Homeಕರ್ನಾಟಕರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ...

ರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ ಸಿಬ್ಬಂದಿ!

- Advertisement -
- Advertisement -

ಬೆಳಗಾವಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪದೇ ಪದೇ ಅವ್ಯವಹಾರಗಳಿಂದಲೇ ಸುದ್ದಿಯಾಗುತ್ತಿದೆ. ಈ ಹಿಂದೆ ರೈತರಿಗೆ ಕೋಟಿಗಟ್ಟಲೇ ಕಬ್ಬಿನ ಬಿಲ್ ಪಾವತಿಸದೆ ಸುದ್ದಿಯಾಗಿದ್ದ ಈ ಕಾರ್ಖಾನೆಯ ಆಡಳಿತ ಮಂಡಳಿ, ಇದೀಗ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಪಡೆದಿರುವ ಬಹು ದೊಡ್ಡ ಹಗರಣವೊಂದು ಬೆಳಕಿಗೆ ಬಂದಿದೆ.

ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಎಂ.ಕೆ ಹುಬ್ಬಳ್ಳಿಯ ದಲಿತ ಕಾಲೋನಿಯ ಜನರಿಗೆ ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ಅವರ ವೈಯಕ್ತಿಕ ದಾಖಲೆಗಳನ್ನು ಸಂಗ್ರಹಿಸಿದ್ದ ಮಲಪ್ರಭಾ ಕಾರ್ಖಾನೆಯ ಸಿಬ್ಬಂದಿ, 40 ಪುಟಗಳ ಕಾಗದ ಪತ್ರಗಳಿಗೆ 169 ಜನರಿಂದ ಸಹಿಯನ್ನೂ ಪಡೆದಿದ್ದಾರೆ. ಬಳಿಕ ಅದೇ ದಾಖಲೆಗಳನ್ನು ಬಳಸಿಕೊಂಡು ಇವರೆಲ್ಲರೂ ಕಬ್ಬು ಕಾಟಾವ್ ಕಾರ್ಮಿಕರು ಇವರಿಗೆ ಕಾರ್ಖಾನೆಯ ಗ್ಯಾರಂಟಿಯ ಮೇಲೆ ಸಾಲ ಮಂಜೂರು ಮಾಡುವಂತೆ ಕೋರಿ ಎಂ.ಕೆ ಹುಬ್ಬಳ್ಳಿಯ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ 16 ಕೋಟಿಗೂ ಹೆಚ್ಚು ಸಾಲ ಪಡೆಯಲಾಗಿದೆ.

ಇದನ್ನೂ ಓದಿ:ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

2021ರ ಮೇ ತಿಂಗಳಲ್ಲೇ ಕಾರ್ಖಾನೆ ಸಿಬ್ಬಂದಿ ರೈತರ ಹೆಸರಿನಲ್ಲಿ ಸಾಲ ಪಡೆದಿದ್ದಾರೆ. ಆದರೆ, ಈ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ಇಲ್ಲ. ಇತ್ತೀಚೆಗೆ ಎಂ.ಕೆ ಹುಬ್ಬಳ್ಳಿ ನಿವಾಸಿ ಕಲ್ಲಪ್ಪ ಯಲ್ಲಪ್ಪ ಚಲವಾದಿ, ಅಂಬೇಡ್ಕರ್ ಅಭಿವೃದ್ಧಿ ನಿಮಗದಲ್ಲಿ 20 ಸಾವಿರ ಸಾಲಕ್ಕಾಗಿ ಅರ್ಜಿ ಹಾಕಿದ್ದಾರೆ. ಆಗ ಯುವಕನಿಗೆ ಸಾಲ ಕೊಡಲು ನಿರಾಕರಿಸಿದ ಬ್ಯಾಂಕ್ ಸಿಬ್ಬಂದಿ, ಈಗಾಗಲೇ ನಿಮ್ಮ ಹೆಸರಲ್ಲಿ ಸಾಲದ ಬಾಕಿ ಇದೆ. ಹೀಗಾಗಿ ಹೊಸ ಸಾಲ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಆದರೆ, ಈ ಹಿಂದೆ ಎಲ್ಲಿಯೂ ಸಾಲ ಪಡೆಯದ ಯಲ್ಲಪ್ಪ ಬ್ಯಾಂಕ್‌ನವರ ಈ ಮಾತು ಕೇಳಿ ಶಾಕ್‌ಗೆ ಒಳಗಾಗಿದ್ದಾರೆ.

