Homeಮುಖಪುಟಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಕ್ಕಾಗಿ ತನ್ನ ವಿಷನ್ ಡಾಕ್ಯುಮೆಂಟ್‌ನಲ್ಲಿ ನಿರುದ್ಯೋಗ ಸೇರಿದಂತೆ ಯುವಕರಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

“ಭಾರತಕ್ಕೆ ಹೊಸ ದೃಷ್ಟಿಕೋನ ಬೇಕು ಎಂಬುವುದು ನಮ್ಮ ತಿಳುವಳಿಕೆ ಮತ್ತು ನಂಬಿಕೆ. ಭಾರತದ ಹೊಸ ದೃಷ್ಟಿಕೋನಕ್ಕಾಗಿ, ನೀವು ಉತ್ತರ ಪ್ರದೇಶದಿಂದ ಪ್ರಾರಂಭಿಸಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

“ಉದ್ಯೋಗ ಸೃಷ್ಟಿ ಮಾಡುವುದನ್ನು ಮರೆತುಬಿಡಿ, ಇರುವ ಉದ್ಯೋಗವನ್ನೇ ಯುವಕರು ಇಂದು ಕಳೆದುಕೊಂಡಿದ್ದಾರೆ. ಯಾಕೆಂದರೆ ಎಲ್ಲಾ ಕೆಲಸಗಳನ್ನು 2-3 ಕೈಗಾರಿಕೋದ್ಯಮಿಗಳಿಗೆ ನೀಡಲಾಗುತ್ತಿದೆ. ಆದ್ದರಿಂದ, ಕಾಂಗ್ರೆಸ್ ಯುಪಿಯ ಯುವಕರನ್ನು ಮಾತನಾಡಿ ನಾವು ನಿಮಗೆ ಹೇಗೆ ಉದ್ಯೋಗ ಸೃಷ್ಟಿಸಬಹುದು ಎಂದು ನಿರ್ಧರಿಸಿದೆ” ಎಂದು ದೆಹಲಿಯ ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ವಿಷನ್ ಡಾಕ್ಯುಮೆಂಟ್ ಅನ್ನು ಬಿಡುಗಡೆ ಮಾಡುತ್ತಾ ರಾಹುಲ್ ಗಾಂಧಿ ಹೇಳಿದ್ದಾರೆ.

ವಿಷನ್‌ ಡಾಕ್ಯುಮಂಟ್‌ ಅನ್ನು ಯುಪಿಯ ಯುವಕರೊಂದಿಗೆ ಮಾತನಾಡಿ ಮತ್ತು ಸಂವಾದ ನಡೆಸಿದ ನಂತರ ಯುವಜನರಿಗಾಗಿ ಮಾಡಲಾಗಿದೆ ಎಂದು ಕಾಂಗ್ರೆಸ್‌‌ ಹೇಳಿದೆ.

“ಅವರು ಎದುರಿಸುತ್ತಿರುವ ಕಷ್ಟಗಳು ಮತ್ತು ಅವರ ಸಮಸ್ಯೆಗಳೇನು ಎಂಬುದನ್ನು ನಾವು ನೋಡಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳು ಬಂದು 25 ಲಕ್ಷ ಉದ್ಯೋಗಗಳು, 30 ಲಕ್ಷ ಉದ್ಯೋಗಗಳು ಎಂದು ಭರವಸೆ ನೀಡುತ್ತವೆ. ಆದರೆ ಅವರು ಅದನ್ನು ಹೇಗೆ ಮಾಡುತ್ತಾರೆ ಎಂಬುದನ್ನು ಯಾರೂ ವಿವರವಾಗಿ ವಿವರಿಸುವುದಿಲ್ಲ. ಕಾಂಗ್ರೆಸ್ ತನ್ನ ಯುವ ಪ್ರಣಾಳಿಕೆಯಲ್ಲಿ ಇದನ್ನು ಮಾಡಿದೆ” ಎಂದು ಪಕ್ಷದ ಉತ್ತರ ಪ್ರದೇಶದ ಉಸ್ತುವಾರಿ, ಪಕ್ಷದ ಪ್ರಧಾನ ಕಾರ್ಯದರ್ಶಿಯು ಆಗಿರುವ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ: ಬಿಜೆಪಿ ಬಿಟ್ಟು ಏಕಾಂಗಿ ಸ್ಪರ್ಧೆ ಘೋಷಿಸಿದ ಜೆಡಿಯು

