Homeದಲಿತ್ ಫೈಲ್ಸ್ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಚಿಕಿತ್ಸೆಗಾಗಿ ದಾಖಲಾಗಿದ್ದ ಸರ್ಕಾರಿ ಆಸ್ಪತ್ರೆಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಚಿತ್ತೂರು ಪೊಲೀಸ್ ಠಾಣೆಯಲ್ಲಿ ಹಣ ಕಳ್ಳತನ ಮಾಡಿದ ಆರೋಪದಲ್ಲಿ ವಿಚಾರಣೆಗೆ ಬಂದಿದ್ದ ದಲಿತ ಮಹಿಳೆಯನ್ನು ಆರೋಪ ಒಪ್ಪುವಂತೆ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಮಹಿಳೆಯ ವೀಡಿಯೊವನ್ನು ಹಂಚಿಕೊಂಡಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಘಟನೆಯನ್ನು ಖಂಡಿಸಿದೆ. ಇದೊಂದು ಅನಾಕರಿಕ, ಕ್ರೂರ ಘಟನೆ ಎಂದು ಹೇಳಿದೆ. ಜಸ್ಟಿಸ್ ಚಂದ್ರ ಅವರಂತ ವ್ಯಕ್ತಿಗಳು ಇಂತಹ ದುರಂತಗಳ ಕುರಿತು ಮಾತಾಡಬೇಕು ಎಂದು ಒತ್ತಾಯಿಸಿದೆ.

ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಿ ನಗರ ಕಾಲೋನಿಯ 34 ವರ್ಷದ ಎಂ ಉಮಾಮಹೇಶ್ವರಿ ಅವರು ಚಿತ್ತೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳು ತನಗೆ ಕಿರುಕುಳ ನೀಡಿದ್ದಾರೆ ಮತ್ತು ತನ್ನ ವಿರುದ್ಧ ಸುಳ್ಳು ಆರೋಪವನ್ನು ಒಪ್ಪುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಿದ್ದಾರೆ.

ಚಿತ್ತೂರಿನ ಜಿಲ್ಲಾ ಕಾರಾಗೃಹದ ಅಧೀಕ್ಷಕ ವೇಣುಗೋಪಾಲ್ ರೆಡ್ಡಿ ಅವರ ನಿವಾಸದಲ್ಲಿ ಸಹಾಯಕಿಯಾಗಿ ಉಮಾಮಹೇಶ್ವರಿ ಕೆಲಸ ಮಾಡುತ್ತಿದ್ದಾರೆ. 2 ಲಕ್ಷ ನಗದು ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

 

ವೇಣುಗೋಪಾಲ್ ರೆಡ್ಡಿ ಅವರ ಮನೆಗೆ ದಿನನಿತ್ಯದ ಕೆಲಸಕ್ಕೆ ಹೋದಾಗ, ಗಮಡ ಹೆಂಡತಿ ಹಣದ ವಿಷಯವಾಗಿ ಜಗಳವಾಡುತ್ತಿದ್ದರು. ಆ ವೇಳೆ ದಂಪತಿ ಹಣ ನಾಪತ್ತೆಯಾಗಿದ್ದು, ನೀನು ನೋಡಿದೆಯಾ ಎಂದು ಕೇಳಿದರು. ಹಣದ ಬಗ್ಗೆ ತನಗೆ ಗೊತ್ತಿಲ್ಲ ಎಂದು ಉತ್ತರಿಸಿದೆ. ನೀನೆ ಕದ್ದಿದಿಯ ಎಂದರು. ಇಲ್ಲ ಎಂದೆ. ಮನೆ ತುಂಬಾ ಹುಡುಕು ಎಂದರು ಮಧ್ಯಾಹ್ನ 3 ಗಂಟೆಯವರೆಗೂ ಹುಡುಕಾಡಿದೆವು. ಬಳಿಕ ನೀನು ಹೋಗಿ ಊಟ ಮಾಡಿಕೊಂಡು ಬಾ. ನಾವು ಆಮೇಲೆ ಫೋನ್ ಮಾಡುತ್ತೇವೆ ಎಂದರು. ಮನೆಗೆ ಬರುವಷ್ಟರಲ್ಲಿ ಪೊಲಿಸರು ಪೋನ್ ಮಾಡಿ ಠಾಣೆಗ ಬನ್ನಿ ನಿಮ್ಮ ಮೇಲೆ ಕಂಪ್ಲೆಂಟ್ ಕೊಟ್ಟಿದ್ದಾರೆ ಎಂದರು. ವಿಚಾರನೆಯಲ್ಲಿ ನಾನು ಹಣ ಕದ್ದಿಲ್ಲ ಎಂದು ಹೇಳಿದೆ. ರಾತ್ರಿ 9 ಗಂಟೆಯವರೆಗೂ ಠಾಣೆಯಲ್ಲಿ ಇರಿಸಿಕೊಂಡು, ಬೆಳಗ್ಗೆ ಬರುವಂತೆ ಹೇಳಿ ಕಳುಹಿಸಿದರು. ಮಾರನೆ ದಿನ ಠಾಣೆಗೆ 12 ಗಂಟೆಗೆ ಹೋದೆ. ಮಧ್ಯಾಹ್ನ 1 ಗಂಟೆಯಿಂದ ಒಂದೂವರೆ ಗಂಟೆಯವರೆಗೆ ಒಂದು ಕತ್ತಲೆ ರೂಮಿನಲ್ಲಿ ಕೂಡಿ ಹಾಕಿ, ಕೈ ಕಾಲು ಕಟ್ಟಿ ಬಾಯಿಗೆ ಬಟ್ಟೆ ತೂರುಕಿ ಲಾಠಿ ಮತ್ತು ಬೂಟು ಕಾಲಿನಿಂದ ಆತ ತೀವ್ರವಾಗಿ ಥಳಿಸಿದರು. ಕೆಟ್ಟ ಕೆಟ್ಟ ಮಾತುಗಳಲ್ಲಿ ಬೈದರು. ಬಳಿಕ ಇನ್ಸ್‌ಪೆಕ್ಟರ್‌ ಬಳಿ ಕಡೆದುಕೊಂಡು ಹೋಗಿ ಅಲ್ಲೂ ಲಾಠಿಯಿಂದ ಹೊಡೆದರು. ಅಷ್ಟರಲ್ಲಿ ಅವರಿಗೆ ಒಂದು ಫೋನ್ ಬಂತು. ನಿನ್ನ ವಿರುದ್ಧ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಫಿಂಗರ್‌ ಪ್ರಿಂಟ್ ಕೂಡ ಮ್ಯಾಚ್ ಆಗುತ್ತಿಲ್ಲ. ಅವರ ಹೆಂಡತಿಯದೆ ತಪ್ಪು. ನಂಗೆ ಒಂದು ಒಳ್ಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೆವೆ. ದುಡ್ಡು ಇರುವವರ ಬಳಿ ಯಾಕೆ ಕೆಲಸಕ್ಕೆ ಹೋಗ್ತಿರಾ ಎಂದು ಹೇಳಿ ರಾತ್ರಿ 10 ಗಂಟೆಗೆ ಕಳುಹಿಸಿದರು. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದೆ. ಅಲ್ಲಿಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು. ಅಲ್ಲಿಂದಲೂ ವಾಪಸ್ ಕಳುಹಿಸಿದರು” ಎಂದು ಹಲ್ಲೆಗೊಳಗಾದ ಸಂತ್ರಸ್ತೆ ತಿಳಿಸಿದ್ದಾರೆ.

ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಚಿತ್ತೂರು ಉಪ ಪೊಲೀಸ್ ಮಹಾನಿರೀಕ್ಷಕ ಎಸ್ ಸೆಂಥಿಲ್ ಕುಮಾರ್, ಆರೋಪಿ ಕಾನ್‌ಸ್ಟೆಬಲ್ ವಿ ಸುರೇಶ್ ಬಾಬು ಅವರನ್ನು ಭಾನುವಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಡಿಐಜಿ ಎಸ್ ಸೆಂಥಿಲ್ ಕುಮಾರ್ ಅವರು ಪ್ರಕರಣದ ಕೂಲಂಕಷ ತನಿಖೆ ನಡೆಸಿ ಶೀಘ್ರವೇ ವಿವರವಾದ ವರದಿಯನ್ನು ಸಲ್ಲಿಸುವಂತೆ ಹೆಚ್ಚುವರಿ ಎಸ್ಪಿ ಡಿಎನ್ ಮಹೇಶ್ ಅವರಿಗೆ ಸೂಚಿಸಿದ್ದಾರೆ.

ಎಎನ್‌ಐ ಜೊತೆ ದೂರವಾಣಿ ಮೂಲಕ ಸಂವಾದದಲ್ಲಿ ಪ್ರತಿಕ್ರಿಯಿಸಿದ ಚಿತ್ತೂರು 1 ಟೌನ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶ್ರೀನಿವಾಸ ರಾವ್ ಮಹಿಳೆ ಮಾಡಿದ್ದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಆಕೆಯ ಹೇಳಿಕೆಗಳಲ್ಲಿ “ಯಾವುದೇ ಸತ್ಯವಿಲ್ಲ” ಎಂದು ಹೇಳಿದ್ದರು.

“ಆಕೆಯನ್ನು ವಿಚಾರಿಸಿದ ನಂತರ, ಹಣ ಕದ್ದಿರುವುದನ್ನು ಆಕೆ ಒಪ್ಪಿಕೊಂಡರು. ಆ ಹಣವು ತನ್ನ ಪತಿ ದೀನಾ ಬಳಿ ಇದೆ ಎಂದು ಅವರು ತಿಳಿಸಿದ್ದರು. ಪೊಲೀಸರು ಅನುಮತಿಸಿದರೆ, ತನ್ನ ಗಂಡನ ಬಳಿಗೆ ಹೋಗಿ ಹಣವನ್ನು ಹಿಂತಿರುಗಿಸುತ್ತೇನೆ ಎಂದರು. ಆದರೆ, ಆಕೆ ಆರೋಪಿಸಿದಂತೆ ಪೊಲೀಸರು ಕಿರುಕುಳ ನೀಡಿಲ್ಲ, ಚಿತ್ರಹಿಂಸೆ ನೀಡಿಲ್ಲ, ನಿಂದನೀಯ ಪದಗಳನ್ನು ಬಳಸಿಲ್ಲ. ಹಣವನ್ನು ಹಿಂದಿರುಗಿಸುವಂತೆ ಆಕೆಯನ್ನು ಪೊಳಿಸರು ಕೇಳಿದ್ದರಿಂದ ಆಕೆ ಪೊಲೀಸರ ಮೇಲೆ ಆರೋಪ ಮಾಡಲು ಆರಂಭಿಸಿದ್ದಾರೆ’’ ಎಂದು ಹೇಳಿದ್ದರು.


ಇದನ್ನೂ ಓದಿ: ಚಿತ್ರದುರ್ಗ: ದಲಿತ ಮಹಾಗಣಪತಿ ಕೇಸ್‌ ಸೇರಿದಂತೆ 10 ಪ್ರಕರಣಗಳ ಆರೋಪ – ದಲಿತ ಮುಖಂಡರ ಮೇಲೆ ‘ಗೂಂಡಾ ಪಟ್ಟ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...