Homeಮುಖಪುಟಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

ಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

- Advertisement -
- Advertisement -

ಗಾಂಧಿಯವರ ಪುಣ್ಯಸ್ಮರಣೆಯ ಮುನ್ನಾದಿನ ಜನವರಿ 29ರಂದು ನಡೆಯುವ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್ ಸಮಾರಂಭದ ಕೊನೆಯಲ್ಲಿ ನುಡಿಸಲಾಗುತ್ತಿದ್ದ ‘ಅಬೈಡ್‌‌ ವಿತ್ ಮಿ’ಯನ್ನು (ಮಹಾತ್ಮ ಗಾಂಧಿಯವರ ನೆಚ್ಚಿನ ಗೀತೆ) ಈ ವರ್ಷ ಕೈಬಿಡಲಾಗಿದೆ.

2020ರಲ್ಲಿ ‘ಅಬೈಡ್‌‌ ವಿತ್‌ ಮೀ’ಯನ್ನು ಹೊರಗಿಟ್ಟಿದ್ದು ಕೋಲಾಹಲವನ್ನು ಸೃಷ್ಟಿಸಿತ್ತು. ಆದರೆ 2021ರ ಸಮಾರಂಭದಲ್ಲಿ ಮತ್ತೆ ಈ ಗೀತೆಯನ್ನು ಹಾಡಲಾಗಿತ್ತು.

ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ನುಡಿಸಬೇಕಾದ 26 ಟ್ಯೂನ್‌ಗಳ ಅಧಿಕೃತ ಪಟ್ಟಿಯಲ್ಲಿ ಅಬೈಡ್‌‌ ವಿತ್‌ ಮಿ ಗೀತೆಯನ್ನು ಉಲ್ಲೇಖಿಸಿಲ್ಲ. 1950ರಿಂದ ಪ್ರತಿ ವರ್ಷ ಸಮಾರಂಭದಲ್ಲಿ ಈ ಗೀತೆಯನ್ನು ನುಡಿಸಲಾಗುತ್ತಿದೆ. ಆದರೆ 2020ರಲ್ಲಿ ಕೈಬಿಡಲಾಗಿತ್ತು.

ಹೆನ್ರಿ ಫ್ರಾನ್ಸಿಸ್ ಲೈಟ್ ಅವರ ಗೀತೆಯನ್ನು ವಿಲಿಯಂ ಹೆನ್ರಿ ಮಾಂಕ್ ಅವರ ಈವೆನ್ಟೈಡ್ ಟ್ಯೂನ್‌ಗೆ ಹೊಂದಿಸಲಾಗಿದೆ. ಇದು ಗಾಂಧೀಜಿಯವರಿಗೆ ಬಲು ಇಷ್ಟವಾದ ಗೀತೆಯಾಗಿದೆ. ಭಾರತದಲ್ಲಿ ಪ್ರತಿ ವರ್ಷ ಜನವರಿ 29ರ ಸಂಜೆ ದೆಹಲಿಯ ವಿಜಯ್ ಚೌಕ್‌ನಲ್ಲಿ ನಡೆಯುವ ಬೀಟಿಂಗ್ ರಿಟ್ರೀಟ್ ಸಮಾರಂಭವು ಗಣರಾಜ್ಯೋತ್ಸವ ಆಚರಣೆಯ ಅಂತ್ಯಭಾಗವಾಗಿರುತ್ತದೆ.

ಈ ವರ್ಷದ ಸಮಾರಂಭದಲ್ಲಿ ಮೊದಲಿಗೆ ಬಗ್ಲರ್‌ಗಳಿಂದ ಫ್ಯಾನ್‌ಫೇರ್‌ ಆಯೋಜಿಸಲಾಗಿದೆ. ನಂತರ ಮಾಸ್ಡ್ ಬ್ಯಾಂಡ್‌ಗಳಿಂದ ವೀರ್ ಸೈನಿಕ್, ಪೈಪ್ಸ್ ಮತ್ತು ಡ್ರಮ್ಸ್ ಬ್ಯಾಂಡ್‌ನಿಂದ ಆರು ಟ್ಯೂನ್‌ಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಬ್ಯಾಂಡ್‌ಗಳಿಂದ ಮೂರು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ನಂತರ ಏರ್ ಫೋರ್ಸ್ ಬ್ಯಾಂಡ್‌ನಿಂದ ನಾಲ್ಕು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ಇದರಲ್ಲಿ ವಿಶೇಷವಾದ ಲಡಾಕೂ ಟ್ಯೂನ್ ಕೂಡ ಸೇರಿಸಲಾಗಿದೆ.

ನೇವಿ ಬ್ಯಾಂಡ್‌ನವರು ನಾಲ್ಕು ರಾಗಗಳನ್ನು ನುಡಿಸುತ್ತಾರೆ. ನಂತರ ಆರ್ಮಿ ಮಿಲಿಟರಿ ಬ್ಯಾಂಡ್ ಮೂರು ರಾಗಗಳನ್ನು ನುಡಿಸುತ್ತದೆ. ಕದಮ್ ಕದಮ್ ಬಧಯೇ ಜಾ, ಡ್ರಮ್ಮರ್ಸ್ ಕಾಲ್, ಏ ಮೇರೆ ವತನ್ ಕೆ ಲೋಗೋನ್ ಸೇರಿದಂತೆ ಮೂರು ಟ್ಯೂನ್‌ಗಳನ್ನು ಮಾಸ್ಡ್ ಬ್ಯಾಂಡ್‌ಗಳು ಕೊನೆಯಲ್ಲಿ ನುಡಿಸುತ್ತವೆ.

ಬಗ್ಲರ್‌ಗಳು ಸಾರೆ ಜಹಾನ್ ಸೆ ಅಚ್ಚಾ ನುಡಿಸುವುದರೊಂದಿಗೆ ಸಮಾರಂಭವು ಕೊನೆಗೊಳ್ಳುತ್ತದೆ. ಇಡೀ ಕಾರ್ಯಕ್ರಮದಲ್ಲಿ 44 ಬಗ್ಲರ್‌ಗಳು, 16 ಟ್ರಂಪೆಟರ್‌ಗಳು ಮತ್ತು 75 ಡ್ರಮ್ಮರ್‌ಗಳು ಭಾಗವಹಿಸಲಿದ್ದಾರೆ.

ಸುಮಾರು ಒಂದು ವಾರ ನಡೆಯುವ ಗಣರಾಜ್ಯೋತ್ಸವದ ಅಂತ್ಯವನ್ನು ಬೀಟಿಂಗ್ ರಿಟ್ರೀಟ್ ಸೂಚಿಸುತ್ತದೆ. ಗಣರಾಜ್ಯೋತ್ಸವ ಜನವರಿ 24ರಂದು ಪ್ರಾರಂಭವಾಗುತ್ತಿತ್ತು. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ರಿಂದ ಚಾಲನೆ ಪಡೆಯಲಿದೆ. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ‌ಆಚರಿಸಲಾಗುತ್ತಿದೆ.


ಇದನ್ನೂ ಓದಿರಿ: ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...