Homeಮುಖಪುಟಸೇನೆಯನ್ನು ತೊರೆದ ‘Gay' ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸೇನೆಯನ್ನು ತೊರೆದ ‘Gay’ ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ರಕ್ಷಣಾ ಸಚಿವಾಲಯ ನಿಲುವು ತಾಳಿದೆ ಎಂಬ ಆಕ್ಷೇಪಗಳು ವ್ಯಕ್ತವಾಗಿವೆ.

- Advertisement -
- Advertisement -

ಸೇವೆಯನ್ನು ತೊರೆದ ಭಾರತೀಯ ಸೇನೆಯ ಮೇಜರ್‌ ಜೀವನ ಕುರಿತ ಚಿತ್ರಕಥೆಯನ್ನು ರಕ್ಷಣಾ ಸಚಿವಾಲಯ ತಿರಸ್ಕರಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಲಾಗಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಸೈನ್ಯದಲ್ಲಿ ತನ್ನ ಸ್ಥಾನವನ್ನು ತೊರೆಯಬೇಕಾದ ಸೈನಿಕನ ನೈಜ ಜೀವನದ ಹೋರಾಟ ಕಥನವನ್ನು ಚಿತ್ರನಿರ್ಮಾಪಕ ಓನಿರ್ ಅವರು ಮುಂದಿನ ಚಲನಚಿತ್ರವಾಗಿ ತರಲು ಇಚ್ಛಿಸಿದ್ದಾರೆ. ಲೈಂಗಿಕ ಅಲ್ಪಸಂಖ್ಯಾತರಾಗಿದ್ದಕ್ಕೆ ಅವರು ಸೇನೆಯಲ್ಲಿ ಮುಂದುವರಿಯಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಈ ಚಲನಚಿತ್ರವು ಓನಿರ್‌ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ‘ಐ ಆಮ್‌’ನ ಮುಂದುವರಿದ ಭಾಗವಾಗಿರಬಹುದು. ‘ಐ ಆಮ್‌’ ಸಿನಿಮಾವು ಏಕ ತಾಯ್ತನ, ಸಲಿಂಗಕಾಮ ಮತ್ತು ಇತರ ಸಾಮಾಜಿಕ ಸಮಸ್ಯೆಗಳಂತಹ ವಿಷಯಗಳ ಕುರಿತು ಬೆಳಕು ಚೆಲ್ಲುತ್ತದೆ.

ಈ ವಿಷಯದ ಕುರಿತು TOI ವರದಿಗಾರ ಮಾಡಿರುವ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ ಓನೀರ್, “ಭಾರತೀಯ ಸೇನೆಯಲ್ಲಿ ಸಲಿಂಗಕಾಮವು ಇನ್ನೂ ಕಾನೂನುಬಾಹಿರವಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸಮಾಜ ನಮ್ಮನ್ನು ಸಮಾನವಾಗಿ ಪರಿಗಣಿಸಲು ಬಹಳ ದೂರದಲ್ಲಿದ್ದೇವೆ” ಎಂದು ಮೈ ಬ್ರದರ್ ನಿರ್ದೇಶಕ ನಿಖಿಲ್ ಬರೆದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, “ನನ್ನ ಸೇನೆಯ ಬಗ್ಗೆ ನನಗೆ ಅತ್ಯಂತ ಗೌರವ ಮತ್ತು ಪ್ರೀತಿ ಇದೆ. ದೇಶಕ್ಕೆ ಸೇವೆ ಸಲ್ಲಿಸಲು ಬಯಸುವ ಯಾರನ್ನೂ ಲೈಂಗಿಕತೆಯ ಕಾರಣದಿಂದ ಸೇನೆ ತಾರತಮ್ಯ ಮಾಡಬಾರದು ಎಂದು ನಾನು ಬಯಸುತ್ತೇನೆ” ಎಂದು ಓನಿರ್ ತಿಳಿಸಿದ್ದಾರೆ.

ಜನವರಿ 19ರಂದು ಸೇನೆಯ ಕಾರ್ಯತಂತ್ರದ ಸಂವಹನ ವಿಭಾಗದ ಹೆಚ್ಚುವರಿ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಕರ್ನಲ್ ಸಚಿನ್ ಉಜ್ವಾಲ್ ಅವರಿಂದ ಒನಿರ್ ಇಮೇಲ್ ಸ್ವೀಕರಿಸಿದ್ದಾರೆ ಎಂದು ಟೈಮ್ಸ್ ಆಫ್‌ ಇಂಡಿಯಾ ವರದಿ ಹೇಳುತ್ತದೆ.

