Homeಮುಖಪುಟಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಕ್ಕಾಗಿ ತನ್ನ ವಿಷನ್ ಡಾಕ್ಯುಮೆಂಟ್‌ನಲ್ಲಿ ನಿರುದ್ಯೋಗ ಸೇರಿದಂತೆ ಯುವಕರಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

“ಭಾರತಕ್ಕೆ ಹೊಸ ದೃಷ್ಟಿಕೋನ ಬೇಕು ಎಂಬುವುದು ನಮ್ಮ ತಿಳುವಳಿಕೆ ಮತ್ತು ನಂಬಿಕೆ. ಭಾರತದ ಹೊಸ ದೃಷ್ಟಿಕೋನಕ್ಕಾಗಿ, ನೀವು ಉತ್ತರ ಪ್ರದೇಶದಿಂದ ಪ್ರಾರಂಭಿಸಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

“ಉದ್ಯೋಗ ಸೃಷ್ಟಿ ಮಾಡುವುದನ್ನು ಮರೆತುಬಿಡಿ, ಇರುವ ಉದ್ಯೋಗವನ್ನೇ ಯುವಕರು ಇಂದು ಕಳೆದುಕೊಂಡಿದ್ದಾರೆ. ಯಾಕೆಂದರೆ ಎಲ್ಲಾ ಕೆಲಸಗಳನ್ನು 2-3 ಕೈಗಾರಿಕೋದ್ಯಮಿಗಳಿಗೆ ನೀಡಲಾಗುತ್ತಿದೆ. ಆದ್ದರಿಂದ, ಕಾಂಗ್ರೆಸ್ ಯುಪಿಯ ಯುವಕರನ್ನು ಮಾತನಾಡಿ ನಾವು ನಿಮಗೆ ಹೇಗೆ ಉದ್ಯೋಗ ಸೃಷ್ಟಿಸಬಹುದು ಎಂದು ನಿರ್ಧರಿಸಿದೆ” ಎಂದು ದೆಹಲಿಯ ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ವಿಷನ್ ಡಾಕ್ಯುಮೆಂಟ್ ಅನ್ನು ಬಿಡುಗಡೆ ಮಾಡುತ್ತಾ ರಾಹುಲ್ ಗಾಂಧಿ ಹೇಳಿದ್ದಾರೆ.

ವಿಷನ್‌ ಡಾಕ್ಯುಮಂಟ್‌ ಅನ್ನು ಯುಪಿಯ ಯುವಕರೊಂದಿಗೆ ಮಾತನಾಡಿ ಮತ್ತು ಸಂವಾದ ನಡೆಸಿದ ನಂತರ ಯುವಜನರಿಗಾಗಿ ಮಾಡಲಾಗಿದೆ ಎಂದು ಕಾಂಗ್ರೆಸ್‌‌ ಹೇಳಿದೆ.

“ಅವರು ಎದುರಿಸುತ್ತಿರುವ ಕಷ್ಟಗಳು ಮತ್ತು ಅವರ ಸಮಸ್ಯೆಗಳೇನು ಎಂಬುದನ್ನು ನಾವು ನೋಡಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳು ಬಂದು 25 ಲಕ್ಷ ಉದ್ಯೋಗಗಳು, 30 ಲಕ್ಷ ಉದ್ಯೋಗಗಳು ಎಂದು ಭರವಸೆ ನೀಡುತ್ತವೆ. ಆದರೆ ಅವರು ಅದನ್ನು ಹೇಗೆ ಮಾಡುತ್ತಾರೆ ಎಂಬುದನ್ನು ಯಾರೂ ವಿವರವಾಗಿ ವಿವರಿಸುವುದಿಲ್ಲ. ಕಾಂಗ್ರೆಸ್ ತನ್ನ ಯುವ ಪ್ರಣಾಳಿಕೆಯಲ್ಲಿ ಇದನ್ನು ಮಾಡಿದೆ” ಎಂದು ಪಕ್ಷದ ಉತ್ತರ ಪ್ರದೇಶದ ಉಸ್ತುವಾರಿ, ಪಕ್ಷದ ಪ್ರಧಾನ ಕಾರ್ಯದರ್ಶಿಯು ಆಗಿರುವ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ: ಬಿಜೆಪಿ ಬಿಟ್ಟು ಏಕಾಂಗಿ ಸ್ಪರ್ಧೆ ಘೋಷಿಸಿದ ಜೆಡಿಯು

