Homeಕರ್ನಾಟಕಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ವಿವಿ ಬೇಡ, ಮಾಗಡಿಯಾದ್ಯಂತ ಪ್ರಚಾರಾಂದೋಲನಕ್ಕೆ ಕೆವಿಎಸ್‌ ನಿರ್ಧಾರ

ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ - ಹರ್ಷಕುಮಾರ್ ಕುಗ್ವೆ

- Advertisement -
- Advertisement -

ಸಂಸ್ಕೃತ ಭಾಷೆ ಯಾವುದೇ ಪ್ರದೇಶದಲ್ಲಿಯೂ ಬಳಕೆಯಲ್ಲಿಲ್ಲದ ಭಾಷೆ. ಆ ಭಾಷೆಗೂ ಈಗಾಗಲೇ 16 ವಿವಿಗಳು ಇವೆ. ಇದೀಗ ಮತ್ತೊಂದು ಸಂಸ್ಕೃತ ವಿವಿಯ ಅಗತ್ಯವಿಲ್ಲ. ಬದಲಾಗಿ ಕನ್ನಡ ವಿವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ. ಸಂಸ್ಕೃತ ವಿವಿ ಯಾಕೆ ಬೇಡ ಎಂದು ಮಾಗಡಿ ತಾಲ್ಲೂಕಿನಾದ್ಯಂತ ಪ್ರಚಾರಾಂದೋಲನ ಮಾಡಿ, ಜನರಿಗೆ ಈ ಬಗ್ಗೆ ಅರಿವು ಮೂಡಿಸಲು ಕೆವಿಎಸ್ ನಿರ್ಧರಿಸಿದೆ.

ಕ್ಲಬ್‌ ಹೌಸ್‌ನಲ್ಲಿ ‘ಸಂಸ್ಕೃತ ವಿವಿ ಯಾಕೆ ಬೇಡ?’ ಎಂಬ ವಿಷಯದ ಬಗ್ಗೆ ಕೆವಿಎಸ್‌ ಚರ್ಚೆಯನ್ನು ಆಯೋಜಿಸಿತ್ತು. ಈ ವೇಳೆ, ಮಾತನಾಡಿದ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ, ಕೆವಿಎಸ್‌ ಸಂಘಟನೆಯು ಕರವೇ ಜೊತೆಗೂಡಿ ಪ್ರಚಾರಾಂದೋಲನ ನಡೆಸುವುದಾಗಿ ಘೋಷಿಸಿದ್ದಾರೆ.

ಚರ್ಚೆಯಲ್ಲಿ ಮಾತನಾಡಿದ ಕರವೇ ಸಮಾಜಿಕ ಜಾಲತಾಣ ಸಂಚಾಲಕ ಸಜಿತ್, “ದೇಶದಲ್ಲಿ ಒಟ್ಟು 16 ಸಂಸ್ಕೃತ ವಿವಿಗಳಿವೆ. ಕರ್ನಾಟಕದಲ್ಲಿ 35 ಸಂಸ್ಕೃತ ಶಾಲೆ ಮತ್ತು ಅಧ್ಯಯನ ಕೇಂದ್ರಗಳಿವೆ. ಆದರೆ ಇಡೀ ಭಾರತದಲ್ಲಿ ಕೇವಲ 1 ಕನ್ನಡ ವಿವಿ ಇದೆ. ನಮ್ಮ ಹಂಪಿಯ ಕನ್ನಡ ವಿವಿ ಗಾಗಿ ಆರು ಕೋಟಿ ಅನುದಾನ ಕೊಡಲು ಹೊರಾಟ ಮಾಡಲಾಗಿತ್ತು. ಆದರೆ ಅದನ್ನು ಕೊಡದ ಸರ್ಕಾರ ಸಂಸ್ಕೃತ ವಿವಿ ಗೆ ಪೋಷಣೆ ಮಾಡುತ್ತಿರುವುದು ಕನ್ನಡ ಕೊಲ್ಲುವ ಹುನ್ನಾರ” ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.

ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೂ ಕೂಡ ತಕರಾರು ಎತ್ತುತ್ತಾರೆ. ಕನ್ನಡದ ಭಾಷೆಯಲ್ಲಿ ಸಂಸ್ಕೃತವನ್ನು ತುರುಕುವ ಕೆಲಸ ನಡೆಯುತ್ತಿದೆ. ಕನ್ನಡದ ಮೇಲೆ ಸಂಸ್ಕೃತದ ಹೇರಿಕೆ ಮಾಡುತ್ತಾ ದೇವನಾಗರಿಗೆ ಉತ್ತೇಜನ ನೀಡುತ್ತಿದೆ. ಕನ್ನಡವನ್ನು ಉಪಯೋಗದ ಭಾಷೆಯನ್ನಾಗಿ ಮಾಡಬೇಕು ಅದರಿಂದ ಕನ್ನಡವನ್ನು ಗಟ್ಟಿಯಾಗಿಸಬಹುದು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಮಾತನಾಡಿ, “ಕನ್ನಡ ಮತ್ತು ಕನ್ನಡ ವಿವಿಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಯಾವುದೇ ತರಹದ ಅನುದಾನ ಸಿಗುತ್ತಿಲ್ಲ. ವಿವಿಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರದ ವಿರುದ್ದ ಸಂಸ್ಕೃತಪರ ಸಂಘಟನೆಗಳು ಕೋರ್ಟಿಗೆ ಹೋಗುತ್ತಿವೆ. ಕನ್ನಡ ಕಡ್ಡಾಯವಲ್ಲ ಎಂದು ಕೊರ್ಟಿಗೆ ಹೋಗಿರುವ ಸಂಘಟನೆಗಳೊಂದಿಗೆ ಬಿಜೆಪಿ-ಆರ್‌ಎಸ್‌ಎಸ್‌ ಸೇರಿಕೊಂಡಿವೆ. ಮಾತೃಭಾಷೆ ಕಲಿಕೆಯ ವಿಷಯದಲ್ಲಿ ಸರಕಾರ ಹಿಂಜರಿಯುತ್ತಿದೆ. ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕೆ ತಕರಾರು ಎತ್ತಿದವರು ಮುಂದೆ ಶಾಲೆಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರುದ್ದ ಬರಬಹುದು. ಪ್ರಾದೇಶಿಕ ಭಾಷೆಗಳನ್ನು ಕೊಲ್ಲುವ ಪ್ರಯತ್ನ ನಡೆಯುತ್ತಿದ್ದು, ಅದರ ಪ್ರಯೋಗ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾನಪದ ವಿವಿ, ಹಂಪಿ ಕನ್ನಡ ವಿವಿ, ಮೈಸೂರು ವಿವಿ ಗಳಲ್ಲಿನ ಸಿಬ್ಬಂದಿ ಮತ್ತು ಉಪನ್ಯಾಸಕರಿಗೆ ಸಂಬಳ ಕೊಡಲು ಸಹ ದುಡ್ಡಿಲ್ಲ. ಆದರೆ, ಭಾರತ ಸರಕಾರ 1200 ಕೋಟಿ ಸಂಸ್ಕೃತಕ್ಕೆ ಕೊಟ್ಟಿದೆ. ಇದರಿಂದ ಜನಸಾಮಾನ್ಯರಿಗೆ ಏನಾದರೂ ಉಪಯೋಗ ಆಗಿದೆಯೇ ಎಂದು ಅವರು ಪ್ರಶ್ನಿಸಿದರು.

ಚರ್ಚೆಯಲ್ಲಿ ಮಾತನಾಡಿದ ಕರವೇ ರಾಜ್ಯ ಮುಖಂಡರಾದ ದಿನೇಶ್ ಕುಮಾರ್ ದಿನೂ, “ಆಡಳಿತ ಭಾಷೆ ಒಂದೇ ಇರಬೇಕು ಎಂದು ಹೇಳುವ ಸಂವಿಧಾನದ 343 ರಿಂದ 351ರ ವಿಧಿಯವರೆಗೂ ಇವೆಲ್ಲವೂ ಕನ್ನಡ/ಪ್ರಾದೆಶಿಕ ಬಾಷೆಗಳನ್ನು ಕೊಲ್ಲುವ ವಿಧಿಗಳಾಗಿವೆ. ಕನ್ನಡಿಗರಿಗೆ ತಲೆಮೇಲೆ ಸಂಸ್ಕೃತವನ್ನು ಕೂರಿಸುವುದು ಮೊದಲಿನಿಂದ ನಡೆದುಬಂದಿದೆ. ‘ಒಂದು ದೇಶ, ಒಂದು ಭಾಷೆ’ ಎಂಬುದು ನಾಗಪುರದ ಆರ್ ಎಸ್ ಎಸ್ ಅಜೆಂಡ. ಅದನ್ನು ಜಾರಿಗೆ ತರಲು ಸಂಸ್ಕೃತ ವಿವಿಯ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಮುಂದಾಗಿದೆ” ಎಂದು ಆರೋಪಿಸಿದ್ದಾರೆ.

