Homeಮುಖಪುಟ‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

- Advertisement -
- Advertisement -

ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ ದಶಕವೇ ಕಳೆದಿದೆ. ಆದರೂ ಈ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಯೋಜನೆಯ ವಿಳಂಬಕ್ಕೆ ತಮಿಳುನಾಡಿನ ತಗಾದೆ, ಪರಿಸರವಾದಿಗಳ ಹೋರಾಟ, ಯೋಜನೆಯನ್ನು ವಿವಾದವನ್ನಾಗಿಸುತ್ತಿರುವ ರಾಜಕಾರಣ – ಹೀಗೆ ನಾನಾ ಕಾರಣ ಇರಬಹುದು. ಆದರೆ, ಮೇಕೆದಾಟು ವಿವಾದದ ಹೊರತಾಗಿಯೂ ಕರ್ನಾಟಕ-ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಕನಿಷ್ಟ ಒಂದು ಶತಮಾನ ಅರ್ಥಾತ್ 100 ವರ್ಷಗಳ ಇತಿಹಾಸ ಇದೆ.

ಪ್ರತಿವರ್ಷದ ಮಳೆಗಾಲ ಮತ್ತು ಬೇಸಿಗೆಯ ಸಂದರ್ಭದಲ್ಲಿ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆಯುವುದು ಮತ್ತು ಪ್ರಕರಣ ಸುಪ್ರೀಂ ಕೋರ್ಟ್‌ನ ಕಾವೇರಿ ಟ್ರಿಬ್ಯೂನಲ್ ಮೆಟ್ಟಿಲೇರುವುದು ಸಾಮಾನ್ಯ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಲವಾರು ಸಂದರ್ಭಗಳಲ್ಲಿ ಎರಡೂ ರಾಜ್ಯಗಳಲ್ಲಿ ಅದರಲ್ಲೂ ಗಡಿಭಾಗಗಳಲ್ಲಿ ಗಲಭೆಗಳು, ಹಿಂಸಾಚಾರಗಳು ಉಂಟಾಗುವುದು. ಹೊಸೂರು-ಬೆಂಗಳೂರು ಗಡಿ ಮುಚ್ಚುವುದು ಸಾಮಾನ್ಯ ಎಂಬಂತಾಗಿರುವುದು ದುರಾದೃಷ್ಟಕರ.

ಕಾವೇರಿ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈವರೆಗೆ ಸಾಕಷ್ಟು ಹಿಂಸಾಚಾರಗಳು ಸಂಭವಿಸಿರುವುದಂತೂ ನಿಜ. ಆದರೆ, ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಜಟಾಪಟಿ ಇರುವುದು ಕೇವಲ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತ್ರವಲ್ಲ. ಬದಲಾಗಿ ದೇಶದಲ್ಲಿ ಹಲವಾರು ರಾಜ್ಯಗಳ ನಡುವೆ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಹತ್ತಾರು ವ್ಯಾಜ್ಯಗಳಿವೆ. ಈ ವಿಚಾರವಾಗಿ ಅನೇಕ ಹಿಂಸಾಚಾರಗಳನ್ನು ಎದುರಿಸಿರುವ ರಾಜ್ಯಗಳ ದೊಡ್ಡ ಪಟ್ಟಿಯೇ ಭಾರತದಲ್ಲಿದೆ. ಆ ಕುರಿತು ಸಂಕ್ಷಿಪ್ತ ಮಾಹಿತಿ ಮಾಹಿತಿ ಇಲ್ಲಿದೆ.

ಇದನ್ನೂ ಓದಿರಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನರ್ಮದಾ ನದಿ ವಿವಾದ

ನರ್ಮದಾ ನದಿ ನೀರಿನ ಹಂಚಿಕೆ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳ ನಡುವಿನ ವ್ಯಾಜ್ಯವಾಗಿದೆ. ಮಧ್ಯಪ್ರದೇಶದ ಅಮರ್ಕಾಂತಕದಲ್ಲಿ ಹುಟ್ಟಿ ಹರಿಯುವ ಈ ನದಿಯ ಉದ್ದ 1,300 ಕಿ.ಮೀ. ಮತ್ತು ನದಿಪಾತ್ರ 98,796 ಚದರ ಕಿ.ಮೀ. ಇದೆ. ನರ್ಮದಾ ನದಿ ವಿವಾದವು ಮಹಾರಾಷ್ಟ್ರ, ಗುಜರಾತ್ ಮಾತ್ರವಲ್ಲದೇ ಮಧ್ಯಪ್ರದೇಶಕ್ಕೂ ಸಂಬಂಧಿಸಿದೆ. ಸರ್ದಾರ್ ಸರೋವರ್ ಅಣೆಕಟ್ಟು ನರ್ಮದಾ ನದಿಯ ಮೇಲೆ ಕಟ್ಟಲ್ಪಟ್ಟಿದೆ.

