Homeಮುಖಪುಟಕೈತಪ್ಪಿದ ಟಿಕೆಟ್‌: ಬಿಜೆಪಿಗೆ ರಾಜೀನಾಮೆ ನೀಡುವತ್ತ ಉತ್ತರಾಖಂಡದ ಹಲವು ಶಾಸಕರು!

ಕೈತಪ್ಪಿದ ಟಿಕೆಟ್‌: ಬಿಜೆಪಿಗೆ ರಾಜೀನಾಮೆ ನೀಡುವತ್ತ ಉತ್ತರಾಖಂಡದ ಹಲವು ಶಾಸಕರು!

- Advertisement -
- Advertisement -

ಮುಂಬರುವ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಪ್ರಬಲ ನಾಯಕರಿಗೆ ಟಿಕೆಟ್‌ ನಿರಾಕರಣೆ ಮಾಡಿರುವುದು ಪಕ್ಷದ ಪಾಳಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಹಲವು ಬಿಜೆಪಿ ನಾಯಕರು  ಇತರ ಪಕ್ಷಗಳಿಗೆ ಪಕ್ಷಾಂತರವಾಗಲು ಅಥವಾ ಸ್ವತಂತ್ರವಾಗಿ ಚುನಾವಣಾ ಅಖಾಡಕ್ಕೆ ಪ್ರವೇಶಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿಯು ಇತ್ತೀಚೆಗೆ ಪ್ರಕಟಿಸಿದ ತನ್ನ 59 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ವಪಕ್ಷೀಯರಿಗಿಂತ, ಕಾಂಗ್ರೆಸ್‌ನಿಂದ ಪಕ್ಷಾಂತರವಾದ ಅಭ್ಯರ್ಥಿಗಳಿಗೆ ಆದ್ಯತೆ ನೀಡಿದೆ. ಇದು ಬಿಜೆಪಿ ನಾಯಕರಿಗೆ ಅಘಾತ ಉಂಟುಮಾಡಿದ್ದು, ಹಲವರು ಬೇಸರಗೊಂಡಿದ್ದಾರೆ. ಈ ಬಗ್ಗೆ ನಾಯಕರು ಬಹಿರಂಗವಾಗಿಯೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ: ಬಿಜೆಪಿ ಸರ್ಕಾರದ ಸಂಪುಟ ಸಚಿವ ಕಾಂಗ್ರೆಸ್‌‌‌ಗೆ ಸೇರ್ಪಡೆ

ಅಸಮಾಧಾನ ವ್ಯಕ್ತಪಡಿಸಿದವರಲ್ಲಿ ಪ್ರಮುಖರೆಂದರೆ ಥರಾಲಿ ಕ್ಷೇತ್ರದ ಶಾಸಕಿಯಾಗಿರುವ ಮುನ್ನಿ ದೇವಿ ಶಾ ಮತ್ತು ದ್ವಾರಹತ್ ಶಾಸಕ ಮಹೇಶ್ ನೇಗಿಯವರಾಗಿದ್ದಾರೆ.

ಪಕ್ಷದ ಕೇಂದ್ರ ನಾಯಕತ್ವವು ನನಗೆ ಏಕೆ ಟಿಕೆಟ್ ನಿರಾಕರಿಸಿದೆ ಎಂಬುದನ್ನು ವಿವರಿಸಬೇಕು. ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರ ಬಳಿಗೆ ಕೊಂಡೊಯ್ಯುವುದರ ಜೊತೆಗೆ ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದು ಮುನ್ನಿ ದೇವಿ ಶಾ ಹೇಳಿದ್ದಾರೆ.

“ಪಕ್ಷವು ಸಮರ್ಪಿತ ಕಾರ್ಯಕರ್ತನನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಿದರೆ ತನಗೆ ಅಷ್ಟು ನೋವಾಗುತ್ತಿರಲಿಲ್ಲ, ಆದರೆ ಅದು ಕಾಂಗ್ರೆಸ್ ಹಿನ್ನೆಲೆಯ ವ್ಯಕ್ತಿಗೆ ಆದ್ಯತೆ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಕುಸಿಯುವಂತೆ ಮಾಡುತ್ತದೆ” ಎಂದು ಮುನ್ನಿ ದೇವಿ ಹೇಳಿದ್ದಾರೆ.

ಕ್ಷೇತ್ರದ ಶಾಸಕರಾಗಿದ್ದ ಮಗನ್‌ ಲಾಲ್ ಶಾ ಅವರ ಮರಣದ ನಂತರ 2018 ರಲ್ಲಿ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿಯಾಗಿದ್ದ ಮುನ್ನಿ ದೇವಿ ಶಾ ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

