Homeಮುಖಪುಟಗಾಂಧೀಜಿಗೆ ಅವಹೇಳನ ಪ್ರಕರಣ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಾಳಿಚರಣ್‌

ಗಾಂಧೀಜಿಗೆ ಅವಹೇಳನ ಪ್ರಕರಣ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಾಳಿಚರಣ್‌

- Advertisement -
- Advertisement -

ಥಾಣೆ: ಮಹಾತ್ಮಾ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದ ಆರೋಪದ ಮೇಲೆ ಬಂಧಿತರಾಗಿರುವ ಹಿಂದುತ್ವದ ಮುಖಂಡ ಕಾಳಿಚರಣ್ ಮಹಾರಾಜ್‌ಗೆ ಮಹಾರಾಷ್ಟ್ರದ ಥಾಣೆಯ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಥಾಣೆ ನಗರದ ನೌಪದ ಪೊಲೀಸ್ ಠಾಣೆಯ ಪೊಲೀಸರು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಕಾಳಿಚರಣ್‌ರನ್ನು ಬುಧವಾರ ಬಂಧಿಸಿದ್ದರು. ಶುಕ್ರವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಥಾಣೆಯ ಜೆಎಂಎಫ್‌ಸಿ ಎಸ್.ವಿ.ಮೆಟಿಲ್ ಪಾಟೀಲ್ ಅವರು ವಿವಾದಿತ ವ್ಯಕ್ತಿ ಕಾಳಿಚರಣ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಕಾಳಿಚರಣ್‌‌ ಹೇಳಿಕೆಗಳಿಗೆ ಸಂಬಂಧಿಸಿದಂತೆ ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹಾದ್ ಅವರು ನೀಡಿದ ದೂರಿನ ಆಧಾರದ ಮೇಲೆ ಕಾಳಿಚರಣ್ ಮಹಾರಾಜ್ ವಿರುದ್ಧ ಪ್ರಕರಣ ದಾಖಲಿಸಿದ ನಂತರ ನೌಪಾದ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಕಳೆದ ಡಿಸೆಂಬರ್ 26 ರಂದು ಛತ್ತೀಸ್‌ಗಢದ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿಯಾಗಿ ಕಾಳಿಚರಣ್ ಮಾತನಾಡಿದ್ದರು. ಕಾಳಿಚರಣ್‌ ವಿರುದ್ಧ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಪ್ರಕರಣ ದಾಖಲಾಗಿವೆ.

ರಾಷ್ಟ್ರಪಿತ ಗಾಂಧೀಜಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ರಾಯ್‌ಪುರ ಪೊಲೀಸರು ಅವರನ್ನು ಬಂಧಿಸಿದ್ದರು. ಜನವರಿ 12ರಂದು ಮಹಾರಾಷ್ಟ್ರದ ವಾರ್ಧಾ ಪೊಲೀಸರು ಕಾಳಿ ಚರಣ್‌‌ ಅವರನ್ನು ಬಂಧಿಸಿದ್ದರು. ರಾಜ್ಯದ ಅಕೋಲಾ ಜಿಲ್ಲೆಯಲ್ಲಿಯೂ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ದ್ವೇಷ ಭಾಷಣ ಪ್ರಕರಣ: ಆರೋಪಿ ಯತಿ ನರಸಿಂಗಾನಂದ ಜಾಮೀನು ಅರ್ಜಿ ವಜಾ

ನರಸಿಂಗಾನಂದ ವಿರುದ್ಧ ವಿಚಾರಣೆಗೆ ಸಮ್ಮತಿ

ಹರಿದ್ವಾರದಲ್ಲಿ ದ್ವೇಷ ಭಾಷಣದ ‘ಧರ್ಮ ಸಂಸದ್’ ಆಯೋಜಿಸಿದ್ದ ನರಸಿಂಗಾನಂದ ಅವರು ಸುಪ್ರೀಂಕೋರ್ಟ್ ಮತ್ತು ಸಂವಿಧಾನದ ವಿರುದ್ದ ಇತ್ತೀಚೆಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ವಿರುದ್ದ ನಿಂದನೆ  ಪ್ರಕರಣ ಪ್ರಕ್ರಿಯೆ ಆರಂಭಿಸಲು ಭಾರತದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಶುಕ್ರವಾರ ಸಮ್ಮತಿ ನೀಡಿದ್ದಾರೆ.