“ಇಂದು ಯುಪಿಯಲ್ಲಿ ಯುವಕರು ಉದ್ಯೋಗ ಪಡೆಯುವಲ್ಲಿ ಅಪಾರ ಸಮಸ್ಯೆ ಎದುರಿಸುತ್ತಿದ್ದಾರೆ. ಅವರು ಅರ್ಹರಾಗಿದ್ದರೂ ನಿರುದ್ಯೋಗಿಗಳಾಗಿದ್ದಾರೆ. ಅವರು ಬಯಸಿದ ಮತ್ತು ಅಗತ್ಯವಿರುವ ಉದ್ಯೋಗವನ್ನು ಪಡೆಯಲು ನಾವು ಅವರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಷ್ಟೇ ಅಲ್ಲದೆ, ಪರೀಕ್ಷೆಯ ಸಮಯದಲ್ಲಿ ಯುವಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸುತ್ತಿದ್ದೇವೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಗುರಿ ಹೊಂದಿದ್ದೇವೆ. ಪರೀಕ್ಷೆಗಳು ಮತ್ತು ವೇಳಾಪಟ್ಟಿಗಳನ್ನು ಗಮನದಲ್ಲಿಟ್ಟುಕೊಂಡು ಉದ್ಯೋಗ ಕ್ಯಾಲೆಂಡರ್ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ. ಇದು ಪ್ರಮುಖ ವಿಷಯವಾಗಿದ್ದು, ಹೆಚ್ಚಿನ ಅಗತ್ಯವಿದೆ. ನಾವು ಉತ್ತರ ಪ್ರದೇಶದಲ್ಲಿ ವಾರ್ಷಿಕವಾಗಿ ಯುವ ಉತ್ಸವವನ್ನು ಆಯೋಜಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

2014 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಬಿಜೆಪಿ ಪ್ರಸ್ತಾಪಿಸಿದ ಪ್ರಣಾಳಿಕೆಯಾದ ‘ದೃಷ್ಟಿ’ಯು ಸಂಪೂರ್ಣವಾಗಿ ದುರಂತವಾಗಿದೆ ಎಂದು ಉಭಯ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ:ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

“ಭಾರತ ಹೊಂದಿರುವ ಜನಸಂಖ್ಯಾ ಲಾಭಾಂಶವನ್ನು ಅವರು ಜನಸಂಖ್ಯಾ ವಿಪತ್ತಾಗಿ ಪರಿವರ್ತಿಸುತ್ತಿದ್ದಾರೆ. ಬಿಜೆಪಿಯ ಕೆಲವು ನಾಯಕರು ಕೂಡಾ ಏನೋ ಒಂದು ತಪ್ಪಾಗಿದೆ ಎಂದು ಒಪ್ಪಿಕೊಳ್ಳುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇಬ್ಬರೂ ಜಂಟಿಯಾಗಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅಪರೂಪದ ಸಂದರ್ಭಗಳಲ್ಲಿ ಇದೂ ಒಂದಾಗಿದೆ.

ಉತ್ತರ ಪ್ರದೇಶದಲ್ಲಿ ಸಂಪೂರ್ಣವಾಗಿ ಕುಸಿದಿರುವ ಕಾಂಗ್ರೆಸ್, ಯುವಕರು ಮತ್ತು ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೆ ಹೋಗುತ್ತಿದೆ. ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ 40% ದಷ್ಟು ಟಿಕೆಟ್‌ಗಳನ್ನು ಮೀಸಲಿಡುವುದಾಗಿ ಪಕ್ಷ ಘೋಷಿಸಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ:ಯುಪಿ ಚುನಾವಣೆ-2022: ಏಕಾಂಗಿ ಸ್ಪರ್ಧೆ ಎಂದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...