ಜನರ ನುಡಿಯನ್ನ ಕೊಂದರೆ ಜನರನ್ನೇ ಕೊಂದಂತೆ. ದೆಹಲಿಯಲ್ಲಿ ನಡೆದ ರೈತ ಹೊರಾಟದ ಮಾದರಿಯಲ್ಲಿ ಕನ್ನಡಕ್ಕಾಗಿ ಕರವೇಯಿಂದ ಹೋರಾಟ ನಡೆಯಲ್ಲಿದೆ ಎಂದು ನಾರಾಯಣ ಗೌಡ ರವರು ಕರೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ ಕುಗ್ವೆ, ಕಳೆದ 40-50 ವರ್ಷಗಳಿಂದ ಸಂಸ್ಕೃತ ವಿವಿಗಳು ಕೆಲಸ ಮಾಡಿವೆ. ಆದರೆ, ಅದರಿಂದ ಯಾವುದಾದರೂ ಮಹತ್ವದ ಕೆಲಸವಾಗಿದೆಯೇ? ಕೇವಲ ಭಾಷಾ ಅಭಿಮಾನದಿಂದ ಸಂಸ್ಕೃತ ವಿವಿ ಸ್ಥಾಪಿಸುತ್ತಿರುವುದೇಕೆ? ಸಂಸ್ಕೃತದಿಂದ ಜನರಿಗೆ ಜ್ಞಾನವನ್ನು ಹಂಚಿಕೆ ಮಾಡುವ ಉದ್ದೆಶವಲ್ಲ ಇದರ ಹಿಂದೆ ಒಂದು ಅಜೆಂಡವಿದೆ ಎಂದು ಆರೋಪಿಸಿದರು.

ಈಗಾಗಲೇ ಚಾಲ್ತಿಯಲಿಲ್ಲದ ಬಾಷೆಯನ್ನು ಇಸ್ರೇಲ್‌ನಲ್ಲಿ ಹಿಬ್ರೋ ರಾಷ್ಟ್ರಭಾಷೆಯನ್ನಾಗಿ ಮಾಡಿದೆ. ಅದೇ ರೀತಿಯಲ್ಲಿ ಸಂಘ ಪರಿವಾರ ಸಂಸ್ಕೃತ ವನ್ನು ರಾಷ್ಟ್ರಭಾಷೆ ಮಾಡುವ ಹುನ್ನಾರ ನಡೆಸುತ್ತಿದೆ. ಸಂಸ್ಕೃತ ಸತ್ತ ಭಾಷೆ ಮಾತ್ರವಲ್ಲ, ಅದು ಕನ್ನಡದ ಕತ್ತು ಹಿಸುಕುತ್ತಿರುವ ಭಾಷೆಯಾಗಿದೆ. ಈ ಬಗ್ಗೆ ಮಾಗಡಿಯ ಜನರಿಗೆ ಮತ್ತು ರಾಜಕಾರಣಿಗಳಿಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ’ಸಂಸ್ಕೃತ’ ಪುನರುತ್ಥಾನ ಮತ್ತು ನೆಲದ ’ನುಡಿ’ಗಳ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂಸ್ಕೃತ ವಿ.ವಿ.ಸ್ಥಾಪನೆಯಿಂದ ಕನ್ನಡ ಜನತೆಗೆ ಯಾವ ಪ್ರಯೋಜನವೂ ಇಲ್ಲ. ಆದ್ದರಿಂದ ಅದು ಬೇಡ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...