1956ರ ಅಂತರರಾಜ್ಯ ಜಲ ವಿವಾದ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ, ಕೇಂದ್ರ ಸರ್ಕಾರವು ನರ್ಮದಾ ಜಲ ವಿವಾದ ನ್ಯಾಯಾಧೀಕರಣವನ್ನು ಸ್ಥಾಪಿಸಿತು. ನ್ಯಾಯಮೂರ್ತಿ ವಿ.ರಾಮಸ್ವಾಮಿ ಅಧ್ಯಕ್ಷರಾಗಿದ್ದರು. ರಾಮಸ್ವಾಮಿ ನ್ಯಾಯಾಧೀಕರಣ ಡಿಸೆಂಬರ್ 7, 1979ರಂದು ತೀರ್ಪು ನೀಡಿತು. ಆದರೂ ಇದು ಇನ್ನೂ ವಿವಾದಾತ್ಮಕವಾಗಿಯೇ ಉಳಿದಿದೆ.

ಯಮುನಾ ನದಿ ವಿವಾದ

ಯಮುನಾ ನದಿ ನೀರಿನ ವಿವಾದವು ತುಂಬಾ ಹಳೆಯದು. ಇದು ಒಟ್ಟು ಐದು ರಾಜ್ಯಗಳಿಗೆ ಸಂಬಂಧಿಸಿದೆ. ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಯಮುನಾ ನದಿ ಹರಿಯುತ್ತದೆ. 1954ರಲ್ಲಿ ಮೊದಲನೆಯದಾಗಿ ಹರಿಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳ ನಡುವೆ ಯಮುನಾ ನದಿ ಒಪ್ಪಂದವಾಯಿತು.

ಯಮುನಾ ನದಿಯಲ್ಲಿ ಹರಿಯಾಣದ ಪಾಲು ಶೇ.77ರಷ್ಟು ಮತ್ತು ಉತ್ತರ ಪ್ರದೇಶದ ಪಾಲು ಶೇ.23ರಷ್ಟಿತ್ತು. ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶದ ಉಲ್ಲೇಖಗಳು ಬಂದಿಲ್ಲ. ಈ ರಾಜ್ಯಗಳು ತಮ್ಮ ಪಾಲಿನ ಬೇಡಿಕೆಗಾಗಿ ತೀವ್ರ ವಿವಾದವನ್ನು ಪ್ರಾರಂಭಿಸಿವೆ.

ಇದನ್ನೂ ಓದಿರಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸೋನಾ ನದಿ ವಿವಾದ

ಸೋನಾ ನದಿ ನೀರಿನ ವಿವಾದವು ಮೂರು ರಾಜ್ಯಗಳಾದ ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವೆ ಇದೆ. 1973ರಲ್ಲಿ, ಸೋನಾ ಮತ್ತು ರಿಹಂದ್ ನದಿಗಳ ನಡುವಿನ ನೀರಿನ ವಿವಾದವನ್ನು ಪರಿಹರಿಸಲು ಬನ್ಸಾಗರ್ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.

ಆರಂಭದಿಂದಲೂ ಈ ಒಪ್ಪಂದವನ್ನು ಸರಿಯಾಗಿ ಜಾರಿಗೊಳಿಸಿಲ್ಲ ಎಂದು ಬಿಹಾರ ಆರೋಪಿಸಿದೆ. ಈ ಒಪ್ಪಂದದ ಪ್ರಕಾರ, ರಿಹಾಂಡ್ ನದಿಯ ಸಂಪೂರ್ಣ ನೀರನ್ನು ಬಿಹಾರಕ್ಕೆ ಹಂಚಲಾಗಿತ್ತು. ಆದರೆ ಎನ್ಟಿಪಿಸಿ ಮತ್ತು ಉತ್ತರ ಪ್ರದೇಶ ಸರಕಾರವು ಬಿಹಾರ್ ನದಿಯ ಹಿಂಭಾಗದ ಜಲಾಶಯದಿಂದ ನೀರು ಬಳಸುತ್ತಿವೆ.

ಕೃಷ್ಣಾ ನದಿ ವಿವಾದ

ಕೃಷ್ಣಾ ನದಿ ನೀರು ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಿನ ವಿವಾದಕ್ಕೆ ಕಾರಣವಾಗಿದೆ. ಈ ನದಿಯು ಮಹಾಬಲೇಶ್ವರದಲ್ಲಿ ಹುಟ್ಟಿ ಮಹಾರಾಷ್ಟ್ರದ ಸತಾರ ಮತ್ತು ಸಾಂಗ್ಲಿ ಜಿಲ್ಲೆಗಳ ನಡುವೆ ಹಾಗೂ ಕರ್ನಾಟಕ, ದಕ್ಷಿಣ ಆಂಧ್ರಪ್ರದೇಶದ ನಡುವೆ ಹರಿಯುತ್ತದೆ. ಕೃಷ್ಣಾ ನದಿಯು ಕರ್ನಾಟಕದ 60 ಪ್ರತಿಶತದಷ್ಟು 3 ದಶಲಕ್ಷ ಹೆಕ್ಟೇರ್ ಭೂಮಿಗೆ ನೀರು ಒದಗಿಸುತ್ತದೆ.

