Homeಚಳವಳಿಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು - ಕೆ.ಎನ್ ಉಮೇಶ್

ಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು – ಕೆ.ಎನ್ ಉಮೇಶ್

ಕೊರೊನಾ ಬರುವುದಕ್ಕಿಂತ ಮುಂಚೆ ದೇಶದಲ್ಲಿ 28% ಬಡತನ ಇತ್ತು. ಲಾಕ್‌ಡೌನ್ ನಂತರ ಅದು ದುಪ್ಪಟ್ಟಾಗಿದೆ. ದೇಶದಲ್ಲಿ 14 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾಯಂ ಕೆಲಸ ಎಂಬದನ್ನು ಕಿತ್ತುಹಾಕಿ ಆ ಜಾಗದಲ್ಲಿ ಗುತ್ತಿಗೆ ಪದ್ದತಿ ತರಲಾಗುತ್ತಿದೆ.

- Advertisement -
- Advertisement -

ಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು ಅಂದರೆ ದೇಶದ ಕಾರ್ಮಿಕರು. ಬಿಜೆಪಿ ಸಂತತಿಯ ಪಾಪದ ಕೊಡ ತುಂಬಿದೆ. ಹಾಗಾಗಿ ಕಾರ್ಮಿಕ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಸಿಐಟಿಯು ಮುಖಂಡ ಕೆ.ಎನ್ ಉಮೇಶ್ ಆರೋಪಿಸಿದ್ದಾರೆ.

ಕಾರ್ಮಿಕರು, ಶ್ರಮಜೀವಿಗಳ ಹಕ್ಕುಗಳ ರಕ್ಷಣೆಗಾಗಿ – ಕೋವಿಡ್ ಸಂಕಷ್ಟ ಪರಿಹಾರಕ್ಕಾಗಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ‘ವಿಧಾನ ಸೌಧ ಚಲೋ’ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ನರೇಂದ್ರ ಮೋದಿಯವರು ಅವೈಜ್ಞಾನಿಕ ಲಾಕ್‌ಡೌನ್ ಹೇರಿದ್ದಲ್ಲದೇ, ಸಾಂಕ್ರಾಮಿಕ ಕಾಲದಲ್ಲಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ, ಸರ್ಕಾರಿ ಕಂಪನಿಗಳನ್ನು ಖಾಸಗೀಕರಣ ಮಾಡುವ ಮೂಲಕ ದೇಶದ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ದೂರಿದರು.

ಸಿಐಟಿಯು ರಾಜ್ಯ ಅಧ್ಯಕ್ಷರಾದ ವರಲಕ್ಷ್ಮಿಯವರು ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, “ನಮ್ಮ ದೇಶದೊಳಗೆ ಪ್ರಜಾಪ್ರಭುತ್ವ ಇಲ್ಲದಾಗಿದೆ, ಯಾಕೆಂದರೆ ಸರ್ಕಾರ ಪ್ರಜೆಗಳಿಗೆ ಕೆಲಸ ಮಾಡುತ್ತಿಲ್ಲ. ಬದಲಿಗೆ ದೇಶದ ಬಂಡವಾಳಶಾಹಿಗಳಿಗೆ, ಕಾರ್ಪೋರೇಟ್ ಕಂಪನಿಗಳಿಗಾಗಿ, ವಿದೇಶಿ ಹೂಡಿಕೆದಾರರಿಗಾಗಿ ಕೆಲಸ ಮಾಡುತ್ತಿದೆ. ಅವರ ಪರವಾದ ಕಾನೂನುಗಳನ್ನು ಲೋಕಸಭೆಯಲ್ಲಿ ಜಾರಿಗೊಳಿಸಲಾಗುತ್ತಿದೆ. ಕಾರ್ಮಿಕರ ಸಾಮೂಹಿಕ ಚೌಕಾಶಿಯನ್ನು ಸರ್ಕಾರ ಇಲ್ಲದಾಗಿಸಿದೆ. ಕೊರೋನಾ ಸಮಯದಲ್ಲಿ ಜನರಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಶ್ರೀಮಂತರ ಪರವಾಗಿದೆ. ಇದರಿಂದ ಕಾರ್ಮಿಕರು ಕೆಲಸ ಮಾತ್ರವಲ್ಲ ಬದುಕನ್ನೇ ಕಳೆದುಕೊಳ್ಳುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಕಾರ್ಮಿಕರು, ಶ್ರಮಜೀವಿಗಳ ಹಕ್ಕುಗಳ ರಕ್ಷಣೆಗಾಗಿ-ಕೋವಿಡ್ ಸಂಕಷ್ಟ ಪರಿಹಾರಕ್ಕಾಗಿವಿಧಾನ ಸೌಧ ಚಲೋ