ಜನವರಿ 14ರಂದು ಟ್ವಿಟ್ಟರ್‌ನಲ್ಲಿ ವೈರಲ್ ಆಗಿದ್ದ ಸಂದರ್ಶನದಲ್ಲಿ ನೀಡಿದ್ದ ಅವಹೇಳನಕಾರಿ ಹೇಳಿಕೆಗಳಿಗಾಗಿ ನರಸಿಂಗಾನಂದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶಚಿ ನೆಲ್ಲಿ ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಅಟಾರ್ನಿ ಜನರಲ್‌ ಒಪ್ಪಿಗೆ ನೀಡಿದ್ದಾರೆ.

“ನರಸಿಂಗಾನಂದ ನೀಡಿದ್ದ ಹೇಳಿಕೆಗಳು ಖಂಡಿತವಾಗಿಯೂ ಭಾರತದ ಸರ್ವೋಚ್ಚ ನ್ಯಾಯಾಲಯದ ಅವಹೇಳನಕ್ಕೆ ಸಮಾನವಾಗಿರುತ್ತದೆ” ಎಂದು ಅಟಾರ್ನಿ ಜನರಲ್‌ ಹೇಳಿದ್ದಾರೆ.

“ಈ ವ್ಯವಸ್ಥೆಯನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ನರಸಿಂಗಾನಂದ ಹೇಳಿದ್ದರು. ಈ ಮಾತನ್ನು ಉಲ್ಲೇಖಿಸಿರುವ ಅಟಾರ್ನಿ ಜನರಲ್‌, “ಇದು ಸಾಮಾನ್ಯ ಜನರ ಮನಸ್ಸಿನಲ್ಲಿ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ತುಚ್ಛವಾಗಿ ಕಾಣುವಂತೆ ಮಾಡುವ ನೇರ ಪ್ರಯತ್ನ” ಎಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಕ್ರಿಮಿನಲ್ ನಿಂದನೆಯ ವಿಚಾರಣೆಯನ್ನು ಪ್ರಾರಂಭಿಸಲು ಸಮ್ಮತಿಯನ್ನು ನೀಡಿದ್ದಾರೆ.

 

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣ ಮಾಡಿದ್ದಕ್ಕಾಗಿ ಉತ್ತರಾಖಂಡ್ ಪೊಲೀಸರು ಅವರನ್ನು ಬಂಧಿಸಿದ್ದು, ಪ್ರಸ್ತುತ ಬಂಧನದಲ್ಲಿದ್ದಾರೆ.

ಹರಿದ್ವಾರ ದ್ವೇಷದ ಭಾಷಣದ ಪ್ರಕರಣದಲ್ಲಿ ನ್ಯಾಯಾಲಯದ ಪ್ರಕ್ರಿಯೆಗಳ ಬಗ್ಗೆ ಮಾತನಾಡಿದ್ದ ನರಸಿಂಗಾನಂದ, “ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನಂಬಿಕೆ ಇಲ್ಲ. ಸಂವಿಧಾನ ಈ ದೇಶದ 100 ಕೋಟಿ ಹಿಂದೂಗಳನ್ನು ಕಬಳಿಸುತ್ತದೆ. ಈ ಸಂವಿಧಾನವನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ಹೇಳಿದ್ದರು. ಇದನ್ನು ಅಟಾರ್ನಿ ಜನರಲ್‌ಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಮುಸ್ಲಿಮರ ಹತ್ಯೆಗೆ ಕರೆ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...