ರಾಜ್ಯ ಸರ್ಕಾರಗಳ ಶಾಸನಬದ್ಧ ಜವಾಬ್ದಾರಿಯಾಗಿದೆ- ಗೋಯಲ್

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗಾಗಿ ವ್ಯವಸ್ಥೆ ಮಾಡಿದ್ದ ಶ್ರಮಿಕ್ ವಿಶೇಷ ರೈಲುಗಳಲ್ಲಿ ಸುಮಾರು 97 ಜನ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಅಂಕಿಅಂಶಗಳನ್ನು ಸಲ್ಲಿಸಿದೆ.

ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯನ್ ಶುಕ್ರವಾರ ಸದಸನದಲ್ಲಿ ಕೇಳಿದ ಪ್ರಶ್ನೆಗೆ, ರೈಲ್ವೆ ಸಚಿವ ಪಿಯೂಷ್ ಗೋಯಲ್, ಲಿಖಿತ ಉತ್ತರದಲ್ಲಿ ಸಂಸತ್ತಿನ ಮೇಲ್ಮನೆಗೆ ಅಂಕಿಅಂಶಗಳನ್ನು ನೀಡಿದರು.

“ರಾಜ್ಯ ಪೊಲೀಸರು ಒದಗಿಸಿದ ಮಾಹಿತಿಯ ಆಧಾರದ ಮೇಲೆ, ಪ್ರಸ್ತುತ ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಶ್ರಮಿಕ್ ವಿಶೇಷ ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾಗ ಸೆಪ್ಟಂಬರ್,09,2020 ರವರೆಗೆ 97 ಜನರು ಸಾವನ್ನಪ್ಪಿದ್ದಾರೆ” ಎಂಬುದಾಗಿ ಸಚಿವರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

“ರಾಜ್ಯ ಪೊಲೀಸರು, Cr.PCಯ ಸೆಕ್ಷನ್ 174 ರ ಅಡಿಯಲ್ಲಿ ಈ ಸಾವುಗಳನ್ನು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಯನ್ನು ಅನುಸರಿಸುತ್ತಾರೆ. ರಾಜ್ಯ ಪೊಲೀಸರು, 87 ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ” ಎಂದು ಸಚಿವರು ಹೇಳಿದರು.

“ಈವರೆಗೆ ಒಟ್ಟು 51 ಮರಣೋತ್ತರ ವರದಿಗಳನ್ನು ಆಯಾ ರಾಜ್ಯ ಪೊಲೀಸ್ ಪಡೆಗಳಿಂದ ಪಡೆಯಲಾಗಿದ್ದು, ಇದರಲ್ಲಿ, ಸಾವಿಗೆ ಕಾರಣ, ಹೃದಯ ಸ್ತಂಭನ/ಹೃದಯ ಕಾಯಿಲೆ/ಮೆದುಳಿನ ರಕ್ತಸ್ರಾವ/ಮೊದಲೇ ಅಸ್ತಿತ್ವದಲ್ಲಿರುವ ದೀರ್ಘಕಾಲದ ಕಾಯಿಲೆ/ದೀರ್ಘಕಾಲದ ಶ್ವಾಸಕೋಶದ ಕಾಯಿಲೆ/ದೀರ್ಘಕಾಲದ ಯಕೃತ್ತಿನ ಕಾಯಿಲೆ ಇತ್ಯಾದಿ, ಎಂದು ಕಂಡುಬಂದಿದೆ” ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಅದಾಗ್ಯೂ “ಕೊರೊನಾ ಲಾಕ್‌ಡೌನ್ ವೇಳೆ ದೇಶದ ಹೆದ್ದಾರಿಗಳಲ್ಲಿ ರಕ್ತಸುರಿಸುತ್ತಾ ತಮ್ಮ ಮನೆಗೆ ಹೊರಟವರಲ್ಲಿ, ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಆದ್ದರಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಪ್ರಶ್ನೆಯು ಏಳುವುದಿಲ್ಲ” ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಂಸತ್ತಿಗೆ ಈ ಹಿಂದೆ ತಿಳಿಸಿತ್ತು.

