Homeಮುಖಪುಟವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

- Advertisement -
- Advertisement -

ಆಜಾದ್ ಸಮಾಜ ಪಕ್ಷದ (ಎಎಸ್‌ಪಿ) ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್‌ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ನೆಲದಲ್ಲಿ ಸವಾಲು ಹಾಕಿದ್ದಾರೆ. ಆದಿತ್ಯನಾಥ್ ಅವರ ವಿರುದ್ಧ ಸ್ಪರ್ಧಿಸಿರುವ ರಾವಣ್ ಅವರಿಗೆ ಯಶಸ್ಸು ಸಾಧ್ಯವೆ ಎಂಬ ವಿಶ್ಲೇಷಣೆಯನ್ನು ‘ದಿ ಕ್ವಿಂಟ್‌’ ಜಾಲತಾಣ ಮಾಡಿದೆ.

ರಾವಣ್‌ ಅವರು ಯೋಗಿ ವಿರುದ್ಧ ಗೋರಖ್‌ಪುರ ನಗರ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿಯ ಬಗ್ಗೆ ಮಾತನಾಡುವಾಗ ಚಂದ್ರಶೇಖರ್‌ ಈ ಹಿಂದೆ ಈ ವಿಚಾರವಾಗಿಯೇ ಪ್ರಸ್ತಾಪಿಸಿದ್ದರು. ಆದರೆ ಆ ಮಾತುಕತೆ ಯಶಸ್ಸು ಕಾಣಲಿಲ್ಲ. “ಅಖಿಲೇಶ್ ಅವರು ನನ್ನನ್ನು ಕೇಳಿದರೆ, ನಾನು ಯೋಗಿ ವಿರುದ್ಧ ಚುನಾವಣೆ ಎದುರಿಸಲು ಸಿದ್ಧ” ಎಂದು ರಾವಣ್‌ ಘೋಷಿಸಿದ್ದರು.

ರಾವಣ್‌ ಈಗ ಯೋಗಿ ಆದಿತ್ಯನಾಥ್ ವಿರುದ್ಧ ಕಣಕ್ಕಿಳಿದಿದ್ದಾರೆ. ಗೋರಖ್‌ಪುರ ಕ್ಷೇತ್ರದಲ್ಲಿ ಕೇಸರಿ ರಾಜಕಾರಣಿಯನ್ನು ಸೋಲಿಸಲು ಸಾಧ್ಯವಾಗುತ್ತದೆಯೇ? ಇದರಾಚೆಗೆ ಚಂದ್ರಶೇಖರ್‌ ಆಜಾದ್ ಯಾವುದಾದರೂ ವಿಷಯದ ಮೇಲೆ ಕಣ್ಣಿಟ್ಟಿದ್ದಾರೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಶೋಧಿಸುವ ಯತ್ನವನ್ನು ದಿ ಕ್ವಿಂಟ್ ಮಾಡಿದೆ.

ಗೋರಖನಾಥ ನಾಡಿನಲ್ಲಿ ದಲಿತ ಶಕ್ತಿ

ಕಳೆದ ಕೆಲವು ಚುನಾವಣೆಗಳಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಾಧನೆಯು ಗೋರಖ್‌ಪುರ ನಗರ ಕ್ಷೇತ್ರದಲ್ಲಿ ದಲಿತ ಮತಗಳ ರಾಜಕೀಯ ಬಲವನ್ನು ಸೂಚಿಸುತ್ತದೆ. ಕುತೂಹಲಕಾರಿಯಾಗಿ, ಕಳೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್‌ಪಿ ಎರಡನೇ ರನ್ನರ್‌ ಅಪ್‌ ಆಗುತ್ತಿರುವುದನ್ನು ಗಮನಿಸಬಹುದು.

2017ರಲ್ಲಿ ಬಿಎಸ್‌ಪಿಯ ಜನಾರ್ದನ್ ಚೌಧರಿ ಶೇ.11ರಷ್ಟು ಮತಗಳನ್ನು ಪಡೆದಿದ್ದರೆ, 2012ರಲ್ಲಿ ದೇವೇಂದ್ರ ಚಂದ್ರ ಶ್ರೀವಾಸ್ತವ ಶೇ.14ರಷ್ಟು ಮತಗಳನ್ನು ಗಳಿಸಿ 23,000 ಮತಗಳನ್ನು ಪಡೆದಿದ್ದರು. 2007 ರಲ್ಲಿ, ವಿನೋದ್ ಕುಮಾರ್ ಉಪಾಧ್ಯಾಯ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದರು. ಕೇವಲ 5,000 ಮತಗಳನ್ನು ಪಡೆದಿದ್ದರು.

