Homeಕರ್ನಾಟಕರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ...

ರೈತರಿಂದ ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಕೋಟ್ಯಾಂತರ ರೂ. ಬ್ಯಾಂಕ್‌ ಸಾಲ ಪಡೆದ ಸಕ್ಕರೆ ಕಾರ್ಖಾನೆ ಸಿಬ್ಬಂದಿ!

- Advertisement -
- Advertisement -

ಬೆಳಗಾವಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪದೇ ಪದೇ ಅವ್ಯವಹಾರಗಳಿಂದಲೇ ಸುದ್ದಿಯಾಗುತ್ತಿದೆ. ಈ ಹಿಂದೆ ರೈತರಿಗೆ ಕೋಟಿಗಟ್ಟಲೇ ಕಬ್ಬಿನ ಬಿಲ್ ಪಾವತಿಸದೆ ಸುದ್ದಿಯಾಗಿದ್ದ ಈ ಕಾರ್ಖಾನೆಯ ಆಡಳಿತ ಮಂಡಳಿ, ಇದೀಗ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಪಡೆದಿರುವ ಬಹು ದೊಡ್ಡ ಹಗರಣವೊಂದು ಬೆಳಕಿಗೆ ಬಂದಿದೆ.

ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಎಂ.ಕೆ ಹುಬ್ಬಳ್ಳಿಯ ದಲಿತ ಕಾಲೋನಿಯ ಜನರಿಗೆ ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ಅವರ ವೈಯಕ್ತಿಕ ದಾಖಲೆಗಳನ್ನು ಸಂಗ್ರಹಿಸಿದ್ದ ಮಲಪ್ರಭಾ ಕಾರ್ಖಾನೆಯ ಸಿಬ್ಬಂದಿ, 40 ಪುಟಗಳ ಕಾಗದ ಪತ್ರಗಳಿಗೆ 169 ಜನರಿಂದ ಸಹಿಯನ್ನೂ ಪಡೆದಿದ್ದಾರೆ. ಬಳಿಕ ಅದೇ ದಾಖಲೆಗಳನ್ನು ಬಳಸಿಕೊಂಡು ಇವರೆಲ್ಲರೂ ಕಬ್ಬು ಕಾಟಾವ್ ಕಾರ್ಮಿಕರು ಇವರಿಗೆ ಕಾರ್ಖಾನೆಯ ಗ್ಯಾರಂಟಿಯ ಮೇಲೆ ಸಾಲ ಮಂಜೂರು ಮಾಡುವಂತೆ ಕೋರಿ ಎಂ.ಕೆ ಹುಬ್ಬಳ್ಳಿಯ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ 16 ಕೋಟಿಗೂ ಹೆಚ್ಚು ಸಾಲ ಪಡೆಯಲಾಗಿದೆ.

ಇದನ್ನೂ ಓದಿ:ಕಳೆದುಹೋದ ಸಹಕಾರಿ ಹೆಗ್ಗಳಿಕೆ: ನಿರಾಣಿ ಶುಗರ್ಸ್ ಪಾಲಾದ PSSK ಸಕ್ಕರೆ ಕಾರ್ಖಾನೆ

2021ರ ಮೇ ತಿಂಗಳಲ್ಲೇ ಕಾರ್ಖಾನೆ ಸಿಬ್ಬಂದಿ ರೈತರ ಹೆಸರಿನಲ್ಲಿ ಸಾಲ ಪಡೆದಿದ್ದಾರೆ. ಆದರೆ, ಈ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ಇಲ್ಲ. ಇತ್ತೀಚೆಗೆ ಎಂ.ಕೆ ಹುಬ್ಬಳ್ಳಿ ನಿವಾಸಿ ಕಲ್ಲಪ್ಪ ಯಲ್ಲಪ್ಪ ಚಲವಾದಿ, ಅಂಬೇಡ್ಕರ್ ಅಭಿವೃದ್ಧಿ ನಿಮಗದಲ್ಲಿ 20 ಸಾವಿರ ಸಾಲಕ್ಕಾಗಿ ಅರ್ಜಿ ಹಾಕಿದ್ದಾರೆ. ಆಗ ಯುವಕನಿಗೆ ಸಾಲ ಕೊಡಲು ನಿರಾಕರಿಸಿದ ಬ್ಯಾಂಕ್ ಸಿಬ್ಬಂದಿ, ಈಗಾಗಲೇ ನಿಮ್ಮ ಹೆಸರಲ್ಲಿ ಸಾಲದ ಬಾಕಿ ಇದೆ. ಹೀಗಾಗಿ ಹೊಸ ಸಾಲ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ. ಆದರೆ, ಈ ಹಿಂದೆ ಎಲ್ಲಿಯೂ ಸಾಲ ಪಡೆಯದ ಯಲ್ಲಪ್ಪ ಬ್ಯಾಂಕ್‌ನವರ ಈ ಮಾತು ಕೇಳಿ ಶಾಕ್‌ಗೆ ಒಳಗಾಗಿದ್ದಾರೆ.