ಇದನ್ನೂ ಓದಿ:ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ತಾನೀಗ ತನ್ನ ಬೆಂಬಲಿಗರಿಂದ ಒತ್ತಡಕ್ಕೆ ಒಳಗಾಗಿದ್ದು, ಬಿಜೆಪಿಯು ಕಾಂಗ್ರೆಸ್ ಪಕ್ಷಾಂತರಿ ಭೋಪಾಲ್ ರಾಮ್ ತಮ್ತಾ ಅವರನ್ನು ಕಣಕ್ಕಿಳಿಸಿದ ಕ್ಷೇತ್ರದಿಂದಲೇ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಪಿತೂರಿಯಿಂದಾಗಿ ತನಗೆ ಟಿಕೆಟ್ ನಿರಾಕರಿಸಲಾಗಿದೆ ದ್ವಾರಹತ್‌ ಶಾಕಸ ಮಹೇಶ್‌ ನೇಗಿ ಹೇಳಿದ್ದಾರೆ. ಎಲ್ಲಾ ಕ್ಷೇತ್ರ ಸಮೀಕ್ಷೆಗಳಲ್ಲಿ ತನ್ನ ಹೆಸರು ಅಗ್ರಸ್ಥಾನದಲ್ಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ನರೇಂದ್ರ ನಗರ ಕ್ಷೇತ್ರ ಬಿಜೆಪಿಯು ಮತ್ತೊಮ್ಮೆ ಸಂಪುಟ ಸಚಿವ ಸುಬೋಧ್ ಉನಿಯಾಲ್ ಅವರನ್ನು ಕಣಕ್ಕಿಳಿಸಿದೆ. ಇದರ ವಿರುದ್ದ ಬಂಡಾಯವೆದ್ದಿರುವ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಓಂ ಗೋಪಾಲ್ ರಾವತ್ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

“ಸಂಘಟನೆಯನ್ನು ಬಲಪಡಿಸಲು ತಳಮಟ್ಟದಲ್ಲಿ ಶ್ರಮಿಸುವ ಪಕ್ಷದ ಸಮರ್ಪಿತ ಕಾರ್ಯಕರ್ತರನ್ನು ಬಿಜೆಪಿ ಕಾಳಜಿ ವಹಿಸುವುದಿಲ್ಲ. ಅದಕ್ಕೆ ಯಾವುದೇ ತತ್ವಗಳು ಅಥವಾ ಮೌಲ್ಯಗಳಿಲ್ಲ. ಅದಕ್ಕೆ ಬೇಕಾಗಿರುವುದು ಅಧಿಕಾರ” ಎಂದು ರಾವತ್ ಪಕ್ಷದ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ .

ಬಿಜೆಪಿಯಿಂದ ಧನೌಲ್ತಿಯಿಂದ ಕಣಕ್ಕಿಳಿದಿರುವ ಪ್ರೀತಮ್ ಸಿಂಗ್ ಪನ್ವಾರ್ ವಿರುದ್ಧ ಮಾಜಿ ಶಾಸಕ ಮಹಾವೀರ ರಂಗಡ್ ಕೂಡ ಅತೃಪ್ತರಾಗಿದ್ದಾರೆ.ಅವರು ಶುಕ್ರವಾರದಂದು ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆದು ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಘನ್ಸಾಲಿಯಿಂದ ಸ್ಪರ್ಧಿಸಿರುವ ದರ್ಶನ್ ಲಾಲ್ ಕೂಡ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ.

ಕರ್ಣಪ್ರಯಾಗದಿಂದ ಟಿಕೆಟ್‌ಗಾಗಿ ದೀರ್ಘಕಾಲ ಪ್ರಯತ್ನಿಸುತ್ತಿದ್ದ ಟಿಕಾ ಮೈಖುರಿ, ಪಕ್ಷವು ಅನಿಲ್ ನೌಟಿಯಾಲ್ ಅವರನ್ನು ಕ್ಷೇತ್ರದಿಂದ ಕಣಕ್ಕೆ ಇಳಿಸಿದಾಗಿನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ಬೆದರಿಕೆ ಹಾಕಿದ್ದಾರೆ.

ಕಳೆದ ವರ್ಷಾಂತ್ಯದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಸ್ವತಂತ್ರ ಹಾಲಿ ಶಾಸಕ ರಾಮ್ ಸಿಂಗ್ ಕೈರಾ ಅವರನ್ನು ಪಕ್ಷವು ಕ್ಷೇತ್ರದಿಂದ ಕಣಕ್ಕಿಳಿಸಿದ್ದರಿಂದ ಭೀಮತಾಲ್‌ನಲ್ಲಿ ಮನೋಜ್ ಶಾ ಅವರು ಪಕ್ಷ ತೊರೆಯುವುದಾಗಿ ಬೆದರಿಕೆ ಹಾಕಿದ್ದಾರೆ. 2002ರಿಂದ ಟಿಕೆಟ್‌ಗಾಗಿ ರೇಸ್‌ನಲ್ಲಿದ್ದೇನೆ, ನನಗೆ ಟಿಕೆಟ್ ನಿರಾಕರಿಸಿರುವುದು ಅನ್ಯಾಯ, ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಆದರೆ ಈ ಎಲ್ಲಾ ಬಂಡಾಯವು ಒಂದೆರೆಡು ದಿನಗಳಲ್ಲಿ ಶಮನವಾಗಲಿ ಎಂದು ಬಿಜೆಪಿ ಹೇಳಿದೆ. “ಒಂದು ಕ್ಷೇತ್ರದಿಂದ ಟಿಕೆಟ್‌ಗಾಗಿ ಅನೇಕ ಸ್ಪರ್ಧಿಗಳು ಇರುತ್ತದೆ. ಆದರೆ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಒಬ್ಬರಿಗೆ ಮಾತ್ರ ಟಿಕೆಟ್‌ ನೀಡುತ್ತೇವೆ. ಕೇಂದ್ರ ನಾಯಕತ್ವದ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು” ಎಂದು ಬಿಜೆಪಿ ಅಧ್ಯಕ್ಷ ಮದನ್ ಕೌಶಿಕ್ ಹೇಳಿದ್ದಾರೆ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಇದು ಅವರ ಆರಂಭಿಕ ಪ್ರತಿಕ್ರಿಯೆಯಷ್ಟೆ, ಅವರು ಅರ್ಥಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದರೆ.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...