Homeಮುಖಪುಟಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

ಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

- Advertisement -
- Advertisement -

ನವ ದೆಹಲಿ: ಭಾರತದ ಅತ್ಯಂತ ಎತ್ತರದ ವ್ಯಕ್ತಿ ಎಂದೇ ಗುರುತಿಸಲಾಗುತ್ತಿರುವ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಶನಿವಾರ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ಉತ್ತರ ಪ್ರದೇಶದ ಪ್ರತಾಪಗಢದವರಾದ ಸಿಂಗ್ ಅವರು 2.4 ಮೀ (8 ಅಡಿ 1 ಇಂಚು) ಎತ್ತರವಿದ್ದಾರೆ. ವಿಶ್ವ ದಾಖಲೆಗೆ ಕೇವಲ 11 ಸೆಂ. ಕಡಿಮೆ ಇದ್ದಾರೆ ಎನ್ನಲಾಗಿದೆ.

ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಪಟೇಲ್ ಅವರು ಸಿಂಗ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಈ ಬೆಳವಣಿಗೆ ಬಲಪಡಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಸಮಾಜವಾದಿ ಪಕ್ಷದ ನೀತಿಗಳು ಮತ್ತು ಅಖಿಲೇಶ್ ಯಾದವ್ ಅವರ ನಾಯಕತ್ವದಲ್ಲಿ ನಂಬಿಕೆಯನ್ನು ವ್ಯಕ್ತಪಡಿಸಿ ಪ್ರತಾಪ್‌ಗಢದ ಧರ್ಮೇಂದ್ರ ಪ್ರತಾಪ್ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಅವರು ಪಟೇಲ್ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಸಮಾಜವಾದಿ ಪಕ್ಷವನ್ನು ಬಲಪಡಿಸುವ ಭರವಸೆ ವ್ಯಕ್ತಪಡಿಸಿದರು. ಧರ್ಮೇಂದ್ರ ಅವರ ಸೇರ್ಪಡೆಯಿಂದ ಪಕ್ಷ ಬಲವಾಗುತ್ತದೆ ಎಂದು ಹೇಳಿದರು” ಎಂದು ಎಸ್‌ಪಿ ವಕ್ತಾರ ರಾಜೇಂದ್ರ ಚೌಧರಿ ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿಂಗ್ ಅವರು ತಮ್ಮ ಎತ್ತರದ ಕಾರಣದಿಂದ ಬಹಳಷ್ಟು ತೊಂದರೆಗಳನ್ನು ಎದುರಿಸಿದರು. ಅವರು ಹೆಜ್ಜೆ ಹಾಕಿದಾಗ ಅವರು ಹೆಚ್ಚಿನ ಗಮನವನ್ನು ಸೆಳೆಯುತ್ತಾರೆ. ಸಿಂಗ್ ಅವರೇ ಒಂದು ಸಂದರ್ಶನದಲ್ಲಿ ಹೇಳಿದಂತೆ, “ಜನರು ಫೋಟೋವನ್ನು ತೆಗೆದುಕೊಳ್ಳಲು ಬಯಸಿದಾಗ, ಸಿಂಗ್‌ ಅವರನ್ನು ಸೆಲೆಬ್ರಿಟಿಯಂತೆ ಜನ ಭಾವಿಸುತ್ತಾರೆ”.

“ನಾನು ಅಗಾಧವಾಗಿ ಜನಪ್ರಿಯನಾಗಿದ್ದೇನೆ. ನನ್ನ ಎತ್ತರದಿಂದಾಗಿ ಇದೆಲ್ಲ ಸಾಧ್ಯವಾಗಿದೆ” ಎಂದು ಅವರು ದಿ ಟೆಲಿಗ್ರಾಫ್‌ಗೆ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ರಾಜ್ಯವು ಹಲವಾರು ಕೌತುಕಗಳಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ಅಖಿಲೇಶ್ ಯಾದವ್ ಅವರು ತಮ್ಮ ಕುಟುಂಬದ ತವರು ನೆಲದಲ್ಲಿರುವ ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶನಿವಾರ ಘೋಷಿಸಿದ್ದಾರೆ.

ಗೋರಖ್‌ಪುರದಿಂದ ಐದು ಬಾರಿ ಲೋಕಸಭಾ ಸಂಸದರಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕ್ಷೇತ್ರದ ಒಂದು ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ಗೋರಖ್‌ಪುರದಿಂದ ಭೀಮ್‌ ಆರ್ಮಿಯ ನಾಯಕ ಚಂದ್ರಶೇಖರ್‌ ಆಜಾದ್ ರಾವಣ್ ಅವರೂ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿರಿ: ಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....