Homeಮುಖಪುಟ97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ...

97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ರೈಲ್ವೆಯು ರಾಜ್ಯದ ವಿಷಯವಾಗಿದ್ದು, ಅದರಲ್ಲಿನ ಅಪರಾಧಗಳ ತಡೆಗಟ್ಟುವಿಕೆ, ಪ್ರಕರಣಗಳ ನೋಂದಣಿ, ರೈಲ್ವೆ ಆವರಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಚಾಲನೆಯಲ್ಲಿರುವ ರೈಲುಗಳಲ್ಲಿ ಅವುಗಳ ತನಿಖೆ ಮತ್ತು ನಿರ್ವಹಣೆಯು ರಾಜ್ಯ ಸರ್ಕಾರಗಳ ಶಾಸನಬದ್ಧ ಜವಾಬ್ದಾರಿಯಾಗಿದೆ- ಗೋಯಲ್

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗಾಗಿ ವ್ಯವಸ್ಥೆ ಮಾಡಿದ್ದ ಶ್ರಮಿಕ್ ವಿಶೇಷ ರೈಲುಗಳಲ್ಲಿ ಸುಮಾರು 97 ಜನ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಅಂಕಿಅಂಶಗಳನ್ನು ಸಲ್ಲಿಸಿದೆ.

ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯನ್ ಶುಕ್ರವಾರ ಸದಸನದಲ್ಲಿ ಕೇಳಿದ ಪ್ರಶ್ನೆಗೆ, ರೈಲ್ವೆ ಸಚಿವ ಪಿಯೂಷ್ ಗೋಯಲ್, ಲಿಖಿತ ಉತ್ತರದಲ್ಲಿ ಸಂಸತ್ತಿನ ಮೇಲ್ಮನೆಗೆ ಅಂಕಿಅಂಶಗಳನ್ನು ನೀಡಿದರು.

“ರಾಜ್ಯ ಪೊಲೀಸರು ಒದಗಿಸಿದ ಮಾಹಿತಿಯ ಆಧಾರದ ಮೇಲೆ, ಪ್ರಸ್ತುತ ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಶ್ರಮಿಕ್ ವಿಶೇಷ ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾಗ ಸೆಪ್ಟಂಬರ್,09,2020 ರವರೆಗೆ 97 ಜನರು ಸಾವನ್ನಪ್ಪಿದ್ದಾರೆ” ಎಂಬುದಾಗಿ ಸಚಿವರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

“ರಾಜ್ಯ ಪೊಲೀಸರು, Cr.PCಯ ಸೆಕ್ಷನ್ 174 ರ ಅಡಿಯಲ್ಲಿ ಈ ಸಾವುಗಳನ್ನು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಯನ್ನು ಅನುಸರಿಸುತ್ತಾರೆ. ರಾಜ್ಯ ಪೊಲೀಸರು, 87 ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ” ಎಂದು ಸಚಿವರು ಹೇಳಿದರು.

“ಈವರೆಗೆ ಒಟ್ಟು 51 ಮರಣೋತ್ತರ ವರದಿಗಳನ್ನು ಆಯಾ ರಾಜ್ಯ ಪೊಲೀಸ್ ಪಡೆಗಳಿಂದ ಪಡೆಯಲಾಗಿದ್ದು, ಇದರಲ್ಲಿ, ಸಾವಿಗೆ ಕಾರಣ, ಹೃದಯ ಸ್ತಂಭನ/ಹೃದಯ ಕಾಯಿಲೆ/ಮೆದುಳಿನ ರಕ್ತಸ್ರಾವ/ಮೊದಲೇ ಅಸ್ತಿತ್ವದಲ್ಲಿರುವ ದೀರ್ಘಕಾಲದ ಕಾಯಿಲೆ/ದೀರ್ಘಕಾಲದ ಶ್ವಾಸಕೋಶದ ಕಾಯಿಲೆ/ದೀರ್ಘಕಾಲದ ಯಕೃತ್ತಿನ ಕಾಯಿಲೆ ಇತ್ಯಾದಿ, ಎಂದು ಕಂಡುಬಂದಿದೆ” ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಅದಾಗ್ಯೂ “ಕೊರೊನಾ ಲಾಕ್‌ಡೌನ್ ವೇಳೆ ದೇಶದ ಹೆದ್ದಾರಿಗಳಲ್ಲಿ ರಕ್ತಸುರಿಸುತ್ತಾ ತಮ್ಮ ಮನೆಗೆ ಹೊರಟವರಲ್ಲಿ, ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಆದ್ದರಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಪ್ರಶ್ನೆಯು ಏಳುವುದಿಲ್ಲ” ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಂಸತ್ತಿಗೆ ಈ ಹಿಂದೆ ತಿಳಿಸಿತ್ತು.

