Homeಮುಖಪುಟಸುಭಾಷ್ ಚಂದ್ರ ಬೋಸ್ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಲು ಮಮತಾ ಬ್ಯಾನರ್ಜಿ ಆಗ್ರಹ

ಸುಭಾಷ್ ಚಂದ್ರ ಬೋಸ್ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಲು ಮಮತಾ ಬ್ಯಾನರ್ಜಿ ಆಗ್ರಹ

- Advertisement -
- Advertisement -

ಒಕ್ಕೂಟ ಸರ್ಕಾರ ಏಕೆ ನೇತಾಜಿ ಸುಭಾಷ್ ಚಂದ್ರ ಬೋಸ್‌ ಅವರ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ (ಜ.23) ಪ್ರಶ್ನಿಸಿದ್ದಾರೆ.

ಜಪಾನ್‌ನ ರೆಂಕೋಜಿ ದೇವಸ್ಥಾನದಲ್ಲಿ ಸಂರಕ್ಷಿಸಲ್ಪಟ್ಟಿರುವ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಚಿತಾಭಸ್ಮವನ್ನು ಡಿಎನ್‌ಎ ಪರೀಕ್ಷೆಗೆ ಕಳುಹಿಸಬೇಕೆಂದು ತೃಣಮೂಲ ಕಾಂಗ್ರೆಸ್ ಪಕ್ಷವು ಒತ್ತಾಯಿಸಿದೆ.

ನೇತಾಜಿ ಅವರ 125 ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿರುವ ಅವರು, ಒಕ್ಕೂಟ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ನೇತಾಜಿ ಕಣ್ಮರೆಯ ಹಿಂದಿನ ರಹಸ್ಯವನ್ನು ಬಹಿರಂಗಪಡಿಸುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೇತಾಜಿ ಜನ್ಮದಿನ: ಹೀಗಿದ್ದರು ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್

“ಪ್ರತಿಮೆ ಸ್ಥಾಪಿಸುವ ಮೂಲಕ ನೇತಾಜಿ ಅವರ ಮೇಲಿನ ಪ್ರೀತಿಯನ್ನು ನೀವು ಘೋಷಿಸಲು ಸಾಧ್ಯವಿಲ್ಲ, ಅವರ ಕಣ್ಮರೆ ಹಿಂದಿನ ರಹಸ್ಯವನ್ನು ಅನಾವರಣಗೊಳಿಸಲು ನೀವು ಏನು ಮಾಡಿದ್ದೀರಿ..? ಕೇಂದ್ರದಲ್ಲಿರುವ ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ರಹಸ್ಯಗಳನ್ನು ಬಯಲಿಗೆಳೆಯುವುದಾಗಿ ಭರವಸೆ ನೀಡಿತ್ತು, ಆದರೆ ಅದು ವಿಫಲವಾಗಿದೆ” ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಸಾವಿನ ವಿವಾದವು ಬಂಗಾಳದಲ್ಲಿ ಭಾರೀ ಭಾವನಾತ್ಮಕ ವಿಷಯವಾಗಿದೆ. ಅವರು 1945 ರಲ್ಲಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿಲ್ಲ ಎಂದು ಹಲವರು ನಂಬುತ್ತಾರೆ.

2017 ರಲ್ಲಿ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರವಾಗಿ, ಸುಭಾಸ್ ಚಂದ್ರ ಬೋಸ್ ಅವರು ಆಗಸ್ಟ್ 18, 1945 ರಂದು ತೈಪೆಯಲ್ಲಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಒಕ್ಕೂಟ ಸರ್ಕಾರ ದೃಢಪಡಿಸಿತು.

ನೇತಾಜಿಗೆ ಸಂಬಂಧಿಸಿದ ಎಲ್ಲ ಕಡತಗಳನ್ನು ಬಹಿರಂಗಪಡಿಸಿರುವುದಾಗಿ ಒಕ್ಕೂಟ ಸರ್ಕಾರ ಹೇಳಿಕೊಂಡಿದೆ. ಏಪ್ರಿಲ್ 2016 ರಲ್ಲಿ, ಕೇಂದ್ರವು 25 ಡಿಕ್ಲಾಸಿಫೈಡ್ ಫೈಲ್‌ಗಳ ಮೂರನೇ ಬ್ಯಾಚ್ ಅನ್ನು ಬಿಡುಗಡೆ ಮಾಡಿತು, ಇದರಲ್ಲಿ ಪ್ರಧಾನ ಮಂತ್ರಿ ಕಚೇರಿ ಮತ್ತು ಗೃಹ ಸಚಿವಾಲಯದಿಂದ ತಲಾ ಐದು ಫೈಲ್‌ಗಳು ಮತ್ತು ವಿದೇಶಾಂಗ ಸಚಿವಾಲಯದ 15 ಫೈಲ್‌ಗಳು ಸೇರಿವೆ. ಕಡತಗಳು 1956 ಮತ್ತು 2009 ರ ನಡುವಿನ ಅವಧಿಗೆ ಸಂಬಂಧಿಸಿವೆ. ಆದರೆ, ಈ ಕಡತಗಳು ಸಾರ್ವಜನಿಕರಿಗೆ ಲಭ್ಯವಿಲ್ಲ ಎಂದು ಸಂಶೋಧಕರ ತಂಡ ಆರೋಪಿಸಿದೆ. ಶನಿವಾರ(ಜ.22) ತೃಣಮೂಲ ಕಾಂಗ್ರೆಸ್ ಸಂಸದ ಸುಖೇಂದು ಶೇಖರ್ ರೇ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ನೇತಾಜಿ ಫೈಲ್‌ಗಳ ವರ್ಗೀಕರಣವನ್ನು ಕೋರಿದ್ದಾರೆ.

ಇಂಡಿಯಾ ಗೇಟ್‌ನಲ್ಲಿ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರ ಗ್ರಾನೈಟ್ ಪ್ರತಿಮೆಯನ್ನು ನಿರ್ಮಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ. ಪ್ರತಿಮೆ ಸಿದ್ಧವಾಗುವವರೆಗೆ ಸ್ಥಳದಲ್ಲಿ ನೇತಾಜಿಯ ಹೋಲೋಗ್ರಾಂ ಹಾಕಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ, ಚಿತ್ರವನ್ನು ಹಂಚಿಕೊಂಡಿದ್ದರು.

“ನಾವು ನಿಮ್ಮ ಮೇಲೆ ಒತ್ತಡ ಹೇರಿದ್ದರಿಂದ ಪ್ರತಿಮೆಯನ್ನು ನಿರ್ಮಿಸಲಾಗುತ್ತಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.


ಇದನ್ನೂ ಓದಿ: ಒಕ್ಕೂಟ ಸರ್ಕಾರ ತಿರಸ್ಕರಿಸಿದ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಕೊಲ್ಕತ್ತಾದಲ್ಲಿ ಪ್ರದರ್ಶನ: ಬಂಗಾಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...