Homeಮುಖಪುಟಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

ಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

- Advertisement -
- Advertisement -

ಗಾಂಧಿಯವರ ಪುಣ್ಯಸ್ಮರಣೆಯ ಮುನ್ನಾದಿನ ಜನವರಿ 29ರಂದು ನಡೆಯುವ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್ ಸಮಾರಂಭದ ಕೊನೆಯಲ್ಲಿ ನುಡಿಸಲಾಗುತ್ತಿದ್ದ ‘ಅಬೈಡ್‌‌ ವಿತ್ ಮಿ’ಯನ್ನು (ಮಹಾತ್ಮ ಗಾಂಧಿಯವರ ನೆಚ್ಚಿನ ಗೀತೆ) ಈ ವರ್ಷ ಕೈಬಿಡಲಾಗಿದೆ.

2020ರಲ್ಲಿ ‘ಅಬೈಡ್‌‌ ವಿತ್‌ ಮೀ’ಯನ್ನು ಹೊರಗಿಟ್ಟಿದ್ದು ಕೋಲಾಹಲವನ್ನು ಸೃಷ್ಟಿಸಿತ್ತು. ಆದರೆ 2021ರ ಸಮಾರಂಭದಲ್ಲಿ ಮತ್ತೆ ಈ ಗೀತೆಯನ್ನು ಹಾಡಲಾಗಿತ್ತು.

ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ನುಡಿಸಬೇಕಾದ 26 ಟ್ಯೂನ್‌ಗಳ ಅಧಿಕೃತ ಪಟ್ಟಿಯಲ್ಲಿ ಅಬೈಡ್‌‌ ವಿತ್‌ ಮಿ ಗೀತೆಯನ್ನು ಉಲ್ಲೇಖಿಸಿಲ್ಲ. 1950ರಿಂದ ಪ್ರತಿ ವರ್ಷ ಸಮಾರಂಭದಲ್ಲಿ ಈ ಗೀತೆಯನ್ನು ನುಡಿಸಲಾಗುತ್ತಿದೆ. ಆದರೆ 2020ರಲ್ಲಿ ಕೈಬಿಡಲಾಗಿತ್ತು.

ಹೆನ್ರಿ ಫ್ರಾನ್ಸಿಸ್ ಲೈಟ್ ಅವರ ಗೀತೆಯನ್ನು ವಿಲಿಯಂ ಹೆನ್ರಿ ಮಾಂಕ್ ಅವರ ಈವೆನ್ಟೈಡ್ ಟ್ಯೂನ್‌ಗೆ ಹೊಂದಿಸಲಾಗಿದೆ. ಇದು ಗಾಂಧೀಜಿಯವರಿಗೆ ಬಲು ಇಷ್ಟವಾದ ಗೀತೆಯಾಗಿದೆ. ಭಾರತದಲ್ಲಿ ಪ್ರತಿ ವರ್ಷ ಜನವರಿ 29ರ ಸಂಜೆ ದೆಹಲಿಯ ವಿಜಯ್ ಚೌಕ್‌ನಲ್ಲಿ ನಡೆಯುವ ಬೀಟಿಂಗ್ ರಿಟ್ರೀಟ್ ಸಮಾರಂಭವು ಗಣರಾಜ್ಯೋತ್ಸವ ಆಚರಣೆಯ ಅಂತ್ಯಭಾಗವಾಗಿರುತ್ತದೆ.

ಈ ವರ್ಷದ ಸಮಾರಂಭದಲ್ಲಿ ಮೊದಲಿಗೆ ಬಗ್ಲರ್‌ಗಳಿಂದ ಫ್ಯಾನ್‌ಫೇರ್‌ ಆಯೋಜಿಸಲಾಗಿದೆ. ನಂತರ ಮಾಸ್ಡ್ ಬ್ಯಾಂಡ್‌ಗಳಿಂದ ವೀರ್ ಸೈನಿಕ್, ಪೈಪ್ಸ್ ಮತ್ತು ಡ್ರಮ್ಸ್ ಬ್ಯಾಂಡ್‌ನಿಂದ ಆರು ಟ್ಯೂನ್‌ಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಬ್ಯಾಂಡ್‌ಗಳಿಂದ ಮೂರು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ನಂತರ ಏರ್ ಫೋರ್ಸ್ ಬ್ಯಾಂಡ್‌ನಿಂದ ನಾಲ್ಕು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ಇದರಲ್ಲಿ ವಿಶೇಷವಾದ ಲಡಾಕೂ ಟ್ಯೂನ್ ಕೂಡ ಸೇರಿಸಲಾಗಿದೆ.

ನೇವಿ ಬ್ಯಾಂಡ್‌ನವರು ನಾಲ್ಕು ರಾಗಗಳನ್ನು ನುಡಿಸುತ್ತಾರೆ. ನಂತರ ಆರ್ಮಿ ಮಿಲಿಟರಿ ಬ್ಯಾಂಡ್ ಮೂರು ರಾಗಗಳನ್ನು ನುಡಿಸುತ್ತದೆ. ಕದಮ್ ಕದಮ್ ಬಧಯೇ ಜಾ, ಡ್ರಮ್ಮರ್ಸ್ ಕಾಲ್, ಏ ಮೇರೆ ವತನ್ ಕೆ ಲೋಗೋನ್ ಸೇರಿದಂತೆ ಮೂರು ಟ್ಯೂನ್‌ಗಳನ್ನು ಮಾಸ್ಡ್ ಬ್ಯಾಂಡ್‌ಗಳು ಕೊನೆಯಲ್ಲಿ ನುಡಿಸುತ್ತವೆ.

ಬಗ್ಲರ್‌ಗಳು ಸಾರೆ ಜಹಾನ್ ಸೆ ಅಚ್ಚಾ ನುಡಿಸುವುದರೊಂದಿಗೆ ಸಮಾರಂಭವು ಕೊನೆಗೊಳ್ಳುತ್ತದೆ. ಇಡೀ ಕಾರ್ಯಕ್ರಮದಲ್ಲಿ 44 ಬಗ್ಲರ್‌ಗಳು, 16 ಟ್ರಂಪೆಟರ್‌ಗಳು ಮತ್ತು 75 ಡ್ರಮ್ಮರ್‌ಗಳು ಭಾಗವಹಿಸಲಿದ್ದಾರೆ.

ಸುಮಾರು ಒಂದು ವಾರ ನಡೆಯುವ ಗಣರಾಜ್ಯೋತ್ಸವದ ಅಂತ್ಯವನ್ನು ಬೀಟಿಂಗ್ ರಿಟ್ರೀಟ್ ಸೂಚಿಸುತ್ತದೆ. ಗಣರಾಜ್ಯೋತ್ಸವ ಜನವರಿ 24ರಂದು ಪ್ರಾರಂಭವಾಗುತ್ತಿತ್ತು. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ರಿಂದ ಚಾಲನೆ ಪಡೆಯಲಿದೆ. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ‌ಆಚರಿಸಲಾಗುತ್ತಿದೆ.


ಇದನ್ನೂ ಓದಿರಿ: ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...