ಬಿಎಸ್‌ಪಿಯ ವೋಟ್ ಬ್ಯಾಂಕ್‌ನ ಮೇಲೆ ಚಂದ್ರಶೇಖರ್‌ ಆಜಾದ್ ಕಣ್ಣಿಟ್ಟಿದ್ದಾರೆ. ಹಾಗಾಗಿ, ಬಿಎಸ್‌ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದರೆ, ದಲಿತ ಮತಗಳು ವಿಭಜನೆಯಾಗುವುದು ಖಚಿತ ಎನ್ನಲಾಗಿದೆ.

ಆದಿತ್ಯನಾಥ್‌ಗೆ ಸವಾಲೆಸೆಯುವ ಅಗಾಧ ಶಕ್ತಿ ರಾವಣ್‌‌ ಅವರಿಗೆ ಇಲ್ಲವೆಂದಾದರೆ, ಆದಿತ್ಯನಾಥ್‌ ಅವರನ್ನು ಏಕೆ ಎದುರಿಸಲು ನಿಂತಿದ್ದಾರೆ ಎಂಬುದು ರಾಜಕೀಯ ಪಂಡಿತರಿಗೆ ಕುತೂಹಲದ ಸಂಗತಿಯಾಗಿದೆ.

ಗೋರಖ್‌ಪುರ ಗ್ರಾಮಾಂತರ ಕ್ಷೇತ್ರದಲ್ಲಿ ದಲಿತ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರನ್ನು ಒಳಗೊಂಡಿರುವ ದೊಡ್ಡ ಪ್ರಮಾಣದ ಪ್ರದೇಶಗಳನ್ನು ಸೇರಿಸಿದ ಕಾರಣ ದಲಿತ ಮತ್ತು ಅಲ್ಪಸಂಖ್ಯಾತ ಮತದಾರರ ಶಕ್ತಿ ಬದಲಾಗಿದೆ. ಮುಖ್ಯವಾಗಿ ವೈಶ್ಯ, ಕಾಯಸ್ಥ, ರಜಪೂತ ಮತ್ತು ಬ್ರಾಹ್ಮಣ ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿಗೆ ಅನುಕೂಲಕರ ವಾತಾವರಣವಿದೆ.

ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿ ಮುರಿದುಬಿದ್ದ ನಂತರ ರಾವಣ್‌ ಮತ್ತು ಯೋಗಿ ನಡುವಿನ ಸಂಭಾವ್ಯ ರಹಸ್ಯ ಒಪ್ಪಂದದ ಬಗ್ಗೆ ವದಂತಿಗಳು ಹರಡಿಕೊಂಡಿವೆ ಎಂದು ಗೋರಖ್‌ಪುರ ಮೂಲದ ಹಿರಿಯ ಪತ್ರಕರ್ತ ಮನೋಜ್ ಕುಮಾರ್ ಸಿಂಗ್ ಹೇಳುತ್ತಾರೆ.

ಚುನಾವಣೆಯ ಹೋರಾಟವು ಆ ಆರೋಪದಿಂದ ಅವರನ್ನು ಮುಕ್ತಗೊಳಿಸಬಹುದು. ಆದರೆ ಇತರ ಪಕ್ಷಗಳಾದ ಎಸ್‌ಪಿ ಅಥವಾ ಕಾಂಗ್ರೆಸ್ – ರಾವಣ್ ಅವರನ್ನು ಬೆಂಬಲಿಸಿದರೆ ಮಾತ್ರ ಅವರ ರಾವಣ್‌ ಅವರಿಗೆ ಹೆಚ್ಚಿನ ಅವಕಾಶ ದೊರಕಬಹುದು.

ಮೇಲಾಗಿ, ಯೋಗಿ ಅವರು ದಲಿತ ಮತಗಳ ಕಡೆಗೂ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದಾರೆ. ಬಲಪಂಥೀಯ ಅಂಗಸಂಸ್ಥೆಯಾದ ಯುವ ವಾಹಿನಿಗೆ ಸ್ಲಂಗಳಲ್ಲಿ ಅನೇಕ ದಲಿತ ಯುವಕರು ಸೇರಿಕೊಂಡಿದ್ದಾರೆ. ಸ್ಲಂ ನಿವಾಸಿಗಳನ್ನು ನಿಯಮಿತವಾಗಿ ಯೋಗಿ ಆದಿತ್ಯನಾಥ್‌ ಅವರ ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ. ಈ ಚುನಾವಣೆಯಲ್ಲಿ ದಲಿತ ಮತದಾರರ ನಿರ್ಧಾರ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಮಾಯಾವತಿಯವರ ಪ್ರಾಬಲ್ಯ?