ಲಾಕ್‌ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಮರಳಿಸಲು ಶ್ರಮಿಕ್ ವಿಶೇಷ ರೈಲುಗಳು ಮೇ 1 ರಂದು ಕಾರ್ಯಾಚರಣೆ ಆರಂಭಿಸಿದ್ದವು.

ಒಟ್ಟಾರೆಯಾಗಿ, 4,621 ಶ್ರಮಿಕ್ ವಿಶೇಷ ರೈಲುಗಳು ಮೇ 1 ಮತ್ತು ಆಗಸ್ಟ್ 31 ರ ನಡುವೆ ಸಂಚರಿಸಿದ್ದು, 6,319,000 ಪ್ರಯಾಣಿಕರನ್ನು ತಮ್ಮ ರಾಜ್ಯಗಳಿಗೆ ಕರೆದೊಯ್ಯಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

“ರೈಲ್ವೆಯು ರಾಜ್ಯದ ವಿಷಯವಾಗಿದ್ದು, ಅದರಲ್ಲಿನ ಅಪರಾಧಗಳ ತಡೆಗಟ್ಟುವಿಕೆ, ಪ್ರಕರಣಗಳ ನೋಂದಣಿ, ರೈಲ್ವೆ ಆವರಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಚಾಲನೆಯಲ್ಲಿರುವ ರೈಲುಗಳಲ್ಲಿ ಅವುಗಳ ತನಿಖೆ ಮತ್ತು ನಿರ್ವಹಣೆಯು ರಾಜ್ಯ ಸರ್ಕಾರಗಳ ಶಾಸನಬದ್ಧ ಜವಾಬ್ದಾರಿಯಾಗಿದೆ” ಗೋಯಲ್ ಹೇಳಿದರು.

ಕೇಂದ್ರ ಸರ್ಕಾರವು ಕೇವಲ ಕೆಲವೆ ಗಂಟೆಗಳ ಅಂತರದಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮದಿಂದಾಗಿ ಕೋಟ್ಯಾಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿ ತಮ್ಮ ಊರುಗಳಿಗೆ ತಲುಪಲು ಹರಸಾಹಸ ಪಡುವಂತಾಗಿತ್ತು.

ಇದನ್ನೂ ಓದಿ:  ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

ಇದರ ನಂತರ ದೇಶದ ಮಹಾವಲಸೆ ಪ್ರಾರಂಭವಾಗಿ ನೂರಾರು ಮಂದಿ ವಲಸೆ ಕಾರ್ಮಿಕರು ದೇಶದ ಹೆದ್ದಾರಿಗಳಲ್ಲಿ, ರೈಲುಗಳಲ್ಲಿ, ರೈಲಿನ ಹಳಿಗಳಲ್ಲಿ, ಅಫಘಾತ, ದಣಿವು ಹಾಗೂ ಹಸಿವಿನಿಂದ ಪ್ರಾಣ ಬಿಡುವಂತಾಯಿತು.

ಭಾರತೀಯ ರೈಲ್ವೆ 70 ವಿಭಾಗಗಳು, 18 ವಲಯಗಳಲ್ಲಿ ಹರಡಿಕೊಂಡಿದೆ. ಈ ಪೈಕಿ 14 ವಿಭಾಗಗಳು ಮಾಹಿತಿ ನೀಡಿವೆ. ಭಾರತೀಯ ರೈಲ್ವೆಯ 18 ವಲಯಗಳಲ್ಲಿ 80 ಮಂದಿ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಹಕ್ಕಿನಡಿ ಸಂಗ್ರಹಿಸಿರುವ ದಾಖಲೆಗಳನ್ನು ಉಲ್ಲೇಖಿಸಿ ತಿಳಿಸಿದೆ.