ಲಾಕ್‌ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಮರಳಿಸಲು ಶ್ರಮಿಕ್ ವಿಶೇಷ ರೈಲುಗಳು ಮೇ 1 ರಂದು ಕಾರ್ಯಾಚರಣೆ ಆರಂಭಿಸಿದ್ದವು.

ಒಟ್ಟಾರೆಯಾಗಿ, 4,621 ಶ್ರಮಿಕ್ ವಿಶೇಷ ರೈಲುಗಳು ಮೇ 1 ಮತ್ತು ಆಗಸ್ಟ್ 31 ರ ನಡುವೆ ಸಂಚರಿಸಿದ್ದು, 6,319,000 ಪ್ರಯಾಣಿಕರನ್ನು ತಮ್ಮ ರಾಜ್ಯಗಳಿಗೆ ಕರೆದೊಯ್ಯಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

“ರೈಲ್ವೆಯು ರಾಜ್ಯದ ವಿಷಯವಾಗಿದ್ದು, ಅದರಲ್ಲಿನ ಅಪರಾಧಗಳ ತಡೆಗಟ್ಟುವಿಕೆ, ಪ್ರಕರಣಗಳ ನೋಂದಣಿ, ರೈಲ್ವೆ ಆವರಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಚಾಲನೆಯಲ್ಲಿರುವ ರೈಲುಗಳಲ್ಲಿ ಅವುಗಳ ತನಿಖೆ ಮತ್ತು ನಿರ್ವಹಣೆಯು ರಾಜ್ಯ ಸರ್ಕಾರಗಳ ಶಾಸನಬದ್ಧ ಜವಾಬ್ದಾರಿಯಾಗಿದೆ” ಗೋಯಲ್ ಹೇಳಿದರು.

ಕೇಂದ್ರ ಸರ್ಕಾರವು ಕೇವಲ ಕೆಲವೆ ಗಂಟೆಗಳ ಅಂತರದಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮದಿಂದಾಗಿ ಕೋಟ್ಯಾಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿ ತಮ್ಮ ಊರುಗಳಿಗೆ ತಲುಪಲು ಹರಸಾಹಸ ಪಡುವಂತಾಗಿತ್ತು.

ಇದನ್ನೂ ಓದಿ:  ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

ಇದರ ನಂತರ ದೇಶದ ಮಹಾವಲಸೆ ಪ್ರಾರಂಭವಾಗಿ ನೂರಾರು ಮಂದಿ ವಲಸೆ ಕಾರ್ಮಿಕರು ದೇಶದ ಹೆದ್ದಾರಿಗಳಲ್ಲಿ, ರೈಲುಗಳಲ್ಲಿ, ರೈಲಿನ ಹಳಿಗಳಲ್ಲಿ, ಅಫಘಾತ, ದಣಿವು ಹಾಗೂ ಹಸಿವಿನಿಂದ ಪ್ರಾಣ ಬಿಡುವಂತಾಯಿತು.

ಭಾರತೀಯ ರೈಲ್ವೆ 70 ವಿಭಾಗಗಳು, 18 ವಲಯಗಳಲ್ಲಿ ಹರಡಿಕೊಂಡಿದೆ. ಈ ಪೈಕಿ 14 ವಿಭಾಗಗಳು ಮಾಹಿತಿ ನೀಡಿವೆ. ಭಾರತೀಯ ರೈಲ್ವೆಯ 18 ವಲಯಗಳಲ್ಲಿ 80 ಮಂದಿ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಹಕ್ಕಿನಡಿ ಸಂಗ್ರಹಿಸಿರುವ ದಾಖಲೆಗಳನ್ನು ಉಲ್ಲೇಖಿಸಿ ತಿಳಿಸಿದೆ.

