Homeಮುಖಪುಟಸೇನೆಯನ್ನು ತೊರೆದ ‘Gay' ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸೇನೆಯನ್ನು ತೊರೆದ ‘Gay’ ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ರಕ್ಷಣಾ ಸಚಿವಾಲಯ ನಿಲುವು ತಾಳಿದೆ ಎಂಬ ಆಕ್ಷೇಪಗಳು ವ್ಯಕ್ತವಾಗಿವೆ.

- Advertisement -
- Advertisement -

ಸೇವೆಯನ್ನು ತೊರೆದ ಭಾರತೀಯ ಸೇನೆಯ ಮೇಜರ್‌ ಜೀವನ ಕುರಿತ ಚಿತ್ರಕಥೆಯನ್ನು ರಕ್ಷಣಾ ಸಚಿವಾಲಯ ತಿರಸ್ಕರಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಲಾಗಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಸೈನ್ಯದಲ್ಲಿ ತನ್ನ ಸ್ಥಾನವನ್ನು ತೊರೆಯಬೇಕಾದ ಸೈನಿಕನ ನೈಜ ಜೀವನದ ಹೋರಾಟ ಕಥನವನ್ನು ಚಿತ್ರನಿರ್ಮಾಪಕ ಓನಿರ್ ಅವರು ಮುಂದಿನ ಚಲನಚಿತ್ರವಾಗಿ ತರಲು ಇಚ್ಛಿಸಿದ್ದಾರೆ. ಲೈಂಗಿಕ ಅಲ್ಪಸಂಖ್ಯಾತರಾಗಿದ್ದಕ್ಕೆ ಅವರು ಸೇನೆಯಲ್ಲಿ ಮುಂದುವರಿಯಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಈ ಚಲನಚಿತ್ರವು ಓನಿರ್‌ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ‘ಐ ಆಮ್‌’ನ ಮುಂದುವರಿದ ಭಾಗವಾಗಿರಬಹುದು. ‘ಐ ಆಮ್‌’ ಸಿನಿಮಾವು ಏಕ ತಾಯ್ತನ, ಸಲಿಂಗಕಾಮ ಮತ್ತು ಇತರ ಸಾಮಾಜಿಕ ಸಮಸ್ಯೆಗಳಂತಹ ವಿಷಯಗಳ ಕುರಿತು ಬೆಳಕು ಚೆಲ್ಲುತ್ತದೆ.

ಈ ವಿಷಯದ ಕುರಿತು TOI ವರದಿಗಾರ ಮಾಡಿರುವ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ ಓನೀರ್, “ಭಾರತೀಯ ಸೇನೆಯಲ್ಲಿ ಸಲಿಂಗಕಾಮವು ಇನ್ನೂ ಕಾನೂನುಬಾಹಿರವಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸಮಾಜ ನಮ್ಮನ್ನು ಸಮಾನವಾಗಿ ಪರಿಗಣಿಸಲು ಬಹಳ ದೂರದಲ್ಲಿದ್ದೇವೆ” ಎಂದು ಮೈ ಬ್ರದರ್ ನಿರ್ದೇಶಕ ನಿಖಿಲ್ ಬರೆದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, “ನನ್ನ ಸೇನೆಯ ಬಗ್ಗೆ ನನಗೆ ಅತ್ಯಂತ ಗೌರವ ಮತ್ತು ಪ್ರೀತಿ ಇದೆ. ದೇಶಕ್ಕೆ ಸೇವೆ ಸಲ್ಲಿಸಲು ಬಯಸುವ ಯಾರನ್ನೂ ಲೈಂಗಿಕತೆಯ ಕಾರಣದಿಂದ ಸೇನೆ ತಾರತಮ್ಯ ಮಾಡಬಾರದು ಎಂದು ನಾನು ಬಯಸುತ್ತೇನೆ” ಎಂದು ಓನಿರ್ ತಿಳಿಸಿದ್ದಾರೆ.

ಜನವರಿ 19ರಂದು ಸೇನೆಯ ಕಾರ್ಯತಂತ್ರದ ಸಂವಹನ ವಿಭಾಗದ ಹೆಚ್ಚುವರಿ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಕರ್ನಲ್ ಸಚಿನ್ ಉಜ್ವಾಲ್ ಅವರಿಂದ ಒನಿರ್ ಇಮೇಲ್ ಸ್ವೀಕರಿಸಿದ್ದಾರೆ ಎಂದು ಟೈಮ್ಸ್ ಆಫ್‌ ಇಂಡಿಯಾ ವರದಿ ಹೇಳುತ್ತದೆ.

