Homeಚಳವಳಿಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು - ಕೆ.ಎನ್ ಉಮೇಶ್

ಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು – ಕೆ.ಎನ್ ಉಮೇಶ್

ಕೊರೊನಾ ಬರುವುದಕ್ಕಿಂತ ಮುಂಚೆ ದೇಶದಲ್ಲಿ 28% ಬಡತನ ಇತ್ತು. ಲಾಕ್‌ಡೌನ್ ನಂತರ ಅದು ದುಪ್ಪಟ್ಟಾಗಿದೆ. ದೇಶದಲ್ಲಿ 14 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾಯಂ ಕೆಲಸ ಎಂಬದನ್ನು ಕಿತ್ತುಹಾಕಿ ಆ ಜಾಗದಲ್ಲಿ ಗುತ್ತಿಗೆ ಪದ್ದತಿ ತರಲಾಗುತ್ತಿದೆ.

- Advertisement -
- Advertisement -

ಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು ಅಂದರೆ ದೇಶದ ಕಾರ್ಮಿಕರು. ಬಿಜೆಪಿ ಸಂತತಿಯ ಪಾಪದ ಕೊಡ ತುಂಬಿದೆ. ಹಾಗಾಗಿ ಕಾರ್ಮಿಕ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಸಿಐಟಿಯು ಮುಖಂಡ ಕೆ.ಎನ್ ಉಮೇಶ್ ಆರೋಪಿಸಿದ್ದಾರೆ.

ಕಾರ್ಮಿಕರು, ಶ್ರಮಜೀವಿಗಳ ಹಕ್ಕುಗಳ ರಕ್ಷಣೆಗಾಗಿ – ಕೋವಿಡ್ ಸಂಕಷ್ಟ ಪರಿಹಾರಕ್ಕಾಗಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ‘ವಿಧಾನ ಸೌಧ ಚಲೋ’ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ನರೇಂದ್ರ ಮೋದಿಯವರು ಅವೈಜ್ಞಾನಿಕ ಲಾಕ್‌ಡೌನ್ ಹೇರಿದ್ದಲ್ಲದೇ, ಸಾಂಕ್ರಾಮಿಕ ಕಾಲದಲ್ಲಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ, ಸರ್ಕಾರಿ ಕಂಪನಿಗಳನ್ನು ಖಾಸಗೀಕರಣ ಮಾಡುವ ಮೂಲಕ ದೇಶದ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ದೂರಿದರು.

ಸಿಐಟಿಯು ರಾಜ್ಯ ಅಧ್ಯಕ್ಷರಾದ ವರಲಕ್ಷ್ಮಿಯವರು ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, “ನಮ್ಮ ದೇಶದೊಳಗೆ ಪ್ರಜಾಪ್ರಭುತ್ವ ಇಲ್ಲದಾಗಿದೆ, ಯಾಕೆಂದರೆ ಸರ್ಕಾರ ಪ್ರಜೆಗಳಿಗೆ ಕೆಲಸ ಮಾಡುತ್ತಿಲ್ಲ. ಬದಲಿಗೆ ದೇಶದ ಬಂಡವಾಳಶಾಹಿಗಳಿಗೆ, ಕಾರ್ಪೋರೇಟ್ ಕಂಪನಿಗಳಿಗಾಗಿ, ವಿದೇಶಿ ಹೂಡಿಕೆದಾರರಿಗಾಗಿ ಕೆಲಸ ಮಾಡುತ್ತಿದೆ. ಅವರ ಪರವಾದ ಕಾನೂನುಗಳನ್ನು ಲೋಕಸಭೆಯಲ್ಲಿ ಜಾರಿಗೊಳಿಸಲಾಗುತ್ತಿದೆ. ಕಾರ್ಮಿಕರ ಸಾಮೂಹಿಕ ಚೌಕಾಶಿಯನ್ನು ಸರ್ಕಾರ ಇಲ್ಲದಾಗಿಸಿದೆ. ಕೊರೋನಾ ಸಮಯದಲ್ಲಿ ಜನರಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಶ್ರೀಮಂತರ ಪರವಾಗಿದೆ. ಇದರಿಂದ ಕಾರ್ಮಿಕರು ಕೆಲಸ ಮಾತ್ರವಲ್ಲ ಬದುಕನ್ನೇ ಕಳೆದುಕೊಳ್ಳುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಕಾರ್ಮಿಕರು, ಶ್ರಮಜೀವಿಗಳ ಹಕ್ಕುಗಳ ರಕ್ಷಣೆಗಾಗಿ-ಕೋವಿಡ್ ಸಂಕಷ್ಟ ಪರಿಹಾರಕ್ಕಾಗಿವಿಧಾನ ಸೌಧ ಚಲೋ