ಇದನ್ನೂ ಓದಿ:  ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ರೈಲ್ವೆ ಸಂರಕ್ಷಣಾ ದಳ ವಲಸೆ ಕಾರ್ಮಿಕರ ಸಾವುಗಳ ನೋಂದಣಿ ಮಾಡಿಕೊಂಡಿದೆ ಮತ್ತುಸಂಬಂಧಪಟ್ಟ ರೈಲ್ವೆ ವಲಯ ಮತ್ತು ವಿಭಾಗಗಳಿಗೆ ಮಾಹಿತಿಯನ್ನು ರವಾನೆ ಮಾಡಿದೆ ಎಂದು ವರದಿ ಹೇಳಿದೆ. ಕೊರೊನ ಸೋಂಕಿನಿಂದ ಹಲವು ಮಂದಿ ವಲಸೆ ಕಾರ್ಮಿಕರು ಬಳಲುತ್ತಿದ್ದರು. ಜ್ವರ, ಕಫ, ವಾಂತಿಯಿಂದಾಗಿ ಅವರ ಸ್ಥಿತಿ ಕ್ಷೀನಿಸಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.

ಈಸ್ಟ್-ಸೆಂಟ್ರಲ್ ರೈಲ್ವೆಯ ದೀನ್ ದಯಾಳ್ ಉಪಾಧ್ಯ ರೈಲ್ವಿನಲ್ಲಿ ಮೇ1, 2020ರಂದು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ  5 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು, ಓರ್ವ ಪುರುಷ ಮತ್ತು ಓರ್ವ ಮಗು ಇದರಲ್ಲಿ ಸೇರಿದೆ. ಭರಸವಾಲ್ ವಿಭಾಗದಲ್ಲಿ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇವರೆಲ್ಲರೂ 22 ರಿಂದ 27 ವರ್ಷ ಒಳಗಿನ ಯುವ ಕಾರ್ಮಿಕರು ಎಂಬುದನ್ನು ಬೊಟ್ಟುಮಾಡಲಾಗಿದೆ.

ಇದನ್ನೂ ಓದಿ:  ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

ಕೊರೊನ-ಲಾಕ್ ಡೌನ್ ಸಂದರ್ಭದಲ್ಲಿ ಹಸಿವಿನಿಂದ 216 ಮಂದಿ ಸಾವನ್ನಪ್ಪಿದ್ದರೆ, ರಸ್ತೆ-ರೈಲು ಅಪಘಾತದಲ್ಲಿ 20 ಮಂದಿ ಮೃತಪಟ್ಟಿದ್ದಾರೆ. 133 ಮಂದಿ ಆತ್ಮಹತ್ಯ ಮಾಡಿಕೊಂಡಿದ್ದಾರೆ. ಕ್ವಾರಂಟೈನ್  ಕೇಂದ್ರದಲ್ಲಿ 49 ಮಂದಿ ಮರಣ ಹೊಂದಿದ್ದಾರೆ. ಲಾಕ್‌ಡೌನ್ ಅಪರಾಧದಲ್ಲಿ 18 ಮಂದಿ, ಪೊಲೀಸರ ಹಿಂಸೆಯಿಂದ 12 ಮಂದಿ, ಮಧ್ಯ ನಿಲ್ಲಿಸಿದ್ದರಿಂದ 49 ಮಂದಿ, ಇತರೆ ಕಾರಣಗಳಿಗಾಗಿ 113 ಮಂದಿ ಸೇರಿ 297 ಮಂದಿ ಸಾವು ಕಂಡಿದ್ದಾರೆ.

ವಿಶೇಷವೆಂದರೆ ಕೊರೊನ ಸೋಂಕಿನ ಭಯದಿಂದ, ಏಕಾಂತ, ಪ್ರಯಾಣ ನಿರ್ಬಂಧ, ಮನೆಗಳಿಗೆ ತಲುಪಲು ಸಾಧ್ಯವಾಗದೇ ಇರುವ ಕಾರಣದಿಂದ 133 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 96 ಮಂದಿ ವಲಸೆ ಕಾರ್ಮಿಕರು ಸಾವಿನ್ನಪ್ಪಿರುವುದು ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲೇ 49 ಮಂದಿ ಮೃತಪಟ್ಟಿರುವುದು ಕೊರೊನ ಸಂಬಂಧಿತ ಸಾವುಗಳಾಗಿವೆ ಎಂದು ವೈರ್ ವರದಿ ಮಾಡಿದೆ.


ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...