ಚಂದ್ರಶೇಖರ್ ಆಜಾದ್ ರಾವಣ್‌ ಅವರ ಪ್ರಯತ್ನಗಳು ದಲಿತ ರಾಜಕಾರಣದಲ್ಲಿ ಮಾಯಾವತಿಗೆ ಪರ್ಯಾಯವಾಗಲು ಯತ್ನಿಸಿವೆ. ಇತ್ತ ರಾವಣ್‌ ಅವರಿಗೆ ದಲಿತ ಯುವಕರಲ್ಲಿ ಸಾಕಷ್ಟು ಅನುಯಾಯಿಗಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ, ಮಾಯಾವತಿಯವರು ಸಾರ್ವಜನಿಕವಾಗಿ ಮಾತನಾಡುತ್ತಿರುವುದು ಕಡಿಮೆಯಾದಂತೆ ಚಂದ್ರಶೇಖರ್‌ ಆಜಾದ್‌ ಅವರೇ ದಲಿತ ಸಮಸ್ಯೆಗಳನ್ನು ಉತ್ಸಾಹದಿಂದ ಕೈಗೆತ್ತಿಕೊಂಡು ಬೀದಿಗಿಳಿದಿದ್ದಾರೆ. ಪ್ರಭಾವಿ ಆದಿತ್ಯನಾಥ್‌ ವಿರುದ್ಧ ಸ್ಪರ್ಧಿಸಿರುವುದು ಆಜಾ‌ದ್ ಅವರನ್ನು ದೊಡ್ಡ ಮಟ್ಟದಲ್ಲಿ ಗುರುತಿಸಲಿದೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಬಿಎಸ್‌ಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಆದರೆ ರಾವಣ್‌ ಹೆಚ್ಚು ಮತಗಳನ್ನು ಪಡೆಯಲು ಯಶಸ್ವಿಯಾದರೆ, ಇಲ್ಲಿಯವರೆಗೆ ಬಹುತೇಕ ಅವಿರೋಧವಾಗಿ ದಲಿತ ಇಮೇಜ್‌ ಆಗಿ ಉಳಿದಿರುವ ‘ಬೆಹೆನ್‌ಜಿ’ ಚಿತ್ರಣ ಬದಲಾಗಬಹುದು ಎನ್ನಲಾಗುತ್ತಿದೆ.

ಆದರೆ, ಮಾಯಾವತಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಚಂದ್ರಶೇಖರ್ ಆಜಾದ್ ಎಚ್ಚರಿಕೆ ವಹಿಸಿದ್ದಾರೆ. ದಲಿತ ಮತಗಳ ಮೇಲಿನ ಮಾಯಾವತಿಯವರ ‘ಅಧಿಪತ್ಯ’ದ ವಿರುದ್ಧ ಅವರು ಯಾವುದೇ ಕಹಳೆ ಊದುತ್ತಿಲ್ಲ. ಚಂದ್ರಶೇಖರ್‌‌ ನಡೆಗಳು ದಲಿತ ಮತದಾರರನ್ನು ಬಿಎಸ್‌ಪಿಯಿಂದ ಹೊರತರುವ ಯತ್ನಗಳಂತೆ ಭಾಸವಾಗುತ್ತಿವೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಚಂದ್ರಶೇಖರ್ ಆಜಾದ್ ರಾವಣ ಗೆಲ್ಲಬಹುದು ಅಥವಾ ಗೆಲ್ಲದೇ ಇರಬಹುದು. ಆದರೆ ಆದಿತ್ಯನಾಥ್‌ ತವರು ನೆಲದಲ್ಲಿ ಅವರ ವಿರುದ್ಧ ಹೋರಾಡುವ ಮೂಲಕ ಲಾಭ ಪಡೆಯಲು ಸಿದ್ಧರಾಗಿದ್ದಾರೆ ಎಂದು ಕ್ವಿಂಟ್ ವರದಿ ಹೇಳುತ್ತದೆ


ಇದನ್ನೂ ಓದಿರಿ: ಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....