“ಇಂದು ಯುಪಿಯಲ್ಲಿ ಯುವಕರು ಉದ್ಯೋಗ ಪಡೆಯುವಲ್ಲಿ ಅಪಾರ ಸಮಸ್ಯೆ ಎದುರಿಸುತ್ತಿದ್ದಾರೆ. ಅವರು ಅರ್ಹರಾಗಿದ್ದರೂ ನಿರುದ್ಯೋಗಿಗಳಾಗಿದ್ದಾರೆ. ಅವರು ಬಯಸಿದ ಮತ್ತು ಅಗತ್ಯವಿರುವ ಉದ್ಯೋಗವನ್ನು ಪಡೆಯಲು ನಾವು ಅವರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಷ್ಟೇ ಅಲ್ಲದೆ, ಪರೀಕ್ಷೆಯ ಸಮಯದಲ್ಲಿ ಯುವಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸುತ್ತಿದ್ದೇವೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಗುರಿ ಹೊಂದಿದ್ದೇವೆ. ಪರೀಕ್ಷೆಗಳು ಮತ್ತು ವೇಳಾಪಟ್ಟಿಗಳನ್ನು ಗಮನದಲ್ಲಿಟ್ಟುಕೊಂಡು ಉದ್ಯೋಗ ಕ್ಯಾಲೆಂಡರ್ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ. ಇದು ಪ್ರಮುಖ ವಿಷಯವಾಗಿದ್ದು, ಹೆಚ್ಚಿನ ಅಗತ್ಯವಿದೆ. ನಾವು ಉತ್ತರ ಪ್ರದೇಶದಲ್ಲಿ ವಾರ್ಷಿಕವಾಗಿ ಯುವ ಉತ್ಸವವನ್ನು ಆಯೋಜಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

2014 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಬಿಜೆಪಿ ಪ್ರಸ್ತಾಪಿಸಿದ ಪ್ರಣಾಳಿಕೆಯಾದ ‘ದೃಷ್ಟಿ’ಯು ಸಂಪೂರ್ಣವಾಗಿ ದುರಂತವಾಗಿದೆ ಎಂದು ಉಭಯ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ:ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

“ಭಾರತ ಹೊಂದಿರುವ ಜನಸಂಖ್ಯಾ ಲಾಭಾಂಶವನ್ನು ಅವರು ಜನಸಂಖ್ಯಾ ವಿಪತ್ತಾಗಿ ಪರಿವರ್ತಿಸುತ್ತಿದ್ದಾರೆ. ಬಿಜೆಪಿಯ ಕೆಲವು ನಾಯಕರು ಕೂಡಾ ಏನೋ ಒಂದು ತಪ್ಪಾಗಿದೆ ಎಂದು ಒಪ್ಪಿಕೊಳ್ಳುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇಬ್ಬರೂ ಜಂಟಿಯಾಗಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅಪರೂಪದ ಸಂದರ್ಭಗಳಲ್ಲಿ ಇದೂ ಒಂದಾಗಿದೆ.

ಉತ್ತರ ಪ್ರದೇಶದಲ್ಲಿ ಸಂಪೂರ್ಣವಾಗಿ ಕುಸಿದಿರುವ ಕಾಂಗ್ರೆಸ್, ಯುವಕರು ಮತ್ತು ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೆ ಹೋಗುತ್ತಿದೆ. ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ 40% ದಷ್ಟು ಟಿಕೆಟ್‌ಗಳನ್ನು ಮೀಸಲಿಡುವುದಾಗಿ ಪಕ್ಷ ಘೋಷಿಸಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ:ಯುಪಿ ಚುನಾವಣೆ-2022: ಏಕಾಂಗಿ ಸ್ಪರ್ಧೆ ಎಂದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...