Posted by Naanu Gauri on Wednesday, September 23, 2020

ಕೊರೊನಾ ಬರುವುದಕ್ಕಿಂತ ಮುಂಚೆ ದೇಶದಲ್ಲಿ 28% ಬಡತನ ಇತ್ತು. ಲಾಕ್‌ಡೌನ್ ನಂತರ ಅದು ದುಪ್ಪಟ್ಟಾಗಿದೆ. ದೇಶದಲ್ಲಿ 14 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾಯಂ ಕೆಲಸ ಎಂಬದನ್ನು ಕಿತ್ತುಹಾಕಿ ಆ ಜಾಗದಲ್ಲಿ ಗುತ್ತಿಗೆ ಪದ್ದತಿ ತರಲಾಗುತ್ತಿದೆ. ಇದರಿಂದ ಕಾರ್ಮಿಕರು ತಮಗಿದ್ದ ಕಾನೂನುಬದ್ಧ ಹಕ್ಕುಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು-ಕಾರ್ಮಿಕರನ್ನು ಬೀದಿಪಾಲು ಮಾಡಿ ತಮಗೆ ಬೇಕಾದ ಮಸೂದೆಗಳಿಗೆ ಅಂಗೀಕಾರ ಪಡೆಯಲು ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ದೇಶದ 1% ಶ್ರೀಮಂತರಿಗಾಗಿ ದೇಶದ 99% ಜನರ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಜನರ ಕೈಗೆ ಸರ್ಕಾರ ನೇರ ನಗದು ನೀಡಬೇಕು. ಕಾರ್ಮಿಕರಿಗೆ ಹಣ ನೀಡಿದರೆ ಅವರು ಖರ್ಚು ಮಾಡುತ್ತಾರೆ. ಇದರಿಂದ ಉತ್ಪಾದನೆ ಹೆಚ್ಚಾಗುತ್ತದೆ, ಉದ್ಯೋಗಗಳು ಹೆಚ್ಚಾಗುತ್ತವೆ. ಆದರೆ ಸರ್ಕಾರ ಇದನ್ನು ಬಿಟ್ಟು ಬಂಡವಾಳಶಾಹಿಗಳಿಗೆ ಮಾತ್ರ ಹಣ ನೀಡುತ್ತಿದೆ. ಕೊಂಡುಕೊಳ್ಳಲು ಜನರ ಬಳಿ ಹಣವಿಲ್ಲದ ಮೇಲೆ ಉತ್ಪಾದನೆ ಮಾಡಿ ಏನು ಪ್ರಯೋಜನ? ಇಷ್ಟು ಸಾಮಾನ್ಯ ಜ್ಞಾನ ಸರ್ಕಾರಕ್ಕಿಲ್ಲವೇ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರ್ ಕಿಡಿಕಾರಿದ್ದಾರೆ.

ಕಾರ್ಮಿಕರ ಮಸೂದೆಗಳು ಮೊದಲು ವಿಚ್ಛೇದನಕ್ಕೆ ಅರ್ಜಿ ಹಾಕಿ ಮದುವೆ ಮಾಡಿದಂತೆ. ಮಾಲೀಕರನ್ನು ಕಾಪಾಡಲು ಕಾರ್ಮಿಕರ ಸಂಘಟನಾ ಹಕ್ಕನ್ನು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ಮಾಲೀಕರು ಕಾರ್ಮಿಕರ ಪರ ಕಾನೂನುಗಳು ಇರುವಾಗಲೇ ಉಲ್ಲಂಘನೆ ಮಾಡುತ್ತಾರೆ, ಇನ್ನು ಅವೂ ಇಲ್ಲದೆ ಇರುವಾಗಿನ ಅವಸ್ಥೆ ಅರ್ಥ ಮಾಡಿಕೊಳ್ಳಿ. ಇದೇ 28ಕ್ಕೆ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಸಿಐಟಿಯು ಬೆಂಬಲ ನೀಡುತ್ತದೆ
– ಮೀನಾಕ್ಷಿ ಸುಂದರ್

ಪ್ರತಿಭಟನಾ ಸ್ಥಳಕ್ಕೆ ಕಾರ್ಮಿಕ ಸಚಿವರು ಬರಬೇಕು, ತಮ್ಮ ಹಕ್ಕೊತ್ತಾಯಗಳನ್ನು ಆಲಿಸಬೇಕೆಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ.


ಇದನ್ನೂ ಓದಿ: ರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...