Homeಮುಖಪುಟಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ

- Advertisement -
- Advertisement -

ಗೋವಾ ಬಿಜೆಪಿಯ ಪ್ರಮುಖ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್‌ ಅವರ ಪುತ್ರ ಉತ್ಪಲ್ ಪರಿಕ್ಕರ್ ಶುಕ್ರವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ವರಿಷ್ಠರು ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ.

ಪಣಜಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಉತ್ಪಲ್ ಪರಿಕ್ಕರ್‌, “ಜನರಿಗೆ ಆಯ್ಕೆಯನ್ನು ನೀಡಲು ಬಯಸಿದ್ದರಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಪ್ರಸ್ತುತ ಬಿಜೆಪಿಯಲ್ಲಿ ನಿರಂತರವಾಗಿ ಮೌಲ್ಯಗಳು ಕುಸಿಯುತ್ತಿದೆ, ಈ ಮೌಲ್ಯಗಳ ಪರವಾಗಿ ನಿಲ್ಲುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

“ಈ ಎಲ್ಲಾ ವರ್ಷಗಳಲ್ಲಿ ನನ್ನ ತಂದೆ ಮನೋಹರ್ ಪರಿಕ್ಕರ್‌ ಪಣಜಿಯ ಜನರೊಂದಿಗೆ ಅಪಾರವಾದ ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು. ನನಗೂ ಅವರ ಜೊತೆ ಈ ಬಾಂಧವ್ಯ ಬೆಳೆದಿದೆ. ಆದರೆ ಕಾರಣಾಂತರಗಳಿಂದ ಪಣಜಿಗೆ ಉಮೇದುವಾರಿಕೆ ಪಡೆಯಲು ಸಾಧ್ಯವಾಗಿಲ್ಲ. ನನ್ನ ಬದಲಾಗಿ, ಕಳೆದ ಎರಡು ವರ್ಷಗಳ ಹಿಂದೆ ಅವಕಾಶಕ್ಕಾಗಿ ಬಿಜೆಪಿ ಸೇರಿದ ಯಾರಿಗೊ ಅದನ್ನು ನೀಡಲಾಗಿದೆ” ಎಂದು ಉತ್ಪಲ್ ಪರಿಕ್ಕರ್ ಹೇಳಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಪ್ರಸ್ತುತ ಬಿಜೆಪಿಯು ಪಣಜಿ ಶಾಸಕ ಮತ್ತು ಮಾಜಿ ಕಾಂಗ್ರೆಸ್ಸಿಗ ಅಟಾನಾಸಿಯೊ ‘ಬಾಬುಷ್’ ಮೊನ್ಸೆರೆಟ್ ಅವರಿಗೆ ಟಿಕೆಟ್‌ ನೀಡಲಾಗಿದೆ. ಈ ಕ್ಷೇತ್ರವನ್ನು ಕಳೆದ 25 ವರ್ಷಗಳಲ್ಲಿ ಮನೋಹರ್‌ ಪರಿಕ್ಕರ್‌ ಸ್ಪರ್ಧಿಸುತ್ತಿದ್ದರು. ಹೀಗಾಗಿ ಪಣಜಿಯಿಂದ ತನಗೆ ಟಿಕೆಟ್‌ ನೀಡಬೇಕು ಎಂದು ಉತ್ಪಲ್‌ ಪರಿಕ್ಕರ್‌ ಬಿಜೆಪಿಗೆ ಕೇಳಿದ್ದರು.