ತನಗೆ ಗೊತ್ತಿಲ್ಲದೆ ತನ್ನ ಹೆಸರಲ್ಲಿ ಸಾಲ ಪಡೆದಿದ್ದು ಯಾರು ಎಂಬುದನ್ನು ಪರಿಶೀಲನೆ ನಡೆಸಿದಾಗ. ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ದಾಖಲೆಗಳನ್ನು ಪಡೆದು, ಸಹಿ ಮಾಡಿಸಿಕೊಂಡಿದ್ದ ಸಕ್ಕರೆ ಕಾರ್ಖಾನೆ ಸಿಬ್ಬಂದಿಯೇ ತನ್ನ ಹೆಸರಿನ ಮೇಲೆ ಸಾಲ ತೆಗೆಸಿಕೊಂಡು ಪಂಗನಾಮ ಹಾಕಿರುವುದು ಬೆಳಕಿಗೆ ಬಂದಿದೆ.

ಯಲ್ಲಪ್ಪ ಅವರಿಗಾದ ವಂಚನೆಯ ಎಳೆಯನ್ನು ಹಿಡಿದು ಹೋದಾಗ ಅವರಂತೆ ಇನ್ನೂ 168 ಮಂದಿ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ತಲಾ 8 ಲಕ್ಷದಂತೆ ಬರೋಬ್ಬರಿ 16 ಕೋಟಿ ಸಾಲ ಪಡೆದಿರುವ ಬೃಹತ್ ಹಗರಣ ಬೆಳಕಿಗೆ ಬಂದಿದೆ. ಸದ್ಯ ಪ್ರತಿಯೊಬ್ಬರ ಮೇಲಿರುವ 8 ಲಕ್ಷ ಸಾಲಕ್ಕೆ 25 ಸಾವಿರ ಬಡ್ಡಿ ಬೆಳೆದಿರುವುದಾಗಿಯೂ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ:ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಕಾರ್ಖಾನೆ ಆಡಳಿತ ಮಂಡಳಿಯ ದುರಾಸೆ ಅದೆಷ್ಟರ ಮಟ್ಟಿಗೆ ಇದೆಯೆಂದರೆ ಆರ್ಬಿಐ ನಿಮಯಗಳನ್ನು ಉಲ್ಲಂಘಿಸಿ 60 ವರ್ಷ ಮೇಲ್ಪಟ್ಟವರ ದಾಖಲೆಗಳನ್ನೂ ನೀಡಿ ಸಾಲ ಪಡೆಯಲಾಗಿದೆ. ಸ್ವಂತದ ಕೃಷಿ ಭೂಮಿ ಇಲ್ಲದವರಿಗೂ ಕಬ್ಬು ಕಟಾವ್ ಮತ್ತು ಸಾಗಣೆಯ ಹೆಸರಲ್ಲಿ ಸಾಲ ಹೊರಿಸಲಾಗಿದೆ. ಜೊತೆಗೆ ಕಬ್ಬು ಬೆಳೆಗಾರರಲ್ಲದವರ ಹೆಸರಲ್ಲೂ ಆಡಳಿತ ಮಂಡಳಿ ಸಾಲ ಪಡೆದಿದೆ. ಪ್ರಕರಣದಲ್ಲಿ ಬ್ಯಾಂಕ್ ಸಿಬ್ಬಂದಿಗಳೂ ಶಾಮೀಲಾಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಕಾರ್ಖಾನೆ ಆಡಳಿತ ಮಂಡಳಿಯ ಬಹುಕೋಟಿ ಅವ್ಯವಹಾರ ಬೆಳಕಿಗೆ ಬರುತ್ತಿದ್ದಂತೆ ವಂಚನೆಗೊಳಗಾದ ರೈತರು ಬ್ಯಾಂಕ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ರೈತರ ಪ್ರತಿಭಟನೆಯ ಬಳಿಕ ಎಚ್ಚೆತ್ತುಕೊಂಡ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ತಪ್ಪಿದ್ದಸ್ಥರ ವಿರುದ್ಧ 8 ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಸಕ್ಕರೆ ಸಚಿವರಿಗೆ ಮನವಿ ಮಾಡಿರುವ ರೈತರು ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...