Homeಮುಖಪುಟವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

- Advertisement -
- Advertisement -

ಮುಂಬೈನ ವಲಸೆ ಕಾರ್ಮಿಕರಿಗಾಗಿ 99 ವರ್ಷದ ಅಜ್ಜಿಯೊಬ್ಬರು ಆಹಾರ ಪ್ಯಾಕೆಟ್‌ಗಳನ್ನು ಸಿದ್ಧಪಡಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆ ಅಜ್ಜಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

“ಕೆಲವರು ಹುಟ್ಟುತ್ತಲೇ ಮುದುಕರು, ಕೆಲವು ಸಾಯುವವರೆಗೂ ಯುವಜನರು” ಎಂಬ ಮಾತನ್ನು ಈ ಅಜ್ಜಿ ನಿಜ ಮಾಡಿದ್ದಾರೆ. ಶಕ್ತಿವಂತರು, ಸಿರಿವಂತರು ತಾವಾಯಿತು, ತಮ್ಮ ಪಾಡಾಯಿತು ಎಂದಿರುವಾಗ ಹಸಿದವರಿಗಾಗಿ ಈ 99 ವರ್ಷದ ಅಜ್ಜಿಯ ಶ್ರಮವು ಮಹತ್ವವಾದುದು ಎಂಬುದನ್ನು ನೆಟ್ಟಿಗರು ಒತ್ತಿ ಹೇಳಿದ್ದಾರೆ.

ಈ ವಿಡಿಯೋವನ್ನು ಜಹೀದ್ ಎಫ್. ಇಬ್ರಾಹಿಂ ಅವರು ಟ್ವಿಟ್ಟರ್ “ನನ್ನ 99 ವರ್ಷದ ಫುಪ್ಪಿ (ಚಿಕ್ಕಮ್ಮ) ಮುಂಬೈನ ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ಗಳನ್ನು ತಯಾರಿಸುತ್ತಿದ್ದಾಳೆ” ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವೃದ್ಧ ಮಹಿಳೆ ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ತನ್ನ ಪಾತ್ರವನ್ನು ಹೇಗೆ ಶ್ರದ್ಧೆಯಿಂದ ಮಾಡುತ್ತಿದ್ದಾಳೆ ಎಂದು ವೀಡಿಯೊ ವಿವರಿಸುತ್ತದೆ.

ವೀಡಿಯೊದಲ್ಲಿ ಅಜ್ಜಿಯು ಸಾವಧಾನದಿಂದ ರೊಟ್ಟಿ ಮತ್ತು ಪಲ್ಯವನ್ನು ಅಲ್ಯೂಮಿನಿಯಂ ಪೇಪರ್‌ನಲ್ಲಿ ಕಟ್ಟಿ, ನಂತರ ಅದನ್ನು ಇತರ ಪ್ಯಾಕೆಟ್‌ಗಳೊಂದಿಗೆ ಇಡುವುದನ್ನು ಕಾಣಬಹುದಾಗಿದೆ.

ಮೇ 29ರಂದು ಹಂಚಿಕೊಂಡಿರುವ ಇದುವರೆಗೂ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.  22,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ ಮತ್ತು 3,000 ರಿಟ್ವೀಟ್‌ಗಳನ್ನು ಹೊಂದಿದೆ.

“ಅವರಿಗೆ ಹ್ಯಾಟ್ಸ್ ಆಫ್. ಅವರ ಉತ್ತಮ ಆರೋಗ್ಯ ಮತ್ತು ದೀರ್ಘ ಜೀವನವನ್ನು ಬಯಸುತ್ತೇನೆ” ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ. “ನಿಮ್ಮ ಫಪ್ಪಿ ಪ್ರೀತಿ,” ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ. “ಎಂತಹ ಅದ್ಭುತ ವ್ಯಕ್ತಿ!” ಎಂದು ಮೂರನೇ ವ್ಯಕ್ತಿ ತಿಳಿಸಿದರೆ “ಅತ್ಯಂತ ಸುಂದರ. ಅವಳ ಬಗ್ಗೆ ಪ್ರೀತಿ ಮತ್ತು ಗೌರವ” ಎಂದು ನಾಲ್ಕನೆಯವರು ಟ್ವೀಟ್ ಮಾಡಿದ್ದಾರೆ. “ಕ್ರಿಯೆಯಲ್ಲಿ ಪ್ರೀತಿ. ವಿಶ್ವದ ಪ್ರತಿಯೊಬ್ಬರೂ ಪ್ರೀತಿಯನ್ನು ತೋರಿಸಬೇಕೆಂದು ಹಾರೈಸುತ್ತೇನೆ” ಎಂದು ಐದನೆಯವರು ಟ್ವೀಟ್ ಮಾಡಿದ್ದಾರೆ.

ಇವುಗಳನ್ನು ಜಹೀದ್ ಎಫ್. ಇಬ್ರಾಹಿಂರವರು ತಮ್ಮ ಚಿಕ್ಕಮ್ಮನಿಗೆ ತೋರಿಸಿದ್ದು, ಟ್ವಿಟ್ಟರ್‌ನಲ್ಲಿ ವ್ಯಕ್ತಪಡಿಸಿದ ಅತಿಯಾದ ಪ್ರೀತಿಯಿಂದ ಅವಳು ವಿನಮ್ರಳಾಗಿದ್ದಾಳೆ ಮತ್ತು ಎಲ್ಲರಿಗೂ ಧನ್ಯವಾದಗಳು ಎಂದು ಮತ್ತೊಂದು ಪೋಸ್ಟ್‌ ಮಾಡಿದ್ದಾರೆ.

“ನಿಮ್ಮ ಫುಪ್ಪಿಗೆ ತುಂಬಾ ಪ್ರೀತಿ. ಅವರು ಸ್ಫೂರ್ತಿ ಎಂದು ದಯವಿಟ್ಟು ಅವರಿಗೆ ಹೇಳಿ ”ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ ಮತ್ತು ಇತರರು ಅದೇ ಕಲ್ಪನೆಯನ್ನು ವ್ಯಕ್ತಪಡಿಸಿದ್ದಾರೆ. ಈ ವಯಸ್ಸಾದ ಮಹಿಳೆ ನಿಜಕ್ಕೂ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಬರೆದಿದ್ದಾರೆ.

ಅವರ ಬಗ್ಗೆ ನಿಮಗೇನು ಅನಿಸುತ್ತದೆ?


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....