ತನಗೆ ಗೊತ್ತಿಲ್ಲದೆ ತನ್ನ ಹೆಸರಲ್ಲಿ ಸಾಲ ಪಡೆದಿದ್ದು ಯಾರು ಎಂಬುದನ್ನು ಪರಿಶೀಲನೆ ನಡೆಸಿದಾಗ. ಆರ್ಥಿಕ ನೆರವು ನೀಡುವುದಾಗಿ ನಂಬಿಸಿ ದಾಖಲೆಗಳನ್ನು ಪಡೆದು, ಸಹಿ ಮಾಡಿಸಿಕೊಂಡಿದ್ದ ಸಕ್ಕರೆ ಕಾರ್ಖಾನೆ ಸಿಬ್ಬಂದಿಯೇ ತನ್ನ ಹೆಸರಿನ ಮೇಲೆ ಸಾಲ ತೆಗೆಸಿಕೊಂಡು ಪಂಗನಾಮ ಹಾಕಿರುವುದು ಬೆಳಕಿಗೆ ಬಂದಿದೆ.

ಯಲ್ಲಪ್ಪ ಅವರಿಗಾದ ವಂಚನೆಯ ಎಳೆಯನ್ನು ಹಿಡಿದು ಹೋದಾಗ ಅವರಂತೆ ಇನ್ನೂ 168 ಮಂದಿ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ಹೆಸರಲ್ಲಿ ತಲಾ 8 ಲಕ್ಷದಂತೆ ಬರೋಬ್ಬರಿ 16 ಕೋಟಿ ಸಾಲ ಪಡೆದಿರುವ ಬೃಹತ್ ಹಗರಣ ಬೆಳಕಿಗೆ ಬಂದಿದೆ. ಸದ್ಯ ಪ್ರತಿಯೊಬ್ಬರ ಮೇಲಿರುವ 8 ಲಕ್ಷ ಸಾಲಕ್ಕೆ 25 ಸಾವಿರ ಬಡ್ಡಿ ಬೆಳೆದಿರುವುದಾಗಿಯೂ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ:ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಕಾರ್ಖಾನೆ ಆಡಳಿತ ಮಂಡಳಿಯ ದುರಾಸೆ ಅದೆಷ್ಟರ ಮಟ್ಟಿಗೆ ಇದೆಯೆಂದರೆ ಆರ್ಬಿಐ ನಿಮಯಗಳನ್ನು ಉಲ್ಲಂಘಿಸಿ 60 ವರ್ಷ ಮೇಲ್ಪಟ್ಟವರ ದಾಖಲೆಗಳನ್ನೂ ನೀಡಿ ಸಾಲ ಪಡೆಯಲಾಗಿದೆ. ಸ್ವಂತದ ಕೃಷಿ ಭೂಮಿ ಇಲ್ಲದವರಿಗೂ ಕಬ್ಬು ಕಟಾವ್ ಮತ್ತು ಸಾಗಣೆಯ ಹೆಸರಲ್ಲಿ ಸಾಲ ಹೊರಿಸಲಾಗಿದೆ. ಜೊತೆಗೆ ಕಬ್ಬು ಬೆಳೆಗಾರರಲ್ಲದವರ ಹೆಸರಲ್ಲೂ ಆಡಳಿತ ಮಂಡಳಿ ಸಾಲ ಪಡೆದಿದೆ. ಪ್ರಕರಣದಲ್ಲಿ ಬ್ಯಾಂಕ್ ಸಿಬ್ಬಂದಿಗಳೂ ಶಾಮೀಲಾಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಕಾರ್ಖಾನೆ ಆಡಳಿತ ಮಂಡಳಿಯ ಬಹುಕೋಟಿ ಅವ್ಯವಹಾರ ಬೆಳಕಿಗೆ ಬರುತ್ತಿದ್ದಂತೆ ವಂಚನೆಗೊಳಗಾದ ರೈತರು ಬ್ಯಾಂಕ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ರೈತರ ಪ್ರತಿಭಟನೆಯ ಬಳಿಕ ಎಚ್ಚೆತ್ತುಕೊಂಡ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ತಪ್ಪಿದ್ದಸ್ಥರ ವಿರುದ್ಧ 8 ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಸಕ್ಕರೆ ಸಚಿವರಿಗೆ ಮನವಿ ಮಾಡಿರುವ ರೈತರು ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...