“ಡಿಸೆಂಬರ್ 16, 2021ರಂದು ಇಮೇಲ್ ಮೂಲಕ ಸ್ವೀಕರಿಸಿದ ಸ್ಕ್ರಿಪ್ಟ್‌ನ ವಿಷಯವನ್ನು ವಿಶ್ಲೇಷಿಸಲಾಗಿದೆ” ಎಂದು ಉಜ್ವಾಲ್‌ ಹೇಳಿದ್ದಾರೆ. “ಸ್ಕ್ರಿಪ್ಟ್ ಅನ್ನು ಆರ್ಮಿಯಿಂದ ತೆರವುಗೊಳಿಸಲಾಗಿಲ್ಲ ಎಂದು ತಿಳಿಸಲು ವಿಷಾದಿಸುತ್ತೇವೆ” ಎಂದು ತಿಳಿಸಿದ್ದಾರೆ.

ಜುಲೈ 2020ರಲ್ಲಿ, ರಕ್ಷಣಾ ಸಚಿವಾಲಯವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್‌ಗೆ ಪತ್ರ ಬರೆದಿರುವುದಾಗಿ ವರದಿಯಾಗಿತ್ತು. ಸೇನೆಯ ಮೇಲೆ ಯಾವುದೇ ಚಲನಚಿತ್ರ, ಸಾಕ್ಷ್ಯಚಿತ್ರ ಅಥವಾ ವೆಬ್ ಸರಣಿಯನ್ನು ಪ್ರಸಾರ ಮಾಡುವ ಮೊದಲು ರಕ್ಷಣಾ ಸಚಿವಾಲಯದಿಂದ “ನಿರಾಕ್ಷೇಪಣೆ ಪ್ರಮಾಣಪತ್ರ” ಪಡೆಯಲು ಪ್ರೊಡಕ್ಷನ್ ಹೌಸ್‌ಗಳಿಗೆ ಸಲಹೆ ನೀಡಬೇಕೆಂದು ಪತ್ರ ಸೂಚಿಸಿತ್ತು.

ರಕ್ಷಣಾ ಪಡೆಗಳ ಚಿತ್ರಣವನ್ನು ವಿರೂಪಗೊಳಿಸುವ ಮತ್ತು ರಕ್ಷಣಾ ಸಿಬ್ಬಂದಿ, ಅನುಭವಿಗಳ ಭಾವನೆಗಳನ್ನು ಘಾಸಿಗೊಳಿಸುವ ಘಟನೆಗಳನ್ನು ಮೊಟಕುಗೊಳಿಸುವ ಉದ್ದೇಶ ಈ ಸೂಚನೆಯ ಹಿಂದಿದೆ ಎನ್ನಲಾಗಿತ್ತು.

ಭಾರತೀಯ ಸೇನಾ ಸಿಬ್ಬಂದಿ ಮತ್ತು ಸೇನಾ ಸಮವಸ್ತ್ರವನ್ನು “ಅವಮಾನಕರ ರೀತಿಯಲ್ಲಿ” ಚಿತ್ರಿಸಿರುವ ಬಗ್ಗೆ ತೀವ್ರ ಆಕ್ಷೇಪಣೆಗಳನ್ನು ಎತ್ತುವ ಕೆಲವು ದೂರುಗಳನ್ನು ರಕ್ಷಣಾ ಸಚಿವಾಲಯ ಸ್ವೀಕರಿಸಿತ್ತು.

ಹಿಂದೆ ಪ್ರಸಾರವಾದ ವೆಬ್ ಸರಣಿಗಳಲ್ಲಿ ಸೇನೆಗೆ ಸಂಬಂಧಿಸಿದ ದೃಶ್ಯಗಳು ವಾಸ್ತವದಿಂದ ದೂರವಾಗಿದ್ದು ಸಶಸ್ತ್ರ ಪಡೆಗಳ ಕುರಿತು ವಿಕೃತ ಚಿತ್ರಣವನ್ನು ಪ್ರಸ್ತುತಪಡಿಸಲಾಗಿದೆ ಎಂದು  ಮೂಲಗಳು ವರದಿ ಮಾಡಿದ್ದವು.

ಹೀಗಾಗಿ “ಆಕ್ಷೇಪಣೆಯಿಲ್ಲದ ಪ್ರಮಾಣಪತ್ರ” ಪಡೆಯಲು ಓನೀರ್ ಅವರು ಚಲನಚಿತ್ರ ಸ್ಕ್ರಿಪ್ಟ್ ಅನ್ನು ಸೇನೆಗೆ ಸಲ್ಲಿಸಿದ್ದರು. ಸೇನೆಯು ಚಲನಚಿತ್ರ ಚಿತ್ರಕತೆಯನ್ನು ರದ್ದುಗೊಳಿಸಿದ ವರದಿಗೆ ಹಲವು ಜನರು ಪ್ರತಿಕ್ರಿಯೆಗಳನ್ನು ಟ್ವಿಟ್ಟರ್‌ನಲ್ಲಿ ನೀಡಿದ್ದಾರೆ. ಸೇನೆಯ ನಿಲುವು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ.

ಇದನ್ನೂ ಓದಿರಿ: ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...