Posted by Naanu Gauri on Wednesday, September 23, 2020

ಕೊರೊನಾ ಬರುವುದಕ್ಕಿಂತ ಮುಂಚೆ ದೇಶದಲ್ಲಿ 28% ಬಡತನ ಇತ್ತು. ಲಾಕ್‌ಡೌನ್ ನಂತರ ಅದು ದುಪ್ಪಟ್ಟಾಗಿದೆ. ದೇಶದಲ್ಲಿ 14 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾಯಂ ಕೆಲಸ ಎಂಬದನ್ನು ಕಿತ್ತುಹಾಕಿ ಆ ಜಾಗದಲ್ಲಿ ಗುತ್ತಿಗೆ ಪದ್ದತಿ ತರಲಾಗುತ್ತಿದೆ. ಇದರಿಂದ ಕಾರ್ಮಿಕರು ತಮಗಿದ್ದ ಕಾನೂನುಬದ್ಧ ಹಕ್ಕುಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು-ಕಾರ್ಮಿಕರನ್ನು ಬೀದಿಪಾಲು ಮಾಡಿ ತಮಗೆ ಬೇಕಾದ ಮಸೂದೆಗಳಿಗೆ ಅಂಗೀಕಾರ ಪಡೆಯಲು ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ದೇಶದ 1% ಶ್ರೀಮಂತರಿಗಾಗಿ ದೇಶದ 99% ಜನರ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಜನರ ಕೈಗೆ ಸರ್ಕಾರ ನೇರ ನಗದು ನೀಡಬೇಕು. ಕಾರ್ಮಿಕರಿಗೆ ಹಣ ನೀಡಿದರೆ ಅವರು ಖರ್ಚು ಮಾಡುತ್ತಾರೆ. ಇದರಿಂದ ಉತ್ಪಾದನೆ ಹೆಚ್ಚಾಗುತ್ತದೆ, ಉದ್ಯೋಗಗಳು ಹೆಚ್ಚಾಗುತ್ತವೆ. ಆದರೆ ಸರ್ಕಾರ ಇದನ್ನು ಬಿಟ್ಟು ಬಂಡವಾಳಶಾಹಿಗಳಿಗೆ ಮಾತ್ರ ಹಣ ನೀಡುತ್ತಿದೆ. ಕೊಂಡುಕೊಳ್ಳಲು ಜನರ ಬಳಿ ಹಣವಿಲ್ಲದ ಮೇಲೆ ಉತ್ಪಾದನೆ ಮಾಡಿ ಏನು ಪ್ರಯೋಜನ? ಇಷ್ಟು ಸಾಮಾನ್ಯ ಜ್ಞಾನ ಸರ್ಕಾರಕ್ಕಿಲ್ಲವೇ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರ್ ಕಿಡಿಕಾರಿದ್ದಾರೆ.

ಕಾರ್ಮಿಕರ ಮಸೂದೆಗಳು ಮೊದಲು ವಿಚ್ಛೇದನಕ್ಕೆ ಅರ್ಜಿ ಹಾಕಿ ಮದುವೆ ಮಾಡಿದಂತೆ. ಮಾಲೀಕರನ್ನು ಕಾಪಾಡಲು ಕಾರ್ಮಿಕರ ಸಂಘಟನಾ ಹಕ್ಕನ್ನು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ಮಾಲೀಕರು ಕಾರ್ಮಿಕರ ಪರ ಕಾನೂನುಗಳು ಇರುವಾಗಲೇ ಉಲ್ಲಂಘನೆ ಮಾಡುತ್ತಾರೆ, ಇನ್ನು ಅವೂ ಇಲ್ಲದೆ ಇರುವಾಗಿನ ಅವಸ್ಥೆ ಅರ್ಥ ಮಾಡಿಕೊಳ್ಳಿ. ಇದೇ 28ಕ್ಕೆ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಸಿಐಟಿಯು ಬೆಂಬಲ ನೀಡುತ್ತದೆ
– ಮೀನಾಕ್ಷಿ ಸುಂದರ್

ಪ್ರತಿಭಟನಾ ಸ್ಥಳಕ್ಕೆ ಕಾರ್ಮಿಕ ಸಚಿವರು ಬರಬೇಕು, ತಮ್ಮ ಹಕ್ಕೊತ್ತಾಯಗಳನ್ನು ಆಲಿಸಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.


ಇದನ್ನೂ ಓದಿ: ರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...