ಪಣಜಿ ಕ್ಷೇತ್ರಕ್ಕೆ ಬಿಜೆಪಿ ಮಾಡಿರುವ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿದ ಉತ್ಪಲ್ ಪರಿಕ್ಕರ್‌, “ಈಗಿನ ಅಭ್ಯರ್ಥಿಯ ಬಗ್ಗೆ ಮಾತನಾಡಲು ನನಗೆ ನಾಚಿಕೆಯಾಗುತ್ತಿದೆ. ಬಿಜೆಪಿಯು ನನ್ನ ಪ್ರೊಫೈಲ್ ಮತ್ತು ಅವರು ಟಿಕೆ‌ಟ್‌ ನೀಡಿದ ಅಭ್ಯರ್ಥಿಯ ವಿವರವನ್ನು ನೋಡಬಹುದು. 2019 ರಲ್ಲಿ ಪಣಜಿ ಉಪಚುನಾವಣೆಯ ಪ್ರಚಾರ ಮಾಡುವಾಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ ಕೂಡಾ ಮಾನ್ಸೆರೇಟ್ ಅವರನ್ನು ಟೀಕಿಸಿದ್ದರು” ಎಂದು ಎಂದು ಹೇಳಿದ್ದಾರೆ.

ಮನೋಹರ್ ಪರಿಕ್ಕರ್ ಅವರು ನಂಬಿದ್ದ ಮೌಲ್ಯಗಳ ಪರವಾಗಿ ನಿಲ್ಲುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ. ಪಣಜಿಯ ಜನರು ನನ್ನ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತಾರೆ. ಅವರ ಆತ್ಮದ ಜೊತೆಗೆ ಬಿಜೆಪಿ ಉಳಿದಿದೆಯೆ ಅಥವಾ ಅವರನ್ನು ತೊರೆದಿದೆಯೇ ಎಂದು ಜನರು ಪ್ರಶ್ನಿಸಬೇಕು ಎಂದು ಉತ್ಪಲ್ ಪರಿಕ್ಕರ್‌ ಹೇಳಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

ಶಿವಸೇನೆ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಯಂತಹ ಇತರ ಪಕ್ಷಗಳ ಬೆಂಬಲವನ್ನು ನೀವು ಸ್ವಾಗತಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಉತ್ಪಲ್ ಪರಿಕ್ಕರ್‌, “ಮಾನ್ಸೆರೇಟ್ ಅವರಂತಹ ಅಭ್ಯರ್ಥಿಯ ವಿರುದ್ಧ ಹೋರಾಡಲು ಅಗತ್ಯವಿರುವ ಯಾವುದೇ ಬೆಂಬಲ ಯಾವಾಗಲೂ ಸ್ವಾಗತಾರ್ಹ” ಎಂದು ಹೇಳಿದ್ದಾರೆ.

ಬಿಜೆಪಿಯು ಗುರುವಾರ ಪ್ರಕಟಿಸಿದ 34 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾನ್ಸೆರೇಟ್ ಮತ್ತು ಅವರ ಪತ್ನಿ ಜೆನ್ನಿಫರ್ ಅವರಿಗೆ ಟಿಕೆಟ್ ನೀಡಲಾಗಿದೆ. ಎರಡು ವರ್ಷಗಳ ಅಂತರವನ್ನು ಹೊರತುಪಡಿಸಿ, ಪಣಜಿ ಕ್ಷೇತ್ರವನ್ನು ದಿವಂಗತ ಮನೋಹರ್‌ ಪರಿಕ್ಕರ್ ಅವರು 1994 ರಿಂದ ಮಾರ್ಚ್ 2019 ರ ವರೆಗೂ ಪ್ರತಿನಿಧಿಸಿದ್ದರು.

ಶಿವಸೇನೆಯ ಸಂಜಯ್ ರಾವತ್ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಈ ಹಿಂದೆಯೆ ಉತ್ಪಲ್ ಪರಿಕ್ಕರ್ ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದ್ದರು. ಆದರೆ ಕಾಂಗ್ರೆಸ್ ಪಣಜಿಯಿಂದ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಶಿವಸೇನೆ ನಾಯಕ ಸಂಜಯ್‌ ರಾವತ್ ಅವರು ಉತ್ಪಲ್ ಪರಿಕ್ಕರ್ ಅವರನ್ನು ಬೆಂಬಲಿಸಲು ಎಲ್ಲಾ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದರು.

ಇದನ್ನೂ ಓದಿ:ಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...