Homeಮುಖಪುಟಬಿಹಾರ: ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಬಿಜೆಪಿ ಶಾಸಕನ ಮಗನಿಗೆ ಗ್ರಾಮಸ್ಥರಿಂದ ಥಳಿತ

ಬಿಹಾರ: ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಬಿಜೆಪಿ ಶಾಸಕನ ಮಗನಿಗೆ ಗ್ರಾಮಸ್ಥರಿಂದ ಥಳಿತ

- Advertisement -
- Advertisement -

ತೋಟವೊಂದರಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಆರೋಪದ ಮೇಲೆ ಬಿಹಾರದ ಸಚಿವರೊಬ್ಬರ ಮಗ ಮತ್ತು ಸಹೋದರರನ್ನು ಗ್ರಾಮಸ್ಥರ ಗುಂಪೊಂದು ಥಳಿಸಿದೆ. ಸಚಿವರ ಮಗನನ್ನು ಥಳಿಸಿದ ಗುಂಪು ಆತ ಗುಂಡು ಹಾರಿಸಿದ್ದ ಎನ್ನಲಾದ ಬಂದೂಕನ್ನು ಸಹ ಕಸಿದುಕೊಂಡಿದ್ದಾರೆ.

ಬಿಜೆಪಿ ನಾಯಕ ಮತ್ತು ರಾಜ್ಯ ಪ್ರವಾಸೋದ್ಯಮ ಸಚಿವ ನಾರಾಯಣ ಪ್ರಸಾದ್ ಅವರ ಮಗ ಬಬ್ಲು ಕುಮಾರ್ ಮೇಲೆ ಪಶ್ಚಿಮ ಚಂಪಾರಣ್ ಜಿಲ್ಲೆಯ ಮೊಫುಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹರಾಡಿಯ ಕೊಯೆರಿ ಟೋಲಾ ಗ್ರಾಮದಲ್ಲಿ ಹಲ್ಲೆ ನಡೆಸಲಾಗಿದೆ.

ಹಲ್ಲೆಗೊಳಗಾಗಿರುವ ಸಚಿವರ ಮಗ ಬಬ್ಲು ಕುಮಾರ್ ತೋಟದಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದು ಕಾಲ್ತುಳಿತಕ್ಕೆ ಕಾರಣವಾಗಿದ್ದು, ಒಂದು ಮಗು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ಬಬ್ಲು ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ಪರಿಸ್ಥಿತಿ ಕೈ ಮೀರಿತು ಎಂದು ಸ್ಥಳೀಯರು ತಿಳಿಸಿದ್ದಾರೆ.

“ಮಕ್ಕಳು ಇಲ್ಲಿ ಕ್ರಿಕೆಟ್ ಆಡುತ್ತಿದ್ದರು. 4 ರಿಂದ 5 ಜನರು ಅವರನ್ನು ಥಳಿಸಲು ಪ್ರಾರಂಭಿಸಿದರು, ಒಬ್ಬ ವ್ಯಕ್ತಿಗೆ ಬಂದೂಕಿನಿಂದ ಹೊಡೆದು ಗುಂಡು ಹಾರಿಸಿದರು. ಅವರಲ್ಲಿ ಒಬ್ಬರು ನಾರಾಯಣ್ ಅವರ ಮಗ” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಉಪ ಮುಖ್ಯಮಂತ್ರಿಗೆ ಘೇರಾವ್ ಹಾಕಿ, ಸ್ವ ಕ್ಷೇತ್ರದಿಂದ ವಾಪಸ್ ಕಳುಹಿಸಿದ ಮಹಿಳೆಯರು

 

ಸದ್ಯ ಗಾಯಗೊಂಡ ಗ್ರಾಮಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಂಡು ಹಾರಿಸಿದ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಯಾಳುಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವ ಸಚಿವರ ಪುತ್ರ, ತಾವು ಯಾವುದೇ ಗುಂಡು ಹಾರಿಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ತೋಟವೊಂದರ ಮೇಲಿನ “ಅತಿಕ್ರಮಣ”ದ ಬಗ್ಗೆ ತಿಳಿದ ನಂತರ ತಾವು ಸ್ಥಳಕ್ಕೆ ಹೋದೆವು. ಅಲ್ಲಿ ಗ್ರಾಮಸ್ಥರು ಹಲ್ಲೆ ನಡೆಸಿದರು. ಪರವಾನಗಿ ಪಡೆದ ಬಂದೂಕನ್ನು ಕಸಿದುಕೊಂಡು, ನಮ್ಮ ವಾಹನಗಳನ್ನು ಧ್ವಂಸಗೊಳಿಸಲಾಯಿತು ಎಂದು ಬಬ್ಲು ಕುಮಾರ್‌ ಆರೋಪಿಸಿದ್ದಾರೆ.

ಬಬ್ಲು ಕುಮಾರ್ ಅವರೊಂದಿಗೆ ಚಿಕ್ಕಪ್ಪ ಹರೇಂದ್ರ ಪ್ರಸಾದ್, ಮ್ಯಾನೇಜರ್ ವಿಜಯ್ ಸಾಹ್ ಮತ್ತು ಇತರ ಸಹಚರರು ಇದ್ದರು, ಅವರೆಲ್ಲರೂ ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಪೇಂದ್ರ ವರ್ಮಾ ಹೇಳಿದ್ದಾರೆ.

ಸ್ಥಳದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಈ ಪ್ರದೇಶದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಪೇಂದ್ರ ವರ್ಮಾ ಅವರು ಪಿಟಿಐಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....