ಇದನ್ನೂ ಓದಿ:  ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ರೈಲ್ವೆ ಸಂರಕ್ಷಣಾ ದಳ ವಲಸೆ ಕಾರ್ಮಿಕರ ಸಾವುಗಳ ನೋಂದಣಿ ಮಾಡಿಕೊಂಡಿದೆ ಮತ್ತುಸಂಬಂಧಪಟ್ಟ ರೈಲ್ವೆ ವಲಯ ಮತ್ತು ವಿಭಾಗಗಳಿಗೆ ಮಾಹಿತಿಯನ್ನು ರವಾನೆ ಮಾಡಿದೆ ಎಂದು ವರದಿ ಹೇಳಿದೆ. ಕೊರೊನ ಸೋಂಕಿನಿಂದ ಹಲವು ಮಂದಿ ವಲಸೆ ಕಾರ್ಮಿಕರು ಬಳಲುತ್ತಿದ್ದರು. ಜ್ವರ, ಕಫ, ವಾಂತಿಯಿಂದಾಗಿ ಅವರ ಸ್ಥಿತಿ ಕ್ಷೀನಿಸಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.

ಈಸ್ಟ್-ಸೆಂಟ್ರಲ್ ರೈಲ್ವೆಯ ದೀನ್ ದಯಾಳ್ ಉಪಾಧ್ಯ ರೈಲ್ವಿನಲ್ಲಿ ಮೇ1, 2020ರಂದು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ  5 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು, ಓರ್ವ ಪುರುಷ ಮತ್ತು ಓರ್ವ ಮಗು ಇದರಲ್ಲಿ ಸೇರಿದೆ. ಭರಸವಾಲ್ ವಿಭಾಗದಲ್ಲಿ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇವರೆಲ್ಲರೂ 22 ರಿಂದ 27 ವರ್ಷ ಒಳಗಿನ ಯುವ ಕಾರ್ಮಿಕರು ಎಂಬುದನ್ನು ಬೊಟ್ಟುಮಾಡಲಾಗಿದೆ.

ಇದನ್ನೂ ಓದಿ:  ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದ 216 ಮಂದಿ ಸಾವನ್ನಪ್ಪಿದ್ದರೆ, ರಸ್ತೆ-ರೈಲು ಅಪಘಾತದಲ್ಲಿ 20 ಮಂದಿ ಮೃತಪಟ್ಟಿದ್ದಾರೆ. 133 ಮಂದಿ ಆತ್ಮಹತ್ಯ ಮಾಡಿಕೊಂಡಿದ್ದಾರೆ. ಕ್ವಾರಂಟೈನ್  ಕೇಂದ್ರದಲ್ಲಿ 49 ಮಂದಿ ಮರಣ ಹೊಂದಿದ್ದಾರೆ. ಲಾಕ್‌ಡೌನ್ ಅಪರಾಧದಲ್ಲಿ 18 ಮಂದಿ, ಪೊಲೀಸರ ಹಿಂಸೆಯಿಂದ 12 ಮಂದಿ, ಮಧ್ಯ ನಿಲ್ಲಿಸಿದ್ದರಿಂದ 49 ಮಂದಿ, ಇತರೆ ಕಾರಣಗಳಿಗಾಗಿ 113 ಮಂದಿ ಸೇರಿ 297 ಮಂದಿ ಸಾವು ಕಂಡಿದ್ದಾರೆ.

ವಿಶೇಷವೆಂದರೆ ಕೊರೊನ ಸೋಂಕಿನ ಭಯದಿಂದ, ಏಕಾಂತ, ಪ್ರಯಾಣ ನಿರ್ಬಂಧ, ಮನೆಗಳಿಗೆ ತಲುಪಲು ಸಾಧ್ಯವಾಗದೇ ಇರುವ ಕಾರಣದಿಂದ 133 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 96 ಮಂದಿ ವಲಸೆ ಕಾರ್ಮಿಕರು ಸಾವಿನ್ನಪ್ಪಿರುವುದು ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲೇ 49 ಮಂದಿ ಮೃತಪಟ್ಟಿರುವುದು ಕೊರೊನ ಸಂಬಂಧಿತ ಸಾವುಗಳಾಗಿವೆ ಎಂದು ವೈರ್ ವರದಿ ಮಾಡಿದೆ.


ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...