Homeಮುಖಪುಟವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

- Advertisement -
- Advertisement -

ಮುಂಬೈನ ವಲಸೆ ಕಾರ್ಮಿಕರಿಗಾಗಿ 99 ವರ್ಷದ ಅಜ್ಜಿಯೊಬ್ಬರು ಆಹಾರ ಪ್ಯಾಕೆಟ್‌ಗಳನ್ನು ಸಿದ್ಧಪಡಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆ ಅಜ್ಜಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

“ಕೆಲವರು ಹುಟ್ಟುತ್ತಲೇ ಮುದುಕರು, ಕೆಲವು ಸಾಯುವವರೆಗೂ ಯುವಜನರು” ಎಂಬ ಮಾತನ್ನು ಈ ಅಜ್ಜಿ ನಿಜ ಮಾಡಿದ್ದಾರೆ. ಶಕ್ತಿವಂತರು, ಸಿರಿವಂತರು ತಾವಾಯಿತು, ತಮ್ಮ ಪಾಡಾಯಿತು ಎಂದಿರುವಾಗ ಹಸಿದವರಿಗಾಗಿ ಈ 99 ವರ್ಷದ ಅಜ್ಜಿಯ ಶ್ರಮವು ಮಹತ್ವವಾದುದು ಎಂಬುದನ್ನು ನೆಟ್ಟಿಗರು ಒತ್ತಿ ಹೇಳಿದ್ದಾರೆ.

ಈ ವಿಡಿಯೋವನ್ನು ಜಹೀದ್ ಎಫ್. ಇಬ್ರಾಹಿಂ ಅವರು ಟ್ವಿಟ್ಟರ್ “ನನ್ನ 99 ವರ್ಷದ ಫುಪ್ಪಿ (ಚಿಕ್ಕಮ್ಮ) ಮುಂಬೈನ ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ಗಳನ್ನು ತಯಾರಿಸುತ್ತಿದ್ದಾಳೆ” ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವೃದ್ಧ ಮಹಿಳೆ ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ತನ್ನ ಪಾತ್ರವನ್ನು ಹೇಗೆ ಶ್ರದ್ಧೆಯಿಂದ ಮಾಡುತ್ತಿದ್ದಾಳೆ ಎಂದು ವೀಡಿಯೊ ವಿವರಿಸುತ್ತದೆ.

ವೀಡಿಯೊದಲ್ಲಿ ಅಜ್ಜಿಯು ಸಾವಧಾನದಿಂದ ರೊಟ್ಟಿ ಮತ್ತು ಪಲ್ಯವನ್ನು ಅಲ್ಯೂಮಿನಿಯಂ ಪೇಪರ್‌ನಲ್ಲಿ ಕಟ್ಟಿ, ನಂತರ ಅದನ್ನು ಇತರ ಪ್ಯಾಕೆಟ್‌ಗಳೊಂದಿಗೆ ಇಡುವುದನ್ನು ಕಾಣಬಹುದಾಗಿದೆ.

ಮೇ 29ರಂದು ಹಂಚಿಕೊಂಡಿರುವ ಇದುವರೆಗೂ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.  22,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ ಮತ್ತು 3,000 ರಿಟ್ವೀಟ್‌ಗಳನ್ನು ಹೊಂದಿದೆ.

“ಅವರಿಗೆ ಹ್ಯಾಟ್ಸ್ ಆಫ್. ಅವರ ಉತ್ತಮ ಆರೋಗ್ಯ ಮತ್ತು ದೀರ್ಘ ಜೀವನವನ್ನು ಬಯಸುತ್ತೇನೆ” ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ. “ನಿಮ್ಮ ಫಪ್ಪಿ ಪ್ರೀತಿ,” ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ. “ಎಂತಹ ಅದ್ಭುತ ವ್ಯಕ್ತಿ!” ಎಂದು ಮೂರನೇ ವ್ಯಕ್ತಿ ತಿಳಿಸಿದರೆ “ಅತ್ಯಂತ ಸುಂದರ. ಅವಳ ಬಗ್ಗೆ ಪ್ರೀತಿ ಮತ್ತು ಗೌರವ” ಎಂದು ನಾಲ್ಕನೆಯವರು ಟ್ವೀಟ್ ಮಾಡಿದ್ದಾರೆ. “ಕ್ರಿಯೆಯಲ್ಲಿ ಪ್ರೀತಿ. ವಿಶ್ವದ ಪ್ರತಿಯೊಬ್ಬರೂ ಪ್ರೀತಿಯನ್ನು ತೋರಿಸಬೇಕೆಂದು ಹಾರೈಸುತ್ತೇನೆ” ಎಂದು ಐದನೆಯವರು ಟ್ವೀಟ್ ಮಾಡಿದ್ದಾರೆ.

ಇವುಗಳನ್ನು ಜಹೀದ್ ಎಫ್. ಇಬ್ರಾಹಿಂರವರು ತಮ್ಮ ಚಿಕ್ಕಮ್ಮನಿಗೆ ತೋರಿಸಿದ್ದು, ಟ್ವಿಟ್ಟರ್‌ನಲ್ಲಿ ವ್ಯಕ್ತಪಡಿಸಿದ ಅತಿಯಾದ ಪ್ರೀತಿಯಿಂದ ಅವಳು ವಿನಮ್ರಳಾಗಿದ್ದಾಳೆ ಮತ್ತು ಎಲ್ಲರಿಗೂ ಧನ್ಯವಾದಗಳು ಎಂದು ಮತ್ತೊಂದು ಪೋಸ್ಟ್‌ ಮಾಡಿದ್ದಾರೆ.

“ನಿಮ್ಮ ಫುಪ್ಪಿಗೆ ತುಂಬಾ ಪ್ರೀತಿ. ಅವರು ಸ್ಫೂರ್ತಿ ಎಂದು ದಯವಿಟ್ಟು ಅವರಿಗೆ ಹೇಳಿ ”ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ ಮತ್ತು ಇತರರು ಅದೇ ಕಲ್ಪನೆಯನ್ನು ವ್ಯಕ್ತಪಡಿಸಿದ್ದಾರೆ. ಈ ವಯಸ್ಸಾದ ಮಹಿಳೆ ನಿಜಕ್ಕೂ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಬರೆದಿದ್ದಾರೆ.

ಅವರ ಬಗ್ಗೆ ನಿಮಗೇನು ಅನಿಸುತ್ತದೆ?


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...