“ಡಿಸೆಂಬರ್ 16, 2021ರಂದು ಇಮೇಲ್ ಮೂಲಕ ಸ್ವೀಕರಿಸಿದ ಸ್ಕ್ರಿಪ್ಟ್‌ನ ವಿಷಯವನ್ನು ವಿಶ್ಲೇಷಿಸಲಾಗಿದೆ” ಎಂದು ಉಜ್ವಾಲ್‌ ಹೇಳಿದ್ದಾರೆ. “ಸ್ಕ್ರಿಪ್ಟ್ ಅನ್ನು ಆರ್ಮಿಯಿಂದ ತೆರವುಗೊಳಿಸಲಾಗಿಲ್ಲ ಎಂದು ತಿಳಿಸಲು ವಿಷಾದಿಸುತ್ತೇವೆ” ಎಂದು ತಿಳಿಸಿದ್ದಾರೆ.

ಜುಲೈ 2020ರಲ್ಲಿ, ರಕ್ಷಣಾ ಸಚಿವಾಲಯವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್‌ಗೆ ಪತ್ರ ಬರೆದಿರುವುದಾಗಿ ವರದಿಯಾಗಿತ್ತು. ಸೇನೆಯ ಮೇಲೆ ಯಾವುದೇ ಚಲನಚಿತ್ರ, ಸಾಕ್ಷ್ಯಚಿತ್ರ ಅಥವಾ ವೆಬ್ ಸರಣಿಯನ್ನು ಪ್ರಸಾರ ಮಾಡುವ ಮೊದಲು ರಕ್ಷಣಾ ಸಚಿವಾಲಯದಿಂದ “ನಿರಾಕ್ಷೇಪಣೆ ಪ್ರಮಾಣಪತ್ರ” ಪಡೆಯಲು ಪ್ರೊಡಕ್ಷನ್ ಹೌಸ್‌ಗಳಿಗೆ ಸಲಹೆ ನೀಡಬೇಕೆಂದು ಪತ್ರ ಸೂಚಿಸಿತ್ತು.

ರಕ್ಷಣಾ ಪಡೆಗಳ ಚಿತ್ರಣವನ್ನು ವಿರೂಪಗೊಳಿಸುವ ಮತ್ತು ರಕ್ಷಣಾ ಸಿಬ್ಬಂದಿ, ಅನುಭವಿಗಳ ಭಾವನೆಗಳನ್ನು ಘಾಸಿಗೊಳಿಸುವ ಘಟನೆಗಳನ್ನು ಮೊಟಕುಗೊಳಿಸುವ ಉದ್ದೇಶ ಈ ಸೂಚನೆಯ ಹಿಂದಿದೆ ಎನ್ನಲಾಗಿತ್ತು.

ಭಾರತೀಯ ಸೇನಾ ಸಿಬ್ಬಂದಿ ಮತ್ತು ಸೇನಾ ಸಮವಸ್ತ್ರವನ್ನು “ಅವಮಾನಕರ ರೀತಿಯಲ್ಲಿ” ಚಿತ್ರಿಸಿರುವ ಬಗ್ಗೆ ತೀವ್ರ ಆಕ್ಷೇಪಣೆಗಳನ್ನು ಎತ್ತುವ ಕೆಲವು ದೂರುಗಳನ್ನು ರಕ್ಷಣಾ ಸಚಿವಾಲಯ ಸ್ವೀಕರಿಸಿತ್ತು.

ಹಿಂದೆ ಪ್ರಸಾರವಾದ ವೆಬ್ ಸರಣಿಗಳಲ್ಲಿ ಸೇನೆಗೆ ಸಂಬಂಧಿಸಿದ ದೃಶ್ಯಗಳು ವಾಸ್ತವದಿಂದ ದೂರವಾಗಿದ್ದು ಸಶಸ್ತ್ರ ಪಡೆಗಳ ಕುರಿತು ವಿಕೃತ ಚಿತ್ರಣವನ್ನು ಪ್ರಸ್ತುತಪಡಿಸಲಾಗಿದೆ ಎಂದು  ಮೂಲಗಳು ವರದಿ ಮಾಡಿದ್ದವು.

ಹೀಗಾಗಿ “ಆಕ್ಷೇಪಣೆಯಿಲ್ಲದ ಪ್ರಮಾಣಪತ್ರ” ಪಡೆಯಲು ಓನೀರ್ ಅವರು ಚಲನಚಿತ್ರ ಸ್ಕ್ರಿಪ್ಟ್ ಅನ್ನು ಸೇನೆಗೆ ಸಲ್ಲಿಸಿದ್ದರು. ಸೇನೆಯು ಚಲನಚಿತ್ರ ಚಿತ್ರಕತೆಯನ್ನು ರದ್ದುಗೊಳಿಸಿದ ವರದಿಗೆ ಹಲವು ಜನರು ಪ್ರತಿಕ್ರಿಯೆಗಳನ್ನು ಟ್ವಿಟ್ಟರ್‌ನಲ್ಲಿ ನೀಡಿದ್ದಾರೆ. ಸೇನೆಯ ನಿಲುವು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ.

ಇದನ್ನೂ ಓದಿರಿ: ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...