ಈ ನದಿಯ ವಿವಾದವನ್ನು ಪರಿಹರಿಸಲು, 1969ರಲ್ಲಿ ಬಚ್ಚವತ್ ಟ್ರಿಬ್ಯೂನಲ್ ಸ್ಥಾಪನೆಯಾಯಿತು. ಅದು 1976ರಲ್ಲಿ ತೀರ್ಪು ನೀಡಿತು. ಈ ತೀರ್ಪಿನಲ್ಲಿ ಕರ್ನಾಟಕ 700 ಬಿಲಿಯನ್ ಕ್ಯೂಸೆಕ್, ಆಂಧ್ರ ಪ್ರದೇಶ 800 ಬಿಲಿಯನ್ ಕ್ಯೂಸೆಕ್ ಮತ್ತು ಮಹಾರಾಷ್ಟ್ರ 560 ಬಿಲಿಯನ್ ಕ್ಯೂಸೆಕ್ ನೀರನ್ನು ಬಳಸಲು ಅನುಮತಿ ನೀಡಿತು.

ಗೋದಾವರಿ ನದಿ ನೀರಿನ ವಿವಾದ

ಗೋದಾವರಿ ಭಾರತದ ದೊಡ್ಡ ನದಿ. ಇದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಹುಟ್ಟುತ್ತದೆ. ಅದರ ಉದ್ದ 1,465 ಕಿ.ಮೀ . ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ, ಒಡಿಶಾ ಮತ್ತು ಆಂಧ್ರಪ್ರದೇಶದ ನಡುವೆ ಗೋದಾವರಿ ನೀರಿಗಾಗಿ ಸಾಕಷ್ಟು ವಿವಾದಗಳಾಗಿವೆ. ಇದನ್ನು ಪರಿಹರಿಸಲು, ಏಪ್ರಿಲ್ 1969ರಲ್ಲಿ ಸರ್ಕಾರ ಸಮಿತಿಯು ರಚನೆಯಾಯಿತು. ಈ ಸಂದರ್ಭದಲ್ಲಿ, ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದರೂ, ಗೋದಾವರಿ ನದಿ ನೀರಿನ ವಿವಾದ ಸಂಪೂರ್ಣವಾಗಿ ಬಗೆಹರಿದಿಲ್ಲ.

ಸಟ್ಲೇಜ್-ರಾವಿ- ವ್ಯಾಸ ನದಿ ವಿವಾದ

ಪಂಜಾಬ್‌ನಲ್ಲಿ ನದಿ ನೀರಿನ ವಿವಾದದ ವಿಷಯ ಇತ್ತು. ನವೆಂಬರ್ 1966ರಲ್ಲಿ ಪಂಜಾಬ್‌ನ ಒಂದು ಭಾಗವನ್ನು ಪ್ರತ್ಯೇಕಿಸಿ ಹೊಸ ರಾಜ್ಯ ಹರಿಯಾಣವನ್ನು ಸ್ಥಾಪಿಸಲಾಯಿತು. ಸಟ್ಲೆಜ್, ರಾವಿ ಮತ್ತು ವ್ಯಾಸ ನದಿಗಳ ನೀರಿನ ಹಂಚಿಕೆಗೆ ಸಂಬಂಧಿಸಿದ ವಿವಾದವು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ನಡುವೆ ನಡೆಯುತ್ತಿದೆ.

ಇತರ ನದಿ ನೀರಿನ ವಿವಾದಗಳು

– ಮಹಾನದಿ ನೀರಿನ ವಿವಾದ – ಗುಜರಾತ್, ರಾಜಸ್ಥಾನ ಮತ್ತು ಮಧ್ಯ ಪ್ರದೇಶ
– ಕರ್ಮನಾಶ ನದಿ ನೀರಿನ ವಿವಾದ – ಉತ್ತರ ಪ್ರದೇಶ ಮತ್ತು ಬಿಹಾರ
– ಬರಾಕ್ ನದಿ ನೀರಿನ ವಿವಾದ – ಅಸ್ಸಾಂ ಮತ್ತು ಮಣಿಪುರ
– ಅಲಿಯಾರ್ ಮತ್ತು ಭವಾನಿ ನದಿಯ ನೀರಿನ ವಿವಾದಗಳು – ತಮಿಳುನಾಡು ಮತ್ತು ಕೇರಳ
– ತುಂಗಭದ್ರ ನದಿ ನೀರಿನ ವಿವಾದ – ಆಂಧ್ರಪ್ರದೇಶ ಮತ್ತು ಕರ್ನಾಟಕ.


ಇದನ್ನೂ ಓದಿರಿ: ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...